Homeಕರ್ನಾಟಕಐಡಿ ಫ್ರೆಶ್ ಫುಡ್ ವಿರುದ್ಧ ಕೋಮುವಾದಿ ವಾಟ್ಸಾಪ್ ಫಾರ್ವಡ್: ಫೇಕ್ ಪ್ರೊಪಗಂಡಾ ಎಂದ ಕಂಪನಿ

ಐಡಿ ಫ್ರೆಶ್ ಫುಡ್ ವಿರುದ್ಧ ಕೋಮುವಾದಿ ವಾಟ್ಸಾಪ್ ಫಾರ್ವಡ್: ಫೇಕ್ ಪ್ರೊಪಗಂಡಾ ಎಂದ ಕಂಪನಿ

ಐಡಿ ಕಂಪನಿಯು ಹಿಟ್ಟು ತಯಾರಿಸುವಾಗ ಅದರ ಪ್ರಮಾಣ ಹೆಚ್ಚಿಸಲು ಹಸುವಿನ ಮೂಳೆ ಮತ್ತು ಕರುವಿನ ಕರುಳನ್ನು ಬೆರೆಸಲಾಗುತ್ತಿದೆ ಎಂದು ವಾಟ್ಸಾಪ್‌ನಲ್ಲಿ ಹಂಚಿಕೊಳ್ಳಲಾಗುತ್ತಿದೆ.

- Advertisement -
- Advertisement -

6ನೇ ತರಗತಿ ಫೇಲ್‌ ಆದ ಹುಡುಗನೊಬ್ಬ 2000 ಕೋಟಿ ರೂಗಳ ಬೃಹತ್ ಕಂಪನಿ ಮಾಲೀಕನಾದುದ್ದು ಹೇಗೆ ಎಂದು ಪಾಸಿಟಿವ್ ಸ್ಟೋರಿಯೊಂದನ್ನು ಆಗಸ್ಟ್ 30 ರಂದು ಹ್ಯುಮನ್ಸ್ ಆಫ್ ಬಾಂಬೆ ಪ್ರಕಟಿಸಿತ್ತು. ಅದು ಬೆಂಗಳೂರು ಮೂಲದ ಇಡ್ಲಿ ಮತ್ತು ದೋಸೆ ಹಿಟ್ಟು ತಯಾರಿಕ ‘ಐಡಿ ಫ್ರೆಶ್ ಫುಡ್ ಕಂಪನಿ’ ಮತ್ತು ಅದರ ಸಿಇಓ ಮುಸ್ತಾಫ ಪಿ.ಸಿ ಯವರ ಸಂದರ್ಶನದ ಕುರಿತಾಗಿತ್ತು. ಕನ್ನಡ ಸೇರಿದಂತೆ ಎಲ್ಲಾ ಭಾಷೆಗಳ ಮಾಧ್ಯಮಗಳು ಇದನ್ನು ವರದಿ ಮಾಡಿದ್ದವು ಮಾತ್ರವಲ್ಲದೇ ಅವು ವೈರಲ್ ಆಗಿದ್ದವು.

ಇದಾದ ಒಂದು ವಾರದಲ್ಲಿ ವಾಟ್ಸಾಪ್ ನಲ್ಲಿ ಕೋಮು ಪ್ರಚೋದಕ ಫಾರ್ವಾಡ್ ಮೆಸೇಜ್ ಒಂದು ಹರಿದಾಡತೊಡಗಿತ್ತು. ಅದರಲ್ಲಿ “ಐಡಿ ಕಂಪನಿಯು ಹಿಟ್ಟು ತಯಾರಿಸುವಾಗ ಅದರ ಪ್ರಮಾಣವನ್ನು ಹೆಚ್ಚಿಸಲು ಹಸುವಿನ ಮೂಳೆ ಮತ್ತು ಕರುವಿನ ಕರುಳನ್ನು ಬೆರೆಸಲಾಗುತ್ತಿದೆ. ಸ್ಥಾಪಕ ಮುಸ್ತಾಫ ಪಿ.ಸಿ ಮತ್ತು ಅವರ ನಾಲ್ವರು ಸಂಬಂಧಿಗಳಾದ ಅಬ್ದುಲ್ ನಜೀರ್, ಶಂಸುದ್ದೀನ್ ಟಿ.ಕೆ, ಜಾಫರ್ ಟಿ.ಕೆ ಮತ್ತು ನೌಸಾದ್ ಟಿ.ಎ ರವರು ಕೇವಲ ಮುಸ್ಲಿಮರನ್ನು ಮಾತ್ರ ನೇಮಕ ಮಾಡಿಕೊಳ್ಳುತ್ತಿದ್ದಾರೆ ಮತ್ತು ಕಂಪನಿಯು ಹಲಾಲ್ ಸರ್ಟಿಫಿಕೆಟ್ ಹೊಂದಿದೆ” ಎಂದು ಪ್ರತಿಪಾದಿಸಲಾಗಿದೆ. ಜೊತೆಗೆ 2014 ರಲ್ಲಿ ಇದು 35 ಕೋಟಿ ರೂಗಳನ್ನು ಕ್ರೌಡ್ ಫಂಡಿಂಗ್ ಮೂಲಕ ಸಂಗ್ರಹಿಸಿದೆ. ಷರಿಯತ್ ಇಸ್ಲಾಂ ಕಾನೂನಿಗೆ ಬದ್ದವಾಗಿದೆ ಎಂದೆಲ್ಲಾ ಲಿಂಕ್‌ಗಳನ್ನು ಹಂಚಿಕೊಳ್ಳಲಾಗಿದೆ.

ಈ ಸಂದೇಶ ಹರಿದಾಡುತ್ತಿರುವುದು ಐಡಿ ಫ್ರೆಶ್ ಫುಡ್ ಕಂಪನಿಯ ಗಮನಕ್ಕೆ ಬಂದು ಅದು ಹೇಳಿಕೆ ಬಿಡುಗಡೆ ಮಾಡಿದೆ. “ಐಡಿ ಕಂಪನಿ ಹಿಟ್ಟು ತಯಾರಿಸುವಾಗ ಪ್ರಾಣಿಜನ್ಯವನ್ನು ಬಳಸುತ್ತಿದೆ ಎಂಬ ವಾಟ್ಸಾಪ್ ಸಂದೇಶವು ತಪ್ಪು, ಸುಳ್ಳು ಮಾಹಿತಿ ಮತ್ತು ಆಧಾರರಹಿತವಾಗಿದೆ. ನಾವು ಕೇವಲ ಸಸ್ಯಾಹಾರಿ ಪದಾರ್ಥಗಳನ್ನು ಮಾತ್ರ ಹಿಟ್ಟು ತಯಾರಿಸುವಲ್ಲಿ ಬಳಸುತ್ತೇವೆ. ಐಡಿ ಇಡ್ಲಿ ಮತ್ತು ದೋಸೆ ಹಿಟ್ಟಿನ್ನು ಅಕ್ಕಿ, ಉದ್ದಿನ ಬೇಳೆ, ಮೇಂತ್ಯ ಮತ್ತು ಆರ್‌ಓ ನೀರಿನಿಂದ ಮಾತ್ರ ತಯಾರಿಸುತ್ತೇವೆ. ಅದು 100% ನೈಸರ್ಗಿಕ ಮತ್ತು ಸಸ್ಯಾಹಾರಿಯಾಗಿದೆ. ಇದರಲ್ಲಿ ಯಾವುದೇ ರೀತಿಯ ಪ್ರಾಣಿಜನ್ಯವನ್ನು ನಾವು ಬಳಸುವುದಿಲ್ಲ” ಎಂದು ಹೇಳಿಕೆಯಲ್ಲಿ ತಿಳಿಸಿದೆ.

ನಾವು ಆರೋಗ್ಯಕರ ಮತ್ತು ಅಧಿಕೃತ ಭಾರತೀಯ ಉತ್ಪನ್ನಗಳನ್ನು ಬಳಸಿ ಯಾವುದೇ ರಾಸಾಯನಿಕಗಳು ಅಥವಾ ಸಂರಕ್ಷಕಗಳಿಲ್ಲದೆ ವಿಶ್ವದರ್ಜೆಯ, ಅತ್ಯಾಧುನಿಕ ಉತ್ಪಾದನಾ ಸೌಲಭ್ಯಗಳನ್ನು ಬಳಸಿ ಆಹಾರ ಸುರಕ್ಷತೆ ನಿರ್ವಹಣಾ ವ್ಯವಸ್ಥೆಗೆ ಅನುಗುಣವಾಗಿ ಹಿಟ್ಟನ್ನು ತಯಾರಿಸುತ್ತೇವೆ. ಹಾಗಾಗಿ ಆಧಾರರಹಿತ ಮತ್ತು ನಕಲಿ ಪ್ರಚಾರವನ್ನು ನಂಬಬಾರದು ಎಂದು ಅದು ಮನವಿ ಮಾಡಿದೆ.

ಬೆಂಗಳೂರು ಮೂಲಕ ಐಡಿ ಕಂಪನಿಯು 2005ರಲ್ಲಿ ಆರಂಭವಾಗಿದ್ದು 45 ಮಾರುಕಟ್ಟೆಗಳನ್ನು ಹೊಂದಿದ್ದು, ಖ್ಯಾತಿ ಗಳಿಸಿದೆ. ಹಲವಾರು ಅಂತರಾಷ್ಟ್ರೀಯ ಪ್ರಶಸ್ತಿಗಳನ್ನು ಪಡೆದಿರುವ ಕಂಪನಿಯು 2021ರ ಹಣಕಾಸು ವರ್ಷದಲ್ಲಿ 294 ಕೋಟಿ ರೂ ಲಾಭ ಗಳಿಸಿದೆ ಎಂದು ದಿ ಹಿಂದೂ ವರದಿ ಮಾಡಿದೆ. ಅದು ಇತ್ತೀಚೆಗೆ ಬೆಂಗಳೂರು ಬಳಿಯ ಆನೇಕಲ್‌ನಲ್ಲಿ 40 ಕೋಟಿ ರೂ ವೆಚ್ಚದಲ್ಲಿ ಬೃಹತ್ ಇಡ್ಲಿ ಮತ್ತು ದೋಸೆ ಹಿಟ್ಟು ತಯಾರಿಸುವ ಘಟಕ ಆರಂಭಿಸಿದೆ.

ಕಂಪನಿಯ ಮಾಲೀಕ ಮುಸ್ಲಿಂ ಆದ ಕಾರಣಕ್ಕೆ ಐಡಿ ಫ್ರೆಶ್ ಫುಡ್ ವಿರುದ್ಧ ವಾಟ್ಸಾಪ್‌ನಲ್ಲಿ ಅಪಪ್ರಚಾರ ಆರಂಭಿಸಲಾಗಿದೆಯೇ ಎಂಬ ಅನುಮಾನವೆದ್ದಿದೆ. ಆದರೆ ಐಡಿ ಕಂಪನಿ ಹೇಳಿಕೆ ನೀಡುವುದರ ಮೂಲಕ ಸ್ಪಷ್ಟೀಕರಣ ನೀಡಿದೆ.


ಇದನ್ನೂ ಓದಿ: ತಾಲಿಬಾನ್ ಪರ ಪಾಕ್‌ ಆರ್ಮಿ ದಾಳಿ ಎಂದು ವಿಡಿಯೊ ಗೇಮ್‌ ಕ್ಲಿಪ್‌ ಪ್ರಸಾರ ಮಾಡಿದ ರಿಪಬ್ಲಿಕ್ ಟಿವಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...