Homeಕರ್ನಾಟಕಐಡಿ ಫ್ರೆಶ್ ಫುಡ್ ವಿರುದ್ಧ ಕೋಮುವಾದಿ ವಾಟ್ಸಾಪ್ ಫಾರ್ವಡ್: ಫೇಕ್ ಪ್ರೊಪಗಂಡಾ ಎಂದ ಕಂಪನಿ

ಐಡಿ ಫ್ರೆಶ್ ಫುಡ್ ವಿರುದ್ಧ ಕೋಮುವಾದಿ ವಾಟ್ಸಾಪ್ ಫಾರ್ವಡ್: ಫೇಕ್ ಪ್ರೊಪಗಂಡಾ ಎಂದ ಕಂಪನಿ

ಐಡಿ ಕಂಪನಿಯು ಹಿಟ್ಟು ತಯಾರಿಸುವಾಗ ಅದರ ಪ್ರಮಾಣ ಹೆಚ್ಚಿಸಲು ಹಸುವಿನ ಮೂಳೆ ಮತ್ತು ಕರುವಿನ ಕರುಳನ್ನು ಬೆರೆಸಲಾಗುತ್ತಿದೆ ಎಂದು ವಾಟ್ಸಾಪ್‌ನಲ್ಲಿ ಹಂಚಿಕೊಳ್ಳಲಾಗುತ್ತಿದೆ.

- Advertisement -
- Advertisement -

6ನೇ ತರಗತಿ ಫೇಲ್‌ ಆದ ಹುಡುಗನೊಬ್ಬ 2000 ಕೋಟಿ ರೂಗಳ ಬೃಹತ್ ಕಂಪನಿ ಮಾಲೀಕನಾದುದ್ದು ಹೇಗೆ ಎಂದು ಪಾಸಿಟಿವ್ ಸ್ಟೋರಿಯೊಂದನ್ನು ಆಗಸ್ಟ್ 30 ರಂದು ಹ್ಯುಮನ್ಸ್ ಆಫ್ ಬಾಂಬೆ ಪ್ರಕಟಿಸಿತ್ತು. ಅದು ಬೆಂಗಳೂರು ಮೂಲದ ಇಡ್ಲಿ ಮತ್ತು ದೋಸೆ ಹಿಟ್ಟು ತಯಾರಿಕ ‘ಐಡಿ ಫ್ರೆಶ್ ಫುಡ್ ಕಂಪನಿ’ ಮತ್ತು ಅದರ ಸಿಇಓ ಮುಸ್ತಾಫ ಪಿ.ಸಿ ಯವರ ಸಂದರ್ಶನದ ಕುರಿತಾಗಿತ್ತು. ಕನ್ನಡ ಸೇರಿದಂತೆ ಎಲ್ಲಾ ಭಾಷೆಗಳ ಮಾಧ್ಯಮಗಳು ಇದನ್ನು ವರದಿ ಮಾಡಿದ್ದವು ಮಾತ್ರವಲ್ಲದೇ ಅವು ವೈರಲ್ ಆಗಿದ್ದವು.

ಇದಾದ ಒಂದು ವಾರದಲ್ಲಿ ವಾಟ್ಸಾಪ್ ನಲ್ಲಿ ಕೋಮು ಪ್ರಚೋದಕ ಫಾರ್ವಾಡ್ ಮೆಸೇಜ್ ಒಂದು ಹರಿದಾಡತೊಡಗಿತ್ತು. ಅದರಲ್ಲಿ “ಐಡಿ ಕಂಪನಿಯು ಹಿಟ್ಟು ತಯಾರಿಸುವಾಗ ಅದರ ಪ್ರಮಾಣವನ್ನು ಹೆಚ್ಚಿಸಲು ಹಸುವಿನ ಮೂಳೆ ಮತ್ತು ಕರುವಿನ ಕರುಳನ್ನು ಬೆರೆಸಲಾಗುತ್ತಿದೆ. ಸ್ಥಾಪಕ ಮುಸ್ತಾಫ ಪಿ.ಸಿ ಮತ್ತು ಅವರ ನಾಲ್ವರು ಸಂಬಂಧಿಗಳಾದ ಅಬ್ದುಲ್ ನಜೀರ್, ಶಂಸುದ್ದೀನ್ ಟಿ.ಕೆ, ಜಾಫರ್ ಟಿ.ಕೆ ಮತ್ತು ನೌಸಾದ್ ಟಿ.ಎ ರವರು ಕೇವಲ ಮುಸ್ಲಿಮರನ್ನು ಮಾತ್ರ ನೇಮಕ ಮಾಡಿಕೊಳ್ಳುತ್ತಿದ್ದಾರೆ ಮತ್ತು ಕಂಪನಿಯು ಹಲಾಲ್ ಸರ್ಟಿಫಿಕೆಟ್ ಹೊಂದಿದೆ” ಎಂದು ಪ್ರತಿಪಾದಿಸಲಾಗಿದೆ. ಜೊತೆಗೆ 2014 ರಲ್ಲಿ ಇದು 35 ಕೋಟಿ ರೂಗಳನ್ನು ಕ್ರೌಡ್ ಫಂಡಿಂಗ್ ಮೂಲಕ ಸಂಗ್ರಹಿಸಿದೆ. ಷರಿಯತ್ ಇಸ್ಲಾಂ ಕಾನೂನಿಗೆ ಬದ್ದವಾಗಿದೆ ಎಂದೆಲ್ಲಾ ಲಿಂಕ್‌ಗಳನ್ನು ಹಂಚಿಕೊಳ್ಳಲಾಗಿದೆ.

ಈ ಸಂದೇಶ ಹರಿದಾಡುತ್ತಿರುವುದು ಐಡಿ ಫ್ರೆಶ್ ಫುಡ್ ಕಂಪನಿಯ ಗಮನಕ್ಕೆ ಬಂದು ಅದು ಹೇಳಿಕೆ ಬಿಡುಗಡೆ ಮಾಡಿದೆ. “ಐಡಿ ಕಂಪನಿ ಹಿಟ್ಟು ತಯಾರಿಸುವಾಗ ಪ್ರಾಣಿಜನ್ಯವನ್ನು ಬಳಸುತ್ತಿದೆ ಎಂಬ ವಾಟ್ಸಾಪ್ ಸಂದೇಶವು ತಪ್ಪು, ಸುಳ್ಳು ಮಾಹಿತಿ ಮತ್ತು ಆಧಾರರಹಿತವಾಗಿದೆ. ನಾವು ಕೇವಲ ಸಸ್ಯಾಹಾರಿ ಪದಾರ್ಥಗಳನ್ನು ಮಾತ್ರ ಹಿಟ್ಟು ತಯಾರಿಸುವಲ್ಲಿ ಬಳಸುತ್ತೇವೆ. ಐಡಿ ಇಡ್ಲಿ ಮತ್ತು ದೋಸೆ ಹಿಟ್ಟಿನ್ನು ಅಕ್ಕಿ, ಉದ್ದಿನ ಬೇಳೆ, ಮೇಂತ್ಯ ಮತ್ತು ಆರ್‌ಓ ನೀರಿನಿಂದ ಮಾತ್ರ ತಯಾರಿಸುತ್ತೇವೆ. ಅದು 100% ನೈಸರ್ಗಿಕ ಮತ್ತು ಸಸ್ಯಾಹಾರಿಯಾಗಿದೆ. ಇದರಲ್ಲಿ ಯಾವುದೇ ರೀತಿಯ ಪ್ರಾಣಿಜನ್ಯವನ್ನು ನಾವು ಬಳಸುವುದಿಲ್ಲ” ಎಂದು ಹೇಳಿಕೆಯಲ್ಲಿ ತಿಳಿಸಿದೆ.

ನಾವು ಆರೋಗ್ಯಕರ ಮತ್ತು ಅಧಿಕೃತ ಭಾರತೀಯ ಉತ್ಪನ್ನಗಳನ್ನು ಬಳಸಿ ಯಾವುದೇ ರಾಸಾಯನಿಕಗಳು ಅಥವಾ ಸಂರಕ್ಷಕಗಳಿಲ್ಲದೆ ವಿಶ್ವದರ್ಜೆಯ, ಅತ್ಯಾಧುನಿಕ ಉತ್ಪಾದನಾ ಸೌಲಭ್ಯಗಳನ್ನು ಬಳಸಿ ಆಹಾರ ಸುರಕ್ಷತೆ ನಿರ್ವಹಣಾ ವ್ಯವಸ್ಥೆಗೆ ಅನುಗುಣವಾಗಿ ಹಿಟ್ಟನ್ನು ತಯಾರಿಸುತ್ತೇವೆ. ಹಾಗಾಗಿ ಆಧಾರರಹಿತ ಮತ್ತು ನಕಲಿ ಪ್ರಚಾರವನ್ನು ನಂಬಬಾರದು ಎಂದು ಅದು ಮನವಿ ಮಾಡಿದೆ.

ಬೆಂಗಳೂರು ಮೂಲಕ ಐಡಿ ಕಂಪನಿಯು 2005ರಲ್ಲಿ ಆರಂಭವಾಗಿದ್ದು 45 ಮಾರುಕಟ್ಟೆಗಳನ್ನು ಹೊಂದಿದ್ದು, ಖ್ಯಾತಿ ಗಳಿಸಿದೆ. ಹಲವಾರು ಅಂತರಾಷ್ಟ್ರೀಯ ಪ್ರಶಸ್ತಿಗಳನ್ನು ಪಡೆದಿರುವ ಕಂಪನಿಯು 2021ರ ಹಣಕಾಸು ವರ್ಷದಲ್ಲಿ 294 ಕೋಟಿ ರೂ ಲಾಭ ಗಳಿಸಿದೆ ಎಂದು ದಿ ಹಿಂದೂ ವರದಿ ಮಾಡಿದೆ. ಅದು ಇತ್ತೀಚೆಗೆ ಬೆಂಗಳೂರು ಬಳಿಯ ಆನೇಕಲ್‌ನಲ್ಲಿ 40 ಕೋಟಿ ರೂ ವೆಚ್ಚದಲ್ಲಿ ಬೃಹತ್ ಇಡ್ಲಿ ಮತ್ತು ದೋಸೆ ಹಿಟ್ಟು ತಯಾರಿಸುವ ಘಟಕ ಆರಂಭಿಸಿದೆ.

ಕಂಪನಿಯ ಮಾಲೀಕ ಮುಸ್ಲಿಂ ಆದ ಕಾರಣಕ್ಕೆ ಐಡಿ ಫ್ರೆಶ್ ಫುಡ್ ವಿರುದ್ಧ ವಾಟ್ಸಾಪ್‌ನಲ್ಲಿ ಅಪಪ್ರಚಾರ ಆರಂಭಿಸಲಾಗಿದೆಯೇ ಎಂಬ ಅನುಮಾನವೆದ್ದಿದೆ. ಆದರೆ ಐಡಿ ಕಂಪನಿ ಹೇಳಿಕೆ ನೀಡುವುದರ ಮೂಲಕ ಸ್ಪಷ್ಟೀಕರಣ ನೀಡಿದೆ.


ಇದನ್ನೂ ಓದಿ: ತಾಲಿಬಾನ್ ಪರ ಪಾಕ್‌ ಆರ್ಮಿ ದಾಳಿ ಎಂದು ವಿಡಿಯೊ ಗೇಮ್‌ ಕ್ಲಿಪ್‌ ಪ್ರಸಾರ ಮಾಡಿದ ರಿಪಬ್ಲಿಕ್ ಟಿವಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...