Homeಕರ್ನಾಟಕಐಡಿ ಫ್ರೆಶ್ ಫುಡ್ ವಿರುದ್ಧ ಕೋಮುವಾದಿ ವಾಟ್ಸಾಪ್ ಫಾರ್ವಡ್: ಫೇಕ್ ಪ್ರೊಪಗಂಡಾ ಎಂದ ಕಂಪನಿ

ಐಡಿ ಫ್ರೆಶ್ ಫುಡ್ ವಿರುದ್ಧ ಕೋಮುವಾದಿ ವಾಟ್ಸಾಪ್ ಫಾರ್ವಡ್: ಫೇಕ್ ಪ್ರೊಪಗಂಡಾ ಎಂದ ಕಂಪನಿ

ಐಡಿ ಕಂಪನಿಯು ಹಿಟ್ಟು ತಯಾರಿಸುವಾಗ ಅದರ ಪ್ರಮಾಣ ಹೆಚ್ಚಿಸಲು ಹಸುವಿನ ಮೂಳೆ ಮತ್ತು ಕರುವಿನ ಕರುಳನ್ನು ಬೆರೆಸಲಾಗುತ್ತಿದೆ ಎಂದು ವಾಟ್ಸಾಪ್‌ನಲ್ಲಿ ಹಂಚಿಕೊಳ್ಳಲಾಗುತ್ತಿದೆ.

- Advertisement -
- Advertisement -

6ನೇ ತರಗತಿ ಫೇಲ್‌ ಆದ ಹುಡುಗನೊಬ್ಬ 2000 ಕೋಟಿ ರೂಗಳ ಬೃಹತ್ ಕಂಪನಿ ಮಾಲೀಕನಾದುದ್ದು ಹೇಗೆ ಎಂದು ಪಾಸಿಟಿವ್ ಸ್ಟೋರಿಯೊಂದನ್ನು ಆಗಸ್ಟ್ 30 ರಂದು ಹ್ಯುಮನ್ಸ್ ಆಫ್ ಬಾಂಬೆ ಪ್ರಕಟಿಸಿತ್ತು. ಅದು ಬೆಂಗಳೂರು ಮೂಲದ ಇಡ್ಲಿ ಮತ್ತು ದೋಸೆ ಹಿಟ್ಟು ತಯಾರಿಕ ‘ಐಡಿ ಫ್ರೆಶ್ ಫುಡ್ ಕಂಪನಿ’ ಮತ್ತು ಅದರ ಸಿಇಓ ಮುಸ್ತಾಫ ಪಿ.ಸಿ ಯವರ ಸಂದರ್ಶನದ ಕುರಿತಾಗಿತ್ತು. ಕನ್ನಡ ಸೇರಿದಂತೆ ಎಲ್ಲಾ ಭಾಷೆಗಳ ಮಾಧ್ಯಮಗಳು ಇದನ್ನು ವರದಿ ಮಾಡಿದ್ದವು ಮಾತ್ರವಲ್ಲದೇ ಅವು ವೈರಲ್ ಆಗಿದ್ದವು.

ಇದಾದ ಒಂದು ವಾರದಲ್ಲಿ ವಾಟ್ಸಾಪ್ ನಲ್ಲಿ ಕೋಮು ಪ್ರಚೋದಕ ಫಾರ್ವಾಡ್ ಮೆಸೇಜ್ ಒಂದು ಹರಿದಾಡತೊಡಗಿತ್ತು. ಅದರಲ್ಲಿ “ಐಡಿ ಕಂಪನಿಯು ಹಿಟ್ಟು ತಯಾರಿಸುವಾಗ ಅದರ ಪ್ರಮಾಣವನ್ನು ಹೆಚ್ಚಿಸಲು ಹಸುವಿನ ಮೂಳೆ ಮತ್ತು ಕರುವಿನ ಕರುಳನ್ನು ಬೆರೆಸಲಾಗುತ್ತಿದೆ. ಸ್ಥಾಪಕ ಮುಸ್ತಾಫ ಪಿ.ಸಿ ಮತ್ತು ಅವರ ನಾಲ್ವರು ಸಂಬಂಧಿಗಳಾದ ಅಬ್ದುಲ್ ನಜೀರ್, ಶಂಸುದ್ದೀನ್ ಟಿ.ಕೆ, ಜಾಫರ್ ಟಿ.ಕೆ ಮತ್ತು ನೌಸಾದ್ ಟಿ.ಎ ರವರು ಕೇವಲ ಮುಸ್ಲಿಮರನ್ನು ಮಾತ್ರ ನೇಮಕ ಮಾಡಿಕೊಳ್ಳುತ್ತಿದ್ದಾರೆ ಮತ್ತು ಕಂಪನಿಯು ಹಲಾಲ್ ಸರ್ಟಿಫಿಕೆಟ್ ಹೊಂದಿದೆ” ಎಂದು ಪ್ರತಿಪಾದಿಸಲಾಗಿದೆ. ಜೊತೆಗೆ 2014 ರಲ್ಲಿ ಇದು 35 ಕೋಟಿ ರೂಗಳನ್ನು ಕ್ರೌಡ್ ಫಂಡಿಂಗ್ ಮೂಲಕ ಸಂಗ್ರಹಿಸಿದೆ. ಷರಿಯತ್ ಇಸ್ಲಾಂ ಕಾನೂನಿಗೆ ಬದ್ದವಾಗಿದೆ ಎಂದೆಲ್ಲಾ ಲಿಂಕ್‌ಗಳನ್ನು ಹಂಚಿಕೊಳ್ಳಲಾಗಿದೆ.

ಈ ಸಂದೇಶ ಹರಿದಾಡುತ್ತಿರುವುದು ಐಡಿ ಫ್ರೆಶ್ ಫುಡ್ ಕಂಪನಿಯ ಗಮನಕ್ಕೆ ಬಂದು ಅದು ಹೇಳಿಕೆ ಬಿಡುಗಡೆ ಮಾಡಿದೆ. “ಐಡಿ ಕಂಪನಿ ಹಿಟ್ಟು ತಯಾರಿಸುವಾಗ ಪ್ರಾಣಿಜನ್ಯವನ್ನು ಬಳಸುತ್ತಿದೆ ಎಂಬ ವಾಟ್ಸಾಪ್ ಸಂದೇಶವು ತಪ್ಪು, ಸುಳ್ಳು ಮಾಹಿತಿ ಮತ್ತು ಆಧಾರರಹಿತವಾಗಿದೆ. ನಾವು ಕೇವಲ ಸಸ್ಯಾಹಾರಿ ಪದಾರ್ಥಗಳನ್ನು ಮಾತ್ರ ಹಿಟ್ಟು ತಯಾರಿಸುವಲ್ಲಿ ಬಳಸುತ್ತೇವೆ. ಐಡಿ ಇಡ್ಲಿ ಮತ್ತು ದೋಸೆ ಹಿಟ್ಟಿನ್ನು ಅಕ್ಕಿ, ಉದ್ದಿನ ಬೇಳೆ, ಮೇಂತ್ಯ ಮತ್ತು ಆರ್‌ಓ ನೀರಿನಿಂದ ಮಾತ್ರ ತಯಾರಿಸುತ್ತೇವೆ. ಅದು 100% ನೈಸರ್ಗಿಕ ಮತ್ತು ಸಸ್ಯಾಹಾರಿಯಾಗಿದೆ. ಇದರಲ್ಲಿ ಯಾವುದೇ ರೀತಿಯ ಪ್ರಾಣಿಜನ್ಯವನ್ನು ನಾವು ಬಳಸುವುದಿಲ್ಲ” ಎಂದು ಹೇಳಿಕೆಯಲ್ಲಿ ತಿಳಿಸಿದೆ.

ನಾವು ಆರೋಗ್ಯಕರ ಮತ್ತು ಅಧಿಕೃತ ಭಾರತೀಯ ಉತ್ಪನ್ನಗಳನ್ನು ಬಳಸಿ ಯಾವುದೇ ರಾಸಾಯನಿಕಗಳು ಅಥವಾ ಸಂರಕ್ಷಕಗಳಿಲ್ಲದೆ ವಿಶ್ವದರ್ಜೆಯ, ಅತ್ಯಾಧುನಿಕ ಉತ್ಪಾದನಾ ಸೌಲಭ್ಯಗಳನ್ನು ಬಳಸಿ ಆಹಾರ ಸುರಕ್ಷತೆ ನಿರ್ವಹಣಾ ವ್ಯವಸ್ಥೆಗೆ ಅನುಗುಣವಾಗಿ ಹಿಟ್ಟನ್ನು ತಯಾರಿಸುತ್ತೇವೆ. ಹಾಗಾಗಿ ಆಧಾರರಹಿತ ಮತ್ತು ನಕಲಿ ಪ್ರಚಾರವನ್ನು ನಂಬಬಾರದು ಎಂದು ಅದು ಮನವಿ ಮಾಡಿದೆ.

ಬೆಂಗಳೂರು ಮೂಲಕ ಐಡಿ ಕಂಪನಿಯು 2005ರಲ್ಲಿ ಆರಂಭವಾಗಿದ್ದು 45 ಮಾರುಕಟ್ಟೆಗಳನ್ನು ಹೊಂದಿದ್ದು, ಖ್ಯಾತಿ ಗಳಿಸಿದೆ. ಹಲವಾರು ಅಂತರಾಷ್ಟ್ರೀಯ ಪ್ರಶಸ್ತಿಗಳನ್ನು ಪಡೆದಿರುವ ಕಂಪನಿಯು 2021ರ ಹಣಕಾಸು ವರ್ಷದಲ್ಲಿ 294 ಕೋಟಿ ರೂ ಲಾಭ ಗಳಿಸಿದೆ ಎಂದು ದಿ ಹಿಂದೂ ವರದಿ ಮಾಡಿದೆ. ಅದು ಇತ್ತೀಚೆಗೆ ಬೆಂಗಳೂರು ಬಳಿಯ ಆನೇಕಲ್‌ನಲ್ಲಿ 40 ಕೋಟಿ ರೂ ವೆಚ್ಚದಲ್ಲಿ ಬೃಹತ್ ಇಡ್ಲಿ ಮತ್ತು ದೋಸೆ ಹಿಟ್ಟು ತಯಾರಿಸುವ ಘಟಕ ಆರಂಭಿಸಿದೆ.

ಕಂಪನಿಯ ಮಾಲೀಕ ಮುಸ್ಲಿಂ ಆದ ಕಾರಣಕ್ಕೆ ಐಡಿ ಫ್ರೆಶ್ ಫುಡ್ ವಿರುದ್ಧ ವಾಟ್ಸಾಪ್‌ನಲ್ಲಿ ಅಪಪ್ರಚಾರ ಆರಂಭಿಸಲಾಗಿದೆಯೇ ಎಂಬ ಅನುಮಾನವೆದ್ದಿದೆ. ಆದರೆ ಐಡಿ ಕಂಪನಿ ಹೇಳಿಕೆ ನೀಡುವುದರ ಮೂಲಕ ಸ್ಪಷ್ಟೀಕರಣ ನೀಡಿದೆ.


ಇದನ್ನೂ ಓದಿ: ತಾಲಿಬಾನ್ ಪರ ಪಾಕ್‌ ಆರ್ಮಿ ದಾಳಿ ಎಂದು ವಿಡಿಯೊ ಗೇಮ್‌ ಕ್ಲಿಪ್‌ ಪ್ರಸಾರ ಮಾಡಿದ ರಿಪಬ್ಲಿಕ್ ಟಿವಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...