Homeಕರ್ನಾಟಕಐಡಿ ಫ್ರೆಶ್ ಫುಡ್ ವಿರುದ್ಧ ಕೋಮುವಾದಿ ವಾಟ್ಸಾಪ್ ಫಾರ್ವಡ್: ಫೇಕ್ ಪ್ರೊಪಗಂಡಾ ಎಂದ ಕಂಪನಿ

ಐಡಿ ಫ್ರೆಶ್ ಫುಡ್ ವಿರುದ್ಧ ಕೋಮುವಾದಿ ವಾಟ್ಸಾಪ್ ಫಾರ್ವಡ್: ಫೇಕ್ ಪ್ರೊಪಗಂಡಾ ಎಂದ ಕಂಪನಿ

ಐಡಿ ಕಂಪನಿಯು ಹಿಟ್ಟು ತಯಾರಿಸುವಾಗ ಅದರ ಪ್ರಮಾಣ ಹೆಚ್ಚಿಸಲು ಹಸುವಿನ ಮೂಳೆ ಮತ್ತು ಕರುವಿನ ಕರುಳನ್ನು ಬೆರೆಸಲಾಗುತ್ತಿದೆ ಎಂದು ವಾಟ್ಸಾಪ್‌ನಲ್ಲಿ ಹಂಚಿಕೊಳ್ಳಲಾಗುತ್ತಿದೆ.

- Advertisement -
- Advertisement -

6ನೇ ತರಗತಿ ಫೇಲ್‌ ಆದ ಹುಡುಗನೊಬ್ಬ 2000 ಕೋಟಿ ರೂಗಳ ಬೃಹತ್ ಕಂಪನಿ ಮಾಲೀಕನಾದುದ್ದು ಹೇಗೆ ಎಂದು ಪಾಸಿಟಿವ್ ಸ್ಟೋರಿಯೊಂದನ್ನು ಆಗಸ್ಟ್ 30 ರಂದು ಹ್ಯುಮನ್ಸ್ ಆಫ್ ಬಾಂಬೆ ಪ್ರಕಟಿಸಿತ್ತು. ಅದು ಬೆಂಗಳೂರು ಮೂಲದ ಇಡ್ಲಿ ಮತ್ತು ದೋಸೆ ಹಿಟ್ಟು ತಯಾರಿಕ ‘ಐಡಿ ಫ್ರೆಶ್ ಫುಡ್ ಕಂಪನಿ’ ಮತ್ತು ಅದರ ಸಿಇಓ ಮುಸ್ತಾಫ ಪಿ.ಸಿ ಯವರ ಸಂದರ್ಶನದ ಕುರಿತಾಗಿತ್ತು. ಕನ್ನಡ ಸೇರಿದಂತೆ ಎಲ್ಲಾ ಭಾಷೆಗಳ ಮಾಧ್ಯಮಗಳು ಇದನ್ನು ವರದಿ ಮಾಡಿದ್ದವು ಮಾತ್ರವಲ್ಲದೇ ಅವು ವೈರಲ್ ಆಗಿದ್ದವು.

ಇದಾದ ಒಂದು ವಾರದಲ್ಲಿ ವಾಟ್ಸಾಪ್ ನಲ್ಲಿ ಕೋಮು ಪ್ರಚೋದಕ ಫಾರ್ವಾಡ್ ಮೆಸೇಜ್ ಒಂದು ಹರಿದಾಡತೊಡಗಿತ್ತು. ಅದರಲ್ಲಿ “ಐಡಿ ಕಂಪನಿಯು ಹಿಟ್ಟು ತಯಾರಿಸುವಾಗ ಅದರ ಪ್ರಮಾಣವನ್ನು ಹೆಚ್ಚಿಸಲು ಹಸುವಿನ ಮೂಳೆ ಮತ್ತು ಕರುವಿನ ಕರುಳನ್ನು ಬೆರೆಸಲಾಗುತ್ತಿದೆ. ಸ್ಥಾಪಕ ಮುಸ್ತಾಫ ಪಿ.ಸಿ ಮತ್ತು ಅವರ ನಾಲ್ವರು ಸಂಬಂಧಿಗಳಾದ ಅಬ್ದುಲ್ ನಜೀರ್, ಶಂಸುದ್ದೀನ್ ಟಿ.ಕೆ, ಜಾಫರ್ ಟಿ.ಕೆ ಮತ್ತು ನೌಸಾದ್ ಟಿ.ಎ ರವರು ಕೇವಲ ಮುಸ್ಲಿಮರನ್ನು ಮಾತ್ರ ನೇಮಕ ಮಾಡಿಕೊಳ್ಳುತ್ತಿದ್ದಾರೆ ಮತ್ತು ಕಂಪನಿಯು ಹಲಾಲ್ ಸರ್ಟಿಫಿಕೆಟ್ ಹೊಂದಿದೆ” ಎಂದು ಪ್ರತಿಪಾದಿಸಲಾಗಿದೆ. ಜೊತೆಗೆ 2014 ರಲ್ಲಿ ಇದು 35 ಕೋಟಿ ರೂಗಳನ್ನು ಕ್ರೌಡ್ ಫಂಡಿಂಗ್ ಮೂಲಕ ಸಂಗ್ರಹಿಸಿದೆ. ಷರಿಯತ್ ಇಸ್ಲಾಂ ಕಾನೂನಿಗೆ ಬದ್ದವಾಗಿದೆ ಎಂದೆಲ್ಲಾ ಲಿಂಕ್‌ಗಳನ್ನು ಹಂಚಿಕೊಳ್ಳಲಾಗಿದೆ.

ಈ ಸಂದೇಶ ಹರಿದಾಡುತ್ತಿರುವುದು ಐಡಿ ಫ್ರೆಶ್ ಫುಡ್ ಕಂಪನಿಯ ಗಮನಕ್ಕೆ ಬಂದು ಅದು ಹೇಳಿಕೆ ಬಿಡುಗಡೆ ಮಾಡಿದೆ. “ಐಡಿ ಕಂಪನಿ ಹಿಟ್ಟು ತಯಾರಿಸುವಾಗ ಪ್ರಾಣಿಜನ್ಯವನ್ನು ಬಳಸುತ್ತಿದೆ ಎಂಬ ವಾಟ್ಸಾಪ್ ಸಂದೇಶವು ತಪ್ಪು, ಸುಳ್ಳು ಮಾಹಿತಿ ಮತ್ತು ಆಧಾರರಹಿತವಾಗಿದೆ. ನಾವು ಕೇವಲ ಸಸ್ಯಾಹಾರಿ ಪದಾರ್ಥಗಳನ್ನು ಮಾತ್ರ ಹಿಟ್ಟು ತಯಾರಿಸುವಲ್ಲಿ ಬಳಸುತ್ತೇವೆ. ಐಡಿ ಇಡ್ಲಿ ಮತ್ತು ದೋಸೆ ಹಿಟ್ಟಿನ್ನು ಅಕ್ಕಿ, ಉದ್ದಿನ ಬೇಳೆ, ಮೇಂತ್ಯ ಮತ್ತು ಆರ್‌ಓ ನೀರಿನಿಂದ ಮಾತ್ರ ತಯಾರಿಸುತ್ತೇವೆ. ಅದು 100% ನೈಸರ್ಗಿಕ ಮತ್ತು ಸಸ್ಯಾಹಾರಿಯಾಗಿದೆ. ಇದರಲ್ಲಿ ಯಾವುದೇ ರೀತಿಯ ಪ್ರಾಣಿಜನ್ಯವನ್ನು ನಾವು ಬಳಸುವುದಿಲ್ಲ” ಎಂದು ಹೇಳಿಕೆಯಲ್ಲಿ ತಿಳಿಸಿದೆ.

ನಾವು ಆರೋಗ್ಯಕರ ಮತ್ತು ಅಧಿಕೃತ ಭಾರತೀಯ ಉತ್ಪನ್ನಗಳನ್ನು ಬಳಸಿ ಯಾವುದೇ ರಾಸಾಯನಿಕಗಳು ಅಥವಾ ಸಂರಕ್ಷಕಗಳಿಲ್ಲದೆ ವಿಶ್ವದರ್ಜೆಯ, ಅತ್ಯಾಧುನಿಕ ಉತ್ಪಾದನಾ ಸೌಲಭ್ಯಗಳನ್ನು ಬಳಸಿ ಆಹಾರ ಸುರಕ್ಷತೆ ನಿರ್ವಹಣಾ ವ್ಯವಸ್ಥೆಗೆ ಅನುಗುಣವಾಗಿ ಹಿಟ್ಟನ್ನು ತಯಾರಿಸುತ್ತೇವೆ. ಹಾಗಾಗಿ ಆಧಾರರಹಿತ ಮತ್ತು ನಕಲಿ ಪ್ರಚಾರವನ್ನು ನಂಬಬಾರದು ಎಂದು ಅದು ಮನವಿ ಮಾಡಿದೆ.

ಬೆಂಗಳೂರು ಮೂಲಕ ಐಡಿ ಕಂಪನಿಯು 2005ರಲ್ಲಿ ಆರಂಭವಾಗಿದ್ದು 45 ಮಾರುಕಟ್ಟೆಗಳನ್ನು ಹೊಂದಿದ್ದು, ಖ್ಯಾತಿ ಗಳಿಸಿದೆ. ಹಲವಾರು ಅಂತರಾಷ್ಟ್ರೀಯ ಪ್ರಶಸ್ತಿಗಳನ್ನು ಪಡೆದಿರುವ ಕಂಪನಿಯು 2021ರ ಹಣಕಾಸು ವರ್ಷದಲ್ಲಿ 294 ಕೋಟಿ ರೂ ಲಾಭ ಗಳಿಸಿದೆ ಎಂದು ದಿ ಹಿಂದೂ ವರದಿ ಮಾಡಿದೆ. ಅದು ಇತ್ತೀಚೆಗೆ ಬೆಂಗಳೂರು ಬಳಿಯ ಆನೇಕಲ್‌ನಲ್ಲಿ 40 ಕೋಟಿ ರೂ ವೆಚ್ಚದಲ್ಲಿ ಬೃಹತ್ ಇಡ್ಲಿ ಮತ್ತು ದೋಸೆ ಹಿಟ್ಟು ತಯಾರಿಸುವ ಘಟಕ ಆರಂಭಿಸಿದೆ.

ಕಂಪನಿಯ ಮಾಲೀಕ ಮುಸ್ಲಿಂ ಆದ ಕಾರಣಕ್ಕೆ ಐಡಿ ಫ್ರೆಶ್ ಫುಡ್ ವಿರುದ್ಧ ವಾಟ್ಸಾಪ್‌ನಲ್ಲಿ ಅಪಪ್ರಚಾರ ಆರಂಭಿಸಲಾಗಿದೆಯೇ ಎಂಬ ಅನುಮಾನವೆದ್ದಿದೆ. ಆದರೆ ಐಡಿ ಕಂಪನಿ ಹೇಳಿಕೆ ನೀಡುವುದರ ಮೂಲಕ ಸ್ಪಷ್ಟೀಕರಣ ನೀಡಿದೆ.


ಇದನ್ನೂ ಓದಿ: ತಾಲಿಬಾನ್ ಪರ ಪಾಕ್‌ ಆರ್ಮಿ ದಾಳಿ ಎಂದು ವಿಡಿಯೊ ಗೇಮ್‌ ಕ್ಲಿಪ್‌ ಪ್ರಸಾರ ಮಾಡಿದ ರಿಪಬ್ಲಿಕ್ ಟಿವಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...