Homeಕರ್ನಾಟಕಐಡಿ ಫ್ರೆಶ್ ಫುಡ್ ವಿರುದ್ಧ ಕೋಮುವಾದಿ ವಾಟ್ಸಾಪ್ ಫಾರ್ವಡ್: ಫೇಕ್ ಪ್ರೊಪಗಂಡಾ ಎಂದ ಕಂಪನಿ

ಐಡಿ ಫ್ರೆಶ್ ಫುಡ್ ವಿರುದ್ಧ ಕೋಮುವಾದಿ ವಾಟ್ಸಾಪ್ ಫಾರ್ವಡ್: ಫೇಕ್ ಪ್ರೊಪಗಂಡಾ ಎಂದ ಕಂಪನಿ

ಐಡಿ ಕಂಪನಿಯು ಹಿಟ್ಟು ತಯಾರಿಸುವಾಗ ಅದರ ಪ್ರಮಾಣ ಹೆಚ್ಚಿಸಲು ಹಸುವಿನ ಮೂಳೆ ಮತ್ತು ಕರುವಿನ ಕರುಳನ್ನು ಬೆರೆಸಲಾಗುತ್ತಿದೆ ಎಂದು ವಾಟ್ಸಾಪ್‌ನಲ್ಲಿ ಹಂಚಿಕೊಳ್ಳಲಾಗುತ್ತಿದೆ.

- Advertisement -
- Advertisement -

6ನೇ ತರಗತಿ ಫೇಲ್‌ ಆದ ಹುಡುಗನೊಬ್ಬ 2000 ಕೋಟಿ ರೂಗಳ ಬೃಹತ್ ಕಂಪನಿ ಮಾಲೀಕನಾದುದ್ದು ಹೇಗೆ ಎಂದು ಪಾಸಿಟಿವ್ ಸ್ಟೋರಿಯೊಂದನ್ನು ಆಗಸ್ಟ್ 30 ರಂದು ಹ್ಯುಮನ್ಸ್ ಆಫ್ ಬಾಂಬೆ ಪ್ರಕಟಿಸಿತ್ತು. ಅದು ಬೆಂಗಳೂರು ಮೂಲದ ಇಡ್ಲಿ ಮತ್ತು ದೋಸೆ ಹಿಟ್ಟು ತಯಾರಿಕ ‘ಐಡಿ ಫ್ರೆಶ್ ಫುಡ್ ಕಂಪನಿ’ ಮತ್ತು ಅದರ ಸಿಇಓ ಮುಸ್ತಾಫ ಪಿ.ಸಿ ಯವರ ಸಂದರ್ಶನದ ಕುರಿತಾಗಿತ್ತು. ಕನ್ನಡ ಸೇರಿದಂತೆ ಎಲ್ಲಾ ಭಾಷೆಗಳ ಮಾಧ್ಯಮಗಳು ಇದನ್ನು ವರದಿ ಮಾಡಿದ್ದವು ಮಾತ್ರವಲ್ಲದೇ ಅವು ವೈರಲ್ ಆಗಿದ್ದವು.

ಇದಾದ ಒಂದು ವಾರದಲ್ಲಿ ವಾಟ್ಸಾಪ್ ನಲ್ಲಿ ಕೋಮು ಪ್ರಚೋದಕ ಫಾರ್ವಾಡ್ ಮೆಸೇಜ್ ಒಂದು ಹರಿದಾಡತೊಡಗಿತ್ತು. ಅದರಲ್ಲಿ “ಐಡಿ ಕಂಪನಿಯು ಹಿಟ್ಟು ತಯಾರಿಸುವಾಗ ಅದರ ಪ್ರಮಾಣವನ್ನು ಹೆಚ್ಚಿಸಲು ಹಸುವಿನ ಮೂಳೆ ಮತ್ತು ಕರುವಿನ ಕರುಳನ್ನು ಬೆರೆಸಲಾಗುತ್ತಿದೆ. ಸ್ಥಾಪಕ ಮುಸ್ತಾಫ ಪಿ.ಸಿ ಮತ್ತು ಅವರ ನಾಲ್ವರು ಸಂಬಂಧಿಗಳಾದ ಅಬ್ದುಲ್ ನಜೀರ್, ಶಂಸುದ್ದೀನ್ ಟಿ.ಕೆ, ಜಾಫರ್ ಟಿ.ಕೆ ಮತ್ತು ನೌಸಾದ್ ಟಿ.ಎ ರವರು ಕೇವಲ ಮುಸ್ಲಿಮರನ್ನು ಮಾತ್ರ ನೇಮಕ ಮಾಡಿಕೊಳ್ಳುತ್ತಿದ್ದಾರೆ ಮತ್ತು ಕಂಪನಿಯು ಹಲಾಲ್ ಸರ್ಟಿಫಿಕೆಟ್ ಹೊಂದಿದೆ” ಎಂದು ಪ್ರತಿಪಾದಿಸಲಾಗಿದೆ. ಜೊತೆಗೆ 2014 ರಲ್ಲಿ ಇದು 35 ಕೋಟಿ ರೂಗಳನ್ನು ಕ್ರೌಡ್ ಫಂಡಿಂಗ್ ಮೂಲಕ ಸಂಗ್ರಹಿಸಿದೆ. ಷರಿಯತ್ ಇಸ್ಲಾಂ ಕಾನೂನಿಗೆ ಬದ್ದವಾಗಿದೆ ಎಂದೆಲ್ಲಾ ಲಿಂಕ್‌ಗಳನ್ನು ಹಂಚಿಕೊಳ್ಳಲಾಗಿದೆ.

ಈ ಸಂದೇಶ ಹರಿದಾಡುತ್ತಿರುವುದು ಐಡಿ ಫ್ರೆಶ್ ಫುಡ್ ಕಂಪನಿಯ ಗಮನಕ್ಕೆ ಬಂದು ಅದು ಹೇಳಿಕೆ ಬಿಡುಗಡೆ ಮಾಡಿದೆ. “ಐಡಿ ಕಂಪನಿ ಹಿಟ್ಟು ತಯಾರಿಸುವಾಗ ಪ್ರಾಣಿಜನ್ಯವನ್ನು ಬಳಸುತ್ತಿದೆ ಎಂಬ ವಾಟ್ಸಾಪ್ ಸಂದೇಶವು ತಪ್ಪು, ಸುಳ್ಳು ಮಾಹಿತಿ ಮತ್ತು ಆಧಾರರಹಿತವಾಗಿದೆ. ನಾವು ಕೇವಲ ಸಸ್ಯಾಹಾರಿ ಪದಾರ್ಥಗಳನ್ನು ಮಾತ್ರ ಹಿಟ್ಟು ತಯಾರಿಸುವಲ್ಲಿ ಬಳಸುತ್ತೇವೆ. ಐಡಿ ಇಡ್ಲಿ ಮತ್ತು ದೋಸೆ ಹಿಟ್ಟಿನ್ನು ಅಕ್ಕಿ, ಉದ್ದಿನ ಬೇಳೆ, ಮೇಂತ್ಯ ಮತ್ತು ಆರ್‌ಓ ನೀರಿನಿಂದ ಮಾತ್ರ ತಯಾರಿಸುತ್ತೇವೆ. ಅದು 100% ನೈಸರ್ಗಿಕ ಮತ್ತು ಸಸ್ಯಾಹಾರಿಯಾಗಿದೆ. ಇದರಲ್ಲಿ ಯಾವುದೇ ರೀತಿಯ ಪ್ರಾಣಿಜನ್ಯವನ್ನು ನಾವು ಬಳಸುವುದಿಲ್ಲ” ಎಂದು ಹೇಳಿಕೆಯಲ್ಲಿ ತಿಳಿಸಿದೆ.

ನಾವು ಆರೋಗ್ಯಕರ ಮತ್ತು ಅಧಿಕೃತ ಭಾರತೀಯ ಉತ್ಪನ್ನಗಳನ್ನು ಬಳಸಿ ಯಾವುದೇ ರಾಸಾಯನಿಕಗಳು ಅಥವಾ ಸಂರಕ್ಷಕಗಳಿಲ್ಲದೆ ವಿಶ್ವದರ್ಜೆಯ, ಅತ್ಯಾಧುನಿಕ ಉತ್ಪಾದನಾ ಸೌಲಭ್ಯಗಳನ್ನು ಬಳಸಿ ಆಹಾರ ಸುರಕ್ಷತೆ ನಿರ್ವಹಣಾ ವ್ಯವಸ್ಥೆಗೆ ಅನುಗುಣವಾಗಿ ಹಿಟ್ಟನ್ನು ತಯಾರಿಸುತ್ತೇವೆ. ಹಾಗಾಗಿ ಆಧಾರರಹಿತ ಮತ್ತು ನಕಲಿ ಪ್ರಚಾರವನ್ನು ನಂಬಬಾರದು ಎಂದು ಅದು ಮನವಿ ಮಾಡಿದೆ.

ಬೆಂಗಳೂರು ಮೂಲಕ ಐಡಿ ಕಂಪನಿಯು 2005ರಲ್ಲಿ ಆರಂಭವಾಗಿದ್ದು 45 ಮಾರುಕಟ್ಟೆಗಳನ್ನು ಹೊಂದಿದ್ದು, ಖ್ಯಾತಿ ಗಳಿಸಿದೆ. ಹಲವಾರು ಅಂತರಾಷ್ಟ್ರೀಯ ಪ್ರಶಸ್ತಿಗಳನ್ನು ಪಡೆದಿರುವ ಕಂಪನಿಯು 2021ರ ಹಣಕಾಸು ವರ್ಷದಲ್ಲಿ 294 ಕೋಟಿ ರೂ ಲಾಭ ಗಳಿಸಿದೆ ಎಂದು ದಿ ಹಿಂದೂ ವರದಿ ಮಾಡಿದೆ. ಅದು ಇತ್ತೀಚೆಗೆ ಬೆಂಗಳೂರು ಬಳಿಯ ಆನೇಕಲ್‌ನಲ್ಲಿ 40 ಕೋಟಿ ರೂ ವೆಚ್ಚದಲ್ಲಿ ಬೃಹತ್ ಇಡ್ಲಿ ಮತ್ತು ದೋಸೆ ಹಿಟ್ಟು ತಯಾರಿಸುವ ಘಟಕ ಆರಂಭಿಸಿದೆ.

ಕಂಪನಿಯ ಮಾಲೀಕ ಮುಸ್ಲಿಂ ಆದ ಕಾರಣಕ್ಕೆ ಐಡಿ ಫ್ರೆಶ್ ಫುಡ್ ವಿರುದ್ಧ ವಾಟ್ಸಾಪ್‌ನಲ್ಲಿ ಅಪಪ್ರಚಾರ ಆರಂಭಿಸಲಾಗಿದೆಯೇ ಎಂಬ ಅನುಮಾನವೆದ್ದಿದೆ. ಆದರೆ ಐಡಿ ಕಂಪನಿ ಹೇಳಿಕೆ ನೀಡುವುದರ ಮೂಲಕ ಸ್ಪಷ್ಟೀಕರಣ ನೀಡಿದೆ.


ಇದನ್ನೂ ಓದಿ: ತಾಲಿಬಾನ್ ಪರ ಪಾಕ್‌ ಆರ್ಮಿ ದಾಳಿ ಎಂದು ವಿಡಿಯೊ ಗೇಮ್‌ ಕ್ಲಿಪ್‌ ಪ್ರಸಾರ ಮಾಡಿದ ರಿಪಬ್ಲಿಕ್ ಟಿವಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...