Homeಕರ್ನಾಟಕಐಡಿ ಫ್ರೆಶ್ ಫುಡ್ ವಿರುದ್ಧ ಕೋಮುವಾದಿ ವಾಟ್ಸಾಪ್ ಫಾರ್ವಡ್: ಫೇಕ್ ಪ್ರೊಪಗಂಡಾ ಎಂದ ಕಂಪನಿ

ಐಡಿ ಫ್ರೆಶ್ ಫುಡ್ ವಿರುದ್ಧ ಕೋಮುವಾದಿ ವಾಟ್ಸಾಪ್ ಫಾರ್ವಡ್: ಫೇಕ್ ಪ್ರೊಪಗಂಡಾ ಎಂದ ಕಂಪನಿ

ಐಡಿ ಕಂಪನಿಯು ಹಿಟ್ಟು ತಯಾರಿಸುವಾಗ ಅದರ ಪ್ರಮಾಣ ಹೆಚ್ಚಿಸಲು ಹಸುವಿನ ಮೂಳೆ ಮತ್ತು ಕರುವಿನ ಕರುಳನ್ನು ಬೆರೆಸಲಾಗುತ್ತಿದೆ ಎಂದು ವಾಟ್ಸಾಪ್‌ನಲ್ಲಿ ಹಂಚಿಕೊಳ್ಳಲಾಗುತ್ತಿದೆ.

- Advertisement -
- Advertisement -

6ನೇ ತರಗತಿ ಫೇಲ್‌ ಆದ ಹುಡುಗನೊಬ್ಬ 2000 ಕೋಟಿ ರೂಗಳ ಬೃಹತ್ ಕಂಪನಿ ಮಾಲೀಕನಾದುದ್ದು ಹೇಗೆ ಎಂದು ಪಾಸಿಟಿವ್ ಸ್ಟೋರಿಯೊಂದನ್ನು ಆಗಸ್ಟ್ 30 ರಂದು ಹ್ಯುಮನ್ಸ್ ಆಫ್ ಬಾಂಬೆ ಪ್ರಕಟಿಸಿತ್ತು. ಅದು ಬೆಂಗಳೂರು ಮೂಲದ ಇಡ್ಲಿ ಮತ್ತು ದೋಸೆ ಹಿಟ್ಟು ತಯಾರಿಕ ‘ಐಡಿ ಫ್ರೆಶ್ ಫುಡ್ ಕಂಪನಿ’ ಮತ್ತು ಅದರ ಸಿಇಓ ಮುಸ್ತಾಫ ಪಿ.ಸಿ ಯವರ ಸಂದರ್ಶನದ ಕುರಿತಾಗಿತ್ತು. ಕನ್ನಡ ಸೇರಿದಂತೆ ಎಲ್ಲಾ ಭಾಷೆಗಳ ಮಾಧ್ಯಮಗಳು ಇದನ್ನು ವರದಿ ಮಾಡಿದ್ದವು ಮಾತ್ರವಲ್ಲದೇ ಅವು ವೈರಲ್ ಆಗಿದ್ದವು.

ಇದಾದ ಒಂದು ವಾರದಲ್ಲಿ ವಾಟ್ಸಾಪ್ ನಲ್ಲಿ ಕೋಮು ಪ್ರಚೋದಕ ಫಾರ್ವಾಡ್ ಮೆಸೇಜ್ ಒಂದು ಹರಿದಾಡತೊಡಗಿತ್ತು. ಅದರಲ್ಲಿ “ಐಡಿ ಕಂಪನಿಯು ಹಿಟ್ಟು ತಯಾರಿಸುವಾಗ ಅದರ ಪ್ರಮಾಣವನ್ನು ಹೆಚ್ಚಿಸಲು ಹಸುವಿನ ಮೂಳೆ ಮತ್ತು ಕರುವಿನ ಕರುಳನ್ನು ಬೆರೆಸಲಾಗುತ್ತಿದೆ. ಸ್ಥಾಪಕ ಮುಸ್ತಾಫ ಪಿ.ಸಿ ಮತ್ತು ಅವರ ನಾಲ್ವರು ಸಂಬಂಧಿಗಳಾದ ಅಬ್ದುಲ್ ನಜೀರ್, ಶಂಸುದ್ದೀನ್ ಟಿ.ಕೆ, ಜಾಫರ್ ಟಿ.ಕೆ ಮತ್ತು ನೌಸಾದ್ ಟಿ.ಎ ರವರು ಕೇವಲ ಮುಸ್ಲಿಮರನ್ನು ಮಾತ್ರ ನೇಮಕ ಮಾಡಿಕೊಳ್ಳುತ್ತಿದ್ದಾರೆ ಮತ್ತು ಕಂಪನಿಯು ಹಲಾಲ್ ಸರ್ಟಿಫಿಕೆಟ್ ಹೊಂದಿದೆ” ಎಂದು ಪ್ರತಿಪಾದಿಸಲಾಗಿದೆ. ಜೊತೆಗೆ 2014 ರಲ್ಲಿ ಇದು 35 ಕೋಟಿ ರೂಗಳನ್ನು ಕ್ರೌಡ್ ಫಂಡಿಂಗ್ ಮೂಲಕ ಸಂಗ್ರಹಿಸಿದೆ. ಷರಿಯತ್ ಇಸ್ಲಾಂ ಕಾನೂನಿಗೆ ಬದ್ದವಾಗಿದೆ ಎಂದೆಲ್ಲಾ ಲಿಂಕ್‌ಗಳನ್ನು ಹಂಚಿಕೊಳ್ಳಲಾಗಿದೆ.

ಈ ಸಂದೇಶ ಹರಿದಾಡುತ್ತಿರುವುದು ಐಡಿ ಫ್ರೆಶ್ ಫುಡ್ ಕಂಪನಿಯ ಗಮನಕ್ಕೆ ಬಂದು ಅದು ಹೇಳಿಕೆ ಬಿಡುಗಡೆ ಮಾಡಿದೆ. “ಐಡಿ ಕಂಪನಿ ಹಿಟ್ಟು ತಯಾರಿಸುವಾಗ ಪ್ರಾಣಿಜನ್ಯವನ್ನು ಬಳಸುತ್ತಿದೆ ಎಂಬ ವಾಟ್ಸಾಪ್ ಸಂದೇಶವು ತಪ್ಪು, ಸುಳ್ಳು ಮಾಹಿತಿ ಮತ್ತು ಆಧಾರರಹಿತವಾಗಿದೆ. ನಾವು ಕೇವಲ ಸಸ್ಯಾಹಾರಿ ಪದಾರ್ಥಗಳನ್ನು ಮಾತ್ರ ಹಿಟ್ಟು ತಯಾರಿಸುವಲ್ಲಿ ಬಳಸುತ್ತೇವೆ. ಐಡಿ ಇಡ್ಲಿ ಮತ್ತು ದೋಸೆ ಹಿಟ್ಟಿನ್ನು ಅಕ್ಕಿ, ಉದ್ದಿನ ಬೇಳೆ, ಮೇಂತ್ಯ ಮತ್ತು ಆರ್‌ಓ ನೀರಿನಿಂದ ಮಾತ್ರ ತಯಾರಿಸುತ್ತೇವೆ. ಅದು 100% ನೈಸರ್ಗಿಕ ಮತ್ತು ಸಸ್ಯಾಹಾರಿಯಾಗಿದೆ. ಇದರಲ್ಲಿ ಯಾವುದೇ ರೀತಿಯ ಪ್ರಾಣಿಜನ್ಯವನ್ನು ನಾವು ಬಳಸುವುದಿಲ್ಲ” ಎಂದು ಹೇಳಿಕೆಯಲ್ಲಿ ತಿಳಿಸಿದೆ.

ನಾವು ಆರೋಗ್ಯಕರ ಮತ್ತು ಅಧಿಕೃತ ಭಾರತೀಯ ಉತ್ಪನ್ನಗಳನ್ನು ಬಳಸಿ ಯಾವುದೇ ರಾಸಾಯನಿಕಗಳು ಅಥವಾ ಸಂರಕ್ಷಕಗಳಿಲ್ಲದೆ ವಿಶ್ವದರ್ಜೆಯ, ಅತ್ಯಾಧುನಿಕ ಉತ್ಪಾದನಾ ಸೌಲಭ್ಯಗಳನ್ನು ಬಳಸಿ ಆಹಾರ ಸುರಕ್ಷತೆ ನಿರ್ವಹಣಾ ವ್ಯವಸ್ಥೆಗೆ ಅನುಗುಣವಾಗಿ ಹಿಟ್ಟನ್ನು ತಯಾರಿಸುತ್ತೇವೆ. ಹಾಗಾಗಿ ಆಧಾರರಹಿತ ಮತ್ತು ನಕಲಿ ಪ್ರಚಾರವನ್ನು ನಂಬಬಾರದು ಎಂದು ಅದು ಮನವಿ ಮಾಡಿದೆ.

ಬೆಂಗಳೂರು ಮೂಲಕ ಐಡಿ ಕಂಪನಿಯು 2005ರಲ್ಲಿ ಆರಂಭವಾಗಿದ್ದು 45 ಮಾರುಕಟ್ಟೆಗಳನ್ನು ಹೊಂದಿದ್ದು, ಖ್ಯಾತಿ ಗಳಿಸಿದೆ. ಹಲವಾರು ಅಂತರಾಷ್ಟ್ರೀಯ ಪ್ರಶಸ್ತಿಗಳನ್ನು ಪಡೆದಿರುವ ಕಂಪನಿಯು 2021ರ ಹಣಕಾಸು ವರ್ಷದಲ್ಲಿ 294 ಕೋಟಿ ರೂ ಲಾಭ ಗಳಿಸಿದೆ ಎಂದು ದಿ ಹಿಂದೂ ವರದಿ ಮಾಡಿದೆ. ಅದು ಇತ್ತೀಚೆಗೆ ಬೆಂಗಳೂರು ಬಳಿಯ ಆನೇಕಲ್‌ನಲ್ಲಿ 40 ಕೋಟಿ ರೂ ವೆಚ್ಚದಲ್ಲಿ ಬೃಹತ್ ಇಡ್ಲಿ ಮತ್ತು ದೋಸೆ ಹಿಟ್ಟು ತಯಾರಿಸುವ ಘಟಕ ಆರಂಭಿಸಿದೆ.

ಕಂಪನಿಯ ಮಾಲೀಕ ಮುಸ್ಲಿಂ ಆದ ಕಾರಣಕ್ಕೆ ಐಡಿ ಫ್ರೆಶ್ ಫುಡ್ ವಿರುದ್ಧ ವಾಟ್ಸಾಪ್‌ನಲ್ಲಿ ಅಪಪ್ರಚಾರ ಆರಂಭಿಸಲಾಗಿದೆಯೇ ಎಂಬ ಅನುಮಾನವೆದ್ದಿದೆ. ಆದರೆ ಐಡಿ ಕಂಪನಿ ಹೇಳಿಕೆ ನೀಡುವುದರ ಮೂಲಕ ಸ್ಪಷ್ಟೀಕರಣ ನೀಡಿದೆ.


ಇದನ್ನೂ ಓದಿ: ತಾಲಿಬಾನ್ ಪರ ಪಾಕ್‌ ಆರ್ಮಿ ದಾಳಿ ಎಂದು ವಿಡಿಯೊ ಗೇಮ್‌ ಕ್ಲಿಪ್‌ ಪ್ರಸಾರ ಮಾಡಿದ ರಿಪಬ್ಲಿಕ್ ಟಿವಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....