Homeಕರ್ನಾಟಕಅಸಮಾನತೆಯ ಕುದುರೆಯನ್ನು ಕೋಮುವಾದದ ಹೆಂಡ ಕುಡಿದ ಜಾಕಿ ಓಡಿಸುತ್ತಿದ್ದಾನೆ: ದೇಮ

ಅಸಮಾನತೆಯ ಕುದುರೆಯನ್ನು ಕೋಮುವಾದದ ಹೆಂಡ ಕುಡಿದ ಜಾಕಿ ಓಡಿಸುತ್ತಿದ್ದಾನೆ: ದೇಮ

ಪುರಭವನದ ಡಾ.ಬಿ.ಆರ್. ಅಂಬೇಡ್ಕರ್ ಪ್ರತಿಮೆ ಬಳಿ ಸಮಾನತೆಗಾಗಿ ಓಟಕ್ಕೆ ಚಾಲನೆ

- Advertisement -
- Advertisement -

ಇಂದು ದೇಶದಲ್ಲಿ ಅಸಮಾನತೆ ಹೆಚ್ಚಿದ್ದು, ಈ ಅಸಮಾನತೆಯ ಹುಚ್ಚು ಕುದುರೆಯನ್ನು ದ್ವೇಷ, ಅಸಹನೆಯ ಕೋಮುವಾದದ ಹೆಂಡ ಕುಡಿದ ಜಾಕಿ ಓಡಿಸುತ್ತಿದ್ದಾನೆ ಎಂದು ಹಿರಿಯ ಸಾಹಿತಿ ದೇವನೂರ ಮಹಾದೇವ ಕಟಕಿಯಾಡಿದರು. ಭಾರತೀಯ ಪರಿವರ್ತನ ಸಂಘವು ಬಾಬಾ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಜಯಂತಿ ಅಂಗವಾಗಿ ಗುರುವಾರ ಮುಂಜಾನೆ ಮೈಸೂರಿನ ಪುರಭವನದ ಅಂಬೇಡ್ಕರ್ ಪ್ರತಿಮೆ ಬಳಿ ಆಯೋಜಿಸಿದ್ದ ಸಮಾನತೆಗಾಗಿ ಓಟಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

“ಇಂದು ಅಂಬೇಡ್ಕರ್ ಅವರು ಹುಟ್ಟಿದ ದಿನ. ಈ ನೆನಪಿಗಾಗಿ ‘ಸಮಾನತೆಗಾಗಿ ಓಟ’ ನಡೆಯುತ್ತಿದೆ. ಅದಕ್ಕೆ ಚಾಲನೆ ಕೊಡಲು ಬಂದಿದ್ದೇನೆ. ನೋಡುವುದಕ್ಕೆ ಮಾಜಿ ಆಟಗಾರ, ಹಾಲಿ ಕೋಚ್‌ನಂತೆ ಡ್ರೆಸ್‌ಕೋಡ್‌ನಲ್ಲೇನೋ ಬಂದಿದ್ದೇನೆ. ಕ್ಷಮೆ ಇರಲಿ. ನಾನು ಎಂದೂ ಓಡಿದವನು ಅಲ್ಲ, ನಿಮ್ಮೊಡನೆ ನಿಮ್ಮ ಹಿಂದೆ ಹಿಂದೆಯಾದರೂ ಓಡುವ ಚೈತನ್ಯವೂ ಈಗ ನನಗಿಲ್ಲ. ಓಡುತ್ತಿರುವ ಎಳೆಯರ ಬೆನ್ನು ತಟ್ಟಲು ಬಂದಿದ್ದೇನೆ. ಯಾಕೆಂದರೆ ನೀವು ಇಂದು ಓಡುತ್ತಿರುವುದು ಸಮಾನತೆಗಾಗಿ ಓಟ” ಎಂದು ದೇವನೂರ ಮಹಾದೇವ ಹೇಳಿದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಸಮಾನತೆಗಾಗಿ ಓಡುತ್ತಿರುವ ಎಳೆಯ ಸ್ನೇಹಿತರೆ ಇಂದು ನೀವು ತುಂಬಾ ವೇಗವಾಗಿ ಓಡಬೇಕಾಗಿದೆ. ಯಾಕೆಂದರೆ ಅಸಮಾನತೆ ಇಂದು ಎಂದೂ ಇಲ್ಲದಷ್ಟು ಹುಚ್ಚು ಕುದುರೆಯಂತೆ ಓಡುತ್ತಿದೆ. ಇದಾಗಲೇ ಅದು ತುಂಬ ದೂರ ಓಡಿದೆ. ಈ ದೇಶಕ್ಕೆ ದಿಕ್ಕು ತೋರಿಸುತ್ತಿರುವ ಚಿಂತಕ, ಹೋರಾಟಗಾರ ಯೋಗೇಂದ್ರ ಯಾದವ್ ಮೊನ್ನೆ ಮೊನ್ನೆ ತಾನೇ ಮೈಸೂರಿಗೆ ಬಂದಿದ್ದರು. ಅವರು ಮಾತಾಡುತ್ತ ಒಂದು ನುಡಿಗಟ್ಟು ಹೇಳಿದ್ದರು. ‘ಭಾರತದ ಪ್ರಧಾನಿ ಮೋದಿಯವರ ಬಾಯಲ್ಲಿ ಸೀತಾಪತಿ ಅಂದರೆ- ರಾಮ, ಭಾರತದ ಪ್ರಧಾನಿ ಮೋದಿಯವರ ಹೃದಯದಲ್ಲಿ ನೀತಾಪತಿ ಅಂದರೆ- ಅಂಬಾನಿ’” ಎಂದು ಅವರು ನೆನಪಿಸಿಕೊಂಡರು.

ಇದನ್ನೂ ಓದಿ: ಬಾಬಾಸಾಹೇಬರ ಚಿಂತನೆಗಳ ತಳಹದಿಯಲ್ಲಿ ರಾಷ್ಟ್ರವನ್ನು ಕಟ್ಟಿಕೊಳ್ಳದಿದ್ದರ ಪರಿಣಾಮ..

“ಭಾರತದ ಪ್ರಧಾನಿ ಮೋದಿಯವರ ಹೃದಯದಲ್ಲಿರುವ ಅಂಬಾನಿ ಲಕ್ಷಾಂತರ ಕೋಟಿಗಳ ಒಡೆಯ. ಭಾರತದಲ್ಲಿ ಇಂತಹ ನೂರಾರು ಬಿಲಿಯರ್ ಕುಟುಂಬಗಳ ಸಂಪತ್ತು ಒಟ್ಟಾದರೆ ಅದು ದೇಶದ ಒಟ್ಟು ಸಂಪತ್ತಿನ ಅರ್ಧಭಾಗದಷ್ಟು ಆಗುತ್ತದಂತೆ. ಬಡವರ ಸಂಖ್ಯೆ ದಿನ ದಿನವೂ ಹೆಚ್ಚುತ್ತಿದೆ. ಇಷ್ಟೊಂದು ಅಸಮಾನತೆ ಇಂದು ದೇಶದಲ್ಲಿದೆ. ಈ ಅಸಮಾನತೆಯ ಹುಚ್ಚು ಕುದುರೆಯನ್ನು ದ್ವೇಷ ಅಸಹನೆಯ ಕೋಮುವಾದದ ಹೆಂಡ ಕುಡಿದ ಜಾಕಿ ಓಡಿಸುತ್ತಿದ್ದಾನೆ. ಅಸಮಾನತೆಯ ಹುಚ್ಚು ಕುದುರೆ ಹುಚ್ಚೆದ್ದು ಓಡುತ್ತಿದೆ. ಆದರಿಂದ ಕಚ್ಚಿಸಿಕೊಳ್ಳದೆ ನೀವು ಎಚ್ಚರ ವಹಿಸಿ ಓಡಬೇಕಾಗಿದೆ. ನೀವು ಎಳೆಯರಾದ್ದರಿಂದ ನೀವು ಗೆಲ್ಲುತ್ತೀರಿ ಎಂಬ ನಂಬಿಕೆ ನನಗಿದೆ. ನೀವು ಗೆಲ್ಲಲೇ ಬೇಕು” ಎಂದು ಅವರು ಕರೆ ನೀಡಿದರು.

ಅಕ್ಕ ಐಎಎಸ್ ಅಕಾಡೆಮಿ ನಿರ್ದೇಶಕ ಡಾ.ಶಿವಕುಮಾರ್, ಎಸಿಪಿ ಎಸ್.ಗಂಗಾಧರಸ್ವಾಮಿ, ಕೇಂದ್ರ ಅಬಕಾರ ಮತ್ತು ಸುಂಕ ಇಲಾಖೆಯ ಅಧೀಕ್ಷಕ ಎಂ.ಯೋಗೇಂದ್ರ, ಆದಾಯ ತೆರಿಗೆ ಇಲಾಖೆಯ ಆಡಳಿತಾಧಿಕಾರಿ ಮಹದೇವಯ್ಯ, ಧಮ್ಮ ದೀವಿಗೆ ಚಾರಿಟಬಲ್ ಟ್ರಸ್ಟ್ ಮಲ್ಲಿಕಾರ್ಜುನ್, ಅರವಳಿಕೆ ತಜ್ಞ ಡಾ.ಶ್ಯಾಮ್ ಪ್ರಸಾದ್, ಜಾತ್ಯಾತೀತ ಜನತಾದಳ ಮುಖಂಡ ದೇವರಾಜ್ ಒಡೆಯರ್, ಸಾಹಿತಿ ಸೋಸಲೆ ಗಂಗಾಧರ್, ದುರ್ಗಾಂಬ ಎಂಟರ್‌ಪ್ರೈಸಸ್‌ನ ಎನ್.ಶಂಕರ, ಶ್ರೀಕಂಠೇಶ್ವರ ಎಂಟರ್‌ಪ್ರೈಸಸ್‌ನ ಜಗದೀಶ್, ತೇಜಸ್ವಿನಿ ಎಂಟರ್‌ಪ್ರೈಸಸ್‌ನ ರಾಮಕೃಷ್ಣ, ಬಿಪಿಎಸ್ ಜಿಲ್ಲಾ ಸಂಚಾಲಕ ಸೋಸಲೆ ಸಿದ್ದರಾಜು, ಜಿಲ್ಲಾಧ್ಯಕ್ಷ ಭೀಮನಹಲ್ಳಿ ಸೋಮೇಶ್, ಜಿಲ್ಲಾ ಕಾರ್ಯದರ್ಶಿ ಕೆ.ಎನ್.ಪ್ರಭುಸ್ವಾಮಿ, ಜಯಶಂಕರ್ ಮೇಸ್ತ್ರಿ ಮತ್ತಿತರರು ಪಾಲ್ಗೊಂಡಿದ್ದರು.

ಸಮಾನತೆಗಾಗಿ ಓಟದಲ್ಲಿ ಪಾಲ್ಗೊಂಡ ಕಿರಿ-ಹಿರಿಯರು

ಭಾರತೀಯ ಪರಿವರ್ತನ ಸಂಘ ಆಯೋಜಿಸಿದ್ದ ಸಮಾನತೆಗಾಗಿ ಓಟದಲ್ಲಿ ಕಿರಿಯರು- ಹಿರಿಯರು ಪಾಲ್ಗೊಂಡಿದ್ದರು. ಪುರಭವನದಿಂದ ಆರಂಭವಾದ ಓಟ ಹಾರ್ಡಿಂಜ್ ವೃತ್ತ, ಗನ್‌ಹೌಸ್, ರಾಮಸ್ವಾಮಿ ವೃತ್ತ, ಆರ್‌ಟಿಓ, ಅಶೋಕ ವೃತ್ತ, ಕೃಷ್ಣ ಬುಲೇವಾರ್ಡ್ ರಸ್ತೆ, ಕಲಾಮಂದಿರ ರಸ್ತೆ, ರೈಲ್ವೆ ವೃತ್ತ, ಇರ್ವಿನ್ ರಸ್ತೆ ಮಾರ್ಗವಾಗಿ ಪುರಭವನದಲ್ಲಿ ಅಂತ್ಯವಾಯಿತು. ಸುಮಾರು 12 ಕಿ.ಮೀ. ಓಟದಲ್ಲಿ ನೂರಕ್ಕೂ ಹೆಚ್ಚು ಮಂದಿ ಪಾಲ್ಗೊಂಡಿದ್ದರು. ಪ್ರಲಾಕ್ಷ ಆಸ್ಪತ್ರೆಯಿಂದ ಆಂಬ್ಯುಲೆನ್ಸ್ ವ್ಯವಸ್ಥೆ ಮಾಡಲಾಗಿತ್ತು. ತೇಜಸ್ವಿನಿ ಎಂಟರ್‌ಪ್ರೈಸಸ್‌ನಿಂದ ಟಿ-ಷರ್ಟ್ ವಿತರಿಸಲಾಯಿತು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಇದನ್ನೂ ಓದಿ: Exclusive: ಮಸೀದಿ ಸುತ್ತಲಿನ ಹಿಂದೂ ವ್ಯಾಪಾರಿಗಳ ಮನದ ಮಾತು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...