Homeಕರ್ನಾಟಕಅಸಮಾನತೆಯ ಕುದುರೆಯನ್ನು ಕೋಮುವಾದದ ಹೆಂಡ ಕುಡಿದ ಜಾಕಿ ಓಡಿಸುತ್ತಿದ್ದಾನೆ: ದೇಮ

ಅಸಮಾನತೆಯ ಕುದುರೆಯನ್ನು ಕೋಮುವಾದದ ಹೆಂಡ ಕುಡಿದ ಜಾಕಿ ಓಡಿಸುತ್ತಿದ್ದಾನೆ: ದೇಮ

ಪುರಭವನದ ಡಾ.ಬಿ.ಆರ್. ಅಂಬೇಡ್ಕರ್ ಪ್ರತಿಮೆ ಬಳಿ ಸಮಾನತೆಗಾಗಿ ಓಟಕ್ಕೆ ಚಾಲನೆ

- Advertisement -
- Advertisement -

ಇಂದು ದೇಶದಲ್ಲಿ ಅಸಮಾನತೆ ಹೆಚ್ಚಿದ್ದು, ಈ ಅಸಮಾನತೆಯ ಹುಚ್ಚು ಕುದುರೆಯನ್ನು ದ್ವೇಷ, ಅಸಹನೆಯ ಕೋಮುವಾದದ ಹೆಂಡ ಕುಡಿದ ಜಾಕಿ ಓಡಿಸುತ್ತಿದ್ದಾನೆ ಎಂದು ಹಿರಿಯ ಸಾಹಿತಿ ದೇವನೂರ ಮಹಾದೇವ ಕಟಕಿಯಾಡಿದರು. ಭಾರತೀಯ ಪರಿವರ್ತನ ಸಂಘವು ಬಾಬಾ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಜಯಂತಿ ಅಂಗವಾಗಿ ಗುರುವಾರ ಮುಂಜಾನೆ ಮೈಸೂರಿನ ಪುರಭವನದ ಅಂಬೇಡ್ಕರ್ ಪ್ರತಿಮೆ ಬಳಿ ಆಯೋಜಿಸಿದ್ದ ಸಮಾನತೆಗಾಗಿ ಓಟಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

“ಇಂದು ಅಂಬೇಡ್ಕರ್ ಅವರು ಹುಟ್ಟಿದ ದಿನ. ಈ ನೆನಪಿಗಾಗಿ ‘ಸಮಾನತೆಗಾಗಿ ಓಟ’ ನಡೆಯುತ್ತಿದೆ. ಅದಕ್ಕೆ ಚಾಲನೆ ಕೊಡಲು ಬಂದಿದ್ದೇನೆ. ನೋಡುವುದಕ್ಕೆ ಮಾಜಿ ಆಟಗಾರ, ಹಾಲಿ ಕೋಚ್‌ನಂತೆ ಡ್ರೆಸ್‌ಕೋಡ್‌ನಲ್ಲೇನೋ ಬಂದಿದ್ದೇನೆ. ಕ್ಷಮೆ ಇರಲಿ. ನಾನು ಎಂದೂ ಓಡಿದವನು ಅಲ್ಲ, ನಿಮ್ಮೊಡನೆ ನಿಮ್ಮ ಹಿಂದೆ ಹಿಂದೆಯಾದರೂ ಓಡುವ ಚೈತನ್ಯವೂ ಈಗ ನನಗಿಲ್ಲ. ಓಡುತ್ತಿರುವ ಎಳೆಯರ ಬೆನ್ನು ತಟ್ಟಲು ಬಂದಿದ್ದೇನೆ. ಯಾಕೆಂದರೆ ನೀವು ಇಂದು ಓಡುತ್ತಿರುವುದು ಸಮಾನತೆಗಾಗಿ ಓಟ” ಎಂದು ದೇವನೂರ ಮಹಾದೇವ ಹೇಳಿದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಸಮಾನತೆಗಾಗಿ ಓಡುತ್ತಿರುವ ಎಳೆಯ ಸ್ನೇಹಿತರೆ ಇಂದು ನೀವು ತುಂಬಾ ವೇಗವಾಗಿ ಓಡಬೇಕಾಗಿದೆ. ಯಾಕೆಂದರೆ ಅಸಮಾನತೆ ಇಂದು ಎಂದೂ ಇಲ್ಲದಷ್ಟು ಹುಚ್ಚು ಕುದುರೆಯಂತೆ ಓಡುತ್ತಿದೆ. ಇದಾಗಲೇ ಅದು ತುಂಬ ದೂರ ಓಡಿದೆ. ಈ ದೇಶಕ್ಕೆ ದಿಕ್ಕು ತೋರಿಸುತ್ತಿರುವ ಚಿಂತಕ, ಹೋರಾಟಗಾರ ಯೋಗೇಂದ್ರ ಯಾದವ್ ಮೊನ್ನೆ ಮೊನ್ನೆ ತಾನೇ ಮೈಸೂರಿಗೆ ಬಂದಿದ್ದರು. ಅವರು ಮಾತಾಡುತ್ತ ಒಂದು ನುಡಿಗಟ್ಟು ಹೇಳಿದ್ದರು. ‘ಭಾರತದ ಪ್ರಧಾನಿ ಮೋದಿಯವರ ಬಾಯಲ್ಲಿ ಸೀತಾಪತಿ ಅಂದರೆ- ರಾಮ, ಭಾರತದ ಪ್ರಧಾನಿ ಮೋದಿಯವರ ಹೃದಯದಲ್ಲಿ ನೀತಾಪತಿ ಅಂದರೆ- ಅಂಬಾನಿ’” ಎಂದು ಅವರು ನೆನಪಿಸಿಕೊಂಡರು.

ಇದನ್ನೂ ಓದಿ: ಬಾಬಾಸಾಹೇಬರ ಚಿಂತನೆಗಳ ತಳಹದಿಯಲ್ಲಿ ರಾಷ್ಟ್ರವನ್ನು ಕಟ್ಟಿಕೊಳ್ಳದಿದ್ದರ ಪರಿಣಾಮ..

“ಭಾರತದ ಪ್ರಧಾನಿ ಮೋದಿಯವರ ಹೃದಯದಲ್ಲಿರುವ ಅಂಬಾನಿ ಲಕ್ಷಾಂತರ ಕೋಟಿಗಳ ಒಡೆಯ. ಭಾರತದಲ್ಲಿ ಇಂತಹ ನೂರಾರು ಬಿಲಿಯರ್ ಕುಟುಂಬಗಳ ಸಂಪತ್ತು ಒಟ್ಟಾದರೆ ಅದು ದೇಶದ ಒಟ್ಟು ಸಂಪತ್ತಿನ ಅರ್ಧಭಾಗದಷ್ಟು ಆಗುತ್ತದಂತೆ. ಬಡವರ ಸಂಖ್ಯೆ ದಿನ ದಿನವೂ ಹೆಚ್ಚುತ್ತಿದೆ. ಇಷ್ಟೊಂದು ಅಸಮಾನತೆ ಇಂದು ದೇಶದಲ್ಲಿದೆ. ಈ ಅಸಮಾನತೆಯ ಹುಚ್ಚು ಕುದುರೆಯನ್ನು ದ್ವೇಷ ಅಸಹನೆಯ ಕೋಮುವಾದದ ಹೆಂಡ ಕುಡಿದ ಜಾಕಿ ಓಡಿಸುತ್ತಿದ್ದಾನೆ. ಅಸಮಾನತೆಯ ಹುಚ್ಚು ಕುದುರೆ ಹುಚ್ಚೆದ್ದು ಓಡುತ್ತಿದೆ. ಆದರಿಂದ ಕಚ್ಚಿಸಿಕೊಳ್ಳದೆ ನೀವು ಎಚ್ಚರ ವಹಿಸಿ ಓಡಬೇಕಾಗಿದೆ. ನೀವು ಎಳೆಯರಾದ್ದರಿಂದ ನೀವು ಗೆಲ್ಲುತ್ತೀರಿ ಎಂಬ ನಂಬಿಕೆ ನನಗಿದೆ. ನೀವು ಗೆಲ್ಲಲೇ ಬೇಕು” ಎಂದು ಅವರು ಕರೆ ನೀಡಿದರು.

ಅಕ್ಕ ಐಎಎಸ್ ಅಕಾಡೆಮಿ ನಿರ್ದೇಶಕ ಡಾ.ಶಿವಕುಮಾರ್, ಎಸಿಪಿ ಎಸ್.ಗಂಗಾಧರಸ್ವಾಮಿ, ಕೇಂದ್ರ ಅಬಕಾರ ಮತ್ತು ಸುಂಕ ಇಲಾಖೆಯ ಅಧೀಕ್ಷಕ ಎಂ.ಯೋಗೇಂದ್ರ, ಆದಾಯ ತೆರಿಗೆ ಇಲಾಖೆಯ ಆಡಳಿತಾಧಿಕಾರಿ ಮಹದೇವಯ್ಯ, ಧಮ್ಮ ದೀವಿಗೆ ಚಾರಿಟಬಲ್ ಟ್ರಸ್ಟ್ ಮಲ್ಲಿಕಾರ್ಜುನ್, ಅರವಳಿಕೆ ತಜ್ಞ ಡಾ.ಶ್ಯಾಮ್ ಪ್ರಸಾದ್, ಜಾತ್ಯಾತೀತ ಜನತಾದಳ ಮುಖಂಡ ದೇವರಾಜ್ ಒಡೆಯರ್, ಸಾಹಿತಿ ಸೋಸಲೆ ಗಂಗಾಧರ್, ದುರ್ಗಾಂಬ ಎಂಟರ್‌ಪ್ರೈಸಸ್‌ನ ಎನ್.ಶಂಕರ, ಶ್ರೀಕಂಠೇಶ್ವರ ಎಂಟರ್‌ಪ್ರೈಸಸ್‌ನ ಜಗದೀಶ್, ತೇಜಸ್ವಿನಿ ಎಂಟರ್‌ಪ್ರೈಸಸ್‌ನ ರಾಮಕೃಷ್ಣ, ಬಿಪಿಎಸ್ ಜಿಲ್ಲಾ ಸಂಚಾಲಕ ಸೋಸಲೆ ಸಿದ್ದರಾಜು, ಜಿಲ್ಲಾಧ್ಯಕ್ಷ ಭೀಮನಹಲ್ಳಿ ಸೋಮೇಶ್, ಜಿಲ್ಲಾ ಕಾರ್ಯದರ್ಶಿ ಕೆ.ಎನ್.ಪ್ರಭುಸ್ವಾಮಿ, ಜಯಶಂಕರ್ ಮೇಸ್ತ್ರಿ ಮತ್ತಿತರರು ಪಾಲ್ಗೊಂಡಿದ್ದರು.

ಸಮಾನತೆಗಾಗಿ ಓಟದಲ್ಲಿ ಪಾಲ್ಗೊಂಡ ಕಿರಿ-ಹಿರಿಯರು

ಭಾರತೀಯ ಪರಿವರ್ತನ ಸಂಘ ಆಯೋಜಿಸಿದ್ದ ಸಮಾನತೆಗಾಗಿ ಓಟದಲ್ಲಿ ಕಿರಿಯರು- ಹಿರಿಯರು ಪಾಲ್ಗೊಂಡಿದ್ದರು. ಪುರಭವನದಿಂದ ಆರಂಭವಾದ ಓಟ ಹಾರ್ಡಿಂಜ್ ವೃತ್ತ, ಗನ್‌ಹೌಸ್, ರಾಮಸ್ವಾಮಿ ವೃತ್ತ, ಆರ್‌ಟಿಓ, ಅಶೋಕ ವೃತ್ತ, ಕೃಷ್ಣ ಬುಲೇವಾರ್ಡ್ ರಸ್ತೆ, ಕಲಾಮಂದಿರ ರಸ್ತೆ, ರೈಲ್ವೆ ವೃತ್ತ, ಇರ್ವಿನ್ ರಸ್ತೆ ಮಾರ್ಗವಾಗಿ ಪುರಭವನದಲ್ಲಿ ಅಂತ್ಯವಾಯಿತು. ಸುಮಾರು 12 ಕಿ.ಮೀ. ಓಟದಲ್ಲಿ ನೂರಕ್ಕೂ ಹೆಚ್ಚು ಮಂದಿ ಪಾಲ್ಗೊಂಡಿದ್ದರು. ಪ್ರಲಾಕ್ಷ ಆಸ್ಪತ್ರೆಯಿಂದ ಆಂಬ್ಯುಲೆನ್ಸ್ ವ್ಯವಸ್ಥೆ ಮಾಡಲಾಗಿತ್ತು. ತೇಜಸ್ವಿನಿ ಎಂಟರ್‌ಪ್ರೈಸಸ್‌ನಿಂದ ಟಿ-ಷರ್ಟ್ ವಿತರಿಸಲಾಯಿತು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಇದನ್ನೂ ಓದಿ: Exclusive: ಮಸೀದಿ ಸುತ್ತಲಿನ ಹಿಂದೂ ವ್ಯಾಪಾರಿಗಳ ಮನದ ಮಾತು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಯುದ್ಧ ಯಾವಾಗ ಕೊನೆಗೊಳ್ಳುತ್ತದೆ ಎಂಬುದನ್ನು ಇರಾನ್ ನಿರ್ಧರಿಸುತ್ತದೆ’: ಟ್ರಂಪ್ ‘ಅಲ್ಪಾವಧಿಯ ಸಂಘರ್ಷ’ ಹೇಳಿಕೆಗೆ ಇರಾನ್ ತಿರುಗೇಟು 

ಟೆಹ್ರಾನ್: ಇರಾನ್‌ನಲ್ಲಿ ಯುದ್ಧವನ್ನು ಕೊನೆಗೊಳಿಸುವ ಬಗ್ಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಟೆಹ್ರಾನ್ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದು, ಅಮೆರಿಕ ಮತ್ತು ಇಸ್ರೇಲಿ ಗುರಿಗಳ ವಿರುದ್ಧದ ಮಿಲಿಟರಿ ಕ್ರಮಗಳು ಯಾವಾಗ ನಿಂತವು ಎಂಬುದನ್ನು...

ಮಹಿಳಾ ಮೀಸಲಾತಿ ಮಸೂದೆ; ತ್ವರಿತ ಅನುಷ್ಠಾನಕ್ಕೆ ವಿಪಕ್ಷಗಳ ಅಭಿಪ್ರಾಯ ಕೇಳಿದ ಕೇಂದ್ರ ಸರ್ಕಾರ

ನವದೆಹಲಿ: ಮಹಿಳಾ ಮೀಸಲಾತಿ ಕಾನೂನಿನ ಅನುಷ್ಠಾನವನ್ನು ತ್ವರಿತಗೊಳಿಸುವ ಪ್ರಯತ್ನದಲ್ಲಿ, ಲೋಕಸಭೆ ಮತ್ತು ರಾಜ್ಯ ಶಾಸಕಾಂಗ ಸಭೆಗಳಲ್ಲಿ ಮಹಿಳೆಯರಿಗೆ ಶೇ 33 ರಷ್ಟು ಮೀಸಲಾತಿ ನೀಡುವ ಶಾಸನವನ್ನು ತಿದ್ದುಪಡಿ ಮಾಡುವ ಪ್ರಸ್ತಾಪದ ಕುರಿತು ಅಭಿಪ್ರಾಯಗಳನ್ನು...

ಕೋಲ್ಕತ್ತಾ : ಕಾಳಿಘಾಟ್ ಬಳಿಕ ದಕ್ಷಿಣೇಶ್ವರದಲ್ಲೂ ಮುಖ್ಯ ಚುನಾವಣಾ ಆಯುಕ್ತರ ವಿರುದ್ಧ ‘ಗೋ ಬ್ಯಾಕ್ ಘೋಷಣೆ’

ಕಾಳಿಘಾಟ್ ಬಳಿಕ ಕೋಲ್ಕತ್ತಾದ ದಕ್ಷಿಣೇಶ್ವರ ದೇವಸ್ಥಾನದಲ್ಲೂ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಿರುದ್ದ 'ಗೋ ಬ್ಯಾಕ್ ಘೋಷಣೆಗಳು' ಕೇಳಿ ಬಂದಿವೆ. ಮಂಗಳವಾರ (ಮಾ.10) ಬೆಳಿಗ್ಗೆ ಜ್ಞಾನೇಶ್ ಕುಮಾರ್ ದಕ್ಷಿಣೇಶ್ವರ ಕಾಳಿ ದೇವಸ್ಥಾನಕ್ಕೆ ಭೇಟಿ...

ಉತ್ತರ ಪ್ರದೇಶ| ಹೋಳಿ ಹಬ್ಬದ ಶುಭ ಕೋರಿದ ದಲಿತ ಯುವಕನನ್ನು ಕೊಂದ ಪ್ರಬಲಜಾತಿ ಕುಟುಂಬ

ಉತ್ತರ ಪ್ರದೇಶದ ಲಕ್ನೋದ ದುಬಗ್ಗಾ ಪ್ರದೇಶದಲ್ಲಿ, ಹೋಳಿ ಹಬ್ಬದ ಸಂದರ್ಭದಲ್ಲಿ ಶುಭಕೋರಿದ 22 ವರ್ಷದ ದಲಿತ ವ್ಯಕ್ತಿಯನ್ನು ಬ್ರಾಹ್ಮಣ ಕುಟುಂಬದ ಸದಸ್ಯರು ಇರಿದು ಕೊಂದಿದ್ದಾರೆ ಎಂದು ಆರೋಪಿಸಲಾಗಿದೆ. ಈ ಘಟನೆ ಮಾರ್ಚ್ 4...

‘ಒಂದು ಲೀಟರ್ ತೈಲವನ್ನೂ ರಫ್ತು ಮಾಡುವುದಿಲ್ಲ’: ಟ್ರಂಪ್ ‘ಹಾರ್ಮುಜ್ ಜಲಸಂಧಿ ಸ್ವಾಧೀನ’ ಹೇಳಿಕೆಯ ನಂತರ ಕಠಿಣ ಎಚ್ಚರಿಕೆ ನೀಡಿದ ಇರಾನ್

ಟೆಹ್ರಾನ್: ಇಸ್ರೇಲ್-ಅಮೆರಿಕ ಮತ್ತು ಇರಾನ್ ನಡುವೆ ನಡೆಯುತ್ತಿರುವ ಸಂಘರ್ಷದ ಮಧ್ಯೆ, ತನ್ನ ವಿರುದ್ಧ ದಾಳಿಗಳು ಮುಂದುವರಿದರೆ, ಈ ಪ್ರದೇಶದಿಂದ ಒಂದು ಲೀಟರ್ ತೈಲವನ್ನು ರಫ್ತು ಮಾಡಲು ಸಹ ಇರಾನ್ ಅನುಮತಿಸುವುದಿಲ್ಲ ಎಂದು ಇರಾನ್...

ನ್ಯಾಯಾಂಗದ ಕುರಿತ ಅಧ್ಯಾಯ ವಿವಾದ: ಬೇಷರತ್ ಕ್ಷಮೆಯಾಚಿಸಿದ ಎನ್‌ಸಿಇಆರ್‌ಟಿ

ಇತ್ತೀಚೆಗೆ ಪ್ರಕಟವಾದ 8ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ನ್ಯಾಯಾಂಗ ಭ್ರಷ್ಟಾಚಾರದ ಅಧ್ಯಾಯವನ್ನು ಸೇರಿಸಿದ್ದಕ್ಕಾಗಿ ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಮಂಗಳವಾರ (ಮಾ.10) ಬೇಷರತ್ತಾಗಿ ಸಾರ್ವಜನಿಕ ಕ್ಷಮೆಯಾಚಿಸಿದೆ ಮತ್ತು...

ಟ್ರಕ್ ಚಾಲಕನಿಗೆ ಥಳಿಸಿ, ಸೆಗಣಿ ತಿನ್ನಿಸಿದ ಪ್ರಕರಣ : ಇಬ್ಬರು ಸ್ವಘೋಷಿತ ಗೋರಕ್ಷಕರ ಬಂಧನ

ಎಮ್ಮೆಗಳನ್ನು ಸಾಗಿಸುತ್ತಿದ್ದ ಟ್ರಕ್‌ ಚಾಲಕನಿಗೆ ಥಳಿಸಿ, ಸೆಗಣಿ ತಿನ್ನಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಸ್ವಘೋಷಿತ ಗೋರಕ್ಷಕರನ್ನು ಮಹಾರಾಷ್ಟ್ರದ ಪುಣೆ ನಗರ ಪೊಲೀಸರು ಬಂಧಿಸಿದ್ದಾರೆ. ಬಿಪಾಶಾ ಅಲಿಯಾಸ್ ಆಕಾಶ್ ಮಾಣಿಕಂ ಮತ್ತು ಹೇಮಂತ್ ಗಾಯಕ್ವಾಡ್ ಬಂಧಿತರು....

ದೆಹಲಿ ಗಲಭೆ ಪ್ರಕರಣ : ಶಾರ್ಜೀಲ್ ಇಮಾಮ್‌ಗೆ 10 ದಿನಗಳ ಮಧ್ಯಂತರ ಜಾಮೀನು

ದೆಹಲಿ ಗಲಭೆ ಪ್ರಕರಣದಲ್ಲಿ ಬಂಧಿತರಾಗಿರುವ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ (ಜೆಎನ್‌ಯು) ಸಂಶೋಧನಾ ವಿದ್ಯಾರ್ಥಿ ಶಾರ್ಜೀಲ್ ಇಮಾಮ್ ಅವರಿಗೆ ನ್ಯಾಯಾಲಯ ಸೋಮವಾರ (ಮಾ.9) 10 ದಿನಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ. ತನ್ನ ಸಹೋದರನ...

‘ಬಲಾಢ್ಯರ ಓಲೈಕೆಗಾಗಿ ಸಾಮಾಜಿಕ ನ್ಯಾಯದ ಸಮಾಧಿ..’; ಬಜೆಟ್‌ನಲ್ಲಿ ಅಲೆಮಾರಿ ಸಮುದಾಯಗಳಿಗೆ ಅನ್ಯಾಯ

'ಬಲಾಢ್ಯರ ಓಲೈಕೆಗಾಗಿ ಸಾಮಾಜಿಕ ನ್ಯಾಯದ ಸಮಾಧಿ ಮಾಡಲಾಗಿದೆ; ಬಜೆಟ್‌ನಲ್ಲಿ ಅಲೆಮಾರಿ ಸಮುದಾಯಗಳಿಗೆ ಅನ್ಯಾಯ ಮಾಡಲಾಗಿದೆ ಎಂದು 'ಕರ್ನಾಟಕ ಅಸ್ಪೃಶ್ಯ ಅಲೆಮಾರಿ ಸಮುದಾಯಗಳ ಮಹಾಒಕ್ಕೂಟ' ಸಿದ್ದರಾಮಯ್ಯ ಅವರ ಬಜೆಟ್‌ ಕುರಿತು ಅಸಮಾಧಾನ ಹೊರಹಾಕಿದೆ. ಈ ಕುರಿತು...

ಒಳಮೀಸಲಾತಿ ಇಲ್ಲದೇ ಉದ್ಯೋಗ ಭರ್ತಿಗೆ ವಿರೋಧ; ಕಾಂಗ್ರೆಸ್ ಸರ್ಕಾರದ ವಿರುದ್ಧ ಬೃಹತ್ ಪ್ರತಿಭಟನೆ

ಒಳಮೀಸಲಾತಿ ಇಲ್ಲದೇ 56 ಸಾವಿರ ಉದ್ಯೋಗ ಭರ್ತಿಗೆ ಮುಂದಾಗಿರುವ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಒಳಮೀಸಲಾತಿ ಹೋರಾಟಗಾರರು ವಿರೋಧ ವ್ಯಕ್ತಪಡಿಸಿದ್ದು, ಇದೇ ತಿಂಗಳ 12 ರಂದು ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆಗೆ ಕರೆ ಕೊಟ್ಟಿದ್ದಾರೆ. ಈ...