Homeಕರ್ನಾಟಕಅಸಮಾನತೆಯ ಕುದುರೆಯನ್ನು ಕೋಮುವಾದದ ಹೆಂಡ ಕುಡಿದ ಜಾಕಿ ಓಡಿಸುತ್ತಿದ್ದಾನೆ: ದೇಮ

ಅಸಮಾನತೆಯ ಕುದುರೆಯನ್ನು ಕೋಮುವಾದದ ಹೆಂಡ ಕುಡಿದ ಜಾಕಿ ಓಡಿಸುತ್ತಿದ್ದಾನೆ: ದೇಮ

ಪುರಭವನದ ಡಾ.ಬಿ.ಆರ್. ಅಂಬೇಡ್ಕರ್ ಪ್ರತಿಮೆ ಬಳಿ ಸಮಾನತೆಗಾಗಿ ಓಟಕ್ಕೆ ಚಾಲನೆ

- Advertisement -
- Advertisement -

ಇಂದು ದೇಶದಲ್ಲಿ ಅಸಮಾನತೆ ಹೆಚ್ಚಿದ್ದು, ಈ ಅಸಮಾನತೆಯ ಹುಚ್ಚು ಕುದುರೆಯನ್ನು ದ್ವೇಷ, ಅಸಹನೆಯ ಕೋಮುವಾದದ ಹೆಂಡ ಕುಡಿದ ಜಾಕಿ ಓಡಿಸುತ್ತಿದ್ದಾನೆ ಎಂದು ಹಿರಿಯ ಸಾಹಿತಿ ದೇವನೂರ ಮಹಾದೇವ ಕಟಕಿಯಾಡಿದರು. ಭಾರತೀಯ ಪರಿವರ್ತನ ಸಂಘವು ಬಾಬಾ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಜಯಂತಿ ಅಂಗವಾಗಿ ಗುರುವಾರ ಮುಂಜಾನೆ ಮೈಸೂರಿನ ಪುರಭವನದ ಅಂಬೇಡ್ಕರ್ ಪ್ರತಿಮೆ ಬಳಿ ಆಯೋಜಿಸಿದ್ದ ಸಮಾನತೆಗಾಗಿ ಓಟಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

“ಇಂದು ಅಂಬೇಡ್ಕರ್ ಅವರು ಹುಟ್ಟಿದ ದಿನ. ಈ ನೆನಪಿಗಾಗಿ ‘ಸಮಾನತೆಗಾಗಿ ಓಟ’ ನಡೆಯುತ್ತಿದೆ. ಅದಕ್ಕೆ ಚಾಲನೆ ಕೊಡಲು ಬಂದಿದ್ದೇನೆ. ನೋಡುವುದಕ್ಕೆ ಮಾಜಿ ಆಟಗಾರ, ಹಾಲಿ ಕೋಚ್‌ನಂತೆ ಡ್ರೆಸ್‌ಕೋಡ್‌ನಲ್ಲೇನೋ ಬಂದಿದ್ದೇನೆ. ಕ್ಷಮೆ ಇರಲಿ. ನಾನು ಎಂದೂ ಓಡಿದವನು ಅಲ್ಲ, ನಿಮ್ಮೊಡನೆ ನಿಮ್ಮ ಹಿಂದೆ ಹಿಂದೆಯಾದರೂ ಓಡುವ ಚೈತನ್ಯವೂ ಈಗ ನನಗಿಲ್ಲ. ಓಡುತ್ತಿರುವ ಎಳೆಯರ ಬೆನ್ನು ತಟ್ಟಲು ಬಂದಿದ್ದೇನೆ. ಯಾಕೆಂದರೆ ನೀವು ಇಂದು ಓಡುತ್ತಿರುವುದು ಸಮಾನತೆಗಾಗಿ ಓಟ” ಎಂದು ದೇವನೂರ ಮಹಾದೇವ ಹೇಳಿದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಸಮಾನತೆಗಾಗಿ ಓಡುತ್ತಿರುವ ಎಳೆಯ ಸ್ನೇಹಿತರೆ ಇಂದು ನೀವು ತುಂಬಾ ವೇಗವಾಗಿ ಓಡಬೇಕಾಗಿದೆ. ಯಾಕೆಂದರೆ ಅಸಮಾನತೆ ಇಂದು ಎಂದೂ ಇಲ್ಲದಷ್ಟು ಹುಚ್ಚು ಕುದುರೆಯಂತೆ ಓಡುತ್ತಿದೆ. ಇದಾಗಲೇ ಅದು ತುಂಬ ದೂರ ಓಡಿದೆ. ಈ ದೇಶಕ್ಕೆ ದಿಕ್ಕು ತೋರಿಸುತ್ತಿರುವ ಚಿಂತಕ, ಹೋರಾಟಗಾರ ಯೋಗೇಂದ್ರ ಯಾದವ್ ಮೊನ್ನೆ ಮೊನ್ನೆ ತಾನೇ ಮೈಸೂರಿಗೆ ಬಂದಿದ್ದರು. ಅವರು ಮಾತಾಡುತ್ತ ಒಂದು ನುಡಿಗಟ್ಟು ಹೇಳಿದ್ದರು. ‘ಭಾರತದ ಪ್ರಧಾನಿ ಮೋದಿಯವರ ಬಾಯಲ್ಲಿ ಸೀತಾಪತಿ ಅಂದರೆ- ರಾಮ, ಭಾರತದ ಪ್ರಧಾನಿ ಮೋದಿಯವರ ಹೃದಯದಲ್ಲಿ ನೀತಾಪತಿ ಅಂದರೆ- ಅಂಬಾನಿ’” ಎಂದು ಅವರು ನೆನಪಿಸಿಕೊಂಡರು.

ಇದನ್ನೂ ಓದಿ: ಬಾಬಾಸಾಹೇಬರ ಚಿಂತನೆಗಳ ತಳಹದಿಯಲ್ಲಿ ರಾಷ್ಟ್ರವನ್ನು ಕಟ್ಟಿಕೊಳ್ಳದಿದ್ದರ ಪರಿಣಾಮ..

“ಭಾರತದ ಪ್ರಧಾನಿ ಮೋದಿಯವರ ಹೃದಯದಲ್ಲಿರುವ ಅಂಬಾನಿ ಲಕ್ಷಾಂತರ ಕೋಟಿಗಳ ಒಡೆಯ. ಭಾರತದಲ್ಲಿ ಇಂತಹ ನೂರಾರು ಬಿಲಿಯರ್ ಕುಟುಂಬಗಳ ಸಂಪತ್ತು ಒಟ್ಟಾದರೆ ಅದು ದೇಶದ ಒಟ್ಟು ಸಂಪತ್ತಿನ ಅರ್ಧಭಾಗದಷ್ಟು ಆಗುತ್ತದಂತೆ. ಬಡವರ ಸಂಖ್ಯೆ ದಿನ ದಿನವೂ ಹೆಚ್ಚುತ್ತಿದೆ. ಇಷ್ಟೊಂದು ಅಸಮಾನತೆ ಇಂದು ದೇಶದಲ್ಲಿದೆ. ಈ ಅಸಮಾನತೆಯ ಹುಚ್ಚು ಕುದುರೆಯನ್ನು ದ್ವೇಷ ಅಸಹನೆಯ ಕೋಮುವಾದದ ಹೆಂಡ ಕುಡಿದ ಜಾಕಿ ಓಡಿಸುತ್ತಿದ್ದಾನೆ. ಅಸಮಾನತೆಯ ಹುಚ್ಚು ಕುದುರೆ ಹುಚ್ಚೆದ್ದು ಓಡುತ್ತಿದೆ. ಆದರಿಂದ ಕಚ್ಚಿಸಿಕೊಳ್ಳದೆ ನೀವು ಎಚ್ಚರ ವಹಿಸಿ ಓಡಬೇಕಾಗಿದೆ. ನೀವು ಎಳೆಯರಾದ್ದರಿಂದ ನೀವು ಗೆಲ್ಲುತ್ತೀರಿ ಎಂಬ ನಂಬಿಕೆ ನನಗಿದೆ. ನೀವು ಗೆಲ್ಲಲೇ ಬೇಕು” ಎಂದು ಅವರು ಕರೆ ನೀಡಿದರು.

ಅಕ್ಕ ಐಎಎಸ್ ಅಕಾಡೆಮಿ ನಿರ್ದೇಶಕ ಡಾ.ಶಿವಕುಮಾರ್, ಎಸಿಪಿ ಎಸ್.ಗಂಗಾಧರಸ್ವಾಮಿ, ಕೇಂದ್ರ ಅಬಕಾರ ಮತ್ತು ಸುಂಕ ಇಲಾಖೆಯ ಅಧೀಕ್ಷಕ ಎಂ.ಯೋಗೇಂದ್ರ, ಆದಾಯ ತೆರಿಗೆ ಇಲಾಖೆಯ ಆಡಳಿತಾಧಿಕಾರಿ ಮಹದೇವಯ್ಯ, ಧಮ್ಮ ದೀವಿಗೆ ಚಾರಿಟಬಲ್ ಟ್ರಸ್ಟ್ ಮಲ್ಲಿಕಾರ್ಜುನ್, ಅರವಳಿಕೆ ತಜ್ಞ ಡಾ.ಶ್ಯಾಮ್ ಪ್ರಸಾದ್, ಜಾತ್ಯಾತೀತ ಜನತಾದಳ ಮುಖಂಡ ದೇವರಾಜ್ ಒಡೆಯರ್, ಸಾಹಿತಿ ಸೋಸಲೆ ಗಂಗಾಧರ್, ದುರ್ಗಾಂಬ ಎಂಟರ್‌ಪ್ರೈಸಸ್‌ನ ಎನ್.ಶಂಕರ, ಶ್ರೀಕಂಠೇಶ್ವರ ಎಂಟರ್‌ಪ್ರೈಸಸ್‌ನ ಜಗದೀಶ್, ತೇಜಸ್ವಿನಿ ಎಂಟರ್‌ಪ್ರೈಸಸ್‌ನ ರಾಮಕೃಷ್ಣ, ಬಿಪಿಎಸ್ ಜಿಲ್ಲಾ ಸಂಚಾಲಕ ಸೋಸಲೆ ಸಿದ್ದರಾಜು, ಜಿಲ್ಲಾಧ್ಯಕ್ಷ ಭೀಮನಹಲ್ಳಿ ಸೋಮೇಶ್, ಜಿಲ್ಲಾ ಕಾರ್ಯದರ್ಶಿ ಕೆ.ಎನ್.ಪ್ರಭುಸ್ವಾಮಿ, ಜಯಶಂಕರ್ ಮೇಸ್ತ್ರಿ ಮತ್ತಿತರರು ಪಾಲ್ಗೊಂಡಿದ್ದರು.

ಸಮಾನತೆಗಾಗಿ ಓಟದಲ್ಲಿ ಪಾಲ್ಗೊಂಡ ಕಿರಿ-ಹಿರಿಯರು

ಭಾರತೀಯ ಪರಿವರ್ತನ ಸಂಘ ಆಯೋಜಿಸಿದ್ದ ಸಮಾನತೆಗಾಗಿ ಓಟದಲ್ಲಿ ಕಿರಿಯರು- ಹಿರಿಯರು ಪಾಲ್ಗೊಂಡಿದ್ದರು. ಪುರಭವನದಿಂದ ಆರಂಭವಾದ ಓಟ ಹಾರ್ಡಿಂಜ್ ವೃತ್ತ, ಗನ್‌ಹೌಸ್, ರಾಮಸ್ವಾಮಿ ವೃತ್ತ, ಆರ್‌ಟಿಓ, ಅಶೋಕ ವೃತ್ತ, ಕೃಷ್ಣ ಬುಲೇವಾರ್ಡ್ ರಸ್ತೆ, ಕಲಾಮಂದಿರ ರಸ್ತೆ, ರೈಲ್ವೆ ವೃತ್ತ, ಇರ್ವಿನ್ ರಸ್ತೆ ಮಾರ್ಗವಾಗಿ ಪುರಭವನದಲ್ಲಿ ಅಂತ್ಯವಾಯಿತು. ಸುಮಾರು 12 ಕಿ.ಮೀ. ಓಟದಲ್ಲಿ ನೂರಕ್ಕೂ ಹೆಚ್ಚು ಮಂದಿ ಪಾಲ್ಗೊಂಡಿದ್ದರು. ಪ್ರಲಾಕ್ಷ ಆಸ್ಪತ್ರೆಯಿಂದ ಆಂಬ್ಯುಲೆನ್ಸ್ ವ್ಯವಸ್ಥೆ ಮಾಡಲಾಗಿತ್ತು. ತೇಜಸ್ವಿನಿ ಎಂಟರ್‌ಪ್ರೈಸಸ್‌ನಿಂದ ಟಿ-ಷರ್ಟ್ ವಿತರಿಸಲಾಯಿತು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಇದನ್ನೂ ಓದಿ: Exclusive: ಮಸೀದಿ ಸುತ್ತಲಿನ ಹಿಂದೂ ವ್ಯಾಪಾರಿಗಳ ಮನದ ಮಾತು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...