Homeಕರ್ನಾಟಕಅಸಮಾನತೆಯ ಕುದುರೆಯನ್ನು ಕೋಮುವಾದದ ಹೆಂಡ ಕುಡಿದ ಜಾಕಿ ಓಡಿಸುತ್ತಿದ್ದಾನೆ: ದೇಮ

ಅಸಮಾನತೆಯ ಕುದುರೆಯನ್ನು ಕೋಮುವಾದದ ಹೆಂಡ ಕುಡಿದ ಜಾಕಿ ಓಡಿಸುತ್ತಿದ್ದಾನೆ: ದೇಮ

ಪುರಭವನದ ಡಾ.ಬಿ.ಆರ್. ಅಂಬೇಡ್ಕರ್ ಪ್ರತಿಮೆ ಬಳಿ ಸಮಾನತೆಗಾಗಿ ಓಟಕ್ಕೆ ಚಾಲನೆ

- Advertisement -
- Advertisement -

ಇಂದು ದೇಶದಲ್ಲಿ ಅಸಮಾನತೆ ಹೆಚ್ಚಿದ್ದು, ಈ ಅಸಮಾನತೆಯ ಹುಚ್ಚು ಕುದುರೆಯನ್ನು ದ್ವೇಷ, ಅಸಹನೆಯ ಕೋಮುವಾದದ ಹೆಂಡ ಕುಡಿದ ಜಾಕಿ ಓಡಿಸುತ್ತಿದ್ದಾನೆ ಎಂದು ಹಿರಿಯ ಸಾಹಿತಿ ದೇವನೂರ ಮಹಾದೇವ ಕಟಕಿಯಾಡಿದರು. ಭಾರತೀಯ ಪರಿವರ್ತನ ಸಂಘವು ಬಾಬಾ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಜಯಂತಿ ಅಂಗವಾಗಿ ಗುರುವಾರ ಮುಂಜಾನೆ ಮೈಸೂರಿನ ಪುರಭವನದ ಅಂಬೇಡ್ಕರ್ ಪ್ರತಿಮೆ ಬಳಿ ಆಯೋಜಿಸಿದ್ದ ಸಮಾನತೆಗಾಗಿ ಓಟಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

“ಇಂದು ಅಂಬೇಡ್ಕರ್ ಅವರು ಹುಟ್ಟಿದ ದಿನ. ಈ ನೆನಪಿಗಾಗಿ ‘ಸಮಾನತೆಗಾಗಿ ಓಟ’ ನಡೆಯುತ್ತಿದೆ. ಅದಕ್ಕೆ ಚಾಲನೆ ಕೊಡಲು ಬಂದಿದ್ದೇನೆ. ನೋಡುವುದಕ್ಕೆ ಮಾಜಿ ಆಟಗಾರ, ಹಾಲಿ ಕೋಚ್‌ನಂತೆ ಡ್ರೆಸ್‌ಕೋಡ್‌ನಲ್ಲೇನೋ ಬಂದಿದ್ದೇನೆ. ಕ್ಷಮೆ ಇರಲಿ. ನಾನು ಎಂದೂ ಓಡಿದವನು ಅಲ್ಲ, ನಿಮ್ಮೊಡನೆ ನಿಮ್ಮ ಹಿಂದೆ ಹಿಂದೆಯಾದರೂ ಓಡುವ ಚೈತನ್ಯವೂ ಈಗ ನನಗಿಲ್ಲ. ಓಡುತ್ತಿರುವ ಎಳೆಯರ ಬೆನ್ನು ತಟ್ಟಲು ಬಂದಿದ್ದೇನೆ. ಯಾಕೆಂದರೆ ನೀವು ಇಂದು ಓಡುತ್ತಿರುವುದು ಸಮಾನತೆಗಾಗಿ ಓಟ” ಎಂದು ದೇವನೂರ ಮಹಾದೇವ ಹೇಳಿದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಸಮಾನತೆಗಾಗಿ ಓಡುತ್ತಿರುವ ಎಳೆಯ ಸ್ನೇಹಿತರೆ ಇಂದು ನೀವು ತುಂಬಾ ವೇಗವಾಗಿ ಓಡಬೇಕಾಗಿದೆ. ಯಾಕೆಂದರೆ ಅಸಮಾನತೆ ಇಂದು ಎಂದೂ ಇಲ್ಲದಷ್ಟು ಹುಚ್ಚು ಕುದುರೆಯಂತೆ ಓಡುತ್ತಿದೆ. ಇದಾಗಲೇ ಅದು ತುಂಬ ದೂರ ಓಡಿದೆ. ಈ ದೇಶಕ್ಕೆ ದಿಕ್ಕು ತೋರಿಸುತ್ತಿರುವ ಚಿಂತಕ, ಹೋರಾಟಗಾರ ಯೋಗೇಂದ್ರ ಯಾದವ್ ಮೊನ್ನೆ ಮೊನ್ನೆ ತಾನೇ ಮೈಸೂರಿಗೆ ಬಂದಿದ್ದರು. ಅವರು ಮಾತಾಡುತ್ತ ಒಂದು ನುಡಿಗಟ್ಟು ಹೇಳಿದ್ದರು. ‘ಭಾರತದ ಪ್ರಧಾನಿ ಮೋದಿಯವರ ಬಾಯಲ್ಲಿ ಸೀತಾಪತಿ ಅಂದರೆ- ರಾಮ, ಭಾರತದ ಪ್ರಧಾನಿ ಮೋದಿಯವರ ಹೃದಯದಲ್ಲಿ ನೀತಾಪತಿ ಅಂದರೆ- ಅಂಬಾನಿ’” ಎಂದು ಅವರು ನೆನಪಿಸಿಕೊಂಡರು.

ಇದನ್ನೂ ಓದಿ: ಬಾಬಾಸಾಹೇಬರ ಚಿಂತನೆಗಳ ತಳಹದಿಯಲ್ಲಿ ರಾಷ್ಟ್ರವನ್ನು ಕಟ್ಟಿಕೊಳ್ಳದಿದ್ದರ ಪರಿಣಾಮ..

“ಭಾರತದ ಪ್ರಧಾನಿ ಮೋದಿಯವರ ಹೃದಯದಲ್ಲಿರುವ ಅಂಬಾನಿ ಲಕ್ಷಾಂತರ ಕೋಟಿಗಳ ಒಡೆಯ. ಭಾರತದಲ್ಲಿ ಇಂತಹ ನೂರಾರು ಬಿಲಿಯರ್ ಕುಟುಂಬಗಳ ಸಂಪತ್ತು ಒಟ್ಟಾದರೆ ಅದು ದೇಶದ ಒಟ್ಟು ಸಂಪತ್ತಿನ ಅರ್ಧಭಾಗದಷ್ಟು ಆಗುತ್ತದಂತೆ. ಬಡವರ ಸಂಖ್ಯೆ ದಿನ ದಿನವೂ ಹೆಚ್ಚುತ್ತಿದೆ. ಇಷ್ಟೊಂದು ಅಸಮಾನತೆ ಇಂದು ದೇಶದಲ್ಲಿದೆ. ಈ ಅಸಮಾನತೆಯ ಹುಚ್ಚು ಕುದುರೆಯನ್ನು ದ್ವೇಷ ಅಸಹನೆಯ ಕೋಮುವಾದದ ಹೆಂಡ ಕುಡಿದ ಜಾಕಿ ಓಡಿಸುತ್ತಿದ್ದಾನೆ. ಅಸಮಾನತೆಯ ಹುಚ್ಚು ಕುದುರೆ ಹುಚ್ಚೆದ್ದು ಓಡುತ್ತಿದೆ. ಆದರಿಂದ ಕಚ್ಚಿಸಿಕೊಳ್ಳದೆ ನೀವು ಎಚ್ಚರ ವಹಿಸಿ ಓಡಬೇಕಾಗಿದೆ. ನೀವು ಎಳೆಯರಾದ್ದರಿಂದ ನೀವು ಗೆಲ್ಲುತ್ತೀರಿ ಎಂಬ ನಂಬಿಕೆ ನನಗಿದೆ. ನೀವು ಗೆಲ್ಲಲೇ ಬೇಕು” ಎಂದು ಅವರು ಕರೆ ನೀಡಿದರು.

ಅಕ್ಕ ಐಎಎಸ್ ಅಕಾಡೆಮಿ ನಿರ್ದೇಶಕ ಡಾ.ಶಿವಕುಮಾರ್, ಎಸಿಪಿ ಎಸ್.ಗಂಗಾಧರಸ್ವಾಮಿ, ಕೇಂದ್ರ ಅಬಕಾರ ಮತ್ತು ಸುಂಕ ಇಲಾಖೆಯ ಅಧೀಕ್ಷಕ ಎಂ.ಯೋಗೇಂದ್ರ, ಆದಾಯ ತೆರಿಗೆ ಇಲಾಖೆಯ ಆಡಳಿತಾಧಿಕಾರಿ ಮಹದೇವಯ್ಯ, ಧಮ್ಮ ದೀವಿಗೆ ಚಾರಿಟಬಲ್ ಟ್ರಸ್ಟ್ ಮಲ್ಲಿಕಾರ್ಜುನ್, ಅರವಳಿಕೆ ತಜ್ಞ ಡಾ.ಶ್ಯಾಮ್ ಪ್ರಸಾದ್, ಜಾತ್ಯಾತೀತ ಜನತಾದಳ ಮುಖಂಡ ದೇವರಾಜ್ ಒಡೆಯರ್, ಸಾಹಿತಿ ಸೋಸಲೆ ಗಂಗಾಧರ್, ದುರ್ಗಾಂಬ ಎಂಟರ್‌ಪ್ರೈಸಸ್‌ನ ಎನ್.ಶಂಕರ, ಶ್ರೀಕಂಠೇಶ್ವರ ಎಂಟರ್‌ಪ್ರೈಸಸ್‌ನ ಜಗದೀಶ್, ತೇಜಸ್ವಿನಿ ಎಂಟರ್‌ಪ್ರೈಸಸ್‌ನ ರಾಮಕೃಷ್ಣ, ಬಿಪಿಎಸ್ ಜಿಲ್ಲಾ ಸಂಚಾಲಕ ಸೋಸಲೆ ಸಿದ್ದರಾಜು, ಜಿಲ್ಲಾಧ್ಯಕ್ಷ ಭೀಮನಹಲ್ಳಿ ಸೋಮೇಶ್, ಜಿಲ್ಲಾ ಕಾರ್ಯದರ್ಶಿ ಕೆ.ಎನ್.ಪ್ರಭುಸ್ವಾಮಿ, ಜಯಶಂಕರ್ ಮೇಸ್ತ್ರಿ ಮತ್ತಿತರರು ಪಾಲ್ಗೊಂಡಿದ್ದರು.

ಸಮಾನತೆಗಾಗಿ ಓಟದಲ್ಲಿ ಪಾಲ್ಗೊಂಡ ಕಿರಿ-ಹಿರಿಯರು

ಭಾರತೀಯ ಪರಿವರ್ತನ ಸಂಘ ಆಯೋಜಿಸಿದ್ದ ಸಮಾನತೆಗಾಗಿ ಓಟದಲ್ಲಿ ಕಿರಿಯರು- ಹಿರಿಯರು ಪಾಲ್ಗೊಂಡಿದ್ದರು. ಪುರಭವನದಿಂದ ಆರಂಭವಾದ ಓಟ ಹಾರ್ಡಿಂಜ್ ವೃತ್ತ, ಗನ್‌ಹೌಸ್, ರಾಮಸ್ವಾಮಿ ವೃತ್ತ, ಆರ್‌ಟಿಓ, ಅಶೋಕ ವೃತ್ತ, ಕೃಷ್ಣ ಬುಲೇವಾರ್ಡ್ ರಸ್ತೆ, ಕಲಾಮಂದಿರ ರಸ್ತೆ, ರೈಲ್ವೆ ವೃತ್ತ, ಇರ್ವಿನ್ ರಸ್ತೆ ಮಾರ್ಗವಾಗಿ ಪುರಭವನದಲ್ಲಿ ಅಂತ್ಯವಾಯಿತು. ಸುಮಾರು 12 ಕಿ.ಮೀ. ಓಟದಲ್ಲಿ ನೂರಕ್ಕೂ ಹೆಚ್ಚು ಮಂದಿ ಪಾಲ್ಗೊಂಡಿದ್ದರು. ಪ್ರಲಾಕ್ಷ ಆಸ್ಪತ್ರೆಯಿಂದ ಆಂಬ್ಯುಲೆನ್ಸ್ ವ್ಯವಸ್ಥೆ ಮಾಡಲಾಗಿತ್ತು. ತೇಜಸ್ವಿನಿ ಎಂಟರ್‌ಪ್ರೈಸಸ್‌ನಿಂದ ಟಿ-ಷರ್ಟ್ ವಿತರಿಸಲಾಯಿತು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಇದನ್ನೂ ಓದಿ: Exclusive: ಮಸೀದಿ ಸುತ್ತಲಿನ ಹಿಂದೂ ವ್ಯಾಪಾರಿಗಳ ಮನದ ಮಾತು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...