Homeಕರ್ನಾಟಕಅಸಮಾನತೆಯ ಕುದುರೆಯನ್ನು ಕೋಮುವಾದದ ಹೆಂಡ ಕುಡಿದ ಜಾಕಿ ಓಡಿಸುತ್ತಿದ್ದಾನೆ: ದೇಮ

ಅಸಮಾನತೆಯ ಕುದುರೆಯನ್ನು ಕೋಮುವಾದದ ಹೆಂಡ ಕುಡಿದ ಜಾಕಿ ಓಡಿಸುತ್ತಿದ್ದಾನೆ: ದೇಮ

ಪುರಭವನದ ಡಾ.ಬಿ.ಆರ್. ಅಂಬೇಡ್ಕರ್ ಪ್ರತಿಮೆ ಬಳಿ ಸಮಾನತೆಗಾಗಿ ಓಟಕ್ಕೆ ಚಾಲನೆ

- Advertisement -
- Advertisement -

ಇಂದು ದೇಶದಲ್ಲಿ ಅಸಮಾನತೆ ಹೆಚ್ಚಿದ್ದು, ಈ ಅಸಮಾನತೆಯ ಹುಚ್ಚು ಕುದುರೆಯನ್ನು ದ್ವೇಷ, ಅಸಹನೆಯ ಕೋಮುವಾದದ ಹೆಂಡ ಕುಡಿದ ಜಾಕಿ ಓಡಿಸುತ್ತಿದ್ದಾನೆ ಎಂದು ಹಿರಿಯ ಸಾಹಿತಿ ದೇವನೂರ ಮಹಾದೇವ ಕಟಕಿಯಾಡಿದರು. ಭಾರತೀಯ ಪರಿವರ್ತನ ಸಂಘವು ಬಾಬಾ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಜಯಂತಿ ಅಂಗವಾಗಿ ಗುರುವಾರ ಮುಂಜಾನೆ ಮೈಸೂರಿನ ಪುರಭವನದ ಅಂಬೇಡ್ಕರ್ ಪ್ರತಿಮೆ ಬಳಿ ಆಯೋಜಿಸಿದ್ದ ಸಮಾನತೆಗಾಗಿ ಓಟಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

“ಇಂದು ಅಂಬೇಡ್ಕರ್ ಅವರು ಹುಟ್ಟಿದ ದಿನ. ಈ ನೆನಪಿಗಾಗಿ ‘ಸಮಾನತೆಗಾಗಿ ಓಟ’ ನಡೆಯುತ್ತಿದೆ. ಅದಕ್ಕೆ ಚಾಲನೆ ಕೊಡಲು ಬಂದಿದ್ದೇನೆ. ನೋಡುವುದಕ್ಕೆ ಮಾಜಿ ಆಟಗಾರ, ಹಾಲಿ ಕೋಚ್‌ನಂತೆ ಡ್ರೆಸ್‌ಕೋಡ್‌ನಲ್ಲೇನೋ ಬಂದಿದ್ದೇನೆ. ಕ್ಷಮೆ ಇರಲಿ. ನಾನು ಎಂದೂ ಓಡಿದವನು ಅಲ್ಲ, ನಿಮ್ಮೊಡನೆ ನಿಮ್ಮ ಹಿಂದೆ ಹಿಂದೆಯಾದರೂ ಓಡುವ ಚೈತನ್ಯವೂ ಈಗ ನನಗಿಲ್ಲ. ಓಡುತ್ತಿರುವ ಎಳೆಯರ ಬೆನ್ನು ತಟ್ಟಲು ಬಂದಿದ್ದೇನೆ. ಯಾಕೆಂದರೆ ನೀವು ಇಂದು ಓಡುತ್ತಿರುವುದು ಸಮಾನತೆಗಾಗಿ ಓಟ” ಎಂದು ದೇವನೂರ ಮಹಾದೇವ ಹೇಳಿದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಸಮಾನತೆಗಾಗಿ ಓಡುತ್ತಿರುವ ಎಳೆಯ ಸ್ನೇಹಿತರೆ ಇಂದು ನೀವು ತುಂಬಾ ವೇಗವಾಗಿ ಓಡಬೇಕಾಗಿದೆ. ಯಾಕೆಂದರೆ ಅಸಮಾನತೆ ಇಂದು ಎಂದೂ ಇಲ್ಲದಷ್ಟು ಹುಚ್ಚು ಕುದುರೆಯಂತೆ ಓಡುತ್ತಿದೆ. ಇದಾಗಲೇ ಅದು ತುಂಬ ದೂರ ಓಡಿದೆ. ಈ ದೇಶಕ್ಕೆ ದಿಕ್ಕು ತೋರಿಸುತ್ತಿರುವ ಚಿಂತಕ, ಹೋರಾಟಗಾರ ಯೋಗೇಂದ್ರ ಯಾದವ್ ಮೊನ್ನೆ ಮೊನ್ನೆ ತಾನೇ ಮೈಸೂರಿಗೆ ಬಂದಿದ್ದರು. ಅವರು ಮಾತಾಡುತ್ತ ಒಂದು ನುಡಿಗಟ್ಟು ಹೇಳಿದ್ದರು. ‘ಭಾರತದ ಪ್ರಧಾನಿ ಮೋದಿಯವರ ಬಾಯಲ್ಲಿ ಸೀತಾಪತಿ ಅಂದರೆ- ರಾಮ, ಭಾರತದ ಪ್ರಧಾನಿ ಮೋದಿಯವರ ಹೃದಯದಲ್ಲಿ ನೀತಾಪತಿ ಅಂದರೆ- ಅಂಬಾನಿ’” ಎಂದು ಅವರು ನೆನಪಿಸಿಕೊಂಡರು.

ಇದನ್ನೂ ಓದಿ: ಬಾಬಾಸಾಹೇಬರ ಚಿಂತನೆಗಳ ತಳಹದಿಯಲ್ಲಿ ರಾಷ್ಟ್ರವನ್ನು ಕಟ್ಟಿಕೊಳ್ಳದಿದ್ದರ ಪರಿಣಾಮ..

“ಭಾರತದ ಪ್ರಧಾನಿ ಮೋದಿಯವರ ಹೃದಯದಲ್ಲಿರುವ ಅಂಬಾನಿ ಲಕ್ಷಾಂತರ ಕೋಟಿಗಳ ಒಡೆಯ. ಭಾರತದಲ್ಲಿ ಇಂತಹ ನೂರಾರು ಬಿಲಿಯರ್ ಕುಟುಂಬಗಳ ಸಂಪತ್ತು ಒಟ್ಟಾದರೆ ಅದು ದೇಶದ ಒಟ್ಟು ಸಂಪತ್ತಿನ ಅರ್ಧಭಾಗದಷ್ಟು ಆಗುತ್ತದಂತೆ. ಬಡವರ ಸಂಖ್ಯೆ ದಿನ ದಿನವೂ ಹೆಚ್ಚುತ್ತಿದೆ. ಇಷ್ಟೊಂದು ಅಸಮಾನತೆ ಇಂದು ದೇಶದಲ್ಲಿದೆ. ಈ ಅಸಮಾನತೆಯ ಹುಚ್ಚು ಕುದುರೆಯನ್ನು ದ್ವೇಷ ಅಸಹನೆಯ ಕೋಮುವಾದದ ಹೆಂಡ ಕುಡಿದ ಜಾಕಿ ಓಡಿಸುತ್ತಿದ್ದಾನೆ. ಅಸಮಾನತೆಯ ಹುಚ್ಚು ಕುದುರೆ ಹುಚ್ಚೆದ್ದು ಓಡುತ್ತಿದೆ. ಆದರಿಂದ ಕಚ್ಚಿಸಿಕೊಳ್ಳದೆ ನೀವು ಎಚ್ಚರ ವಹಿಸಿ ಓಡಬೇಕಾಗಿದೆ. ನೀವು ಎಳೆಯರಾದ್ದರಿಂದ ನೀವು ಗೆಲ್ಲುತ್ತೀರಿ ಎಂಬ ನಂಬಿಕೆ ನನಗಿದೆ. ನೀವು ಗೆಲ್ಲಲೇ ಬೇಕು” ಎಂದು ಅವರು ಕರೆ ನೀಡಿದರು.

ಅಕ್ಕ ಐಎಎಸ್ ಅಕಾಡೆಮಿ ನಿರ್ದೇಶಕ ಡಾ.ಶಿವಕುಮಾರ್, ಎಸಿಪಿ ಎಸ್.ಗಂಗಾಧರಸ್ವಾಮಿ, ಕೇಂದ್ರ ಅಬಕಾರ ಮತ್ತು ಸುಂಕ ಇಲಾಖೆಯ ಅಧೀಕ್ಷಕ ಎಂ.ಯೋಗೇಂದ್ರ, ಆದಾಯ ತೆರಿಗೆ ಇಲಾಖೆಯ ಆಡಳಿತಾಧಿಕಾರಿ ಮಹದೇವಯ್ಯ, ಧಮ್ಮ ದೀವಿಗೆ ಚಾರಿಟಬಲ್ ಟ್ರಸ್ಟ್ ಮಲ್ಲಿಕಾರ್ಜುನ್, ಅರವಳಿಕೆ ತಜ್ಞ ಡಾ.ಶ್ಯಾಮ್ ಪ್ರಸಾದ್, ಜಾತ್ಯಾತೀತ ಜನತಾದಳ ಮುಖಂಡ ದೇವರಾಜ್ ಒಡೆಯರ್, ಸಾಹಿತಿ ಸೋಸಲೆ ಗಂಗಾಧರ್, ದುರ್ಗಾಂಬ ಎಂಟರ್‌ಪ್ರೈಸಸ್‌ನ ಎನ್.ಶಂಕರ, ಶ್ರೀಕಂಠೇಶ್ವರ ಎಂಟರ್‌ಪ್ರೈಸಸ್‌ನ ಜಗದೀಶ್, ತೇಜಸ್ವಿನಿ ಎಂಟರ್‌ಪ್ರೈಸಸ್‌ನ ರಾಮಕೃಷ್ಣ, ಬಿಪಿಎಸ್ ಜಿಲ್ಲಾ ಸಂಚಾಲಕ ಸೋಸಲೆ ಸಿದ್ದರಾಜು, ಜಿಲ್ಲಾಧ್ಯಕ್ಷ ಭೀಮನಹಲ್ಳಿ ಸೋಮೇಶ್, ಜಿಲ್ಲಾ ಕಾರ್ಯದರ್ಶಿ ಕೆ.ಎನ್.ಪ್ರಭುಸ್ವಾಮಿ, ಜಯಶಂಕರ್ ಮೇಸ್ತ್ರಿ ಮತ್ತಿತರರು ಪಾಲ್ಗೊಂಡಿದ್ದರು.

ಸಮಾನತೆಗಾಗಿ ಓಟದಲ್ಲಿ ಪಾಲ್ಗೊಂಡ ಕಿರಿ-ಹಿರಿಯರು

ಭಾರತೀಯ ಪರಿವರ್ತನ ಸಂಘ ಆಯೋಜಿಸಿದ್ದ ಸಮಾನತೆಗಾಗಿ ಓಟದಲ್ಲಿ ಕಿರಿಯರು- ಹಿರಿಯರು ಪಾಲ್ಗೊಂಡಿದ್ದರು. ಪುರಭವನದಿಂದ ಆರಂಭವಾದ ಓಟ ಹಾರ್ಡಿಂಜ್ ವೃತ್ತ, ಗನ್‌ಹೌಸ್, ರಾಮಸ್ವಾಮಿ ವೃತ್ತ, ಆರ್‌ಟಿಓ, ಅಶೋಕ ವೃತ್ತ, ಕೃಷ್ಣ ಬುಲೇವಾರ್ಡ್ ರಸ್ತೆ, ಕಲಾಮಂದಿರ ರಸ್ತೆ, ರೈಲ್ವೆ ವೃತ್ತ, ಇರ್ವಿನ್ ರಸ್ತೆ ಮಾರ್ಗವಾಗಿ ಪುರಭವನದಲ್ಲಿ ಅಂತ್ಯವಾಯಿತು. ಸುಮಾರು 12 ಕಿ.ಮೀ. ಓಟದಲ್ಲಿ ನೂರಕ್ಕೂ ಹೆಚ್ಚು ಮಂದಿ ಪಾಲ್ಗೊಂಡಿದ್ದರು. ಪ್ರಲಾಕ್ಷ ಆಸ್ಪತ್ರೆಯಿಂದ ಆಂಬ್ಯುಲೆನ್ಸ್ ವ್ಯವಸ್ಥೆ ಮಾಡಲಾಗಿತ್ತು. ತೇಜಸ್ವಿನಿ ಎಂಟರ್‌ಪ್ರೈಸಸ್‌ನಿಂದ ಟಿ-ಷರ್ಟ್ ವಿತರಿಸಲಾಯಿತು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಇದನ್ನೂ ಓದಿ: Exclusive: ಮಸೀದಿ ಸುತ್ತಲಿನ ಹಿಂದೂ ವ್ಯಾಪಾರಿಗಳ ಮನದ ಮಾತು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...