Homeಕರ್ನಾಟಕಅಸಮಾನತೆಯ ಕುದುರೆಯನ್ನು ಕೋಮುವಾದದ ಹೆಂಡ ಕುಡಿದ ಜಾಕಿ ಓಡಿಸುತ್ತಿದ್ದಾನೆ: ದೇಮ

ಅಸಮಾನತೆಯ ಕುದುರೆಯನ್ನು ಕೋಮುವಾದದ ಹೆಂಡ ಕುಡಿದ ಜಾಕಿ ಓಡಿಸುತ್ತಿದ್ದಾನೆ: ದೇಮ

ಪುರಭವನದ ಡಾ.ಬಿ.ಆರ್. ಅಂಬೇಡ್ಕರ್ ಪ್ರತಿಮೆ ಬಳಿ ಸಮಾನತೆಗಾಗಿ ಓಟಕ್ಕೆ ಚಾಲನೆ

- Advertisement -
- Advertisement -

ಇಂದು ದೇಶದಲ್ಲಿ ಅಸಮಾನತೆ ಹೆಚ್ಚಿದ್ದು, ಈ ಅಸಮಾನತೆಯ ಹುಚ್ಚು ಕುದುರೆಯನ್ನು ದ್ವೇಷ, ಅಸಹನೆಯ ಕೋಮುವಾದದ ಹೆಂಡ ಕುಡಿದ ಜಾಕಿ ಓಡಿಸುತ್ತಿದ್ದಾನೆ ಎಂದು ಹಿರಿಯ ಸಾಹಿತಿ ದೇವನೂರ ಮಹಾದೇವ ಕಟಕಿಯಾಡಿದರು. ಭಾರತೀಯ ಪರಿವರ್ತನ ಸಂಘವು ಬಾಬಾ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಜಯಂತಿ ಅಂಗವಾಗಿ ಗುರುವಾರ ಮುಂಜಾನೆ ಮೈಸೂರಿನ ಪುರಭವನದ ಅಂಬೇಡ್ಕರ್ ಪ್ರತಿಮೆ ಬಳಿ ಆಯೋಜಿಸಿದ್ದ ಸಮಾನತೆಗಾಗಿ ಓಟಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

“ಇಂದು ಅಂಬೇಡ್ಕರ್ ಅವರು ಹುಟ್ಟಿದ ದಿನ. ಈ ನೆನಪಿಗಾಗಿ ‘ಸಮಾನತೆಗಾಗಿ ಓಟ’ ನಡೆಯುತ್ತಿದೆ. ಅದಕ್ಕೆ ಚಾಲನೆ ಕೊಡಲು ಬಂದಿದ್ದೇನೆ. ನೋಡುವುದಕ್ಕೆ ಮಾಜಿ ಆಟಗಾರ, ಹಾಲಿ ಕೋಚ್‌ನಂತೆ ಡ್ರೆಸ್‌ಕೋಡ್‌ನಲ್ಲೇನೋ ಬಂದಿದ್ದೇನೆ. ಕ್ಷಮೆ ಇರಲಿ. ನಾನು ಎಂದೂ ಓಡಿದವನು ಅಲ್ಲ, ನಿಮ್ಮೊಡನೆ ನಿಮ್ಮ ಹಿಂದೆ ಹಿಂದೆಯಾದರೂ ಓಡುವ ಚೈತನ್ಯವೂ ಈಗ ನನಗಿಲ್ಲ. ಓಡುತ್ತಿರುವ ಎಳೆಯರ ಬೆನ್ನು ತಟ್ಟಲು ಬಂದಿದ್ದೇನೆ. ಯಾಕೆಂದರೆ ನೀವು ಇಂದು ಓಡುತ್ತಿರುವುದು ಸಮಾನತೆಗಾಗಿ ಓಟ” ಎಂದು ದೇವನೂರ ಮಹಾದೇವ ಹೇಳಿದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಸಮಾನತೆಗಾಗಿ ಓಡುತ್ತಿರುವ ಎಳೆಯ ಸ್ನೇಹಿತರೆ ಇಂದು ನೀವು ತುಂಬಾ ವೇಗವಾಗಿ ಓಡಬೇಕಾಗಿದೆ. ಯಾಕೆಂದರೆ ಅಸಮಾನತೆ ಇಂದು ಎಂದೂ ಇಲ್ಲದಷ್ಟು ಹುಚ್ಚು ಕುದುರೆಯಂತೆ ಓಡುತ್ತಿದೆ. ಇದಾಗಲೇ ಅದು ತುಂಬ ದೂರ ಓಡಿದೆ. ಈ ದೇಶಕ್ಕೆ ದಿಕ್ಕು ತೋರಿಸುತ್ತಿರುವ ಚಿಂತಕ, ಹೋರಾಟಗಾರ ಯೋಗೇಂದ್ರ ಯಾದವ್ ಮೊನ್ನೆ ಮೊನ್ನೆ ತಾನೇ ಮೈಸೂರಿಗೆ ಬಂದಿದ್ದರು. ಅವರು ಮಾತಾಡುತ್ತ ಒಂದು ನುಡಿಗಟ್ಟು ಹೇಳಿದ್ದರು. ‘ಭಾರತದ ಪ್ರಧಾನಿ ಮೋದಿಯವರ ಬಾಯಲ್ಲಿ ಸೀತಾಪತಿ ಅಂದರೆ- ರಾಮ, ಭಾರತದ ಪ್ರಧಾನಿ ಮೋದಿಯವರ ಹೃದಯದಲ್ಲಿ ನೀತಾಪತಿ ಅಂದರೆ- ಅಂಬಾನಿ’” ಎಂದು ಅವರು ನೆನಪಿಸಿಕೊಂಡರು.

ಇದನ್ನೂ ಓದಿ: ಬಾಬಾಸಾಹೇಬರ ಚಿಂತನೆಗಳ ತಳಹದಿಯಲ್ಲಿ ರಾಷ್ಟ್ರವನ್ನು ಕಟ್ಟಿಕೊಳ್ಳದಿದ್ದರ ಪರಿಣಾಮ..

“ಭಾರತದ ಪ್ರಧಾನಿ ಮೋದಿಯವರ ಹೃದಯದಲ್ಲಿರುವ ಅಂಬಾನಿ ಲಕ್ಷಾಂತರ ಕೋಟಿಗಳ ಒಡೆಯ. ಭಾರತದಲ್ಲಿ ಇಂತಹ ನೂರಾರು ಬಿಲಿಯರ್ ಕುಟುಂಬಗಳ ಸಂಪತ್ತು ಒಟ್ಟಾದರೆ ಅದು ದೇಶದ ಒಟ್ಟು ಸಂಪತ್ತಿನ ಅರ್ಧಭಾಗದಷ್ಟು ಆಗುತ್ತದಂತೆ. ಬಡವರ ಸಂಖ್ಯೆ ದಿನ ದಿನವೂ ಹೆಚ್ಚುತ್ತಿದೆ. ಇಷ್ಟೊಂದು ಅಸಮಾನತೆ ಇಂದು ದೇಶದಲ್ಲಿದೆ. ಈ ಅಸಮಾನತೆಯ ಹುಚ್ಚು ಕುದುರೆಯನ್ನು ದ್ವೇಷ ಅಸಹನೆಯ ಕೋಮುವಾದದ ಹೆಂಡ ಕುಡಿದ ಜಾಕಿ ಓಡಿಸುತ್ತಿದ್ದಾನೆ. ಅಸಮಾನತೆಯ ಹುಚ್ಚು ಕುದುರೆ ಹುಚ್ಚೆದ್ದು ಓಡುತ್ತಿದೆ. ಆದರಿಂದ ಕಚ್ಚಿಸಿಕೊಳ್ಳದೆ ನೀವು ಎಚ್ಚರ ವಹಿಸಿ ಓಡಬೇಕಾಗಿದೆ. ನೀವು ಎಳೆಯರಾದ್ದರಿಂದ ನೀವು ಗೆಲ್ಲುತ್ತೀರಿ ಎಂಬ ನಂಬಿಕೆ ನನಗಿದೆ. ನೀವು ಗೆಲ್ಲಲೇ ಬೇಕು” ಎಂದು ಅವರು ಕರೆ ನೀಡಿದರು.

ಅಕ್ಕ ಐಎಎಸ್ ಅಕಾಡೆಮಿ ನಿರ್ದೇಶಕ ಡಾ.ಶಿವಕುಮಾರ್, ಎಸಿಪಿ ಎಸ್.ಗಂಗಾಧರಸ್ವಾಮಿ, ಕೇಂದ್ರ ಅಬಕಾರ ಮತ್ತು ಸುಂಕ ಇಲಾಖೆಯ ಅಧೀಕ್ಷಕ ಎಂ.ಯೋಗೇಂದ್ರ, ಆದಾಯ ತೆರಿಗೆ ಇಲಾಖೆಯ ಆಡಳಿತಾಧಿಕಾರಿ ಮಹದೇವಯ್ಯ, ಧಮ್ಮ ದೀವಿಗೆ ಚಾರಿಟಬಲ್ ಟ್ರಸ್ಟ್ ಮಲ್ಲಿಕಾರ್ಜುನ್, ಅರವಳಿಕೆ ತಜ್ಞ ಡಾ.ಶ್ಯಾಮ್ ಪ್ರಸಾದ್, ಜಾತ್ಯಾತೀತ ಜನತಾದಳ ಮುಖಂಡ ದೇವರಾಜ್ ಒಡೆಯರ್, ಸಾಹಿತಿ ಸೋಸಲೆ ಗಂಗಾಧರ್, ದುರ್ಗಾಂಬ ಎಂಟರ್‌ಪ್ರೈಸಸ್‌ನ ಎನ್.ಶಂಕರ, ಶ್ರೀಕಂಠೇಶ್ವರ ಎಂಟರ್‌ಪ್ರೈಸಸ್‌ನ ಜಗದೀಶ್, ತೇಜಸ್ವಿನಿ ಎಂಟರ್‌ಪ್ರೈಸಸ್‌ನ ರಾಮಕೃಷ್ಣ, ಬಿಪಿಎಸ್ ಜಿಲ್ಲಾ ಸಂಚಾಲಕ ಸೋಸಲೆ ಸಿದ್ದರಾಜು, ಜಿಲ್ಲಾಧ್ಯಕ್ಷ ಭೀಮನಹಲ್ಳಿ ಸೋಮೇಶ್, ಜಿಲ್ಲಾ ಕಾರ್ಯದರ್ಶಿ ಕೆ.ಎನ್.ಪ್ರಭುಸ್ವಾಮಿ, ಜಯಶಂಕರ್ ಮೇಸ್ತ್ರಿ ಮತ್ತಿತರರು ಪಾಲ್ಗೊಂಡಿದ್ದರು.

ಸಮಾನತೆಗಾಗಿ ಓಟದಲ್ಲಿ ಪಾಲ್ಗೊಂಡ ಕಿರಿ-ಹಿರಿಯರು

ಭಾರತೀಯ ಪರಿವರ್ತನ ಸಂಘ ಆಯೋಜಿಸಿದ್ದ ಸಮಾನತೆಗಾಗಿ ಓಟದಲ್ಲಿ ಕಿರಿಯರು- ಹಿರಿಯರು ಪಾಲ್ಗೊಂಡಿದ್ದರು. ಪುರಭವನದಿಂದ ಆರಂಭವಾದ ಓಟ ಹಾರ್ಡಿಂಜ್ ವೃತ್ತ, ಗನ್‌ಹೌಸ್, ರಾಮಸ್ವಾಮಿ ವೃತ್ತ, ಆರ್‌ಟಿಓ, ಅಶೋಕ ವೃತ್ತ, ಕೃಷ್ಣ ಬುಲೇವಾರ್ಡ್ ರಸ್ತೆ, ಕಲಾಮಂದಿರ ರಸ್ತೆ, ರೈಲ್ವೆ ವೃತ್ತ, ಇರ್ವಿನ್ ರಸ್ತೆ ಮಾರ್ಗವಾಗಿ ಪುರಭವನದಲ್ಲಿ ಅಂತ್ಯವಾಯಿತು. ಸುಮಾರು 12 ಕಿ.ಮೀ. ಓಟದಲ್ಲಿ ನೂರಕ್ಕೂ ಹೆಚ್ಚು ಮಂದಿ ಪಾಲ್ಗೊಂಡಿದ್ದರು. ಪ್ರಲಾಕ್ಷ ಆಸ್ಪತ್ರೆಯಿಂದ ಆಂಬ್ಯುಲೆನ್ಸ್ ವ್ಯವಸ್ಥೆ ಮಾಡಲಾಗಿತ್ತು. ತೇಜಸ್ವಿನಿ ಎಂಟರ್‌ಪ್ರೈಸಸ್‌ನಿಂದ ಟಿ-ಷರ್ಟ್ ವಿತರಿಸಲಾಯಿತು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಇದನ್ನೂ ಓದಿ: Exclusive: ಮಸೀದಿ ಸುತ್ತಲಿನ ಹಿಂದೂ ವ್ಯಾಪಾರಿಗಳ ಮನದ ಮಾತು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...