Homeಕರ್ನಾಟಕಅಸಮಾನತೆಯ ಕುದುರೆಯನ್ನು ಕೋಮುವಾದದ ಹೆಂಡ ಕುಡಿದ ಜಾಕಿ ಓಡಿಸುತ್ತಿದ್ದಾನೆ: ದೇಮ

ಅಸಮಾನತೆಯ ಕುದುರೆಯನ್ನು ಕೋಮುವಾದದ ಹೆಂಡ ಕುಡಿದ ಜಾಕಿ ಓಡಿಸುತ್ತಿದ್ದಾನೆ: ದೇಮ

ಪುರಭವನದ ಡಾ.ಬಿ.ಆರ್. ಅಂಬೇಡ್ಕರ್ ಪ್ರತಿಮೆ ಬಳಿ ಸಮಾನತೆಗಾಗಿ ಓಟಕ್ಕೆ ಚಾಲನೆ

- Advertisement -
- Advertisement -

ಇಂದು ದೇಶದಲ್ಲಿ ಅಸಮಾನತೆ ಹೆಚ್ಚಿದ್ದು, ಈ ಅಸಮಾನತೆಯ ಹುಚ್ಚು ಕುದುರೆಯನ್ನು ದ್ವೇಷ, ಅಸಹನೆಯ ಕೋಮುವಾದದ ಹೆಂಡ ಕುಡಿದ ಜಾಕಿ ಓಡಿಸುತ್ತಿದ್ದಾನೆ ಎಂದು ಹಿರಿಯ ಸಾಹಿತಿ ದೇವನೂರ ಮಹಾದೇವ ಕಟಕಿಯಾಡಿದರು. ಭಾರತೀಯ ಪರಿವರ್ತನ ಸಂಘವು ಬಾಬಾ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಜಯಂತಿ ಅಂಗವಾಗಿ ಗುರುವಾರ ಮುಂಜಾನೆ ಮೈಸೂರಿನ ಪುರಭವನದ ಅಂಬೇಡ್ಕರ್ ಪ್ರತಿಮೆ ಬಳಿ ಆಯೋಜಿಸಿದ್ದ ಸಮಾನತೆಗಾಗಿ ಓಟಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

“ಇಂದು ಅಂಬೇಡ್ಕರ್ ಅವರು ಹುಟ್ಟಿದ ದಿನ. ಈ ನೆನಪಿಗಾಗಿ ‘ಸಮಾನತೆಗಾಗಿ ಓಟ’ ನಡೆಯುತ್ತಿದೆ. ಅದಕ್ಕೆ ಚಾಲನೆ ಕೊಡಲು ಬಂದಿದ್ದೇನೆ. ನೋಡುವುದಕ್ಕೆ ಮಾಜಿ ಆಟಗಾರ, ಹಾಲಿ ಕೋಚ್‌ನಂತೆ ಡ್ರೆಸ್‌ಕೋಡ್‌ನಲ್ಲೇನೋ ಬಂದಿದ್ದೇನೆ. ಕ್ಷಮೆ ಇರಲಿ. ನಾನು ಎಂದೂ ಓಡಿದವನು ಅಲ್ಲ, ನಿಮ್ಮೊಡನೆ ನಿಮ್ಮ ಹಿಂದೆ ಹಿಂದೆಯಾದರೂ ಓಡುವ ಚೈತನ್ಯವೂ ಈಗ ನನಗಿಲ್ಲ. ಓಡುತ್ತಿರುವ ಎಳೆಯರ ಬೆನ್ನು ತಟ್ಟಲು ಬಂದಿದ್ದೇನೆ. ಯಾಕೆಂದರೆ ನೀವು ಇಂದು ಓಡುತ್ತಿರುವುದು ಸಮಾನತೆಗಾಗಿ ಓಟ” ಎಂದು ದೇವನೂರ ಮಹಾದೇವ ಹೇಳಿದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಸಮಾನತೆಗಾಗಿ ಓಡುತ್ತಿರುವ ಎಳೆಯ ಸ್ನೇಹಿತರೆ ಇಂದು ನೀವು ತುಂಬಾ ವೇಗವಾಗಿ ಓಡಬೇಕಾಗಿದೆ. ಯಾಕೆಂದರೆ ಅಸಮಾನತೆ ಇಂದು ಎಂದೂ ಇಲ್ಲದಷ್ಟು ಹುಚ್ಚು ಕುದುರೆಯಂತೆ ಓಡುತ್ತಿದೆ. ಇದಾಗಲೇ ಅದು ತುಂಬ ದೂರ ಓಡಿದೆ. ಈ ದೇಶಕ್ಕೆ ದಿಕ್ಕು ತೋರಿಸುತ್ತಿರುವ ಚಿಂತಕ, ಹೋರಾಟಗಾರ ಯೋಗೇಂದ್ರ ಯಾದವ್ ಮೊನ್ನೆ ಮೊನ್ನೆ ತಾನೇ ಮೈಸೂರಿಗೆ ಬಂದಿದ್ದರು. ಅವರು ಮಾತಾಡುತ್ತ ಒಂದು ನುಡಿಗಟ್ಟು ಹೇಳಿದ್ದರು. ‘ಭಾರತದ ಪ್ರಧಾನಿ ಮೋದಿಯವರ ಬಾಯಲ್ಲಿ ಸೀತಾಪತಿ ಅಂದರೆ- ರಾಮ, ಭಾರತದ ಪ್ರಧಾನಿ ಮೋದಿಯವರ ಹೃದಯದಲ್ಲಿ ನೀತಾಪತಿ ಅಂದರೆ- ಅಂಬಾನಿ’” ಎಂದು ಅವರು ನೆನಪಿಸಿಕೊಂಡರು.

ಇದನ್ನೂ ಓದಿ: ಬಾಬಾಸಾಹೇಬರ ಚಿಂತನೆಗಳ ತಳಹದಿಯಲ್ಲಿ ರಾಷ್ಟ್ರವನ್ನು ಕಟ್ಟಿಕೊಳ್ಳದಿದ್ದರ ಪರಿಣಾಮ..

“ಭಾರತದ ಪ್ರಧಾನಿ ಮೋದಿಯವರ ಹೃದಯದಲ್ಲಿರುವ ಅಂಬಾನಿ ಲಕ್ಷಾಂತರ ಕೋಟಿಗಳ ಒಡೆಯ. ಭಾರತದಲ್ಲಿ ಇಂತಹ ನೂರಾರು ಬಿಲಿಯರ್ ಕುಟುಂಬಗಳ ಸಂಪತ್ತು ಒಟ್ಟಾದರೆ ಅದು ದೇಶದ ಒಟ್ಟು ಸಂಪತ್ತಿನ ಅರ್ಧಭಾಗದಷ್ಟು ಆಗುತ್ತದಂತೆ. ಬಡವರ ಸಂಖ್ಯೆ ದಿನ ದಿನವೂ ಹೆಚ್ಚುತ್ತಿದೆ. ಇಷ್ಟೊಂದು ಅಸಮಾನತೆ ಇಂದು ದೇಶದಲ್ಲಿದೆ. ಈ ಅಸಮಾನತೆಯ ಹುಚ್ಚು ಕುದುರೆಯನ್ನು ದ್ವೇಷ ಅಸಹನೆಯ ಕೋಮುವಾದದ ಹೆಂಡ ಕುಡಿದ ಜಾಕಿ ಓಡಿಸುತ್ತಿದ್ದಾನೆ. ಅಸಮಾನತೆಯ ಹುಚ್ಚು ಕುದುರೆ ಹುಚ್ಚೆದ್ದು ಓಡುತ್ತಿದೆ. ಆದರಿಂದ ಕಚ್ಚಿಸಿಕೊಳ್ಳದೆ ನೀವು ಎಚ್ಚರ ವಹಿಸಿ ಓಡಬೇಕಾಗಿದೆ. ನೀವು ಎಳೆಯರಾದ್ದರಿಂದ ನೀವು ಗೆಲ್ಲುತ್ತೀರಿ ಎಂಬ ನಂಬಿಕೆ ನನಗಿದೆ. ನೀವು ಗೆಲ್ಲಲೇ ಬೇಕು” ಎಂದು ಅವರು ಕರೆ ನೀಡಿದರು.

ಅಕ್ಕ ಐಎಎಸ್ ಅಕಾಡೆಮಿ ನಿರ್ದೇಶಕ ಡಾ.ಶಿವಕುಮಾರ್, ಎಸಿಪಿ ಎಸ್.ಗಂಗಾಧರಸ್ವಾಮಿ, ಕೇಂದ್ರ ಅಬಕಾರ ಮತ್ತು ಸುಂಕ ಇಲಾಖೆಯ ಅಧೀಕ್ಷಕ ಎಂ.ಯೋಗೇಂದ್ರ, ಆದಾಯ ತೆರಿಗೆ ಇಲಾಖೆಯ ಆಡಳಿತಾಧಿಕಾರಿ ಮಹದೇವಯ್ಯ, ಧಮ್ಮ ದೀವಿಗೆ ಚಾರಿಟಬಲ್ ಟ್ರಸ್ಟ್ ಮಲ್ಲಿಕಾರ್ಜುನ್, ಅರವಳಿಕೆ ತಜ್ಞ ಡಾ.ಶ್ಯಾಮ್ ಪ್ರಸಾದ್, ಜಾತ್ಯಾತೀತ ಜನತಾದಳ ಮುಖಂಡ ದೇವರಾಜ್ ಒಡೆಯರ್, ಸಾಹಿತಿ ಸೋಸಲೆ ಗಂಗಾಧರ್, ದುರ್ಗಾಂಬ ಎಂಟರ್‌ಪ್ರೈಸಸ್‌ನ ಎನ್.ಶಂಕರ, ಶ್ರೀಕಂಠೇಶ್ವರ ಎಂಟರ್‌ಪ್ರೈಸಸ್‌ನ ಜಗದೀಶ್, ತೇಜಸ್ವಿನಿ ಎಂಟರ್‌ಪ್ರೈಸಸ್‌ನ ರಾಮಕೃಷ್ಣ, ಬಿಪಿಎಸ್ ಜಿಲ್ಲಾ ಸಂಚಾಲಕ ಸೋಸಲೆ ಸಿದ್ದರಾಜು, ಜಿಲ್ಲಾಧ್ಯಕ್ಷ ಭೀಮನಹಲ್ಳಿ ಸೋಮೇಶ್, ಜಿಲ್ಲಾ ಕಾರ್ಯದರ್ಶಿ ಕೆ.ಎನ್.ಪ್ರಭುಸ್ವಾಮಿ, ಜಯಶಂಕರ್ ಮೇಸ್ತ್ರಿ ಮತ್ತಿತರರು ಪಾಲ್ಗೊಂಡಿದ್ದರು.

ಸಮಾನತೆಗಾಗಿ ಓಟದಲ್ಲಿ ಪಾಲ್ಗೊಂಡ ಕಿರಿ-ಹಿರಿಯರು

ಭಾರತೀಯ ಪರಿವರ್ತನ ಸಂಘ ಆಯೋಜಿಸಿದ್ದ ಸಮಾನತೆಗಾಗಿ ಓಟದಲ್ಲಿ ಕಿರಿಯರು- ಹಿರಿಯರು ಪಾಲ್ಗೊಂಡಿದ್ದರು. ಪುರಭವನದಿಂದ ಆರಂಭವಾದ ಓಟ ಹಾರ್ಡಿಂಜ್ ವೃತ್ತ, ಗನ್‌ಹೌಸ್, ರಾಮಸ್ವಾಮಿ ವೃತ್ತ, ಆರ್‌ಟಿಓ, ಅಶೋಕ ವೃತ್ತ, ಕೃಷ್ಣ ಬುಲೇವಾರ್ಡ್ ರಸ್ತೆ, ಕಲಾಮಂದಿರ ರಸ್ತೆ, ರೈಲ್ವೆ ವೃತ್ತ, ಇರ್ವಿನ್ ರಸ್ತೆ ಮಾರ್ಗವಾಗಿ ಪುರಭವನದಲ್ಲಿ ಅಂತ್ಯವಾಯಿತು. ಸುಮಾರು 12 ಕಿ.ಮೀ. ಓಟದಲ್ಲಿ ನೂರಕ್ಕೂ ಹೆಚ್ಚು ಮಂದಿ ಪಾಲ್ಗೊಂಡಿದ್ದರು. ಪ್ರಲಾಕ್ಷ ಆಸ್ಪತ್ರೆಯಿಂದ ಆಂಬ್ಯುಲೆನ್ಸ್ ವ್ಯವಸ್ಥೆ ಮಾಡಲಾಗಿತ್ತು. ತೇಜಸ್ವಿನಿ ಎಂಟರ್‌ಪ್ರೈಸಸ್‌ನಿಂದ ಟಿ-ಷರ್ಟ್ ವಿತರಿಸಲಾಯಿತು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಇದನ್ನೂ ಓದಿ: Exclusive: ಮಸೀದಿ ಸುತ್ತಲಿನ ಹಿಂದೂ ವ್ಯಾಪಾರಿಗಳ ಮನದ ಮಾತು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....