Homeಕರ್ನಾಟಕಬೇಗೂರು ಕೆರೆ ವಿವಾದ ಕೋಮುವಾದಿಕರಣ: ಬಿಜೆಪಿ ಬೆಂಬಲಿಗ ಪುನಿತ್‌ ಕೆರೆಹಳ್ಳಿ ಸಹಿತ ಹಲವರ ಮೇಲೆ FIR

ಬೇಗೂರು ಕೆರೆ ವಿವಾದ ಕೋಮುವಾದಿಕರಣ: ಬಿಜೆಪಿ ಬೆಂಬಲಿಗ ಪುನಿತ್‌ ಕೆರೆಹಳ್ಳಿ ಸಹಿತ ಹಲವರ ಮೇಲೆ FIR

- Advertisement -
- Advertisement -

ನ್ಯಾಯಾಲಯದ ಆದೇಶಗಳನ್ನು ಧಿಕ್ಕರಿಸಿ ಆಗಸ್ಟ್ 11 ರಂದು ಬೇಗೂರು ಕೆರೆಯಲ್ಲಿ ಶಿವನ ಪ್ರತಿಮೆಯನ್ನು ಅನಾವರಣಗೊಳಿಸಿದ ಬಿಜೆಪಿ ಬೆಂಬಲಿತ ಸಂಘಪರಿವಾರದ ಕಾರ್ಯಕರ್ತರ ವಿರುದ್ಧ ಎಫ್‌ಐಆರ್‌ ದಾಖಲಿಸಲಾಗಿದೆ ಎಂದು ದಿನ್ಯೂಸ್‌ಮಿನಿಟ್‌ ವರದಿ ಮಾಡಿದೆ. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಅಧಿಕಾರಿಗಳು ಕರ್ನಾಟಕ ಹೈಕೋರ್ಟ್‌ಗೆ ಪ್ರತಿಮೆಯನ್ನು ಮುಚ್ಚಲಾಗಿದೆ ಎಂದು ತಿಳಿಸಿದ ಕೆಲವೇ ಗಂಟೆಗಳಲ್ಲಿ ಪ್ರತಿಮೆಯನ್ನು ಅನಾವರಣಗೊಳಿಸಲಾಗಿತ್ತು. ಬೆಂಗಳೂರು ಪೊಲೀಸ್ ಆಯುಕ್ತ ಕಮಲ್ ಪಂತ್ ಅವರಿಗೆ ನೀಡಲಾಗಿದ್ದ ದೂರಿನ ಆಧಾರದ ಮೇಲೆ ಆಗಸ್ಟ್ 16 ರಂದು ಬೇಗೂರು ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.

ಸಂಘಪರಿವಾರದ ಕಾರ್ಯಕರ್ತರಾದ ಪುನಿತ್ ಕೆರೆಹಳ್ಳಿ ಮತ್ತು ಸಂತೋಷ್ ಕರತಾಲ್ ಅವರ ಜೊತೆಗೆ ಇತರರ ಹೆಸರುಗಳನ್ನು ಎಫ್‌ಐಆರ್‌ನಲ್ಲಿ ಉಲ್ಲೇಖಿಸಲಾಗಿದೆ ಎಂದು ನ್ಯೂಸ್‌ಮಿನಿಟ್ ವರದಿಯಲ್ಲಿ ತಿಳಿಸಿದೆ. ಆಗಸ್ಟ್ 11 ರಂದು ಬೇಗೂರು ಕೆರೆಗೆ ಆಗಮಿಸಿದ್ದ ಆರೋಪಿಗಳು ಟಾರ್ಪಾಲ್‌‌ನಿಂದ ಮುಚ್ಚಿದ್ದ ಶಿವನ ಪ್ರತಿಮೆಯನ್ನು ಅನಾವರಣಗೊಳಿಸಿದ್ದರು.

ಇದನ್ನೂ ಓದಿ: ಬೇಗೂರು ಕೆರೆ ಉಳಿಸಿ ಹೋರಾಟಕ್ಕೆ ಕೋಮು ಬಣ್ಣ: ಹೈಕೋರ್ಟ್ ಆದೇಶ ಧಿಕ್ಕರಿಸಿ ಕೆರೆ ಮಧ್ಯೆ ಶಿವ ವಿಗ್ರಹ ಅನಾವರಣ

ಅವರ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 153 ಎ (ಧರ್ಮ, ಜನಾಂಗ, ಹುಟ್ಟಿದ ಸ್ಥಳ, ವಾಸಸ್ಥಳ, ಭಾಷೆ ಇತ್ಯಾದಿಗಳ ಆಧಾರದ ಮೇಲೆ ವಿವಿಧ ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವುದು), 34 (ಸಾಮಾನ್ಯ ಉದ್ದೇಶವನ್ನು ಮುಂದಿಟ್ಟುಕೊಂಡು ಹಲವಾರು ವ್ಯಕ್ತಿಗಳು ಮಾಡಿದ ಕೃತ್ಯಗಳು), 298 (ಯಾವುದೇ ವ್ಯಕ್ತಿಯ ಧಾರ್ಮಿಕ ಭಾವನೆಗಳನ್ನು ನೋಯಿಸುವ ಉದ್ದೇಶಪೂರ್ವಕ ಉದ್ದೇಶ), 505 (2) (ಸಾರ್ವಜನಿಕ ಕಿಡಿಗೇಡಿತನಕ್ಕೆ ಕಾರಣವಾಗುವ ಹೇಳಿಕೆಗಳು) ಅಡಿಯಲ್ಲಿ ಪ್ರಕರಣ ದಾಖಲಾಗಿದೆ.

ಬುಧವಾರ ಬೇಗೂರು ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಎಫ್ಐಆರ್ ಬಗ್ಗೆ ಹೈಕೋರ್ಟ್‌ಗೆ ಮಾಹಿತಿ ನೀಡಲಾಗಿದ್ದು, ಸೆಪ್ಟೆಂಬರ್ 2 ರೊಳಗೆ ತನಿಖಾ ವರದಿಯನ್ನು ಸಲ್ಲಿಸುವಂತೆ ಬೆಂಗಳೂರು (ಆಗ್ನೇಯ) ಡಿಸಿಪಿಗೆ ಸೂಚಿಸಿದೆ.

ಇದನ್ನೂ ಓದಿ: ಕಾರಿಗೆ ಬೆಂಕಿ: ಕೋಮು ಬಣ್ಣ ಹಚ್ಚಿದ ಬಿಜೆಪಿ ಶಾಸಕ ಸತೀಶ್‌ ರೆಡ್ಡಿ – ಪ್ರಕರಣ ಭೇದಿಸಿದ ಪೊಲೀಸರು

ಮುಖ್ಯ ನ್ಯಾಯಾಧೀಶ ಅಭಯ್ ಓಕಾ ನೇತೃತ್ವದ ಹೈಕೋರ್ಟ್ ಪೀಠವು, ನ್ಯಾಯಾಲಯದಲ್ಲಿರುವ ಬೇಗೂರು ಪ್ರಕರಣವು ಧಾರ್ಮಿಕ ದೃಷ್ಟಿಕೋನವನ್ನು ಹೊಂದಿಲ್ಲ, ಕೆರೆಯ ಮಧ್ಯದಲ್ಲಿ ಕೃತಕ ದ್ವೀಪವನ್ನು ನಿರ್ಮಿಸಲು ಬಿಬಿಎಂಪಿಗೆ ಅಧಿಕಾರವಿದೆಯೇ ಎಂಬುವುದನ್ನು ಪರಿಶೀಲಿಸುವ ಪ್ರಕರಣವಾಗಿದೆ ಎಂದು ಕಳೆದ ವಾರ ಪುನರುಚ್ಚರಿಸಿದೆ.

ಬಿಬಿಎಂಪಿಯು ಬೆಂಗಳೂರಿನ ಬೇಗೂರು ಕೆರೆಯ ಮಧ್ಯದಲ್ಲಿ ಪ್ರತಿಮೆಯನ್ನು ನಿರ್ಮಿಸುತ್ತಿರುವುದಕ್ಕೆ ಹೈಕೋರ್ಟ್ 2019 ರ ಆಗಸ್ಟ್‌ನಲ್ಲಿ ತಡೆ ನೀಡಿತ್ತು. ಕೆರೆಯ ಗಾತ್ರವನ್ನು ಕಡಿಮೆ ಮಾಡಲು ಮತ್ತು ಅದರಲ್ಲಿ ದ್ವೀಪಗಳನ್ನು ಮಾಡಲು ಬಿಬಿಎಂಪಿಗೆ ಅಧಿಕಾರವಿಲ್ಲ ಎಂದು ಅದು ಹೇಳಿತ್ತು.

ಆದರೆ ಆಗಸ್ಟ್ 1 ರಿಂದ, ಬಿಜೆಪಿ ಬೆಂಬಲಿತ ಸಂಘಪರಿವಾದ ಕಾರ್ಯಕರ್ತರು, ಹೈಕೋರ್ಟ್‌ನಲ್ಲಿ ವಿಚಾರಣೆ ನಡೆಯುತ್ತಿರುವ ‘ಪರಿಸರ ಉಳಿವಿನ ಪ್ರಕರಣವನ್ನು’ ಕೋಮುವಾದಿಕರಣಗೊಳಿಸಲು ನೋಡಿದ್ದು, ಸಾಮಾಜಿಕ ಜಾಲತಾಣದಲ್ಲಿ ಪ್ರಚೋದನಕಾರಿ ಪೋಸ್ಟರ್‌ಗಳನ್ನು ಹಂಚಿಕೊಂಡಿದ್ದಾರೆ. ಜೊತೆಗೆ ಪರಿಸರ ಹೋರಾಟಗಾರ ಲಿಯೋ ಸಾಲ್ಢಾನ್ಹಾ ಅವರನ್ನು ಗುರಿಯಾಗಿಸಿ ದ್ವೇಷವನ್ನು ಬಿತ್ತುತ್ತಿದ್ದಾರೆ.

ಇದನ್ನೂ ಓದಿ: ಕೋಮುವಾದದ ಲೇಪನದಲ್ಲಿ ಕಡೆಗಣನೆಗೆ ಒಳಪಟ್ಟ ಬೇಗೂರು ಕೆರೆ ಅಭಿವೃದ್ಧಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...