Homeಕರ್ನಾಟಕಬೇಗೂರು ಕೆರೆ ವಿವಾದ ಕೋಮುವಾದಿಕರಣ: ಬಿಜೆಪಿ ಬೆಂಬಲಿಗ ಪುನಿತ್‌ ಕೆರೆಹಳ್ಳಿ ಸಹಿತ ಹಲವರ ಮೇಲೆ FIR

ಬೇಗೂರು ಕೆರೆ ವಿವಾದ ಕೋಮುವಾದಿಕರಣ: ಬಿಜೆಪಿ ಬೆಂಬಲಿಗ ಪುನಿತ್‌ ಕೆರೆಹಳ್ಳಿ ಸಹಿತ ಹಲವರ ಮೇಲೆ FIR

- Advertisement -
- Advertisement -

ನ್ಯಾಯಾಲಯದ ಆದೇಶಗಳನ್ನು ಧಿಕ್ಕರಿಸಿ ಆಗಸ್ಟ್ 11 ರಂದು ಬೇಗೂರು ಕೆರೆಯಲ್ಲಿ ಶಿವನ ಪ್ರತಿಮೆಯನ್ನು ಅನಾವರಣಗೊಳಿಸಿದ ಬಿಜೆಪಿ ಬೆಂಬಲಿತ ಸಂಘಪರಿವಾರದ ಕಾರ್ಯಕರ್ತರ ವಿರುದ್ಧ ಎಫ್‌ಐಆರ್‌ ದಾಖಲಿಸಲಾಗಿದೆ ಎಂದು ದಿನ್ಯೂಸ್‌ಮಿನಿಟ್‌ ವರದಿ ಮಾಡಿದೆ. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಅಧಿಕಾರಿಗಳು ಕರ್ನಾಟಕ ಹೈಕೋರ್ಟ್‌ಗೆ ಪ್ರತಿಮೆಯನ್ನು ಮುಚ್ಚಲಾಗಿದೆ ಎಂದು ತಿಳಿಸಿದ ಕೆಲವೇ ಗಂಟೆಗಳಲ್ಲಿ ಪ್ರತಿಮೆಯನ್ನು ಅನಾವರಣಗೊಳಿಸಲಾಗಿತ್ತು. ಬೆಂಗಳೂರು ಪೊಲೀಸ್ ಆಯುಕ್ತ ಕಮಲ್ ಪಂತ್ ಅವರಿಗೆ ನೀಡಲಾಗಿದ್ದ ದೂರಿನ ಆಧಾರದ ಮೇಲೆ ಆಗಸ್ಟ್ 16 ರಂದು ಬೇಗೂರು ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.

ಸಂಘಪರಿವಾರದ ಕಾರ್ಯಕರ್ತರಾದ ಪುನಿತ್ ಕೆರೆಹಳ್ಳಿ ಮತ್ತು ಸಂತೋಷ್ ಕರತಾಲ್ ಅವರ ಜೊತೆಗೆ ಇತರರ ಹೆಸರುಗಳನ್ನು ಎಫ್‌ಐಆರ್‌ನಲ್ಲಿ ಉಲ್ಲೇಖಿಸಲಾಗಿದೆ ಎಂದು ನ್ಯೂಸ್‌ಮಿನಿಟ್ ವರದಿಯಲ್ಲಿ ತಿಳಿಸಿದೆ. ಆಗಸ್ಟ್ 11 ರಂದು ಬೇಗೂರು ಕೆರೆಗೆ ಆಗಮಿಸಿದ್ದ ಆರೋಪಿಗಳು ಟಾರ್ಪಾಲ್‌‌ನಿಂದ ಮುಚ್ಚಿದ್ದ ಶಿವನ ಪ್ರತಿಮೆಯನ್ನು ಅನಾವರಣಗೊಳಿಸಿದ್ದರು.

ಇದನ್ನೂ ಓದಿ: ಬೇಗೂರು ಕೆರೆ ಉಳಿಸಿ ಹೋರಾಟಕ್ಕೆ ಕೋಮು ಬಣ್ಣ: ಹೈಕೋರ್ಟ್ ಆದೇಶ ಧಿಕ್ಕರಿಸಿ ಕೆರೆ ಮಧ್ಯೆ ಶಿವ ವಿಗ್ರಹ ಅನಾವರಣ

ಅವರ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 153 ಎ (ಧರ್ಮ, ಜನಾಂಗ, ಹುಟ್ಟಿದ ಸ್ಥಳ, ವಾಸಸ್ಥಳ, ಭಾಷೆ ಇತ್ಯಾದಿಗಳ ಆಧಾರದ ಮೇಲೆ ವಿವಿಧ ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವುದು), 34 (ಸಾಮಾನ್ಯ ಉದ್ದೇಶವನ್ನು ಮುಂದಿಟ್ಟುಕೊಂಡು ಹಲವಾರು ವ್ಯಕ್ತಿಗಳು ಮಾಡಿದ ಕೃತ್ಯಗಳು), 298 (ಯಾವುದೇ ವ್ಯಕ್ತಿಯ ಧಾರ್ಮಿಕ ಭಾವನೆಗಳನ್ನು ನೋಯಿಸುವ ಉದ್ದೇಶಪೂರ್ವಕ ಉದ್ದೇಶ), 505 (2) (ಸಾರ್ವಜನಿಕ ಕಿಡಿಗೇಡಿತನಕ್ಕೆ ಕಾರಣವಾಗುವ ಹೇಳಿಕೆಗಳು) ಅಡಿಯಲ್ಲಿ ಪ್ರಕರಣ ದಾಖಲಾಗಿದೆ.

ಬುಧವಾರ ಬೇಗೂರು ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಎಫ್ಐಆರ್ ಬಗ್ಗೆ ಹೈಕೋರ್ಟ್‌ಗೆ ಮಾಹಿತಿ ನೀಡಲಾಗಿದ್ದು, ಸೆಪ್ಟೆಂಬರ್ 2 ರೊಳಗೆ ತನಿಖಾ ವರದಿಯನ್ನು ಸಲ್ಲಿಸುವಂತೆ ಬೆಂಗಳೂರು (ಆಗ್ನೇಯ) ಡಿಸಿಪಿಗೆ ಸೂಚಿಸಿದೆ.

ಇದನ್ನೂ ಓದಿ: ಕಾರಿಗೆ ಬೆಂಕಿ: ಕೋಮು ಬಣ್ಣ ಹಚ್ಚಿದ ಬಿಜೆಪಿ ಶಾಸಕ ಸತೀಶ್‌ ರೆಡ್ಡಿ – ಪ್ರಕರಣ ಭೇದಿಸಿದ ಪೊಲೀಸರು

ಮುಖ್ಯ ನ್ಯಾಯಾಧೀಶ ಅಭಯ್ ಓಕಾ ನೇತೃತ್ವದ ಹೈಕೋರ್ಟ್ ಪೀಠವು, ನ್ಯಾಯಾಲಯದಲ್ಲಿರುವ ಬೇಗೂರು ಪ್ರಕರಣವು ಧಾರ್ಮಿಕ ದೃಷ್ಟಿಕೋನವನ್ನು ಹೊಂದಿಲ್ಲ, ಕೆರೆಯ ಮಧ್ಯದಲ್ಲಿ ಕೃತಕ ದ್ವೀಪವನ್ನು ನಿರ್ಮಿಸಲು ಬಿಬಿಎಂಪಿಗೆ ಅಧಿಕಾರವಿದೆಯೇ ಎಂಬುವುದನ್ನು ಪರಿಶೀಲಿಸುವ ಪ್ರಕರಣವಾಗಿದೆ ಎಂದು ಕಳೆದ ವಾರ ಪುನರುಚ್ಚರಿಸಿದೆ.

ಬಿಬಿಎಂಪಿಯು ಬೆಂಗಳೂರಿನ ಬೇಗೂರು ಕೆರೆಯ ಮಧ್ಯದಲ್ಲಿ ಪ್ರತಿಮೆಯನ್ನು ನಿರ್ಮಿಸುತ್ತಿರುವುದಕ್ಕೆ ಹೈಕೋರ್ಟ್ 2019 ರ ಆಗಸ್ಟ್‌ನಲ್ಲಿ ತಡೆ ನೀಡಿತ್ತು. ಕೆರೆಯ ಗಾತ್ರವನ್ನು ಕಡಿಮೆ ಮಾಡಲು ಮತ್ತು ಅದರಲ್ಲಿ ದ್ವೀಪಗಳನ್ನು ಮಾಡಲು ಬಿಬಿಎಂಪಿಗೆ ಅಧಿಕಾರವಿಲ್ಲ ಎಂದು ಅದು ಹೇಳಿತ್ತು.

ಆದರೆ ಆಗಸ್ಟ್ 1 ರಿಂದ, ಬಿಜೆಪಿ ಬೆಂಬಲಿತ ಸಂಘಪರಿವಾದ ಕಾರ್ಯಕರ್ತರು, ಹೈಕೋರ್ಟ್‌ನಲ್ಲಿ ವಿಚಾರಣೆ ನಡೆಯುತ್ತಿರುವ ‘ಪರಿಸರ ಉಳಿವಿನ ಪ್ರಕರಣವನ್ನು’ ಕೋಮುವಾದಿಕರಣಗೊಳಿಸಲು ನೋಡಿದ್ದು, ಸಾಮಾಜಿಕ ಜಾಲತಾಣದಲ್ಲಿ ಪ್ರಚೋದನಕಾರಿ ಪೋಸ್ಟರ್‌ಗಳನ್ನು ಹಂಚಿಕೊಂಡಿದ್ದಾರೆ. ಜೊತೆಗೆ ಪರಿಸರ ಹೋರಾಟಗಾರ ಲಿಯೋ ಸಾಲ್ಢಾನ್ಹಾ ಅವರನ್ನು ಗುರಿಯಾಗಿಸಿ ದ್ವೇಷವನ್ನು ಬಿತ್ತುತ್ತಿದ್ದಾರೆ.

ಇದನ್ನೂ ಓದಿ: ಕೋಮುವಾದದ ಲೇಪನದಲ್ಲಿ ಕಡೆಗಣನೆಗೆ ಒಳಪಟ್ಟ ಬೇಗೂರು ಕೆರೆ ಅಭಿವೃದ್ಧಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...

ಮಹಿಳಾ ಮೀಸಲು ಮಸೂದೆ 2023ರಲ್ಲೇ ಗೆದ್ದಿದೆ, ಈಗ ಸೋತಿರುವುದು ಮೋದಿ ಸರ್ಕಾರ

ಮೋದಿ ಸರ್ಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದೆ ಎಂಬುವುದು ದೇಶದಲ್ಲಿ ಪ್ರಸ್ತುತ ದೊಡ್ಡ ಚರ್ಚೆಯ ವಿಷಯವಾಗಿದೆ. ಕಾಂಗ್ರೆಸ್‌ ನೇತೃತ್ವದಲ್ಲಿ ವಿಪಕ್ಷಗಳು ಮಸೂದೆಯನ್ನು ಸೋಲಿಸುವ ಮೂಲಕ ದೇಶದ ಮಹಿಳೆಯರ ಸಬಲೀಕರಣಕ್ಕೆ...