Homeಕರ್ನಾಟಕಬೆಂಗಳೂರಿನಲ್ಲಿ ಸಾರ್ವಜನಿಕ ಶೌಚಾಲಯಗಳ ಕೊರತೆ: 1000 ಜನರಿಗೆ ಒಂದರಂತೆ ಶೌಚಾಲಯವೂ ಇಲ್ಲ ಎಂದ ವರದಿ

ಬೆಂಗಳೂರಿನಲ್ಲಿ ಸಾರ್ವಜನಿಕ ಶೌಚಾಲಯಗಳ ಕೊರತೆ: 1000 ಜನರಿಗೆ ಒಂದರಂತೆ ಶೌಚಾಲಯವೂ ಇಲ್ಲ ಎಂದ ವರದಿ

- Advertisement -
- Advertisement -

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಸಾರ್ವಜನಿಕ ಶೌಚಾಲಯಗಳ ಕೊರತೆ ಇದೆ. ಚೆನ್ನೈ ಮತ್ತು ಅಹಮದಾಬಾದ್‌ನಂತಹ ಇತರ ನಗರಗಳಿಗೆ ಹೋಲಿಸಿದರೆ ಜನಸಂಖ್ಯೆಗೆ ಅನುಗುಣವಾಗಿ ಬೆಂಗಳೂರಿನಲ್ಲಿ ಲಭ್ಯವಿರುವ ಸಮುದಾಯ ಶೌಚಾಲಯಗಳ ಸಂಖ್ಯೆ ಕಡಿಮೆ ಎಂದು ಪುಣೆಯ ಆಲ್ ಇಂಡಿಯಾ ಇನ್‌ಸ್ಟಿಟ್ಯೂಟ್ ಆಫ್ ಲೋಕಲ್ ಸೆಲ್ಫ್ ಗವರ್ನಮೆಂಟ್ ((AIILSG) ವರದಿ ಬಹಿರಂಗಪಡಿಸಿದೆ.

2011 ರ ಜನಗಣತಿಯ ಪ್ರಕಾರ ಚೆನ್ನೈ, ಅಹಮದಾಬಾದ್ ಮತ್ತು ಬೆಂಗಳೂರಿನಲ್ಲಿ ಪ್ರತಿ ಚದರ ಕಿ.ಮೀ.ಗೆ ಪ್ರತಿ ಸಾವಿರ ಜನಸಂಖ್ಯೆಗೆ ಸಮುದಾಯ ಶೌಚಾಲಯಗಳ ಸಂಖ್ಯೆ ಕ್ರಮವಾಗಿ 1.7, 0.8 ಮತ್ತು 0.7 ಆಗಿದೆ ಎಂದು ವರದಿ ತಿಳಿಸಿದೆ. ಆಲ್‌ ಇಂಡಿಯಾ ಇನ್‌ಸ್ಟಿಟ್ಯೂಟ್ ಆಫ್ ಲೋಕಲ್ ಸೆಲ್ಫ್ ಗವರ್ನಮೆಂಟ್‌ ವರದಿಯನ್ನು ಬಿಬಿಎಂಪಿ ಹೈಕೋರ್ಟ್‌ಗೆ ಸಲ್ಲಿಸಿದೆ.

ಬೆಂಗಳೂರು ನಗರದಲ್ಲಿ ಅಗತ್ಯ ಇರುವ ಸಾರ್ವಜನಿಕ ಶೌಚಾಲಯಗಳ ಬಗ್ಗೆ ವರದಿ ಸಿದ್ಧಪಡಿಸುವ ಜವಾಬ್ದಾರಿಯನ್ನುಆಲ್‌ ಇಂಡಿಯಾ ಇನ್‌ಸ್ಟಿಟ್ಯೂಟ್ ಆಫ್ ಲೋಕಲ್ ಸೆಲ್ಫ್ ಗವರ್ನಮೆಂಟ್‌ ಸಂಸ್ಥೆ ಸಂಸ್ಥೆಗೆ ಬಿಬಿಎಂಪಿ ವಹಿಸಿತ್ತು.

ಇದನ್ನೂ ಓದಿ: ಬೆಂಗಳೂರಿಗರಿಗೆ ಆಘಾತ: ಆಸ್ತಿ ತೆರಿಗೆ ಎರಡು ಪಟ್ಟು ಏರಿಸಿದ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ!

ಈ ವರದಿ ಪ್ರಕಾರ ಬೆಂಗಳೂರಿನಲ್ಲಿ ಒಂದು ಸಾವಿರ ಜನಸಂಖ್ಯೆಗೆ ಒಂದರಂತೆ ಸಾರ್ವಜನಿಕ ಶೌಚಾಲಯ ಇಲ್ಲ ಎಂಬುದು ತಿಳಿದು ಬರುತ್ತದೆ. ಚೆನ್ನೈ, ಹೈದರಾಬಾದ್, ಅಹಮದಾಬಾದ್‌ನಲ್ಲಿ ಪ್ರತಿ ಚದರ ಕಿಲೋ ಮೀಟರ್, ಪ್ರತಿ ವಾರ್ಡ್‌ಗಳಲ್ಲಿ ಇರುವ ಸಾರ್ವಜನಿಕ ಶೌಚಾಲಯಗಳ ಸಂಖ್ಯೆ ಹೋಲಿಸಿದರೆ ಬೆಂಗಳೂರಿನಲ್ಲಿ ಕಡಿಮೆ ಸಂಖ್ಯೆಯ ಶೌಚಾಲಯಗಳಿವೆ’ ಎನ್ನಲಾಗಿದೆ.

ನಗರದಲ್ಲಿರುವ ಕೊಳಚೆ ಪ್ರದೇಶಗಳಿಗೆ ಹೆಚ್ಚಿನ ಸಮುದಾಯ ಶೌಚಾಲಯಗಳು ಅಗತ್ಯ ಇವೆ. ಶೌಚಾಲಯಗಳ ನಿರ್ವಹಣೆ ಕಳಪೆಯಾಗಿದ್ದರೂ, ತೆರೆದ ಮಲವಿಸರ್ಜನೆಯನ್ನು ಉತ್ತೇಜಿಸುತ್ತದೆ ಎಂದು ವರದಿಯಲ್ಲಿ ತಿಳಿಸಲಾಗಿದೆ.

’ಉದ್ಯೋಗ ನಗರಿ ಬೆಂಗಳೂರಿಗೆ ಆಗಾಗ ಬಂದು ಹೋಗುವ ಜನಸಂಖ್ಯೆ ಶೇಕಡಾ 15 ರ ದರದಲ್ಲಿ ಬೆಳೆಯುತ್ತಿದೆ. ಮಾರುಕಟ್ಟೆ, ಬಸ್ ನಿಲ್ದಾಣ, ರೈಲ್ವೆ ನಿಲ್ದಾಣ, ವಾಣಿಜ್ಯ ಪ್ರದೇಶಗಳಲ್ಲಿ ಹೆಚ್ಚಿನ ಶೌಚಾಲಯಗಳ ಅಗತ್ಯವಿದೆ’ ಎಂದು ವರದಿ ತಿಳಿಸಿದೆ.

ಬೆಂಗಳೂರಿನಲ್ಲಿ ಶೌಚಾಲಯ ಸಮಸ್ಯೆಗಳ ಕುರಿತು ಲಿಟ್ಜ್‌ಕಿಟ್‌ ಫೌಂಡೇಷನ್ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿತ್ತು. ನಗರದಲ್ಲಿ ಅಗತ್ಯವಿರುವ ಸಾರ್ವಜನಿಕ ಶೌಚಾಲಯಗಳ ಸಂಖ್ಯೆಯನ್ನು ತಿಳಿಸುವಂತೆ ನಿರ್ದೇಶನ ನೀಡಿದ್ದ ಮುಖ್ಯ ನ್ಯಾಯಮೂರ್ತಿ ಅಭಯ್ ಶ್ರೀನಿವಾಸ್ ಒಕಾ ಮತ್ತು ನ್ಯಾಯಮೂರ್ತಿ ಸೂರಜ್ ಗೋವಿಂದರಾಜ್ ಅವರ ವಿಭಾಗೀಯ ಪೀಠದ ಮುಂದೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವರದಿ ಸಲ್ಲಿಸಿದ್ದಾರೆ.

ಇದನ್ನೂ ಓದಿ: 7 ಐಎಎಸ್‌ ಅಧಿಕಾರಿಗಳ ವರ್ಗಾವಣೆ ಆದೇಶ ಹೊರಡಿಸಿದ ರಾಜ್ಯ ಸರ್ಕಾರ

ವರದಿ ಅವಲೋಕಿಸಿದ ಮುಖ್ಯ ನ್ಯಾಯಮೂರ್ತಿ ಅಭಯ್ ಶ್ರೀನಿವಾಸ್ ಒಕಾ ನೇತೃತ್ವದ ವಿಭಾಗೀಯ ಪೀಠ, ‘ವಾರ್ಡ್‌ವಾರು ಶೌಚಾಲಯಗಳ ಅಗತ್ಯದ ಬಗ್ಗೆ ವರದಿಯಲ್ಲಿ ಉಲ್ಲೇಖ ಇಲ್ಲದಿದ್ದರೂ, ಪ್ರಮುಖ ವಿಷಯಗಳನ್ನು ಎತ್ತಿ ಹಿಡಿದಿದೆ. ಅಗತ್ಯ ಇರುವ ಕಡೆಗಳಲ್ಲಿ ಶೌಚಾಲಯ ನಿ‌ರ್ಮಾಣ, ನಿರ್ವಹಣೆ ಗುಣಮಟ್ಟ ಸುಧಾರಣೆ ಬಗ್ಗೆ ತಕ್ಷಣ ಗಮನ ಹರಿಸಬೇಕು. ವರದಿಯಲ್ಲಿರುವ ಶಿಫಾರಸುಗಳ ಅನುಷ್ಠಾನ ಸಂಬಂಧ ಅನುಸರಣಾ ವರದಿಯನ್ನು ಆಗಸ್ಟ್ 13ರೊಳಗೆ ಸಲ್ಲಿಸಬೇಕು’ ಎಂದು ಬಿಬಿಎಂಪಿಗೆ ನಿರ್ದೇಶನ ನೀಡಿದೆ.

ಬೆಂಗಳೂರಿನಲ್ಲಿ 1,000 ಜನಸಂಖ್ಯೆಗೆ 0.06 ಸಾರ್ವಜನಿಕ ಶೌಚಾಲಯಗಳು ಹೊಂದಿದೆ ಎಂದು ಸೂಚಿಸುವ ವರದಿಯಲ್ಲಿ, ಶೇಕಡಾ 52 ರಷ್ಟು ಶೌಚಾಲಯಗಳನ್ನು ಫುಟ್‌ಪಾತ್‌ಗಳಲ್ಲಿ ನಿರ್ಮಿಸಲಾಗಿದೆ. 116 ಮಾರುಕಟ್ಟೆಗಳು, 43 ಬಸ್ ನಿಲ್ದಾಣಗಳು ಮತ್ತು 43 ವಾಣಿಜ್ಯ ಪ್ರದೇಶಗಳಲ್ಲಿ ಸಾರ್ವಜನಿಕ ಶೌಚಾಲಯಗಳನ್ನು ನಿರ್ಮಿಸಲಾಗಿದೆ ಎಂದು ವರದಿ ತಿಳಿಸಿದೆ.


ಇದನ್ನೂ ಓದಿ: ಸಚಿವ ಶಿವರಾಮ್ ಹೆಬ್ಬಾರ್ ವಿರುದ್ಧ 1 ರೂ. ಮಾನನಷ್ಟ ಮೊಕದ್ದಮೆ ಹೂಡಿದ ನಟ ಚೇತನ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...