Homeಕರ್ನಾಟಕಬೆಂಗಳೂರಿನಲ್ಲಿ ಸಾರ್ವಜನಿಕ ಶೌಚಾಲಯಗಳ ಕೊರತೆ: 1000 ಜನರಿಗೆ ಒಂದರಂತೆ ಶೌಚಾಲಯವೂ ಇಲ್ಲ ಎಂದ ವರದಿ

ಬೆಂಗಳೂರಿನಲ್ಲಿ ಸಾರ್ವಜನಿಕ ಶೌಚಾಲಯಗಳ ಕೊರತೆ: 1000 ಜನರಿಗೆ ಒಂದರಂತೆ ಶೌಚಾಲಯವೂ ಇಲ್ಲ ಎಂದ ವರದಿ

- Advertisement -
- Advertisement -

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಸಾರ್ವಜನಿಕ ಶೌಚಾಲಯಗಳ ಕೊರತೆ ಇದೆ. ಚೆನ್ನೈ ಮತ್ತು ಅಹಮದಾಬಾದ್‌ನಂತಹ ಇತರ ನಗರಗಳಿಗೆ ಹೋಲಿಸಿದರೆ ಜನಸಂಖ್ಯೆಗೆ ಅನುಗುಣವಾಗಿ ಬೆಂಗಳೂರಿನಲ್ಲಿ ಲಭ್ಯವಿರುವ ಸಮುದಾಯ ಶೌಚಾಲಯಗಳ ಸಂಖ್ಯೆ ಕಡಿಮೆ ಎಂದು ಪುಣೆಯ ಆಲ್ ಇಂಡಿಯಾ ಇನ್‌ಸ್ಟಿಟ್ಯೂಟ್ ಆಫ್ ಲೋಕಲ್ ಸೆಲ್ಫ್ ಗವರ್ನಮೆಂಟ್ ((AIILSG) ವರದಿ ಬಹಿರಂಗಪಡಿಸಿದೆ.

2011 ರ ಜನಗಣತಿಯ ಪ್ರಕಾರ ಚೆನ್ನೈ, ಅಹಮದಾಬಾದ್ ಮತ್ತು ಬೆಂಗಳೂರಿನಲ್ಲಿ ಪ್ರತಿ ಚದರ ಕಿ.ಮೀ.ಗೆ ಪ್ರತಿ ಸಾವಿರ ಜನಸಂಖ್ಯೆಗೆ ಸಮುದಾಯ ಶೌಚಾಲಯಗಳ ಸಂಖ್ಯೆ ಕ್ರಮವಾಗಿ 1.7, 0.8 ಮತ್ತು 0.7 ಆಗಿದೆ ಎಂದು ವರದಿ ತಿಳಿಸಿದೆ. ಆಲ್‌ ಇಂಡಿಯಾ ಇನ್‌ಸ್ಟಿಟ್ಯೂಟ್ ಆಫ್ ಲೋಕಲ್ ಸೆಲ್ಫ್ ಗವರ್ನಮೆಂಟ್‌ ವರದಿಯನ್ನು ಬಿಬಿಎಂಪಿ ಹೈಕೋರ್ಟ್‌ಗೆ ಸಲ್ಲಿಸಿದೆ.

ಬೆಂಗಳೂರು ನಗರದಲ್ಲಿ ಅಗತ್ಯ ಇರುವ ಸಾರ್ವಜನಿಕ ಶೌಚಾಲಯಗಳ ಬಗ್ಗೆ ವರದಿ ಸಿದ್ಧಪಡಿಸುವ ಜವಾಬ್ದಾರಿಯನ್ನುಆಲ್‌ ಇಂಡಿಯಾ ಇನ್‌ಸ್ಟಿಟ್ಯೂಟ್ ಆಫ್ ಲೋಕಲ್ ಸೆಲ್ಫ್ ಗವರ್ನಮೆಂಟ್‌ ಸಂಸ್ಥೆ ಸಂಸ್ಥೆಗೆ ಬಿಬಿಎಂಪಿ ವಹಿಸಿತ್ತು.

ಇದನ್ನೂ ಓದಿ: ಬೆಂಗಳೂರಿಗರಿಗೆ ಆಘಾತ: ಆಸ್ತಿ ತೆರಿಗೆ ಎರಡು ಪಟ್ಟು ಏರಿಸಿದ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ!

ಈ ವರದಿ ಪ್ರಕಾರ ಬೆಂಗಳೂರಿನಲ್ಲಿ ಒಂದು ಸಾವಿರ ಜನಸಂಖ್ಯೆಗೆ ಒಂದರಂತೆ ಸಾರ್ವಜನಿಕ ಶೌಚಾಲಯ ಇಲ್ಲ ಎಂಬುದು ತಿಳಿದು ಬರುತ್ತದೆ. ಚೆನ್ನೈ, ಹೈದರಾಬಾದ್, ಅಹಮದಾಬಾದ್‌ನಲ್ಲಿ ಪ್ರತಿ ಚದರ ಕಿಲೋ ಮೀಟರ್, ಪ್ರತಿ ವಾರ್ಡ್‌ಗಳಲ್ಲಿ ಇರುವ ಸಾರ್ವಜನಿಕ ಶೌಚಾಲಯಗಳ ಸಂಖ್ಯೆ ಹೋಲಿಸಿದರೆ ಬೆಂಗಳೂರಿನಲ್ಲಿ ಕಡಿಮೆ ಸಂಖ್ಯೆಯ ಶೌಚಾಲಯಗಳಿವೆ’ ಎನ್ನಲಾಗಿದೆ.

ನಗರದಲ್ಲಿರುವ ಕೊಳಚೆ ಪ್ರದೇಶಗಳಿಗೆ ಹೆಚ್ಚಿನ ಸಮುದಾಯ ಶೌಚಾಲಯಗಳು ಅಗತ್ಯ ಇವೆ. ಶೌಚಾಲಯಗಳ ನಿರ್ವಹಣೆ ಕಳಪೆಯಾಗಿದ್ದರೂ, ತೆರೆದ ಮಲವಿಸರ್ಜನೆಯನ್ನು ಉತ್ತೇಜಿಸುತ್ತದೆ ಎಂದು ವರದಿಯಲ್ಲಿ ತಿಳಿಸಲಾಗಿದೆ.

’ಉದ್ಯೋಗ ನಗರಿ ಬೆಂಗಳೂರಿಗೆ ಆಗಾಗ ಬಂದು ಹೋಗುವ ಜನಸಂಖ್ಯೆ ಶೇಕಡಾ 15 ರ ದರದಲ್ಲಿ ಬೆಳೆಯುತ್ತಿದೆ. ಮಾರುಕಟ್ಟೆ, ಬಸ್ ನಿಲ್ದಾಣ, ರೈಲ್ವೆ ನಿಲ್ದಾಣ, ವಾಣಿಜ್ಯ ಪ್ರದೇಶಗಳಲ್ಲಿ ಹೆಚ್ಚಿನ ಶೌಚಾಲಯಗಳ ಅಗತ್ಯವಿದೆ’ ಎಂದು ವರದಿ ತಿಳಿಸಿದೆ.

ಬೆಂಗಳೂರಿನಲ್ಲಿ ಶೌಚಾಲಯ ಸಮಸ್ಯೆಗಳ ಕುರಿತು ಲಿಟ್ಜ್‌ಕಿಟ್‌ ಫೌಂಡೇಷನ್ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿತ್ತು. ನಗರದಲ್ಲಿ ಅಗತ್ಯವಿರುವ ಸಾರ್ವಜನಿಕ ಶೌಚಾಲಯಗಳ ಸಂಖ್ಯೆಯನ್ನು ತಿಳಿಸುವಂತೆ ನಿರ್ದೇಶನ ನೀಡಿದ್ದ ಮುಖ್ಯ ನ್ಯಾಯಮೂರ್ತಿ ಅಭಯ್ ಶ್ರೀನಿವಾಸ್ ಒಕಾ ಮತ್ತು ನ್ಯಾಯಮೂರ್ತಿ ಸೂರಜ್ ಗೋವಿಂದರಾಜ್ ಅವರ ವಿಭಾಗೀಯ ಪೀಠದ ಮುಂದೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವರದಿ ಸಲ್ಲಿಸಿದ್ದಾರೆ.

ಇದನ್ನೂ ಓದಿ: 7 ಐಎಎಸ್‌ ಅಧಿಕಾರಿಗಳ ವರ್ಗಾವಣೆ ಆದೇಶ ಹೊರಡಿಸಿದ ರಾಜ್ಯ ಸರ್ಕಾರ

ವರದಿ ಅವಲೋಕಿಸಿದ ಮುಖ್ಯ ನ್ಯಾಯಮೂರ್ತಿ ಅಭಯ್ ಶ್ರೀನಿವಾಸ್ ಒಕಾ ನೇತೃತ್ವದ ವಿಭಾಗೀಯ ಪೀಠ, ‘ವಾರ್ಡ್‌ವಾರು ಶೌಚಾಲಯಗಳ ಅಗತ್ಯದ ಬಗ್ಗೆ ವರದಿಯಲ್ಲಿ ಉಲ್ಲೇಖ ಇಲ್ಲದಿದ್ದರೂ, ಪ್ರಮುಖ ವಿಷಯಗಳನ್ನು ಎತ್ತಿ ಹಿಡಿದಿದೆ. ಅಗತ್ಯ ಇರುವ ಕಡೆಗಳಲ್ಲಿ ಶೌಚಾಲಯ ನಿ‌ರ್ಮಾಣ, ನಿರ್ವಹಣೆ ಗುಣಮಟ್ಟ ಸುಧಾರಣೆ ಬಗ್ಗೆ ತಕ್ಷಣ ಗಮನ ಹರಿಸಬೇಕು. ವರದಿಯಲ್ಲಿರುವ ಶಿಫಾರಸುಗಳ ಅನುಷ್ಠಾನ ಸಂಬಂಧ ಅನುಸರಣಾ ವರದಿಯನ್ನು ಆಗಸ್ಟ್ 13ರೊಳಗೆ ಸಲ್ಲಿಸಬೇಕು’ ಎಂದು ಬಿಬಿಎಂಪಿಗೆ ನಿರ್ದೇಶನ ನೀಡಿದೆ.

ಬೆಂಗಳೂರಿನಲ್ಲಿ 1,000 ಜನಸಂಖ್ಯೆಗೆ 0.06 ಸಾರ್ವಜನಿಕ ಶೌಚಾಲಯಗಳು ಹೊಂದಿದೆ ಎಂದು ಸೂಚಿಸುವ ವರದಿಯಲ್ಲಿ, ಶೇಕಡಾ 52 ರಷ್ಟು ಶೌಚಾಲಯಗಳನ್ನು ಫುಟ್‌ಪಾತ್‌ಗಳಲ್ಲಿ ನಿರ್ಮಿಸಲಾಗಿದೆ. 116 ಮಾರುಕಟ್ಟೆಗಳು, 43 ಬಸ್ ನಿಲ್ದಾಣಗಳು ಮತ್ತು 43 ವಾಣಿಜ್ಯ ಪ್ರದೇಶಗಳಲ್ಲಿ ಸಾರ್ವಜನಿಕ ಶೌಚಾಲಯಗಳನ್ನು ನಿರ್ಮಿಸಲಾಗಿದೆ ಎಂದು ವರದಿ ತಿಳಿಸಿದೆ.


ಇದನ್ನೂ ಓದಿ: ಸಚಿವ ಶಿವರಾಮ್ ಹೆಬ್ಬಾರ್ ವಿರುದ್ಧ 1 ರೂ. ಮಾನನಷ್ಟ ಮೊಕದ್ದಮೆ ಹೂಡಿದ ನಟ ಚೇತನ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....