Homeಅಂತರಾಷ್ಟ್ರೀಯಉಕ್ರೇನ್ ಯುದ್ಧ ಸಂದರ್ಭದಲ್ಲಿ ವಿಮಾನ ಪ್ರಯಾಣ ದರ ಏರಿಸಿದ ಕಂಪನಿಗಳು: ತೀವ್ರ ಟೀಕೆ

ಉಕ್ರೇನ್ ಯುದ್ಧ ಸಂದರ್ಭದಲ್ಲಿ ವಿಮಾನ ಪ್ರಯಾಣ ದರ ಏರಿಸಿದ ಕಂಪನಿಗಳು: ತೀವ್ರ ಟೀಕೆ

ಭಾರತದ 15,000 ದಷ್ಟು ವಿದ್ಯಾರ್ಥಿಗಳು ಸದ್ಯ ಉಕ್ರೇನ್‌ನಲ್ಲಿ ಸಿಕ್ಕಿ ಹಾಕಿಕೊಂಡಿದ್ದಾರೆ ಎನ್ನಲಾಗಿದೆ.

- Advertisement -
- Advertisement -

ರಷ್ಯಾವು ಉಕ್ರೇನ್ ಮೇಲೆ ಯುದ್ಧ ಸಾರಿದೆ. ದಾಳಿ ಪ್ರತಿದಾಳಿಗಳು ನಡೆಯುತ್ತಿವೆ. ಈಗಾಗಲೇ ಯುದ್ಧದಲ್ಲಿ 137 ಜನ ತಮ್ಮ ಪ್ರಾಣ ಕಳೆದುಕೊಂಡಿದ್ದಾರೆ. ಇಂತಹ ಸಂದರ್ಭದಲ್ಲಿ ಉಕ್ರೇನ್‌ನಲ್ಲಿ ಸಿಕ್ಕಿ ಹಾಕಿಕೊಂಡಿರುವ ಭಾರತೀಯರು ಸೇರಿದಂತೆ ಹಲವು ವಿದೇಶಿಗರು ತಮ್ಮ ತಮ್ಮ ದೇಶಗಳಿಗೆ ಸುರಕ್ಷಿತವಾಗಿ ಮರಳಲು ಹಾತೊರೆಯುತ್ತಿದ್ದಾರೆ. ಇದನ್ನೆ ಬಂಡವಾಳ ಮಾಡಿಕೊಂಡಿರುವ ವಿಮಾನಯಾನ ಕಂಪನಿಗಳು ಬೇಕಾಬಿಟ್ಟಿ ಪ್ರಯಾಣ ದರ ಏರಿಕೆ ಮಾಡಿವೆ ಎಂಬ ಆರೋಪ ಕೇಳಿಬಂದಿದೆ.

ಯುದ್ಧದ ವಾತವಾರಣವಿದ್ದುದರಿಂದ ಕಳೆದ 10 ದಿನಗಳಿಂದ ವಿಮಾನ ಟಿಕೆಟ್ ಬೆಲೆ ಒಂದೇ ಸಮನೆ ಏರುತ್ತಿದೆ. ಒಂದು ಲಕ್ಷದಿಂದ 2 ಲಕ್ಷದವರೆಗೆ ಒಂದು ಟಿಕೆಟ್ ಬೆಲೆ ಏರಿಸಲಾಗಿದೆ. ಇದನ್ನು ತಡೆಯಲು ಯಾವ ಸರ್ಕಾರಗಳು ಕೂಡ ಕೆಲಸ ಮಾಡುತ್ತಿಲ್ಲ ಎಂದು ವಿದ್ಯಾರ್ಥಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ತೆಲಂಗಾಣದ ಮೆಹಬೂಬ್‌ನಗರದ ವಿದ್ಯಾರ್ಥಿನಿ ಯೋಗಿತಾ ಉಕ್ರೇನ್‌ನ ಜಾಪ್ರಜಿಯ ಮೆಡಿಕಲ್ ಕಾಲೇಜಿನಲ್ಲಿ ಓದುತ್ತಿದ್ದು, ದೇಶಕ್ಕೆ ಬರಲು ಸಾಧ್ಯವಾಗುತ್ತಿಲ್ಲ. ವಿಮಾನ ಟಿಕೆಟ್ ದರಗಳನ್ನು 1 ಲಕ್ಷ ರೂಗಳಿಗಿಂತ ಹೆಚ್ಚು ಮಾಡಿದ್ದಾರೆ. ಇಲ್ಲಿನ ಸ್ಥಿತಿ ಬಗ್ಗೆ ಏನು ಗೊತ್ತಿಲ್ಲ. ಭಾರತ ಸರ್ಕಾರ ನಾವು ಸುರಕ್ಷಿತವಾಗಿ ಮರಳಲು ಕ್ರಮ ಕೈಗೊಳ್ಳಬೇಕು ಎಂದು ಮನವಿ ಮಾಡಿದ್ದಾರೆ.

ಈ ಮೊದಲು ಉಕ್ರೇನ್‌ನಿಂದ ಭಾರತದ ಹಲವು ನಗರಗಳಿಗೆ 20,000 ದಿಂದ 30,000 ದವರೆಗೆ ವಿಮಾನ ಟಿಕೆಟ್‌ಗಳು ಲಭ್ಯವಿದ್ದವು. ಯುದ್ಧದ ವಾತವಾರಣ ಆರಂಭವಾದಂತೆ ಅದು 1 ಲಕ್ಷದಿಂದ 2 ಲಕ್ಷದವರೆಗೆ ಏರಿವೆ. ಇಷ್ಟು ಹಣವನ್ನು ಹೊಂದಿಸಲು ಸಾಧ್ಯವಿಲ್ಲ ಎಂದು ವಿದ್ಯಾರ್ಥಿಗಳು ಅಳಲು ತೋಡಿಕೊಂಡಿದ್ದಾರೆ.

ಉಕ್ರೇನ್‌ನ ಇವಾನೊ-ಫ್ರಾಂಕಿವ್ಸ್ಕ್ ನ್ಯಾಷನಲ್ ಮೆಡಿಕಲ್ ಯೂನಿವರ್ಸಿಟಿಯ ನಾಲ್ಕನೇ ವರ್ಷದ ವಿದ್ಯಾರ್ಥಿ ಸಯಾನ್ ಚೌಧರಿ ಈ ಕುರಿತು ಟ್ವೀಟ್ ಮಾಡಿದ್ದು, “ಉಕ್ರೇನ್ ರಾಷ್ಟ್ರೀಯ ತುರ್ತು ಪರಿಸ್ಥಿತಿಯನ್ನು ಹೇರುತ್ತಿದೆ. ಇಂತಹ ಕಷ್ಟಕರ ಸಂದರ್ಭದಲ್ಲಿ ಏರ್‌ಇಂಡಿಯಾ ಸೇರಿದಂತೆ ಎಲ್ಲಾ ಏರ್‌ಲೈನ್‌ಗಳು ದರ ಏರಿಸಿದ್ದು ಟಿಕೆಟ್‌ಗೆ ₹1-1.5 ಲಕ್ಷ ತೆರಬೇಕಾಗಿದೆ. ನಾವು ಮಧ್ಯಮ ಮತ್ತು ಕೆಳ ಮಧ್ಯಮ ವರ್ಗದ ಕುಟುಂಬದಿಂದ ಬಂದವರು. ನಮಗೆ ಸಹಾಯ ಬೇಕು, ದಯವಿಟ್ಟು ವಿಮಾನ ಟಿಕೆಟ್ ಕೈಗೆಟುಕುವಂತೆ ಮಾಡಿ” ಎಂದು ವಿದೇಶಾಂಗ ಸಚಿವಾಲಯದ ವಕ್ತಾರರು ಮತ್ತು ಪ್ರಧಾನಮಂತ್ರಿಗಳ ಕಚೇರಿಯನ್ನು ಟ್ಯಾಗ್ ಮಾಡಿದ್ದಾರೆ.

ಮುಂದುವರೆದು ಸಾಧ್ಯವಾದಷ್ಟು ಬೇಗ ನಮಗೆ ಸಹಾಯ ಮಾಡಿ, ವಿದ್ಯಾರ್ಥಿಗಳು ಭಯದಲ್ಲಿದ್ದಾರೆ. ನಮ್ಮ ಗೌರವಾನ್ವಿತ ಭಾರತದ ಪ್ರಧಾನ ಮಂತ್ರಿಯ ಮೇಲೆ ನಮಗೆ ಬಲವಾದ ನಂಬಿಕೆ ಇದೆ, ಅವರು ಭಾರತೀಯ ವಿದ್ಯಾರ್ಥಿಗಳ ಸಮಸ್ಯೆಯನ್ನು ಪರಿಹರಿಸುತ್ತಾರೆ ಎಂದು ನಂಬಿದ್ದೇವೆ. ವಿಮಾನ ಟಿಕೆಟ್‌ಗಳ ಬೆಲೆ ಕೈಗೆಟುಕುವ ರೀತಿಯಲ್ಲಿ ಸ್ಥಳಾಂತರಿಸುವ ಪ್ರಕ್ರಿಯೆಯನ್ನು ಮಾಡಿ ಎಂದು ಸಯಾನ್ ಚೌಧರಿ ಮನವಿ ಮಾಡಿದ್ದಾರೆ.

ಆದರೆ ಈ ವಿಷಯದ ಕುರಿತು ಭಾರತದ ಯಾವ ಜನಪ್ರತಿನಿಧಿಗಳು ಕ್ರಮ ಕೈಗೊಳ್ಳುತ್ತಿಲ್ಲ ಮತ್ತು ಮಾತನಾಡುತ್ತಿಲ್ಲ. ಇದು ಅಲ್ಲಿನ ವಿದ್ಯಾರ್ಥಿಗಳ ಆತಂಕವನ್ನು ಹೆಚ್ಚು ಮಾಡಿದೆ. ಇಂತಹ ಸಂಕಷ್ಟದ ಸಮಯದಲ್ಲಿ ಸರ್ಕಾರವೇ ಮುಂದೆ ನಿಂತು ಉಕ್ರೇನ್‌ನಲ್ಲಿರುವ ಭಾರತೀಯರನ್ನು ಸುರಕ್ಷಿತವಾಗಿ ವಾಪಸ್ ಕರೆತರಬೇಕಿದೆ.

ಉಕ್ರೇನ್‌ನಲ್ಲಿ ಕರ್ನಾಟಕ ರಾಜ್ಯದ 346 ಜನರು ಸಿಲುಕಿಕೊಂಡಿದ್ದಾರೆ ಎಂದು ಮಾಹಿತಿ ಲಭ್ಯವಾಗಿದೆ. ಕರ್ನಾಟಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಉಕ್ರೇನ್‌ನಿಂದ ಕರ್ನಾಟಕದ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಕರೆತರುವಂತೆ ಕೇಂದ್ರ ವಿದೇಶಾಂಗ ಸಚಿವ ಎಸ್ ಜೈಶಂಕರ್ ಅವರಿಗೆ ಮನವಿ ಮಾಡಿದ್ದಾರೆ.

ರಷ್ಯಾದೊಂದಿಗಿನ ಯುದ್ಧದಿಂದಾಗಿ ವಿಮಾನ ಸೇವೆಗಳಿಗೆ ಹೊಡೆತ ಬಿದ್ದಿರುವುದರಿಂದ ರಸ್ತೆ ಮಾರ್ಗದ ಮೂಲಕ ಅವರನ್ನು ಸುರಕ್ಷಿತವಾಗಿ ಮರಳಿ ತರುವ ಸಾಧ್ಯತೆಗಳನ್ನು ಅನ್ವೇಷಿಸಲಾಗುತ್ತಿದೆ. ಉಕ್ರೇನ್‌ನ ಪಶ್ಚಿಮ ಭಾಗದ ಕಡೆಗೆ ಸುರಕ್ಷಿತ ಚಲನೆಯ ಸಾಧ್ಯತೆಗಳ ಬಗ್ಗೆ ಮಾಹಿತಿ ಇದೆ ಮತ್ತು ಉಕ್ರೇನ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿಯು ಸಿಲುಕಿರುವ ಭಾರತೀಯ ವಿದ್ಯಾರ್ಥಿಗಳೊಂದಿಗೆ ಸಂಪರ್ಕದಲ್ಲಿದೆ ಎಂದು ಬೊಮ್ಮಾಯಿ ತಿಳಿಸಿದ್ದಾರೆ.


ಇದನ್ನೂ ಓದಿ; ಉಕ್ರೇನ್ ಮೇಲೆ ರಷ್ಯಾ ದಾಳಿ: 137 ಸಾವುಗಳಾಗಿವೆ ಎಂದು ಉಕ್ರೇನ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇರಾನ್‌ ಮೇಲೆ ಇಸ್ರೇಲ್ ದಾಳಿ: ಟೆಹ್ರಾನ್‌ನಿಂದ 200ಕ್ಕೂ ಹೆಚ್ಚು ಭಾರತೀಯ ವಿದ್ಯಾರ್ಥಿಗಳು ಕೋಮ್‌ಗೆ ಸ್ಥಳಾಂತರ

ನವದೆಹಲಿ: ಇರಾನ್ ಮೇಲೆ ಅಮೆರಿಕ-ಇಸ್ರೇಲ್ ದಾಳಿಗಳು ತೀವ್ರಗೊಳ್ಳುತ್ತಿರುವ ಮಧ್ಯೆ, ಟೆಹ್ರಾನ್‌ನಿಂದ ಸ್ಥಳಾಂತರಿಸಲ್ಪಟ್ಟ ಭಾರತೀಯ ವಿದ್ಯಾರ್ಥಿಗಳನ್ನು ಕೋಮ್‌ಗೆ ಸುರಕ್ಷಿತವಾಗಿ ಸ್ಥಳಾಂತರಿಸಲಾಗಿದೆ, ಆದರೆ ಭಾರತೀಯ ರಾಯಭಾರ ಕಚೇರಿಯು ಮುನ್ನೆಚ್ಚರಿಕೆ ಕ್ರಮವಾಗಿ ತನ್ನ ಪ್ರಜೆಗಳನ್ನು ಮನೆಯೊಳಗೆ ಇರುವಂತೆ...

‘ಪಿಟಿಸಿಎಲ್‌ ಕಾಯ್ದೆ’ ಸಮರ್ಪಕ ಜಾರಿಗೆ ಆಗ್ರಹಿಸಿ ಆಹೋರಾತ್ರಿ ಧರಣಿ ಸತ್ಯಾಗ್ರಹ

'ಪಿಟಿಸಿಎಲ್‌ (PTCL) ಕಾಯ್ದೆ' ಸಮರ್ಪಕ ಜಾರಿಗೆ ಆಗ್ರಹಿಸಿ ಆಹೋರಾತ್ರಿ ಧರಣಿ ಸತ್ಯಾಗ್ರಹ ನಡೆಸಲಾಗುವುದು ಎಂದು 'ಪಿಟಿಸಿಎಲ್‌ ಕಾಯ್ದೆ ಭೂಮಿ ವಂಚಿತರ ಹೋರಾಟ ಸಮಿತಿ' ಮುಖಂಡರು ಘೋಷಿಸಿದರು. ಬೆಂಗಳೂರಿನ ಪ್ರೆಸ್‌ ಕ್ಲಬ್‌ನಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ...

ರಾಜಸ್ಥಾನ| ‘ನೀವು ಕೆಳಜಾತಿಯವರು, ಎಲ್‌ಎಲ್‌ಬಿ ನಿಮಗೆ ಸೂಕ್ತವಲ್ಲ..’; ದಲಿತ ವಿದ್ಯಾರ್ಥಿನಿಗೆ ಪ್ರಾಧ್ಯಾಪಕರಿಂದ ಜಾತಿ ನಿಂದನೆ

ರಾಜಸ್ಥಾನದ ಚುರುವಿನ ಸರ್ಕಾರಿ ಕಾನೂನು ಕಾಲೇಜಿನ ಮೂರನೇ ಸೆಮಿಸ್ಟರ್ ದಲಿತ ಎಲ್‌ಎಲ್‌ಬಿ ವಿದ್ಯಾರ್ಥಿನಿಯೊಬ್ಬರು, ಇಬ್ಬರು ಪ್ರಾಧ್ಯಾಪಕರಿಂದ ಜಾತಿ ಆಧಾರಿತ ನಿಂದನೆ, ಬೆದರಿಕೆ ಮತ್ತು ತಾರತಮ್ಯ ಆರೋಪದ ಮೇಲೆ ಪೊಲೀಸ್ ದೂರು ದಾಖಲಿಸಿದ್ದಾರೆ. ಎಸ್‌ಸಿ...

ಬೆಂಗಳೂರು: ಮೂರು ಅಂತಸ್ತಿನ ಕಟ್ಟಡದಲ್ಲಿ ಬೆಂಕಿ ಅವಘಡ: ಮಹಿಳೆ ಸಾವು, ಮೂವರ ರಕ್ಷಣೆ

ಬೆಂಗಳೂರು: ಸೋಮವಾರ ರಾತ್ರಿ ಉತ್ತರ ಬೆಂಗಳೂರಿನಲ್ಲಿರುವ ಮನೆಯೊಂದರಲ್ಲಿ ಸಂಭವಿಸಿದ ಬೆಂಕಿ ಅವಘಡದಲ್ಲಿ ಮಹಿಳೆಯೊಬ್ಬರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ. ಮೃತರನ್ನು 55 ವರ್ಷದ ಸವಿತಾ ಎಂದು ಗುರುತಿಸಲಾಗಿದೆ. ಅವರ ಪತಿ ಗುತ್ತಿಗೆದಾರ ರಮೇಶ್...

ಲಕ್ನೋ | 12 ವರ್ಷದ ಬಾಲಕ ಉನೈಝ್ ಗುಂಡೇಟಿಗೆ ಬಲಿ : ಸಂಚು ರೂಪಿಸಿ ಕೊಲೆ ಮಾಡಲಾಗಿದೆ ಎಂದ ಕುಟುಂಬ

ಉತ್ತರ ಪ್ರದೇಶದ ಲಕ್ನೋದಲ್ಲಿ 12 ವರ್ಷದ ಬಾಲಕನೊಬ್ಬ ಗುಂಡೇಟಿನಿಂದ ಮೃತಪಟ್ಟಿದ್ದು, ಆತನನ್ನು ಕೊಲೆ ಮಾಡಲಾಗಿದೆ. ಕೃತ್ಯವನ್ನು ಮುಚ್ಚಿ ಹಾಕಲು ಪ್ರಯತ್ನಿಸಲಾಗುತ್ತಿದೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಈ ಘಟನೆ ದೇಶದ ಗಮನ ಸೆಳೆದಿದ್ದು, ಸಾಮಾಜಿಕ...

ಕೇರಳ: ಪೊಲೀಸರ ‘ದುರುದ್ದೇಶಪೂರಿತ ಮೊಕದ್ದಮೆ’ಗಾಗಿ ನಿವೃತ್ತ ಸೇನಾ ಅಧಿಕಾರಿಗೆ ಕೇರಳ ನ್ಯಾಯಾಲಯದಿಂದ 5 ಲಕ್ಷ ರೂ. ಪರಿಹಾರ ಘೋಷಣೆ

ಕೊಲ್ಲಂ, ಕೇರಳ: ಪೊಲೀಸರ "ದುರುದ್ದೇಶಪೂರಿತ ಮೊಕದ್ದಮೆ"ಗಾಗಿ ನಿವೃತ್ತ ಸೇನಾ ಅಧಿಕಾರಿಯೊಬ್ಬರಿಗೆ ಕೇರಳ ನ್ಯಾಯಾಲಯವು 5 ಲಕ್ಷ ರೂ.ಗಳ ಪರಿಹಾರವನ್ನು ಘೋಷಿಸಿದೆ.  ಪ್ರಿನ್ಸಿಪಲ್ ಮುನ್ಸಿಫ್ ರಾಗಿ ಎಸ್. ಅವರು, 54 ವರ್ಷದ ನಿವೃತ್ತ ನಾಯಕ್ ಸುಬೇದಾರ್...

ಮಧ್ಯಪ್ರದೇಶ: ಇಂದೋರ್‌ನಲ್ಲಿ ಒಳಚರಂಡಿಗೆ ಇಳಿದು ಇಬ್ಬರು ಪೌರ ಕಾರ್ಮಿಕರು ಸಾವು: ವಿಷಕಾರಿ ಅನಿಲ ಶಂಕೆ

ಇಂದೋರ್‌ನ ಚೋಯಿತ್ರಮ್ ಆಸ್ಪತ್ರೆ ಬಳಿ ಸೋಮವಾರ ಒಳಚರಂಡಿ ಒಳಗೆ ಇಳಿದ ಕಾರಣ ಕರಣ್ ಮತ್ತು ಅಜಯ್ ಎಂದು ಗುರುತಿಸಲಾದ ಇಂದೋರ್ ಮಹಾನಗರ ಪಾಲಿಕೆಯ ಇಬ್ಬರು ಪೌರ ಕಾರ್ಮಿಕರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.  ವಲಯ 13ರ...

‘ಅತೃಪ್ತ ಆತ್ಮಗಳ ಹತಾಶ ಹೇಳಿಕೆ’ : ವಿಪಕ್ಷ ನಾಯಕರ ಫೋನ್ ಕದ್ದಾಲಿಕೆ ಆರೋಪಕ್ಕೆ ಸಿಎಂ ಸಿದ್ದರಾಮಯ್ಯ ತಿರುಗೇಟು

ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರ ಮೇಲೆ ಕಣ್ಣಿಡಲು ಪೋನ್ ಕದ್ದಾಲಿಕೆ ನಡೆಯುತ್ತಿದೆ ಎಂಬ ವಿರೋಧ ಪಕ್ಷದ ನಾಯಕರಾದ ಆರ್.ಅಶೋಕ್ ಮತ್ತು ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿಯವರ ಆರೋಪಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ....

‘ಖಮೇನಿ ಹತ್ಯೆ ಬಗ್ಗೆ ಮೋದಿ ಸರ್ಕಾರದ ಮೌನ ತಟಸ್ಥವಲ್ಲ, ಬದಲಿಗೆ ಪದತ್ಯಾಗ’: ಸೋನಿಯಾ ಗಾಂಧಿ

ಮಂಗಳವಾರ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ, ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ಹತ್ಯೆಯ ಬಗ್ಗೆ ಮೋದಿಯವರ ಮೌನವು ತಟಸ್ಥವಲ್ಲ, ಬದಲಾಗಿ ತ್ಯಾಗವಾಗಿದೆ...

ಟೆಕ್ಸಾಸ್‌ನಲ್ಲಿ ಗುಂಡಿನ ದಾಳಿ: ಭಾರತೀಯ ಮೂಲದ ವಿದ್ಯಾರ್ಥಿನಿ ಸೇರಿ ನಾಲ್ವರು ಸಾವು

ಟೆಕ್ಸಾಸ್‌ನ ಆಸ್ಟಿನ್ ನಗರದ ಬಾರ್ ಒಂದರ ಹೊರಗಡೆ ನಡೆದ ಗುಂಡಿನ ದಾಳಿಯಲ್ಲಿ ಭಾರತ ಮೂಲದ ಅಮೆರಿಕನ್ ವಿದ್ಯಾರ್ಥಿನಿ ಸೇರಿದಂತೆ ನಾಲ್ವರು ಸಾವನ್ನಪ್ಪಿದ್ದಾರೆ. ಈ ಘಟನೆಯನ್ನು ಭಯೋತ್ಪಾದನಾ ಕೃತ್ಯವಾಗಿರಬಹುದು ಎಂಬ ಶಂಕೆಯ ಮೇಲೆ ತನಿಖೆ...