Homeಅಂತರಾಷ್ಟ್ರೀಯಉಕ್ರೇನ್ ಯುದ್ಧ ಸಂದರ್ಭದಲ್ಲಿ ವಿಮಾನ ಪ್ರಯಾಣ ದರ ಏರಿಸಿದ ಕಂಪನಿಗಳು: ತೀವ್ರ ಟೀಕೆ

ಉಕ್ರೇನ್ ಯುದ್ಧ ಸಂದರ್ಭದಲ್ಲಿ ವಿಮಾನ ಪ್ರಯಾಣ ದರ ಏರಿಸಿದ ಕಂಪನಿಗಳು: ತೀವ್ರ ಟೀಕೆ

ಭಾರತದ 15,000 ದಷ್ಟು ವಿದ್ಯಾರ್ಥಿಗಳು ಸದ್ಯ ಉಕ್ರೇನ್‌ನಲ್ಲಿ ಸಿಕ್ಕಿ ಹಾಕಿಕೊಂಡಿದ್ದಾರೆ ಎನ್ನಲಾಗಿದೆ.

- Advertisement -
- Advertisement -

ರಷ್ಯಾವು ಉಕ್ರೇನ್ ಮೇಲೆ ಯುದ್ಧ ಸಾರಿದೆ. ದಾಳಿ ಪ್ರತಿದಾಳಿಗಳು ನಡೆಯುತ್ತಿವೆ. ಈಗಾಗಲೇ ಯುದ್ಧದಲ್ಲಿ 137 ಜನ ತಮ್ಮ ಪ್ರಾಣ ಕಳೆದುಕೊಂಡಿದ್ದಾರೆ. ಇಂತಹ ಸಂದರ್ಭದಲ್ಲಿ ಉಕ್ರೇನ್‌ನಲ್ಲಿ ಸಿಕ್ಕಿ ಹಾಕಿಕೊಂಡಿರುವ ಭಾರತೀಯರು ಸೇರಿದಂತೆ ಹಲವು ವಿದೇಶಿಗರು ತಮ್ಮ ತಮ್ಮ ದೇಶಗಳಿಗೆ ಸುರಕ್ಷಿತವಾಗಿ ಮರಳಲು ಹಾತೊರೆಯುತ್ತಿದ್ದಾರೆ. ಇದನ್ನೆ ಬಂಡವಾಳ ಮಾಡಿಕೊಂಡಿರುವ ವಿಮಾನಯಾನ ಕಂಪನಿಗಳು ಬೇಕಾಬಿಟ್ಟಿ ಪ್ರಯಾಣ ದರ ಏರಿಕೆ ಮಾಡಿವೆ ಎಂಬ ಆರೋಪ ಕೇಳಿಬಂದಿದೆ.

ಯುದ್ಧದ ವಾತವಾರಣವಿದ್ದುದರಿಂದ ಕಳೆದ 10 ದಿನಗಳಿಂದ ವಿಮಾನ ಟಿಕೆಟ್ ಬೆಲೆ ಒಂದೇ ಸಮನೆ ಏರುತ್ತಿದೆ. ಒಂದು ಲಕ್ಷದಿಂದ 2 ಲಕ್ಷದವರೆಗೆ ಒಂದು ಟಿಕೆಟ್ ಬೆಲೆ ಏರಿಸಲಾಗಿದೆ. ಇದನ್ನು ತಡೆಯಲು ಯಾವ ಸರ್ಕಾರಗಳು ಕೂಡ ಕೆಲಸ ಮಾಡುತ್ತಿಲ್ಲ ಎಂದು ವಿದ್ಯಾರ್ಥಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ತೆಲಂಗಾಣದ ಮೆಹಬೂಬ್‌ನಗರದ ವಿದ್ಯಾರ್ಥಿನಿ ಯೋಗಿತಾ ಉಕ್ರೇನ್‌ನ ಜಾಪ್ರಜಿಯ ಮೆಡಿಕಲ್ ಕಾಲೇಜಿನಲ್ಲಿ ಓದುತ್ತಿದ್ದು, ದೇಶಕ್ಕೆ ಬರಲು ಸಾಧ್ಯವಾಗುತ್ತಿಲ್ಲ. ವಿಮಾನ ಟಿಕೆಟ್ ದರಗಳನ್ನು 1 ಲಕ್ಷ ರೂಗಳಿಗಿಂತ ಹೆಚ್ಚು ಮಾಡಿದ್ದಾರೆ. ಇಲ್ಲಿನ ಸ್ಥಿತಿ ಬಗ್ಗೆ ಏನು ಗೊತ್ತಿಲ್ಲ. ಭಾರತ ಸರ್ಕಾರ ನಾವು ಸುರಕ್ಷಿತವಾಗಿ ಮರಳಲು ಕ್ರಮ ಕೈಗೊಳ್ಳಬೇಕು ಎಂದು ಮನವಿ ಮಾಡಿದ್ದಾರೆ.

ಈ ಮೊದಲು ಉಕ್ರೇನ್‌ನಿಂದ ಭಾರತದ ಹಲವು ನಗರಗಳಿಗೆ 20,000 ದಿಂದ 30,000 ದವರೆಗೆ ವಿಮಾನ ಟಿಕೆಟ್‌ಗಳು ಲಭ್ಯವಿದ್ದವು. ಯುದ್ಧದ ವಾತವಾರಣ ಆರಂಭವಾದಂತೆ ಅದು 1 ಲಕ್ಷದಿಂದ 2 ಲಕ್ಷದವರೆಗೆ ಏರಿವೆ. ಇಷ್ಟು ಹಣವನ್ನು ಹೊಂದಿಸಲು ಸಾಧ್ಯವಿಲ್ಲ ಎಂದು ವಿದ್ಯಾರ್ಥಿಗಳು ಅಳಲು ತೋಡಿಕೊಂಡಿದ್ದಾರೆ.

ಉಕ್ರೇನ್‌ನ ಇವಾನೊ-ಫ್ರಾಂಕಿವ್ಸ್ಕ್ ನ್ಯಾಷನಲ್ ಮೆಡಿಕಲ್ ಯೂನಿವರ್ಸಿಟಿಯ ನಾಲ್ಕನೇ ವರ್ಷದ ವಿದ್ಯಾರ್ಥಿ ಸಯಾನ್ ಚೌಧರಿ ಈ ಕುರಿತು ಟ್ವೀಟ್ ಮಾಡಿದ್ದು, “ಉಕ್ರೇನ್ ರಾಷ್ಟ್ರೀಯ ತುರ್ತು ಪರಿಸ್ಥಿತಿಯನ್ನು ಹೇರುತ್ತಿದೆ. ಇಂತಹ ಕಷ್ಟಕರ ಸಂದರ್ಭದಲ್ಲಿ ಏರ್‌ಇಂಡಿಯಾ ಸೇರಿದಂತೆ ಎಲ್ಲಾ ಏರ್‌ಲೈನ್‌ಗಳು ದರ ಏರಿಸಿದ್ದು ಟಿಕೆಟ್‌ಗೆ ₹1-1.5 ಲಕ್ಷ ತೆರಬೇಕಾಗಿದೆ. ನಾವು ಮಧ್ಯಮ ಮತ್ತು ಕೆಳ ಮಧ್ಯಮ ವರ್ಗದ ಕುಟುಂಬದಿಂದ ಬಂದವರು. ನಮಗೆ ಸಹಾಯ ಬೇಕು, ದಯವಿಟ್ಟು ವಿಮಾನ ಟಿಕೆಟ್ ಕೈಗೆಟುಕುವಂತೆ ಮಾಡಿ” ಎಂದು ವಿದೇಶಾಂಗ ಸಚಿವಾಲಯದ ವಕ್ತಾರರು ಮತ್ತು ಪ್ರಧಾನಮಂತ್ರಿಗಳ ಕಚೇರಿಯನ್ನು ಟ್ಯಾಗ್ ಮಾಡಿದ್ದಾರೆ.

ಮುಂದುವರೆದು ಸಾಧ್ಯವಾದಷ್ಟು ಬೇಗ ನಮಗೆ ಸಹಾಯ ಮಾಡಿ, ವಿದ್ಯಾರ್ಥಿಗಳು ಭಯದಲ್ಲಿದ್ದಾರೆ. ನಮ್ಮ ಗೌರವಾನ್ವಿತ ಭಾರತದ ಪ್ರಧಾನ ಮಂತ್ರಿಯ ಮೇಲೆ ನಮಗೆ ಬಲವಾದ ನಂಬಿಕೆ ಇದೆ, ಅವರು ಭಾರತೀಯ ವಿದ್ಯಾರ್ಥಿಗಳ ಸಮಸ್ಯೆಯನ್ನು ಪರಿಹರಿಸುತ್ತಾರೆ ಎಂದು ನಂಬಿದ್ದೇವೆ. ವಿಮಾನ ಟಿಕೆಟ್‌ಗಳ ಬೆಲೆ ಕೈಗೆಟುಕುವ ರೀತಿಯಲ್ಲಿ ಸ್ಥಳಾಂತರಿಸುವ ಪ್ರಕ್ರಿಯೆಯನ್ನು ಮಾಡಿ ಎಂದು ಸಯಾನ್ ಚೌಧರಿ ಮನವಿ ಮಾಡಿದ್ದಾರೆ.

ಆದರೆ ಈ ವಿಷಯದ ಕುರಿತು ಭಾರತದ ಯಾವ ಜನಪ್ರತಿನಿಧಿಗಳು ಕ್ರಮ ಕೈಗೊಳ್ಳುತ್ತಿಲ್ಲ ಮತ್ತು ಮಾತನಾಡುತ್ತಿಲ್ಲ. ಇದು ಅಲ್ಲಿನ ವಿದ್ಯಾರ್ಥಿಗಳ ಆತಂಕವನ್ನು ಹೆಚ್ಚು ಮಾಡಿದೆ. ಇಂತಹ ಸಂಕಷ್ಟದ ಸಮಯದಲ್ಲಿ ಸರ್ಕಾರವೇ ಮುಂದೆ ನಿಂತು ಉಕ್ರೇನ್‌ನಲ್ಲಿರುವ ಭಾರತೀಯರನ್ನು ಸುರಕ್ಷಿತವಾಗಿ ವಾಪಸ್ ಕರೆತರಬೇಕಿದೆ.

ಉಕ್ರೇನ್‌ನಲ್ಲಿ ಕರ್ನಾಟಕ ರಾಜ್ಯದ 346 ಜನರು ಸಿಲುಕಿಕೊಂಡಿದ್ದಾರೆ ಎಂದು ಮಾಹಿತಿ ಲಭ್ಯವಾಗಿದೆ. ಕರ್ನಾಟಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಉಕ್ರೇನ್‌ನಿಂದ ಕರ್ನಾಟಕದ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಕರೆತರುವಂತೆ ಕೇಂದ್ರ ವಿದೇಶಾಂಗ ಸಚಿವ ಎಸ್ ಜೈಶಂಕರ್ ಅವರಿಗೆ ಮನವಿ ಮಾಡಿದ್ದಾರೆ.

ರಷ್ಯಾದೊಂದಿಗಿನ ಯುದ್ಧದಿಂದಾಗಿ ವಿಮಾನ ಸೇವೆಗಳಿಗೆ ಹೊಡೆತ ಬಿದ್ದಿರುವುದರಿಂದ ರಸ್ತೆ ಮಾರ್ಗದ ಮೂಲಕ ಅವರನ್ನು ಸುರಕ್ಷಿತವಾಗಿ ಮರಳಿ ತರುವ ಸಾಧ್ಯತೆಗಳನ್ನು ಅನ್ವೇಷಿಸಲಾಗುತ್ತಿದೆ. ಉಕ್ರೇನ್‌ನ ಪಶ್ಚಿಮ ಭಾಗದ ಕಡೆಗೆ ಸುರಕ್ಷಿತ ಚಲನೆಯ ಸಾಧ್ಯತೆಗಳ ಬಗ್ಗೆ ಮಾಹಿತಿ ಇದೆ ಮತ್ತು ಉಕ್ರೇನ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿಯು ಸಿಲುಕಿರುವ ಭಾರತೀಯ ವಿದ್ಯಾರ್ಥಿಗಳೊಂದಿಗೆ ಸಂಪರ್ಕದಲ್ಲಿದೆ ಎಂದು ಬೊಮ್ಮಾಯಿ ತಿಳಿಸಿದ್ದಾರೆ.


ಇದನ್ನೂ ಓದಿ; ಉಕ್ರೇನ್ ಮೇಲೆ ರಷ್ಯಾ ದಾಳಿ: 137 ಸಾವುಗಳಾಗಿವೆ ಎಂದು ಉಕ್ರೇನ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...