Homeಅಂತರಾಷ್ಟ್ರೀಯಉಕ್ರೇನ್ ಯುದ್ಧ ಸಂದರ್ಭದಲ್ಲಿ ವಿಮಾನ ಪ್ರಯಾಣ ದರ ಏರಿಸಿದ ಕಂಪನಿಗಳು: ತೀವ್ರ ಟೀಕೆ

ಉಕ್ರೇನ್ ಯುದ್ಧ ಸಂದರ್ಭದಲ್ಲಿ ವಿಮಾನ ಪ್ರಯಾಣ ದರ ಏರಿಸಿದ ಕಂಪನಿಗಳು: ತೀವ್ರ ಟೀಕೆ

ಭಾರತದ 15,000 ದಷ್ಟು ವಿದ್ಯಾರ್ಥಿಗಳು ಸದ್ಯ ಉಕ್ರೇನ್‌ನಲ್ಲಿ ಸಿಕ್ಕಿ ಹಾಕಿಕೊಂಡಿದ್ದಾರೆ ಎನ್ನಲಾಗಿದೆ.

- Advertisement -
- Advertisement -

ರಷ್ಯಾವು ಉಕ್ರೇನ್ ಮೇಲೆ ಯುದ್ಧ ಸಾರಿದೆ. ದಾಳಿ ಪ್ರತಿದಾಳಿಗಳು ನಡೆಯುತ್ತಿವೆ. ಈಗಾಗಲೇ ಯುದ್ಧದಲ್ಲಿ 137 ಜನ ತಮ್ಮ ಪ್ರಾಣ ಕಳೆದುಕೊಂಡಿದ್ದಾರೆ. ಇಂತಹ ಸಂದರ್ಭದಲ್ಲಿ ಉಕ್ರೇನ್‌ನಲ್ಲಿ ಸಿಕ್ಕಿ ಹಾಕಿಕೊಂಡಿರುವ ಭಾರತೀಯರು ಸೇರಿದಂತೆ ಹಲವು ವಿದೇಶಿಗರು ತಮ್ಮ ತಮ್ಮ ದೇಶಗಳಿಗೆ ಸುರಕ್ಷಿತವಾಗಿ ಮರಳಲು ಹಾತೊರೆಯುತ್ತಿದ್ದಾರೆ. ಇದನ್ನೆ ಬಂಡವಾಳ ಮಾಡಿಕೊಂಡಿರುವ ವಿಮಾನಯಾನ ಕಂಪನಿಗಳು ಬೇಕಾಬಿಟ್ಟಿ ಪ್ರಯಾಣ ದರ ಏರಿಕೆ ಮಾಡಿವೆ ಎಂಬ ಆರೋಪ ಕೇಳಿಬಂದಿದೆ.

ಯುದ್ಧದ ವಾತವಾರಣವಿದ್ದುದರಿಂದ ಕಳೆದ 10 ದಿನಗಳಿಂದ ವಿಮಾನ ಟಿಕೆಟ್ ಬೆಲೆ ಒಂದೇ ಸಮನೆ ಏರುತ್ತಿದೆ. ಒಂದು ಲಕ್ಷದಿಂದ 2 ಲಕ್ಷದವರೆಗೆ ಒಂದು ಟಿಕೆಟ್ ಬೆಲೆ ಏರಿಸಲಾಗಿದೆ. ಇದನ್ನು ತಡೆಯಲು ಯಾವ ಸರ್ಕಾರಗಳು ಕೂಡ ಕೆಲಸ ಮಾಡುತ್ತಿಲ್ಲ ಎಂದು ವಿದ್ಯಾರ್ಥಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ತೆಲಂಗಾಣದ ಮೆಹಬೂಬ್‌ನಗರದ ವಿದ್ಯಾರ್ಥಿನಿ ಯೋಗಿತಾ ಉಕ್ರೇನ್‌ನ ಜಾಪ್ರಜಿಯ ಮೆಡಿಕಲ್ ಕಾಲೇಜಿನಲ್ಲಿ ಓದುತ್ತಿದ್ದು, ದೇಶಕ್ಕೆ ಬರಲು ಸಾಧ್ಯವಾಗುತ್ತಿಲ್ಲ. ವಿಮಾನ ಟಿಕೆಟ್ ದರಗಳನ್ನು 1 ಲಕ್ಷ ರೂಗಳಿಗಿಂತ ಹೆಚ್ಚು ಮಾಡಿದ್ದಾರೆ. ಇಲ್ಲಿನ ಸ್ಥಿತಿ ಬಗ್ಗೆ ಏನು ಗೊತ್ತಿಲ್ಲ. ಭಾರತ ಸರ್ಕಾರ ನಾವು ಸುರಕ್ಷಿತವಾಗಿ ಮರಳಲು ಕ್ರಮ ಕೈಗೊಳ್ಳಬೇಕು ಎಂದು ಮನವಿ ಮಾಡಿದ್ದಾರೆ.

ಈ ಮೊದಲು ಉಕ್ರೇನ್‌ನಿಂದ ಭಾರತದ ಹಲವು ನಗರಗಳಿಗೆ 20,000 ದಿಂದ 30,000 ದವರೆಗೆ ವಿಮಾನ ಟಿಕೆಟ್‌ಗಳು ಲಭ್ಯವಿದ್ದವು. ಯುದ್ಧದ ವಾತವಾರಣ ಆರಂಭವಾದಂತೆ ಅದು 1 ಲಕ್ಷದಿಂದ 2 ಲಕ್ಷದವರೆಗೆ ಏರಿವೆ. ಇಷ್ಟು ಹಣವನ್ನು ಹೊಂದಿಸಲು ಸಾಧ್ಯವಿಲ್ಲ ಎಂದು ವಿದ್ಯಾರ್ಥಿಗಳು ಅಳಲು ತೋಡಿಕೊಂಡಿದ್ದಾರೆ.

ಉಕ್ರೇನ್‌ನ ಇವಾನೊ-ಫ್ರಾಂಕಿವ್ಸ್ಕ್ ನ್ಯಾಷನಲ್ ಮೆಡಿಕಲ್ ಯೂನಿವರ್ಸಿಟಿಯ ನಾಲ್ಕನೇ ವರ್ಷದ ವಿದ್ಯಾರ್ಥಿ ಸಯಾನ್ ಚೌಧರಿ ಈ ಕುರಿತು ಟ್ವೀಟ್ ಮಾಡಿದ್ದು, “ಉಕ್ರೇನ್ ರಾಷ್ಟ್ರೀಯ ತುರ್ತು ಪರಿಸ್ಥಿತಿಯನ್ನು ಹೇರುತ್ತಿದೆ. ಇಂತಹ ಕಷ್ಟಕರ ಸಂದರ್ಭದಲ್ಲಿ ಏರ್‌ಇಂಡಿಯಾ ಸೇರಿದಂತೆ ಎಲ್ಲಾ ಏರ್‌ಲೈನ್‌ಗಳು ದರ ಏರಿಸಿದ್ದು ಟಿಕೆಟ್‌ಗೆ ₹1-1.5 ಲಕ್ಷ ತೆರಬೇಕಾಗಿದೆ. ನಾವು ಮಧ್ಯಮ ಮತ್ತು ಕೆಳ ಮಧ್ಯಮ ವರ್ಗದ ಕುಟುಂಬದಿಂದ ಬಂದವರು. ನಮಗೆ ಸಹಾಯ ಬೇಕು, ದಯವಿಟ್ಟು ವಿಮಾನ ಟಿಕೆಟ್ ಕೈಗೆಟುಕುವಂತೆ ಮಾಡಿ” ಎಂದು ವಿದೇಶಾಂಗ ಸಚಿವಾಲಯದ ವಕ್ತಾರರು ಮತ್ತು ಪ್ರಧಾನಮಂತ್ರಿಗಳ ಕಚೇರಿಯನ್ನು ಟ್ಯಾಗ್ ಮಾಡಿದ್ದಾರೆ.

ಮುಂದುವರೆದು ಸಾಧ್ಯವಾದಷ್ಟು ಬೇಗ ನಮಗೆ ಸಹಾಯ ಮಾಡಿ, ವಿದ್ಯಾರ್ಥಿಗಳು ಭಯದಲ್ಲಿದ್ದಾರೆ. ನಮ್ಮ ಗೌರವಾನ್ವಿತ ಭಾರತದ ಪ್ರಧಾನ ಮಂತ್ರಿಯ ಮೇಲೆ ನಮಗೆ ಬಲವಾದ ನಂಬಿಕೆ ಇದೆ, ಅವರು ಭಾರತೀಯ ವಿದ್ಯಾರ್ಥಿಗಳ ಸಮಸ್ಯೆಯನ್ನು ಪರಿಹರಿಸುತ್ತಾರೆ ಎಂದು ನಂಬಿದ್ದೇವೆ. ವಿಮಾನ ಟಿಕೆಟ್‌ಗಳ ಬೆಲೆ ಕೈಗೆಟುಕುವ ರೀತಿಯಲ್ಲಿ ಸ್ಥಳಾಂತರಿಸುವ ಪ್ರಕ್ರಿಯೆಯನ್ನು ಮಾಡಿ ಎಂದು ಸಯಾನ್ ಚೌಧರಿ ಮನವಿ ಮಾಡಿದ್ದಾರೆ.

ಆದರೆ ಈ ವಿಷಯದ ಕುರಿತು ಭಾರತದ ಯಾವ ಜನಪ್ರತಿನಿಧಿಗಳು ಕ್ರಮ ಕೈಗೊಳ್ಳುತ್ತಿಲ್ಲ ಮತ್ತು ಮಾತನಾಡುತ್ತಿಲ್ಲ. ಇದು ಅಲ್ಲಿನ ವಿದ್ಯಾರ್ಥಿಗಳ ಆತಂಕವನ್ನು ಹೆಚ್ಚು ಮಾಡಿದೆ. ಇಂತಹ ಸಂಕಷ್ಟದ ಸಮಯದಲ್ಲಿ ಸರ್ಕಾರವೇ ಮುಂದೆ ನಿಂತು ಉಕ್ರೇನ್‌ನಲ್ಲಿರುವ ಭಾರತೀಯರನ್ನು ಸುರಕ್ಷಿತವಾಗಿ ವಾಪಸ್ ಕರೆತರಬೇಕಿದೆ.

ಉಕ್ರೇನ್‌ನಲ್ಲಿ ಕರ್ನಾಟಕ ರಾಜ್ಯದ 346 ಜನರು ಸಿಲುಕಿಕೊಂಡಿದ್ದಾರೆ ಎಂದು ಮಾಹಿತಿ ಲಭ್ಯವಾಗಿದೆ. ಕರ್ನಾಟಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಉಕ್ರೇನ್‌ನಿಂದ ಕರ್ನಾಟಕದ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಕರೆತರುವಂತೆ ಕೇಂದ್ರ ವಿದೇಶಾಂಗ ಸಚಿವ ಎಸ್ ಜೈಶಂಕರ್ ಅವರಿಗೆ ಮನವಿ ಮಾಡಿದ್ದಾರೆ.

ರಷ್ಯಾದೊಂದಿಗಿನ ಯುದ್ಧದಿಂದಾಗಿ ವಿಮಾನ ಸೇವೆಗಳಿಗೆ ಹೊಡೆತ ಬಿದ್ದಿರುವುದರಿಂದ ರಸ್ತೆ ಮಾರ್ಗದ ಮೂಲಕ ಅವರನ್ನು ಸುರಕ್ಷಿತವಾಗಿ ಮರಳಿ ತರುವ ಸಾಧ್ಯತೆಗಳನ್ನು ಅನ್ವೇಷಿಸಲಾಗುತ್ತಿದೆ. ಉಕ್ರೇನ್‌ನ ಪಶ್ಚಿಮ ಭಾಗದ ಕಡೆಗೆ ಸುರಕ್ಷಿತ ಚಲನೆಯ ಸಾಧ್ಯತೆಗಳ ಬಗ್ಗೆ ಮಾಹಿತಿ ಇದೆ ಮತ್ತು ಉಕ್ರೇನ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿಯು ಸಿಲುಕಿರುವ ಭಾರತೀಯ ವಿದ್ಯಾರ್ಥಿಗಳೊಂದಿಗೆ ಸಂಪರ್ಕದಲ್ಲಿದೆ ಎಂದು ಬೊಮ್ಮಾಯಿ ತಿಳಿಸಿದ್ದಾರೆ.


ಇದನ್ನೂ ಓದಿ; ಉಕ್ರೇನ್ ಮೇಲೆ ರಷ್ಯಾ ದಾಳಿ: 137 ಸಾವುಗಳಾಗಿವೆ ಎಂದು ಉಕ್ರೇನ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....