Homeಕರೋನಾ ತಲ್ಲಣ‘ಮಹಾರಾಷ್ಟ್ರಕ್ಕೆ ರೆಮ್‌ಡಿಸಿವಿರ್ ನೀಡಿದರೆ ಲೈಸನ್ಸ್‌ ರದ್ದು ಮಾಡುತ್ತೇವೆಂದು ಕಂಪನಿಗಳಿಗೆ ಕೇಂದ್ರ ಬೆದರಿಕೆ’: ಮಹಾಸಚಿವ

‘ಮಹಾರಾಷ್ಟ್ರಕ್ಕೆ ರೆಮ್‌ಡಿಸಿವಿರ್ ನೀಡಿದರೆ ಲೈಸನ್ಸ್‌ ರದ್ದು ಮಾಡುತ್ತೇವೆಂದು ಕಂಪನಿಗಳಿಗೆ ಕೇಂದ್ರ ಬೆದರಿಕೆ’: ಮಹಾಸಚಿವ

ರಾಜ್ಯದಲ್ಲಿ ಲಸಿಕೆ ಕೊರತೆಯಿದೆ ಎಂದು ರಾಜ್ಯವು ಕೇಂದ್ರದ ಬಳಿ ಹೇಳಿಕೊಂಡಿತ್ತು.

- Advertisement -
- Advertisement -

ಕೊರೊನಾ ಚಿಕಿತ್ಸೆಗೆ ಬಳಸುವ ರೆಮ್‌ಡಿಸಿವಿರ್‌ ಔಷಧಿಯನ್ನು ಮಹಾರಾಷ್ಟ್ರಕ್ಕೆ ನೀಡದಂತೆ ಕೇಂದ್ರ ಸರ್ಕಾರವು ಹಲವು ಕಂಪೆನಿಗಳಿಗೆ ತಾಕೀತು ಮಾಡಿದೆ ಎಂದು ಮಹಾರಷ್ಟ್ರ ಸಚಿವ ನವಾಬ್ ಮಲಿಕ್‌ ಶನಿವಾರ ಗಂಭೀರ ಆರೋಪ ಮಾಡಿದ್ದಾರೆ. ಒಂದು ವೇಳೆ ರೆಮ್‌ಡಿಸಿವಿರ್ ನೀಡಿದರೆ ಕಂಪೆನಿಯ ಲೈಸನ್ಸ್‌ ರದ್ದುಗೊಳಿಸುವುದಾಗಿ ಅವೆರಿಗೆ ಎಚ್ಚರಿಕೆ ನೀಡಲಾಗಿದೆ ಎಂದು ಅವರು ಹೇಳಿದ್ದಾರೆ.

ಕೊರೊನಾ ಪ್ರಾರಂಭವಾದಾಗಿನಿಂದ ಮಹಾರಾಷ್ಟ್ರದಲ್ಲೇ ಹೆಚ್ಚು ಸೋಂಕು ಪ್ರಕರಣಗಳು ದಾಖಲಾಗುತ್ತಿದೆ. ಅಲ್ಲದೆ ಸೋಂಕಿನ ಎರಡನೇ ಅಲೆ ಪ್ರಾರಂಭವಾದಗಿನಿಂದ ದೇಶದಲ್ಲಿ ವರದಿಯಾಗುತ್ತಿರುವ ಅರ್ಧದಷ್ಟು ಪ್ರಕರಣಗಳು ಮಹಾರಾಷ್ಟ್ರ ಒಂದರಲ್ಲೇ ವರದಿಯಾಗುತ್ತದೆ.

ಇದನ್ನೂ ಓದಿ: ಕೊರೊನಾ ನೆಗೆಟಿವ್ ವರದಿಯಿಲ್ಲದೆ ಬಂಗಾಳಕ್ಕೆ ಹೊರಗಿನವರು ಬರದಂತೆ ತಡೆಯಿರಿ- ಮಮತಾ ಬ್ಯಾನರ್ಜಿ

ಶನಿವಾರ ಟ್ವೀಟ್ ಮಾಡಿರುವ ಮಹಾರಾಷ್ಟ್ರ ಸಚಿವ ನವಾಬ್‌ ಮಲಿಕ್‌, “ಮಹಾರಾಷ್ಟ್ರ ಸರ್ಕಾರವು 16 ರಫ್ತು ಕಂಪನಿಗಳನ್ನು ರೆಮ್‌ಡಿಸಿವಿರ್‌ಗಾಗಿ ಕೇಳಿತ್ತು. ಆದರೆ ರಾಜ್ಯಕ್ಕೆ ಔಷಧಿಯನ್ನು ಸರಬರಾಜು ಮಾಡದಂತೆ ಕೇಂದ್ರ ಸರ್ಕಾರ ಕೇಳಿದೆ ಎಂದು ನಮಗೆ ಅವರು ತಿಳಿಸಿದ್ದಾರೆ. ಒಂದು ವೇಳೆ ಔಷದಿ ನೀಡಿದರೆ ಕಂಪೆನಿಗಳ ಲೈಸನ್ಸ್ ರದ್ದುಗೊಳ್ಳುತ್ತದೆ ಎಂದು ಎಚ್ಚರಿಕೆ ನೀಡಲಾಗಿದೆ” ಎಂದು ಅವರು ಆರೋಪಿಸಿದ್ದಾರೆ.

“ಇದು ಅಪಾಯಕಾರಿ ನಿದರ್ಶನವಾಗಿದ್ದು, ಈ ಸಂದರ್ಭಗಳಲ್ಲಿ ಮಹಾರಾಷ್ಟ್ರ ಸರ್ಕಾರವು ಈ ರಫ್ತುದಾರರಿಂದ ರೆಮ್‌ಡೆಸಿವಿರ್‌ನ ದಾಸ್ತಾನು ವಶಪಡಿಸಿಕೊಳ್ಳುವುದು ಮತ್ತು ಅಗತ್ಯವಿರುವವರಿಗೆ ಪೂರೈಸುವುದನ್ನು ಬಿಟ್ಟು ಬೇರೆ ದಾರಿಯಿಲ್ಲ” ಎಂದು ಅವರು ತಿಳಿಸಿದ್ದಾರೆ.

ಕೊರೊನಾ ಹೆಚ್ಚಾದ ಹಿನ್ನಲೆಯಲ್ಲಿ ರಾಜ್ಯದಲ್ಲಿ ಇತ್ತೀಚೆಗೆ ಲಾಕ್‌ಡೌನ್‌ ಕೂಡಾ ಘೋಷಿಸಲಾಗಿದೆ. ಜೊತೆಗೆ ರಾಜ್ಯದಲ್ಲಿ ಔಷಧಿ ಕೊರತೆಯಿದೆ ಎಂದು ಕೇಂದ್ರದ ಬಳಿ ಹೇಳಿಕೊಂಡಿತ್ತು.

ಇದನ್ನೂ ಓದಿ: ಕುಂಭಮೇಳ ಸಾಂಕೇತಿಕವಾಗಿಸಬೇಕು, ಇದು ಕೊರೊನಾ ವಿರುದ್ಧದ ಹೋರಾಟಕ್ಕೆ ಬಲ ತರುತ್ತದೆ: ಪ್ರಧಾನಿ ಮೋದಿ

ವಿಡಿಯೋ ನೋಡಿ: ನರೇಂದ್ರ ಮೋದಿ ಅವರ ಪತ್ರಿಕಾಗೋಷ್ಠಿಗೆ ಮುಂಚೆ ಏನು ಯೋಚಿಸುತ್ತಿದ್ದರು – ಕಾಲ್ಪನಿಕ ತುಣುಕು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...