Homeಮುಖಪುಟ‘ಮನಿ ಹೀಸ್ಟ್‌-5’ ವೀಕ್ಷಿಸಲು ರಜೆ ಘೋಷಿಸಿದ ಕಂಪೆನಿ!

‘ಮನಿ ಹೀಸ್ಟ್‌-5’ ವೀಕ್ಷಿಸಲು ರಜೆ ಘೋಷಿಸಿದ ಕಂಪೆನಿ!

- Advertisement -
- Advertisement -

ಒಟಿಟಿ ಫ್ಲಾಟ್‌ಫಾರ್ಮ್‌ ನೆಟ್‌ಫ್ಲಿಕ್ಸ್‌‌ನ ಜನಪ್ರಿಯ ವೆಬ್‌ಸರಣಿ ‘ಮನಿ ಹೀಸ್ಟ್‌’ನ 5ನೇ ಆವೃತ್ತಿ ಸೆಪ್ಟೆಂಬರ್‌‌ 3 ರಂದು ಬಿಡುಗಡೆಗೊಳ್ಳಲಿದೆ. ವಿಶ್ವದಾದ್ಯಂತ ಸಿನಿರಸಿಕರನ್ನು ಹುಚ್ಚೆಬ್ಬಿಸಿರುವ ಈ ವೆಬ್‌ ಸರಣಿಯ ಬಿಡುಗಡೆಯ ದಿನ, ಸಂಸ್ಥೆಯೊಂದು ರಜಾದಿನ ಎಂದು ಘೋಷಿಸಿದೆ. ರಜೆ ನೀಡುವುದಕ್ಕೆ ಅದು ನೀಡಿರುವ ಕಾರಣದಿಂದಾಗಿ ಅದರ ಆದೇಶದ ಪತ್ರ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಡಿಜಿಟಲ್ ಸೊಲ್ಯೂಷನ್ಸ್ ಪೂರೈಕೆದಾರರಾದ ವೆರ್ವೆಲಾಜಿಕ್‌ನ ಸಿಇಒ ಅಭಿಷೇಕ್ ಜೈನ್ ಅವರು ಈ ರಜೆಯ ಅಧಿಸೂಚನೆಯನ್ನು ಹೊರಡಿಸಿದ್ದಾರೆ. ಸಂಸ್ಥೆಯು ಅಧಿಸೂಚನೆಯನ್ನು , ‘‘ನೆಟ್‌ಫ್ಲಿಕ್ಸ್ ಮತ್ತು ಚಿಲ್ ಹಾಲಿಡೇ” ಎಂದು ಕರೆದಿದೆ.

ಇದನ್ನೂ ಓದಿ: ಭಾರತದ ವಿವಿಧ ಭಾಷೆಗಳ ಇತ್ತೀಚಿನ ಸಿನಿಮಾಗಳಲ್ಲಿ ದಲಿತ ಕಥನಗಳು: ಭಾಗ-2

ನೆಟ್‌ಫ್ಲಿಕ್ಸ್‌ನಲ್ಲಿ ಮನಿ ಹೀಸ್ಟ್‌ ಬಿಡುಗಡೆಯಾದ ದಿನ, ಸುಳ್ಳು ಹೇಳಿ ರಜೆ ಪಡೆಯುವ ಮೇಲ್‌ಗಳ ದಾಳಿಯಿಂದ ತಪ್ಪಿಸಲು, ಸಾಮೂಹಿಕ ಬಂಕ್‌ಗಳು ಮತ್ತು ಮೊಬೈಲ್ ಸ್ವಿಚ್‌ ಆಫ್‌ ಆಗುವುದನ್ನು ತಪ್ಪಿಸಲು ಕಂಪೆನಿ ಬಯಸಿದೆ ಎಂದು ತಮಾಷೆಯಾಗಿ ಹೇಳಲಾಗಿದೆ.

ಕಂಪೆನಿಯು, ತಮ್ಮ ಉದ್ಯೋಗಿಗಳು ಅಂದು ಪಾಪ್‌ಕಾರ್ನ್ ಬಟ್ಟಲನ್ನು ಹಿಡಿದು, ಅವರ ಪ್ರೀತಿಪಾತ್ರರ ಜೊತೆ ಒಟ್ಟಿಗೆ ಕೂತು ದಿನವನ್ನು ಕಳೆಯಲು ಪ್ರೋತ್ಸಾಹಿಸಿದೆ. “ಯಾಕೆಂದರೆ, ಕೆಲವು ಖುಷಿಯ ಕ್ಷಣಗಳು ತಮ್ಮ ಕೆಲಸವನ್ನು ನಿರ್ವಹಿಸಲು ಶಕ್ತಿ ನೀಡುವ ಅತ್ಯುತ್ತಮ ಮಾತ್ರೆಗಳಾಗಬಹುದು” ಎಂದು ಕಂಪೆನಿ ಹೇಳಿದೆ.

 

View this post on Instagram

 

A post shared by Verve Logic (@vervelogicin)

ಇಷ್ಟೇ ಅಲ್ಲದೆ ಸಾಂಕ್ರಾಮಿಕ ಸಮಯದಲ್ಲಿ ಮನೆಯಲ್ಲಿದ್ದೇ ತಮ್ಮ ಉದ್ಯೋಗಿಗಳು ಮಾಡಿದ ಕಠಿಣ ಪರಿಶ್ರಮದಿಂದಾಗಿ ಕಷ್ಟದ ಸಮಯದಲ್ಲಿ ಕಂಪೆನಿ ಸುಲಭವಾಗಿ ಮುನ್ನಡೆದಿದೆ ಎಂದು ಹೇಳಿರುವ ಕಂಪೆನಿ, ಇದಕ್ಕಾಗಿ ಉದ್ಯೋಗಿಗಳಿಗೆ ಧನ್ಯವಾದ ಅರ್ಪಿಸಿದೆ.

ಪ್ರಸ್ತುತ ಪತ್ರವು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಅನೇಕ ನೆಟ್ಟಿಗರು ಪ್ರಶಂಸೆಯ ಮಾತುಗಳನ್ನು ಹೇಳಿದ್ದಾರೆ. ಹೆಚ್ಚಿನ ಜನರು ತಾವು ಕೂಡಾ ಅಂತಹ ಸಂಸ್ಥೆಗಳ ಭಾಗವಾಗಲು ಬಯಸುತ್ತೇವೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ನಟ ಡಾಲಿ ಧನಂಜಯಗೆ ಜನ್ಮದಿನದ ಸಂಭ್ರಮ: ಸಾಲು ಸಾಲು ಚಿತ್ರಗಳು ಘೋಷಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....