HomeUncategorizedಬಿಜೆಪಿಯ ‘ಸಶಕ್ತ ಭಾರತ’ ಕೈಪಿಡಿ ಹೊರತು ಪ್ರಣಾಳಿಕೆಯಲ್ಲ

ಬಿಜೆಪಿಯ ‘ಸಶಕ್ತ ಭಾರತ’ ಕೈಪಿಡಿ ಹೊರತು ಪ್ರಣಾಳಿಕೆಯಲ್ಲ

- Advertisement -
- Advertisement -

| ಚೈತ್ರಿಕಾ ನಾಯ್ಕ ಹರ್ಗಿ |

ಯಾವಾಗಲೂ ಆಡಳಿತ ಪಕ್ಷದ ಪ್ರಣಾಳಿಕೆ ಹೇಗಿರಬೇಕೆಂದರೆ, ಈಗಾಗಲೇ ಐದು ವರ್ಷ ಮಾಡಿದ ಕೆಲಸವನ್ನು ಪರಿಚಯಿಸಿ, ಇಷ್ಟನ್ನು ಪೂರೈಸಿದ್ದೇವೆ, ಇಷ್ಟು ಬಾಕಿ ಉಳಿದಿದೆ, ಇದು ಮುಂದಿನ ಅವಧಿಗೆ ನಮ್ಮ ಯೋಜನೆಗಳು ಎಂಬುದಾಗಿ ಪ್ರಸ್ತುತ ಮತ್ತು ಭವಿಷ್ಯತ್ತಿನ ಯೋಜನೆಯ ಮುನ್ನೋಟವನ್ನು ಜನರ ಮುಂದಿಟ್ಟು ಓಟು ಕೇಳಬೇಕು. ಹಾಗೆಯೇ ಪ್ರಣಾಳಿಕೆಯಲ್ಲಿ ಮುಂದಿನ ಯೋಜನೆಯ ಹಂಚಿಕೆ ಕುರಿತು ನಿರ್ದಿಷ್ಟ ಅಂಕಿ-ಅಂಶಗಳನ್ನು ನಮೂದಿಸಬೇಕಾಗುತ್ತದೆ. ಆದರೆ ಬಿಜೆಪಿ ಪ್ರಣಾಳಿಕೆಯಲ್ಲಿ ಎಲ್ಲವನ್ನೂ ಯಾದೃಚ್ಛಿಕವಾಗಿ ಹೇಳಲಾಗಿದೆ ಹೊರತು ಯಾವುದೂ ನಿಶ್ವಿತವಾಗಿ ಹೇಳಲಾಗಿಲ್ಲ.

ಬಿಜೆಪಿ ಸಂಕಲ್ಪ ಪತ್ರದಲ್ಲಿ ಪ್ರಸ್ತುತ ಪಡಿಸಿದ ಮುಖ್ಯಾಂಶಗಳನ್ನು ಕಾಂಗ್ರೆಸ್ ಪಕ್ಷದ ಪ್ರಣಾಳಿಕೆಯೊಂದಿಗೆ ಹೋಲಿಸಿ ನೋಡುವುದಾದರೆ,
ಸೈನ್ಯ
ಭಯೋತ್ಪಾದನೆ ಮೇಲೆ ಶೂನ್ಯ ಸಹಿಷ್ಣುತೆ ಎಂಬುದು ಯಾವತ್ತೂ ಭಾರತ ಪಾಲಿಸಿಕೊಂಡ ಬಂದ ನಡೆಯಾದರೂ, ಬಿಜೆಪಿ ಓಟು ಸೆಳೆಯಲು ಕಿರುಚಿ ಹೇಳಬೇಕಾದುದ್ದು ಅವರ ಅಗತ್ಯ. ಆದರೆ ವಾಸ್ತವ ಏನೆಂದರೆ 2014-18 ರ ಬಜೆಟ್ ನಲ್ಲಿ ಮಿಲಿಟರಿ ಬಜೆಟನ್ನು ಬಿಜೆಪಿ ಕಡಿತಗೊಳಿಸಿತ್ತು. ಹಿಂದಿನ ಯುಪಿಎ ಸರ್ಕಾರ ಜಿಡಿಪಿಯ 26% ವನ್ನು ಮಿಲಿಟರಿ ಆಧುನೀಕರಣಕ್ಕೆ ನೀಡಿದ್ದರೆ, ಬಿಜೆಪಿಯು ಶೇ. 18% ಕ್ಕೆ ಇದನ್ನು ಕಡಿತಗೊಳಿಸಿತ್ತು. ಭಯೋತ್ಪಾದನೆ ವಿರುದ್ಧ ವಾಸ್ತವದಲ್ಲಿ ಹೋರಾಡುವ ಸೈನಿಕರ ಸಂಬಳ ಮತ್ತು ಸುರಕ್ಷತೆಯ ವೆಚ್ಚವನ್ನು ಕಡಿತಗೊಳಿಸಿ ಭಯೋತ್ಪಾದನೆ ವಿರುದ್ಧ ಮಾತನಾಡುವುದು ಓಟು ಗಿಟ್ಟಿಸುವ ತಂತ್ರವಷ್ಟೆ. ಬಿಜೆಪಿ ಸಂಕಲ್ಪ ಪತ್ರದಲ್ಲೂ ಸೈನಿಕರ ವೇತನ, ಆಧುನಿಕ ಯುದ್ಧಾಸ್ತ್ರ, ಸೈನಿಕರ ಸ್ಥಾನಮಾನದ ಬಗ್ಗೆ ಯಾವುದೇ ನಿರ್ದಿಷ್ಟತೆ ಇಲ್ಲ. ಆದರೆ ಕಾಂಗ್ರೆಸ್ ತನ್ನ ಪ್ರಣಾಳಿಕೆಯಲ್ಲಿ ಇದರ ಬಗ್ಗೆ ನಿರ್ದಿಷ್ಟವಾಗಿ ನಮೂದಿಸಿದೆ. BSF CRPF ಈ ಸಿಬ್ಬಂದಿಗಳು ಹುತಾತ್ಮರಾದಾಗ ಅವರಿಗೆ ಶಹೀದ್ ಗೌರವ ನೀಡುವುದು, ಸಂಬಳ ಹೆಚ್ಚಿಸುವುದು, ಆಧುನಿಕ ಯುದ್ಧಾಸ್ತ್ರ ನೀಡುವುದು ಇತ್ಯಾದಿ.

ಉದ್ಯೋಗ ಸೃಷ್ಟಿ
ಹಿಂದಿನ ಬಾರಿ ಪ್ರಣಾಳಿಕೆಯಲ್ಲಿ ವರ್ಷಕ್ಕೆ 2 ಕೋಟಿ ಉದ್ಯೋಗ ಸೃಷ್ಟಿಸುವುದಾಗಿ ಹೇಳಿದ್ದ ಬಿಜೆಪಿ ಈಬಾರಿ ಉದ್ಯೋಗ ಸೃಷ್ಟಿಸುತ್ತೇವೆ ಎಂದಷ್ಟೆ ಹೇಳಿದೆ ಹೊರತು ಯಾವುದೇ ನಿರ್ದಿಷ್ಟ ಅಂಕಿಯನ್ನು ನಮೂದಿಸಿಲ್ಲ. ಇದು ಮುಂದೆ ಎದುರಾಗುವ ಪ್ರಶ್ನೆಯಿಂದ ನುಣುಚಿಕೊಳ್ಳುವ ತಂತ್ರ. ಡಿಮೊನಿಟೈಸೇಷನ್ ನಂತಹ ನಿರ್ಧಾರದಿಂದ 2018ರಲ್ಲಿ 11 ಮಿಲಿಯನ್ ಉದ್ಯೋಗ ನಾಶಕ್ಕೆ ಬಿಜೆಪಿ ಕಾರಣವಾಗಿತ್ತು. 45 ವರ್ಷಗಳ ಬಳಿಕ ನಿರುದ್ಯೋಗ ಪ್ರಮಾಣ ದರ ಅತ್ಯಂತ ಹೆಚ್ಚಾಗಿದ್ದು ಬಿಜೆಪಿ ಅಧಿಕಾರದಲ್ಲಿ. ಇಂತಹ ಜ್ವಲಂತ ಸಮಸ್ಯೆಗೆ ಪರಿಹಾರದ ಬಗ್ಗೆ ಸಂಕಲ್ಪ ಪತ್ರದಲ್ಲಿ ಯಾವುದೇ ನಿರ್ದಿಷ್ಟತೆ ಇಲ್ಲ. ಇನ್ನು ಯುಪಿಎ ಪ್ರಣಾಳಿಕೆ ನೋಡಿದರೆ ಸಾರ್ವಜನಿಕ ವಲಯದಲ್ಲಿ 24 ಲಕ್ಷ ಉದ್ಯೋಗ ಭರ್ತಿ ಮತ್ತು ಇದರ ಹೊರತಾಗಿ ಇತರೆ 10 ಲಕ್ಷ ಉದ್ಯೋಗ ಸೃಷ್ಟಿ ಎಂಬುದಾಗಿ ಹೇಳಿದೆ.

ಕೃಷಿ
25 ಲಕ್ಷ ಕೋಟಿ ಬಂಡವಾಳವನ್ನು ಕೃಷಿ ಕ್ಷೇತ್ರದಲ್ಲಿ ವಿನಿಯೋಗಿಸುತ್ತೇವೆ ಎಂದು ಬಿಜೆಪಿಯ ಸಂಕಲ್ಪ ಪತ್ರದಲ್ಲಿ ನಮೂದಿಲಸಲಾಗಿದೆ. ಬಿಜೆಪಿಯ 2014-2018 ಬಜೆಟ್ ನೋಡಿದರೆ ಕೃಷಿಗೆ 1.7 ಲಕ್ಷ ಕೋಟಿ ನೀಡಲಾಗಿತ್ತು. ಹೌದು ಕೃಷಿಕರು ಸಮಸ್ಯೆಯಲ್ಲಿದ್ದಾರೆ ಅವರ ಅಗತ್ಯತೆ ಪೂರೈಸಬೇಕು. ಆದರೆ ಇಷ್ಟು ಹಣ ಎಲ್ಲಿಂದ ಬರಬೇಕು ? ಹಾಗೆಯೇ ಯಾವುದೇ ಹೊಸ ಯೋಜನೆಯನ್ನು ಕೃಷಿಕರಿಗಾಗಿ ನೀಡಲಾಗಿಲ್ಲ. 2022 ರೈತರ ಆದಾಯ ದ್ವಿಗುಣಗೊಳಿಸುವುದು ಎಂಬುದು ಹಿಂದಿನ ಭರವಸೆಯಾಗಿದ್ದು ಈಗಲೂ ಅದನ್ನೇ ಹೇಳಲಾಗಿದೆ. ಇನ್ನೊಂದೆಡೆ ಕಾಂಗ್ರೆಸ್ ರೈತರಿಗಾಗಿ ಪ್ರತ್ಯೇಕ ಬಜೆಟನ್ನು ನೀಡುತ್ತೇವೆ ಎಂದು ಹೇಳಿದೆ. ಬೆಳೆಗೆ ಉತ್ತಮ ಬೆಲೆ ನೀಡುವುದಾಗಿ ಹೇಳಿದೆ.

ಸ್ವಾತಂತ್ರ್ಯ ಹೋರಾಟಗಾರರ ಹೆಸರಲ್ಲಿ ಹೊಸ ವರಸೆ
2047ಕ್ಕೆ ದೇಶಕ್ಕೆ ಸ್ವಾತಂತ್ರ್ಯ ಬಂದು 100 ವರ್ಷವಾಗುತ್ತದೆ. ಸ್ವಾತಂತ್ರ್ಯ ಹೋರಾಟಗಾರರ ಕನಸಿನಂತೆ 2047 ರಲ್ಲಿ ದೇಶ ಅಭಿವೃದ್ಧಿ ಹೊಂದಿದ ರಾಷ್ಟ್ರವಾಗಬೇಕು. ಅದಕ್ಕೆ ಭದ್ರ ಬುನಾದಿ ನಾವು ಹಾಕುತ್ತೇವೆ ಎಂದು ಮೋದಿ ಹೇಳಿದ್ದಾರೆ. ಇಲ್ಲಿ ಗುರಿ ಸಾಧನೆ ಕಾಲ ಮಿತಿ 5 ವರ್ಷಕ್ಕಿಂತ ಜಾಸ್ತಿ (ಸುಮಾರು 28 ವರ್ಷ) ಮುಂದೂಡಿ ಭಾವನಾತ್ಮಕವಾಗಿ ಮತದಾರರ ಹಾದಿ ತಪ್ಪಿಸಲಾಗುತ್ತಿದೆ.

ಜಿಲ್ಲೆಗೊಂದು ಮೆಡಿಕಲ್ ಕಾಲೇಜು ನಿರ್ಮಾಣ
ದೇಶದ ಎಲ್ಲಾ ಜಿಲ್ಲೆಗಳಲ್ಲೂ ವೈದ್ಯಕೀಯ ಕಾಲೇಜುಗಳನ್ನು ತೆರೆಯುತ್ತೇವೆ ಎಂಬುದಾಗಿ ಬಿಜೆಪಿ ಸಂಕಲ್ಪ ಪತ್ರದಲ್ಲಿ ಹೇಳಲಾಗಿದೆ. 2016 ರಲ್ಲಿ ದೇಶದಲ್ಲಿ 707 ಜಿಲ್ಲೆಗಳಿವೆ. 2017 ರಂತೆ ದೇಶದಲ್ಲಿ 460 ಮೆಡಿಕಲ್ ಕಾಲೇಜುಗಳಿದ್ದು 63,985 ವಿದ್ಯಾರ್ಥಿಗಳಿದ್ದರು. ವರ್ಷಕ್ಕೆ ಅಂದಾಜು 10,000 ಜಾಬ್ ಕೂಡ ವೈದ್ಯಕೀಯ ವಲಯದಲ್ಲಿ ಸೃಷ್ಟಿ ಮಾಡಲು ಸಾಧ್ಯವಿಲ್ಲ. ಅಂದ ಮೇಲೆ 2024 ರ ಹೊತ್ತಿಗೆ ವೈದ್ಯಕೀಯ ಕಾಲೇಜುಗಳನ್ನು ಹೆಚ್ಚಿಸುವ ಅಗತ್ಯ ಇದೆಯೆ ಎಂಬ ಪ್ರಶ್ನೆ ಮೂಡುತ್ತದೆ. ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಬಾಕಿ ಉಳಿದ ಶಿಕ್ಷಣ ಸಾಲದ ಬಡ್ಡಿಯನ್ನು ಮನ್ನಾ ಮಾಡುವುದು ಮತ್ತು ವಿದ್ಯಾರ್ಥಿ ಹಕ್ಕಿನ ಕಾಯಿದೆ, ಅರ್ಹ ವಿದ್ಯಾರ್ಥಿಗೆ ವಿದ್ಯಾರ್ಥಿ ವೇತನ ಒದಗಿಸುವುದಾಗಿ ತಿಳಿಸಿದೆ. ಇದಕ್ಕಿಂತ ಮುಖ್ಯವಾಗಿ, ವಿದ್ಯಾರ್ಥಿಗೆ ಉದ್ಯೋಗ ಸಿಗುವವರೆಗೆ ಶಿಕ್ಷಣ ಸಾಲದ ಮೇಲೆ ಬಡ್ಡಿ ವಿಧಿಸಲಾಗುವುದಿಲ್ಲ ಎಂಬುದು ಪ್ರಮುಖ ಅಂಶ.

ಸಂಕಲ್ಪ ಪತ್ರದಲ್ಲಿ ದೇಶದ ಆರ್ಥಿಕತೆಯನ್ನು 2032 ರ ಹೊತ್ತಿಗೆ ರೂ. 700 ಲಕ್ಷ ಕೋಟಿಗೆ ಏರಿಸುವುದರ ಬಗ್ಗೆ ಹೇಳಲಾಗಿದೆ. ಆದರೆ ಅದಕ್ಕೆ ಯಾವುದೇ ಕಾರ್ಯನೀತಿಯನ್ನು ತಿಳಿಸಿಲ್ಲ.
ಮುಖ್ಯವಾಗಿ ಉದ್ಯೋಗ ಸೃಷ್ಟಿ, ಜನಸಂಖ್ಯೆ ನಿಯಂತ್ರಣ, ಬಡತನ ನಿರ್ಮೂಲನೆ, ಮಾಬ್ ಲಿಂಚಿಂಗ್ ತಡೆ, ಪರಿಸರ, ಜಾಗತಿಕ ತಾಪಮಾನದ ನಿಯಂತ್ರಣಕ್ಕೆ ಯಾವುದೇ ಯೋಜನೆ ಮತ್ತು ಮುನ್ನೋಟವನ್ನು ಬಿಜೆಪಿ ಜನರ ಮುಂದಿಟ್ಟಿಲ್ಲ.

ಬದಲಾಗಿ, ಎಡಪಂಥೀಯ ವಿಚಾರ ಹತ್ತಿಕ್ಕುವುದು, 371 ವಿಧಿ ತೆಗೆದು ಹಾಕುವುದು, ರಾಮ ಮಂದಿರ ನಿರ್ಮಾಣ, ಶಬರಿ ಮಲೆ ಅಯ್ಯಪ್ಪ ದೇವಾಲಯ, ಸ್ವಾತಂತ್ರ್ಯ ಹೋರಾಟಗಾರರ ಹೆಸರು ಎತ್ತುತ್ತಿರುವುದು ಬಿಜೆಪಿ ಮತದಾರರನ್ನು ಸೆಳೆಯುವ, ಮತದಾರರನ್ನು ಬೇರ್ಪಡಿಸಿ ಮತ್ತೆ ಅಧಿಕಾರಕ್ಕೆ ಬರುವ ತಂತ್ರವೇ ಹೊರತು, ಹಿಂದಿನ ಸಬ್ಕಾ ಸಾಥ್ ಸಬ್ಕಾ ವಿಕಾಸ್ ಎಂಬ ಹುಸಿ ಘೋಷಣೆ ಈಗ ಸಂಪೂರ್ಣ ಮಾಯವಾಗಿದೆ.
ಕೊನೆಯ ಬಾರಿ ಹೇಳಿದ ಭರವಸೆಯನ್ನೆ ಈಗಲೂ ಹೇಳುತ್ತಿದ್ದಾರೆ. ಉದಾ- ಮಹಿಳಾ ಮೀಸಲಾತಿ. ಈ ಬಾರಿ ಬಿಜೆಪಿಗೆ ಬಹುಮತ ಇದ್ದಾಗ್ಯೂ ಮಹಿಳಾ ಮೀಸಲಾತಿ ಬಿಲ್ ಪಾಸ್ ಮಾಡಿಲ್ಲ. ಮತ್ತೆ ಅದೇ ಹಳಸನ್ನು ಹೊಸ ಪಾತ್ರೆಯಲ್ಲಿ ಹೊತ್ತು ಬಂದಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...