HomeUncategorizedಬಿಜೆಪಿಯ ‘ಸಶಕ್ತ ಭಾರತ’ ಕೈಪಿಡಿ ಹೊರತು ಪ್ರಣಾಳಿಕೆಯಲ್ಲ

ಬಿಜೆಪಿಯ ‘ಸಶಕ್ತ ಭಾರತ’ ಕೈಪಿಡಿ ಹೊರತು ಪ್ರಣಾಳಿಕೆಯಲ್ಲ

- Advertisement -
- Advertisement -

| ಚೈತ್ರಿಕಾ ನಾಯ್ಕ ಹರ್ಗಿ |

ಯಾವಾಗಲೂ ಆಡಳಿತ ಪಕ್ಷದ ಪ್ರಣಾಳಿಕೆ ಹೇಗಿರಬೇಕೆಂದರೆ, ಈಗಾಗಲೇ ಐದು ವರ್ಷ ಮಾಡಿದ ಕೆಲಸವನ್ನು ಪರಿಚಯಿಸಿ, ಇಷ್ಟನ್ನು ಪೂರೈಸಿದ್ದೇವೆ, ಇಷ್ಟು ಬಾಕಿ ಉಳಿದಿದೆ, ಇದು ಮುಂದಿನ ಅವಧಿಗೆ ನಮ್ಮ ಯೋಜನೆಗಳು ಎಂಬುದಾಗಿ ಪ್ರಸ್ತುತ ಮತ್ತು ಭವಿಷ್ಯತ್ತಿನ ಯೋಜನೆಯ ಮುನ್ನೋಟವನ್ನು ಜನರ ಮುಂದಿಟ್ಟು ಓಟು ಕೇಳಬೇಕು. ಹಾಗೆಯೇ ಪ್ರಣಾಳಿಕೆಯಲ್ಲಿ ಮುಂದಿನ ಯೋಜನೆಯ ಹಂಚಿಕೆ ಕುರಿತು ನಿರ್ದಿಷ್ಟ ಅಂಕಿ-ಅಂಶಗಳನ್ನು ನಮೂದಿಸಬೇಕಾಗುತ್ತದೆ. ಆದರೆ ಬಿಜೆಪಿ ಪ್ರಣಾಳಿಕೆಯಲ್ಲಿ ಎಲ್ಲವನ್ನೂ ಯಾದೃಚ್ಛಿಕವಾಗಿ ಹೇಳಲಾಗಿದೆ ಹೊರತು ಯಾವುದೂ ನಿಶ್ವಿತವಾಗಿ ಹೇಳಲಾಗಿಲ್ಲ.

ಬಿಜೆಪಿ ಸಂಕಲ್ಪ ಪತ್ರದಲ್ಲಿ ಪ್ರಸ್ತುತ ಪಡಿಸಿದ ಮುಖ್ಯಾಂಶಗಳನ್ನು ಕಾಂಗ್ರೆಸ್ ಪಕ್ಷದ ಪ್ರಣಾಳಿಕೆಯೊಂದಿಗೆ ಹೋಲಿಸಿ ನೋಡುವುದಾದರೆ,
ಸೈನ್ಯ
ಭಯೋತ್ಪಾದನೆ ಮೇಲೆ ಶೂನ್ಯ ಸಹಿಷ್ಣುತೆ ಎಂಬುದು ಯಾವತ್ತೂ ಭಾರತ ಪಾಲಿಸಿಕೊಂಡ ಬಂದ ನಡೆಯಾದರೂ, ಬಿಜೆಪಿ ಓಟು ಸೆಳೆಯಲು ಕಿರುಚಿ ಹೇಳಬೇಕಾದುದ್ದು ಅವರ ಅಗತ್ಯ. ಆದರೆ ವಾಸ್ತವ ಏನೆಂದರೆ 2014-18 ರ ಬಜೆಟ್ ನಲ್ಲಿ ಮಿಲಿಟರಿ ಬಜೆಟನ್ನು ಬಿಜೆಪಿ ಕಡಿತಗೊಳಿಸಿತ್ತು. ಹಿಂದಿನ ಯುಪಿಎ ಸರ್ಕಾರ ಜಿಡಿಪಿಯ 26% ವನ್ನು ಮಿಲಿಟರಿ ಆಧುನೀಕರಣಕ್ಕೆ ನೀಡಿದ್ದರೆ, ಬಿಜೆಪಿಯು ಶೇ. 18% ಕ್ಕೆ ಇದನ್ನು ಕಡಿತಗೊಳಿಸಿತ್ತು. ಭಯೋತ್ಪಾದನೆ ವಿರುದ್ಧ ವಾಸ್ತವದಲ್ಲಿ ಹೋರಾಡುವ ಸೈನಿಕರ ಸಂಬಳ ಮತ್ತು ಸುರಕ್ಷತೆಯ ವೆಚ್ಚವನ್ನು ಕಡಿತಗೊಳಿಸಿ ಭಯೋತ್ಪಾದನೆ ವಿರುದ್ಧ ಮಾತನಾಡುವುದು ಓಟು ಗಿಟ್ಟಿಸುವ ತಂತ್ರವಷ್ಟೆ. ಬಿಜೆಪಿ ಸಂಕಲ್ಪ ಪತ್ರದಲ್ಲೂ ಸೈನಿಕರ ವೇತನ, ಆಧುನಿಕ ಯುದ್ಧಾಸ್ತ್ರ, ಸೈನಿಕರ ಸ್ಥಾನಮಾನದ ಬಗ್ಗೆ ಯಾವುದೇ ನಿರ್ದಿಷ್ಟತೆ ಇಲ್ಲ. ಆದರೆ ಕಾಂಗ್ರೆಸ್ ತನ್ನ ಪ್ರಣಾಳಿಕೆಯಲ್ಲಿ ಇದರ ಬಗ್ಗೆ ನಿರ್ದಿಷ್ಟವಾಗಿ ನಮೂದಿಸಿದೆ. BSF CRPF ಈ ಸಿಬ್ಬಂದಿಗಳು ಹುತಾತ್ಮರಾದಾಗ ಅವರಿಗೆ ಶಹೀದ್ ಗೌರವ ನೀಡುವುದು, ಸಂಬಳ ಹೆಚ್ಚಿಸುವುದು, ಆಧುನಿಕ ಯುದ್ಧಾಸ್ತ್ರ ನೀಡುವುದು ಇತ್ಯಾದಿ.

ಉದ್ಯೋಗ ಸೃಷ್ಟಿ
ಹಿಂದಿನ ಬಾರಿ ಪ್ರಣಾಳಿಕೆಯಲ್ಲಿ ವರ್ಷಕ್ಕೆ 2 ಕೋಟಿ ಉದ್ಯೋಗ ಸೃಷ್ಟಿಸುವುದಾಗಿ ಹೇಳಿದ್ದ ಬಿಜೆಪಿ ಈಬಾರಿ ಉದ್ಯೋಗ ಸೃಷ್ಟಿಸುತ್ತೇವೆ ಎಂದಷ್ಟೆ ಹೇಳಿದೆ ಹೊರತು ಯಾವುದೇ ನಿರ್ದಿಷ್ಟ ಅಂಕಿಯನ್ನು ನಮೂದಿಸಿಲ್ಲ. ಇದು ಮುಂದೆ ಎದುರಾಗುವ ಪ್ರಶ್ನೆಯಿಂದ ನುಣುಚಿಕೊಳ್ಳುವ ತಂತ್ರ. ಡಿಮೊನಿಟೈಸೇಷನ್ ನಂತಹ ನಿರ್ಧಾರದಿಂದ 2018ರಲ್ಲಿ 11 ಮಿಲಿಯನ್ ಉದ್ಯೋಗ ನಾಶಕ್ಕೆ ಬಿಜೆಪಿ ಕಾರಣವಾಗಿತ್ತು. 45 ವರ್ಷಗಳ ಬಳಿಕ ನಿರುದ್ಯೋಗ ಪ್ರಮಾಣ ದರ ಅತ್ಯಂತ ಹೆಚ್ಚಾಗಿದ್ದು ಬಿಜೆಪಿ ಅಧಿಕಾರದಲ್ಲಿ. ಇಂತಹ ಜ್ವಲಂತ ಸಮಸ್ಯೆಗೆ ಪರಿಹಾರದ ಬಗ್ಗೆ ಸಂಕಲ್ಪ ಪತ್ರದಲ್ಲಿ ಯಾವುದೇ ನಿರ್ದಿಷ್ಟತೆ ಇಲ್ಲ. ಇನ್ನು ಯುಪಿಎ ಪ್ರಣಾಳಿಕೆ ನೋಡಿದರೆ ಸಾರ್ವಜನಿಕ ವಲಯದಲ್ಲಿ 24 ಲಕ್ಷ ಉದ್ಯೋಗ ಭರ್ತಿ ಮತ್ತು ಇದರ ಹೊರತಾಗಿ ಇತರೆ 10 ಲಕ್ಷ ಉದ್ಯೋಗ ಸೃಷ್ಟಿ ಎಂಬುದಾಗಿ ಹೇಳಿದೆ.

ಕೃಷಿ
25 ಲಕ್ಷ ಕೋಟಿ ಬಂಡವಾಳವನ್ನು ಕೃಷಿ ಕ್ಷೇತ್ರದಲ್ಲಿ ವಿನಿಯೋಗಿಸುತ್ತೇವೆ ಎಂದು ಬಿಜೆಪಿಯ ಸಂಕಲ್ಪ ಪತ್ರದಲ್ಲಿ ನಮೂದಿಲಸಲಾಗಿದೆ. ಬಿಜೆಪಿಯ 2014-2018 ಬಜೆಟ್ ನೋಡಿದರೆ ಕೃಷಿಗೆ 1.7 ಲಕ್ಷ ಕೋಟಿ ನೀಡಲಾಗಿತ್ತು. ಹೌದು ಕೃಷಿಕರು ಸಮಸ್ಯೆಯಲ್ಲಿದ್ದಾರೆ ಅವರ ಅಗತ್ಯತೆ ಪೂರೈಸಬೇಕು. ಆದರೆ ಇಷ್ಟು ಹಣ ಎಲ್ಲಿಂದ ಬರಬೇಕು ? ಹಾಗೆಯೇ ಯಾವುದೇ ಹೊಸ ಯೋಜನೆಯನ್ನು ಕೃಷಿಕರಿಗಾಗಿ ನೀಡಲಾಗಿಲ್ಲ. 2022 ರೈತರ ಆದಾಯ ದ್ವಿಗುಣಗೊಳಿಸುವುದು ಎಂಬುದು ಹಿಂದಿನ ಭರವಸೆಯಾಗಿದ್ದು ಈಗಲೂ ಅದನ್ನೇ ಹೇಳಲಾಗಿದೆ. ಇನ್ನೊಂದೆಡೆ ಕಾಂಗ್ರೆಸ್ ರೈತರಿಗಾಗಿ ಪ್ರತ್ಯೇಕ ಬಜೆಟನ್ನು ನೀಡುತ್ತೇವೆ ಎಂದು ಹೇಳಿದೆ. ಬೆಳೆಗೆ ಉತ್ತಮ ಬೆಲೆ ನೀಡುವುದಾಗಿ ಹೇಳಿದೆ.

ಸ್ವಾತಂತ್ರ್ಯ ಹೋರಾಟಗಾರರ ಹೆಸರಲ್ಲಿ ಹೊಸ ವರಸೆ
2047ಕ್ಕೆ ದೇಶಕ್ಕೆ ಸ್ವಾತಂತ್ರ್ಯ ಬಂದು 100 ವರ್ಷವಾಗುತ್ತದೆ. ಸ್ವಾತಂತ್ರ್ಯ ಹೋರಾಟಗಾರರ ಕನಸಿನಂತೆ 2047 ರಲ್ಲಿ ದೇಶ ಅಭಿವೃದ್ಧಿ ಹೊಂದಿದ ರಾಷ್ಟ್ರವಾಗಬೇಕು. ಅದಕ್ಕೆ ಭದ್ರ ಬುನಾದಿ ನಾವು ಹಾಕುತ್ತೇವೆ ಎಂದು ಮೋದಿ ಹೇಳಿದ್ದಾರೆ. ಇಲ್ಲಿ ಗುರಿ ಸಾಧನೆ ಕಾಲ ಮಿತಿ 5 ವರ್ಷಕ್ಕಿಂತ ಜಾಸ್ತಿ (ಸುಮಾರು 28 ವರ್ಷ) ಮುಂದೂಡಿ ಭಾವನಾತ್ಮಕವಾಗಿ ಮತದಾರರ ಹಾದಿ ತಪ್ಪಿಸಲಾಗುತ್ತಿದೆ.

ಜಿಲ್ಲೆಗೊಂದು ಮೆಡಿಕಲ್ ಕಾಲೇಜು ನಿರ್ಮಾಣ
ದೇಶದ ಎಲ್ಲಾ ಜಿಲ್ಲೆಗಳಲ್ಲೂ ವೈದ್ಯಕೀಯ ಕಾಲೇಜುಗಳನ್ನು ತೆರೆಯುತ್ತೇವೆ ಎಂಬುದಾಗಿ ಬಿಜೆಪಿ ಸಂಕಲ್ಪ ಪತ್ರದಲ್ಲಿ ಹೇಳಲಾಗಿದೆ. 2016 ರಲ್ಲಿ ದೇಶದಲ್ಲಿ 707 ಜಿಲ್ಲೆಗಳಿವೆ. 2017 ರಂತೆ ದೇಶದಲ್ಲಿ 460 ಮೆಡಿಕಲ್ ಕಾಲೇಜುಗಳಿದ್ದು 63,985 ವಿದ್ಯಾರ್ಥಿಗಳಿದ್ದರು. ವರ್ಷಕ್ಕೆ ಅಂದಾಜು 10,000 ಜಾಬ್ ಕೂಡ ವೈದ್ಯಕೀಯ ವಲಯದಲ್ಲಿ ಸೃಷ್ಟಿ ಮಾಡಲು ಸಾಧ್ಯವಿಲ್ಲ. ಅಂದ ಮೇಲೆ 2024 ರ ಹೊತ್ತಿಗೆ ವೈದ್ಯಕೀಯ ಕಾಲೇಜುಗಳನ್ನು ಹೆಚ್ಚಿಸುವ ಅಗತ್ಯ ಇದೆಯೆ ಎಂಬ ಪ್ರಶ್ನೆ ಮೂಡುತ್ತದೆ. ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಬಾಕಿ ಉಳಿದ ಶಿಕ್ಷಣ ಸಾಲದ ಬಡ್ಡಿಯನ್ನು ಮನ್ನಾ ಮಾಡುವುದು ಮತ್ತು ವಿದ್ಯಾರ್ಥಿ ಹಕ್ಕಿನ ಕಾಯಿದೆ, ಅರ್ಹ ವಿದ್ಯಾರ್ಥಿಗೆ ವಿದ್ಯಾರ್ಥಿ ವೇತನ ಒದಗಿಸುವುದಾಗಿ ತಿಳಿಸಿದೆ. ಇದಕ್ಕಿಂತ ಮುಖ್ಯವಾಗಿ, ವಿದ್ಯಾರ್ಥಿಗೆ ಉದ್ಯೋಗ ಸಿಗುವವರೆಗೆ ಶಿಕ್ಷಣ ಸಾಲದ ಮೇಲೆ ಬಡ್ಡಿ ವಿಧಿಸಲಾಗುವುದಿಲ್ಲ ಎಂಬುದು ಪ್ರಮುಖ ಅಂಶ.

ಸಂಕಲ್ಪ ಪತ್ರದಲ್ಲಿ ದೇಶದ ಆರ್ಥಿಕತೆಯನ್ನು 2032 ರ ಹೊತ್ತಿಗೆ ರೂ. 700 ಲಕ್ಷ ಕೋಟಿಗೆ ಏರಿಸುವುದರ ಬಗ್ಗೆ ಹೇಳಲಾಗಿದೆ. ಆದರೆ ಅದಕ್ಕೆ ಯಾವುದೇ ಕಾರ್ಯನೀತಿಯನ್ನು ತಿಳಿಸಿಲ್ಲ.
ಮುಖ್ಯವಾಗಿ ಉದ್ಯೋಗ ಸೃಷ್ಟಿ, ಜನಸಂಖ್ಯೆ ನಿಯಂತ್ರಣ, ಬಡತನ ನಿರ್ಮೂಲನೆ, ಮಾಬ್ ಲಿಂಚಿಂಗ್ ತಡೆ, ಪರಿಸರ, ಜಾಗತಿಕ ತಾಪಮಾನದ ನಿಯಂತ್ರಣಕ್ಕೆ ಯಾವುದೇ ಯೋಜನೆ ಮತ್ತು ಮುನ್ನೋಟವನ್ನು ಬಿಜೆಪಿ ಜನರ ಮುಂದಿಟ್ಟಿಲ್ಲ.

ಬದಲಾಗಿ, ಎಡಪಂಥೀಯ ವಿಚಾರ ಹತ್ತಿಕ್ಕುವುದು, 371 ವಿಧಿ ತೆಗೆದು ಹಾಕುವುದು, ರಾಮ ಮಂದಿರ ನಿರ್ಮಾಣ, ಶಬರಿ ಮಲೆ ಅಯ್ಯಪ್ಪ ದೇವಾಲಯ, ಸ್ವಾತಂತ್ರ್ಯ ಹೋರಾಟಗಾರರ ಹೆಸರು ಎತ್ತುತ್ತಿರುವುದು ಬಿಜೆಪಿ ಮತದಾರರನ್ನು ಸೆಳೆಯುವ, ಮತದಾರರನ್ನು ಬೇರ್ಪಡಿಸಿ ಮತ್ತೆ ಅಧಿಕಾರಕ್ಕೆ ಬರುವ ತಂತ್ರವೇ ಹೊರತು, ಹಿಂದಿನ ಸಬ್ಕಾ ಸಾಥ್ ಸಬ್ಕಾ ವಿಕಾಸ್ ಎಂಬ ಹುಸಿ ಘೋಷಣೆ ಈಗ ಸಂಪೂರ್ಣ ಮಾಯವಾಗಿದೆ.
ಕೊನೆಯ ಬಾರಿ ಹೇಳಿದ ಭರವಸೆಯನ್ನೆ ಈಗಲೂ ಹೇಳುತ್ತಿದ್ದಾರೆ. ಉದಾ- ಮಹಿಳಾ ಮೀಸಲಾತಿ. ಈ ಬಾರಿ ಬಿಜೆಪಿಗೆ ಬಹುಮತ ಇದ್ದಾಗ್ಯೂ ಮಹಿಳಾ ಮೀಸಲಾತಿ ಬಿಲ್ ಪಾಸ್ ಮಾಡಿಲ್ಲ. ಮತ್ತೆ ಅದೇ ಹಳಸನ್ನು ಹೊಸ ಪಾತ್ರೆಯಲ್ಲಿ ಹೊತ್ತು ಬಂದಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಾನೂನುಬಾಹಿರ ಹತ್ಯೆ ಆರೋಪ : ಸಿಆರ್‌ಪಿಎಫ್ ಅಧಿಕಾರಿಗೆ ಶೌರ್ಯ ಚಕ್ರ ನೀಡಿರುವುದನ್ನು ಖಂಡಿಸಿದ ಕುಕಿ-ಝೋ ಗುಂಪುಗಳು

ಕೇಂದ್ರ ಮೀಸಲು ಪೊಲೀಸ್ ಪಡೆ (ಸಿಆರ್‌ಪಿಎಫ್‌) ಅಧಿಕಾರಿಯೊಬ್ಬರು ತಮ್ಮ ಸಮುದಾಯದ ಹತ್ತು ಪುರುಷರ "ಕಾನೂನುಬಾಹಿರ ಹತ್ಯೆ"ಯಲ್ಲಿ ಭಾಗಿಯಾಗಿದ್ದಾರೆ ಎಂದು ಮಣಿಪುರದ ಕುಕಿ-ಝೋ ಸಂಘಟನೆಗಳು ಸೋಮವಾರ (ಜ.26) ಆರೋಪಿಸಿದ್ದು, ಆ ಅಧಿಕಾರಿಗೆ ಶೌರ್ಯ ಚಕ್ರ...

ಉತ್ತರ ಪ್ರದೇಶ: ಸೋನಭದ್ರಾದಲ್ಲಿ ಡಾ.ಬಿ.ಆರ್. ಅಂಬೇಡ್ಕರ್ ಪ್ರತಿಮೆ ಧ್ವಂಸಗೊಳಿಸಿದ ದುಷ್ಕರ್ಮಿಗಳು 

ಸೋನಭದ್ರ: ರಾಯ್‌ಪುರ ಪೊಲೀಸ್ ಠಾಣೆ ವ್ಯಾಪ್ತಿಯ ಸಿಕ್ರವಾರ್ ಗ್ರಾಮದಲ್ಲಿರುವ ಡಾ. ಬಿ.ಆರ್. ಅಂಬೇಡ್ಕರ್ ಅವರ ಪ್ರತಿಮೆಯನ್ನು ಸೋಮವಾರ ರಾತ್ರಿ ಅಪರಿಚಿತ ದುಷ್ಕರ್ಮಿಗಳು ಧ್ವಂಸಗೊಳಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಸಿಕ್ರಾವರ್ ಗ್ರಾಮದ ಪಂಚಾಯತ್ ಕಟ್ಟಡದ ಬಳಿ...

ಬುಡಕಟ್ಟು ರೈತರ ಬೃಹತ್ ಮೆರವಣಿಗೆ: ಬೇಡಿಕೆಗಳ ಕುರಿತು ಸಿಪಿಐ(ಎಂ)-ಎಐಕೆಎಸ್ ನಿಯೋಗದೊಂದಿಗೆ ಮುಖ್ಯಮಂತ್ರಿ ಫಡ್ನವೀಸ್ ಮಾತುಕತೆ

ಬಾಕಿ ಇರುವ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸಿಪಿಐ(ಎಂ)-ಎಐಕೆಎಸ್ ನೇತೃತ್ವದಲ್ಲಿ ನಾಸಿಕ್‌ನಿಂದ ಮುಂಬೈಗೆ ಸಾವಿರಾರು ರೈತರು ಮತ್ತು ಬುಡಕಟ್ಟು ನಿವಾಸಿಗಳು ನಡೆಸಿದ ದೀರ್ಘ ಮೆರವಣಿಗೆ ಇಂದು ಜನವರಿ 27 ರಂದು ಮುಂಬೈನ ಮಂತ್ರಾಲಯ...

‘ಭಾರತದಲ್ಲಿ ಬಿಜೆಪಿ ದಾಳಿಯನ್ನು ಎದುರಿಸಲು ‘ದೀದಿ’ಗೆ ಮಾತ್ರ ಸಾಧ್ಯ’: ಅಖಿಲೇಶ್ ಯಾದವ್ 

ಕೋಲ್ಕತ್ತಾ: ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಮಂಗಳವಾರ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರನ್ನು ಭೇಟಿ ಮಾಡಿ "ಬಿಜೆಪಿಯ ದಾಳಿಯನ್ನು ಎದುರಿಸುವಲ್ಲಿನ ಧೈರ್ಯ"ಕ್ಕಾಗಿ ಟಿಎಂಸಿ ಮುಖ್ಯಸ್ಥೆಯನ್ನು ಶ್ಲಾಘಿಸಿದ್ದಾರೆ. ಉತ್ತರ ಪ್ರದೇಶದ ಮಾಜಿ...

ಬದರಿನಾಥ್-ಕೇದಾರನಾಥ ದೇವಾಲಯಗಳಿಗೆ ಹಿಂದೂಯೇತರರ ಪ್ರವೇಶ ನಿಷೇಧ ಸಾಧ್ಯತೆ

ಉತ್ತರಾಖಂಡದ ಹಿಮಾಲಯದ ಮಡಿಲಲ್ಲಿ ನೆಲೆಗೊಂಡಿರುವ ಶತಮಾನಗಳಷ್ಟು ಹಳೆಯದಾದ ಬದರಿನಾಥ್ ಮತ್ತು ಕೇದಾರನಾಥ ದೇವಾಲಯಗಳಿಗೆ ಶೀಘ್ರದಲ್ಲೇ ಹಿಂದೂಗಳಿಗೆ ಮಾತ್ರ ಪ್ರವೇಶ ಅನುಮತಿಸಬಹುದು. ಚಾರ್ ಧಾಮ್ ತೀರ್ಥಯಾತ್ರೆಯ ಭಾಗವಾಗಿರುವ ಎರಡು ದೇವಾಲಯಗಳಿಗೆ ಹಿಂದೂಯೇತರರನ್ನು ಪ್ರವೇಶಿಸುವುದನ್ನು ನಿಷೇಧಿಸಲಾಗುವುದು...

ವಿಬಿ-ಜಿ ರಾಮ್ ಜಿ ರದ್ದಾಗಿ ನರೇಗಾ ಪುನಃಸ್ಥಾಪನೆಯಾಗುವವರೆಗೆ ಹೋರಾಟ: ಸಿಎಂ ಸಿದ್ದರಾಮಯ್ಯ

ಕೇಂದ್ರ ಸರ್ಕಾರದ ಜನವಿರೋಧಿ ನೀತಿಯನ್ನು ಕಾಂಗ್ರೆಸ್ ಪಕ್ಷ ವಿರೋಧಿಸುತ್ತಿದ್ದು, ವಿಬಿ-ಜಿ ರಾಮ್ ಜಿ ಕಾಯ್ದೆ ರದ್ದಾಗಿ ನರೇಗಾ ಪುನಃಸ್ಥಾಪನೆಯಾಗುವವರೆಗೆ ಹೋರಾಟ ಮುಂದುವರೆಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಮಂಗಳವಾರ (ಜ.27) ಬೆಂಗಳೂರಿನ ಫ್ರೀಡಂ...

ಯುಸಿಸಿಯಲ್ಲಿ 18 ಬದಲಾವಣೆ ಮಾಡಿದ ಉತ್ತರಾಖಂಡ್ ಸರ್ಕಾರ; ಸುಗ್ರೀವಾಜ್ಞೆ ಮೂಲಕ ತಿದ್ದುಪಡಿ ಜಾರಿಗೆ

ವಿವಾಹ, ವಿಚ್ಛೇದನ, ಲಿವ್-ಇನ್ ಸಂಬಂಧಗಳು ಮತ್ತು ಉತ್ತರಾಧಿಕಾರಕ್ಕೆ ಸಂಬಂಧಿಸಿದ ನಿಯಮಗಳನ್ನು ಬಿಗಿಗೊಳಿಸುವ ಗುರಿಯನ್ನು ಹೊಂದಿರುವ ಸುಮಾರು ಹದಿನೆಂಟು ಬದಲಾವಣೆಗಳನ್ನು ಪರಿಚಯಿಸುವ ಮೂಲಕ ಏಕರೂಪ ನಾಗರಿಕ ಸಂಹಿತೆಯ ಹಲವಾರು ನಿಬಂಧನೆಗಳನ್ನು ಮಾರ್ಪಡಿಸಲು ಉತ್ತರಾಖಂಡ ಸರ್ಕಾರ...

ರಾಜ್ಯದ ಎಲ್ಲಾ ಗ್ರಾಮ ಪಂಚಾಯತ್‌ಗಳಿಗೆ ಮಹಾತ್ಮಗಾಂಧಿ ಹೆಸರು: ಸಿಎಂ ಸಿದ್ದರಾಮಯ್ಯ ಘೋಷಣೆ

ರಾಜ್ಯದ ಎಲ್ಲಾ ಗ್ರಾಮ ಪಂಚಾಯತ್‌ಗಳಿಗೆ ಮಹಾತ್ಮ ಗಾಂಧಿಯವರ ಹೆಸರಿಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದರು. ಕೇಂದ್ರ ಸರ್ಕಾರ ನರೇಗಾ ಬದಲಾಗಿ ಜಾರಿಗೆ ತಂದಿರುವ ವಿಬಿ-ಜಿ ರಾಮ್‌ ಜಿ ಕಾಯ್ದೆ ವಿರುದ್ದ ಬೆಂಗಳೂರಿನ ಸ್ವಾತಂತ್ರ್ಯ...

ಜಾರ್ಖಂಡ್‌ನ ಗಿರಿದಿಹ್‌ನಲ್ಲಿ ಇಬ್ಬರು ಬುಡಕಟ್ಟು ಬಾಲಕಿಯರ ಮೇಲೆ ಸಾಮೂಹಿಕ ಅತ್ಯಾಚಾರ

ಗಿರಿದಿಹ್: ಜಾರ್ಖಂಡ್‌ನ ಗಿರಿದಿಹ್ ಜಿಲ್ಲೆಯಲ್ಲಿ ಇಬ್ಬರು ಬುಡಕಟ್ಟು ಹುಡುಗಿಯರ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿದೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ. ಭಾನುವಾರ ರಾತ್ರಿ ಪಿರ್ತಾಂಡ್ ಪೊಲೀಸ್ ಠಾಣೆ ವ್ಯಾಪ್ತಿಯ ಹರ್ಲಾದಿಹ್ ಪ್ರದೇಶದಲ್ಲಿ ಈ ಘಟನೆ...

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯ ತಡೆಯಲು ಯುಜಿಸಿ ಹೊಸ ನಿಯಮ : ಪ್ರಬಲ ಜಾತಿಯವರಿಂದ ತೀವ್ರ ವಿರೋಧ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯನ್ನು ಉತ್ತೇಜಿಸುವ ಉದ್ದೇಶದಿಂದ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಯುಜಿಸಿ) ಹೊಸ ನಿಯಮಗಳಿಗೆ ಪ್ರಬಲ ಜಾತಿಯವರಿಂದ ತೀವ್ರ ವಿರೋಧ ವ್ಯಕ್ತವಾಗಿದೆ. ಹೊಸ ನಿಯಮಗಳ 'ಜಾತಿ ಆಧಾರಿತ ತಾರತಮ್ಯ' ಎಂಬುವುದರ...