Homeಮುಖಪುಟಹಿಂಸೆಯೊಳಗಣ ಕಾರುಣ್ಯ: ಪ.ರಂಜಿತ್‌ ನಿರ್ದೇಶನದ ‘ಧಮ್ಮಮ್‌’ ತೆರೆದಿಟ್ಟ ತಾತ್ವಿಕತೆ

ಹಿಂಸೆಯೊಳಗಣ ಕಾರುಣ್ಯ: ಪ.ರಂಜಿತ್‌ ನಿರ್ದೇಶನದ ‘ಧಮ್ಮಮ್‌’ ತೆರೆದಿಟ್ಟ ತಾತ್ವಿಕತೆ

- Advertisement -
- Advertisement -

ಸೋನಿ ಲೈವ್‌ ಒಟಿಟಿಯಲ್ಲಿ ಬಿಡುಗಡೆಯಾಗಿರುವ ‘ವಿಕ್ಟಿಮ್’ ಎಂಬ ಆಂಥಾಲಜಿಯ ಮೊದಲ ಚಾಪ್ಟರ್‌ ‘ಧಮ್ಮಮ್‌’- ವಿಮರ್ಶಕರ ಮನಗೆದ್ದಿದೆ. ದಲಿತ ಪ್ರತಿರೋಧದ ಕಥನಗಳನ್ನು ತಮಿಳು ನೆಲದಲ್ಲಿ ಕಟ್ಟಿಕೊಡುತ್ತಿರುವ ಪ.ರಂಜಿತ್‌, ‘ಧಮ್ಮಮ್‌’ ನಿರ್ದೇಶಕರೆಂಬುದು ಮತ್ತೊಂದು ಗಮನಾರ್ಹ ಸಂಗತಿ.

ಅರ್ಧ ಗಂಟೆಯಲ್ಲಿ ಮುಗಿದು ಹೋಗುವ ಧಮ್ಮಮ್‌, ಹಿಂಸೆಯಾಚೆ ಅವಿತಿರುವ ಪ್ರೀತಿ ಮತ್ತು ಕಾರುಣ್ಯವನ್ನು ಶೋಧಿಸುವ ಪ್ರಯತ್ನ ಮಾಡಿದೆ. ಮನುಷ್ಯನ ಜಾತಿ ಅಹಂಕಾರದ ಕುರಿತು ಗಂಭೀರವಾದ ಚರ್ಚೆಗೆ ಅವಕಾಶ ನೀಡಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

‘ಧಮ್ಮಮ್‌’ ಸ್ಟ್ರೀಮ್ ಆಗುತ್ತಿರುವ ಹೊತ್ತಿನಲ್ಲಿಯೇ ತಮಿಳುನಾಡಿನ ಶಿವಗಂಗೈ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ವಿಶೇಷ ನ್ಯಾಯಾಲಯವು, ಮೂವರು ದಲಿತರ ತ್ರಿವಳಿ ಹತ್ಯೆಗೆ ಸಂಬಂಧಿಸಿದಂತೆ 27 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಸುದ್ದಿ ಬಂತು. ದಲಿತರ ಆರ್ಥಿಕ ಸ್ವಾವಲಂಬನೆಯೇ ಸವರ್ಣೀಯರ ಅಸಹನೆಗೆ ಕಾರಣವಾಗಿತ್ತು. ಅಗಮುಡಿಯಾರ್ (ಪ್ರಬಲವಾದ ತೇವರ್ ಜಾತಿ ಸಮೂಹದ ಒಂದು ಭಾಗ) ಸಮುದಾಯದವರ ಮನೆಯ ಮುಂದೆ ದಲಿತ ಯುವಕನೊಬ್ಬ ಜೋರಾಗಿ ಫೋನಿನಲ್ಲಿ ಮಾತನಾಡಿದ ಎಂಬುದಷ್ಟೇ ಸವರ್ಣೀಯರ ಅಹಂಗೆ ಪೆಟ್ಟು ನೀಡಿತ್ತು. ಮಾರಕಾಸ್ತ್ರಗಳಿಂದ ದಾಳಿ ಮಾಡಿದ ಅಗಮುಡಿಯಾರರು ಮೂವರು ದಲಿತರನ್ನು ಕೊಂದು, ಐವರನ್ನು ಭೀಕರವಾಗಿ ಗಾಯಗೊಳಿಸಿದ್ದರು. ಈ ಪ್ರಕರಣದಲ್ಲಿ 27 ಅಪರಾಧಿಗಳಿಗೆ ಇತ್ತೀಚೆಗಷ್ಟೇ ಶಿಕ್ಷೆ ನೀಡಲಾಗಿದೆ. ಪ.ರಂಜಿತ್ ಅವರ ‘ಧಮ್ಮಮ್‌’ ಕೂಡ ಶಿವಗಂಗೈ ಪ್ರಕರಣವನ್ನು ಕೊಂಚ ನೆನಪಿಸುತ್ತದೆ.

ವಿಶಾಲವಾದ ಗದ್ದೆ ಬಯಲು. ಸುತ್ತಲು ಹಸಿರು. ನಡುವೆ ಇನ್ನೂ ನಾಟಿ ಮಾಡದಿರುವ ಗದ್ದೆ. ಅಲ್ಲೊಬ್ಬ ಶೋಷಿತ ಸಮುದಾಯದ ವ್ಯಕ್ತಿ. ಆತನ ಹೆಸರು ‘ಗುಣ’. ಬದುವಿನಲ್ಲಿ ಬುದ್ಧನ ವಿಗ್ರಹ. ಆ ಶೋಷಿತನ ಪುಟ್ಟ ಮಗಳು ‘ಕೇಮ’.

ಬುದ್ಧನ ಮೇಲೆ ಹತ್ತಿ ನಿಂತು ಹಕ್ಕಿಯಂತೆ ಹಾರುತ್ತೇನೆಂಬ ಸೂಚನೆಗಳನ್ನು ನೀಡುತ್ತಿರುವ ಮಗುವಿಗೆ, “ದೇವರ ಮೇಲೆ ನಿಲ್ಲಬಾರದು. ಕೆಳಗಿಳಿ” ಎಂದು ಗುಣ ಎಚ್ಚರಿಸುತ್ತಾನೆ. “ದೇವರೇ ಇಲ್ಲವೆಂದು ಬುದ್ಧ ಹೇಳಿದ್ದಾನೆ. ಆತನನ್ನು ದೇವರು ಅನ್ನುತ್ತೀಯಲ್ಲ” ಎಂದು ಅಪ್ಪನಿಗೆ ಮಗಳು ತಿರುಗೇಟು ನೀಡುತ್ತಾಳೆ. ಅಪ್ಪಾ ಕಕ್ಕಾಬಿಕ್ಕಿ. ಪ್ರಶ್ನಿಸುವ ರೂಪಕವೇ ಬುದ್ಧ. ಹಳೆಯ ಕಾಲಕ್ಕೆ ಜೋತು ಬಿದ್ದಿರುವ ಅಪ್ಪನ ಎದುರು, ಹೊಸದಾರಿಯ ಹುಡುಕಾಟದಲ್ಲಿರುವ ಮಗು!

ಇದನ್ನೂ ಓದಿರಿ: ಡಬ್‌‌ ಸಿನಿಮಾ ‘ಡೊಳ್ಳು’ ಸಿಂಕ್‌ಸೌಂಡ್‌ ವಿಭಾಗದಲ್ಲಿ ಆಯ್ಕೆ: ‘ರಾಷ್ಟ್ರಪ್ರಶಸ್ತಿ ಲಾಬಿ’ ರಾಜಕಾರಣದ ಕಥೆ ಇದು!

ಈ ಶೋಷಿತ ಸಮುದಾಯದ ಹೊಸತಲೆಮಾರಲ್ಲಿ ಅನ್ಯಾಯವನ್ನು ಪ್ರಶ್ನಿಸುವ, ನ್ಯಾಯೋಚಿತವಾಗಿ ಸಿಡಿದೇಳುವ ಗುಣ ಮನೆಮಾಡಿದೆ. ಇದನ್ನು ಇನ್ನೊಂದು ಬದಿಯಲ್ಲಿರುವವರು ತಮ್ಮ ಅಹಂಕಾರಕ್ಕೆ ಪೆಟ್ಟೆಂದು ಭಾವಿಸುತ್ತಾರೆ. ದಲಿತನ ಸಣ್ಣ ಪ್ರತಿರೋಧವೂ ಬಲಾಢ್ಯರಲ್ಲಿ ದೊಡ್ಡ ಅಸಹನೆಯನ್ನು ಹುಟ್ಟಿಹಾಕಿಬಿಡುತ್ತದೆ. ಸವರ್ಣೀಯರು ಎಸಗುವ ದೌರ್ಜನ್ಯದಲ್ಲಿ ನಿತ್ಯವೂ ನಲುಗುತ್ತಿರುವ ದಲಿತ ಎಲ್ಲ ಹಿಂಸೆಗಳಾಚೆಗೆ ಜಿಗಿದು ಪ್ರೀತಿ, ಮಮತೆ, ಕಾರುಣ್ಯವನ್ನು ಶೋಷಕ ಸಮುದಾಯಕ್ಕೂ ತೋರುವ ಗುಣವೇ ಬೌದ್ಧತತ್ವ.

ಮತ್ತೆ ಮತ್ತೆ ಕಿರಿಕಿರಿ ಮಾಡುತ್ತಲೇ ಇರುವ ಬಲಾಢ್ಯ ಜಾತಿಯ ಸೇಕರ, ದಲಿತನಾದ ಗುಣನನ್ನು ಕಿಚಾಯಿಸುತ್ತಲೇ ಇದ್ದಾನೆ.‌ ದಲಿತನೊಬ್ಬ ಭೂಮಿ ಉಳುಮೆ ಮಾಡುತ್ತಿರುವುದೇ ಈ ಬಲಾಢ್ಯನ ಅಸಹನೆಯ ಮೂಲ ಎಂದು ಬಿಡಿಸಿ ಹೇಳಬೇಕಿಲ್ಲ. ದಲಿತನ ಪುಟ್ಟ ಮಗಳು ಕೇಮ ಆ ಗದ್ದೆಯ ಬದುವಿಯಲ್ಲಿ ಆಟವಾಡುತ್ತಿದ್ದಾಳೆ. ಯಾವುದೇ ಹಿಂಸೆ ನೀಡುವ ಗುರಿ ಇಲ್ಲವಾದರೂ ಆ ಮೀನನ್ನು ಹಿಡಿಯುವ ವ್ಯರ್ಥ ಪ್ರಯತ್ನದಲ್ಲಿ ಆ ಮಗು ತೊಡಗಿದೆ.

ಕಾಲು ಕೆರೆದು ಜಗಳ ಮಾಡಲೆತ್ನಿಸುತ್ತಿರುವ ಸೇಕರ, ಬದುವಿನಲ್ಲಿ ನಡೆದು ಬರುವಾಗ ಕೇಮ ಕೂಡ ಅದೇ ದಾರಿಯಲ್ಲಿ ಸಾಗುತ್ತಿದ್ದಾಳೆ. ಕಿರಿದಾದ ಬದು. ಪಕ್ಕಕ್ಕೆ ಹೆಜ್ಜೆ ಇಟ್ಟರೆ ಕೆಸರು. ತಾನು ಮೊದಲು ನಡೆದು ಬಂದ ಕಾರಣ, ನನಗೆ ಅತ್ತ ಹೋಗಲು ದಾರಿ ನೀಡಬೇಕು ಎಂದು ಕೇಮ ವಾದಿಸುತ್ತಾಳೆ. ಇದನ್ನು ಸಹಿಸದ ಸೇಕರ, ಹಿಂದೆ ಹೋಗುವಂತೆ ಮಗುವನ್ನು ಗದರುತ್ತಾನೆ. ಗುಣ ಕೂಡ ಇದನ್ನು ಗಮನಿಸುತ್ತಾ, ಮುಂದಾಗುವ ಅನಾಹುತವನ್ನು ಊಹಿಸಿ, ಹಳೆಯ ತಲೆಮಾರಿನ ವರಸೆಯನ್ನೂ ತೋರುತ್ತಾ, ‘ಕೇಮ ಬದಿಗೆ ಸರಿಯಮ್ಮ’ ಎನ್ನುತ್ತಾನೆ. ಆದರೆ ಮಗು, “ನಾನು ಮೊದಲು ಬಂದಿದ್ದು, ನಾನೇಕೆ ಜಾಗ” ಬಿಡಲಿ ಎಂದು ನ್ಯಾಯೋಚಿತವಾಗಿ ಪ್ರಶ್ನಿಸುತ್ತದೆ.

ಸೇಕರ ಮುಂದೆ ನುಗ್ಗಲು ಬಂದಾಗ, ಆತನನ್ನು ಗದ್ದೆಯ ಕೆಸರಿಗೆ ನೂಕಿ ಕೇಮ ಮುಂದೆ ಸಾಗುತ್ತಾಳೆ. ಆತನ ಬಿಳಿ ಬಟ್ಟೆಗೆ ಕೆಸರು ಮೆತ್ತಿಕೊಳ್ಳುತ್ತದೆ. ಇದನ್ನೆಲ್ಲ ನೋಡುತ್ತಿದ್ದ ಗುಣ, ಮಗಳನ್ನು ಕಾಪಾಡಲು ಬಂದಾಗ ಆಕಸ್ಮಿಕವಾಗಿ ಬಲಾಢ್ಯನ ರಕ್ತ ಹರಿಯುತ್ತದೆ. ಸೇಕರನ ಮನೆಗೆ ವಿಷಯ ತಿಳಿದು ಆತನ ತಂದೆ, ಕಿರಿಯ ಮಗ ಹಾಗೂ ಹಿರಿಯ ಮಗ ಅಲ್ಲಿಗೆ ಧಾವಿಸುತ್ತಾರೆ.

ಸಾವು, ಬದುಕಿನ ನಡುವೆ ಸೇಕರ ಹೊರಳಾಡುತ್ತಿದ್ದರೂ ಆತನನ್ನು ರಕ್ಷಿಸದೆ ಗುಣನ ಹೆಣ ಉರುಳಿಸಬೇಕೆಂಬುದು ಹಪಾಹಪಿಸುತ್ತಾರೆ. ಇವರಿಂದ ತಪ್ಪಿಸಿಕೊಳ್ಳಲೆತ್ನಿಸುವ ದಲಿತ ಅನಿವಾರ್ಯವಾಗಿ ಮಿಕ್ಕವರನ್ನೂ ಗಾಯಗೊಳಿಸಿ ಬಚಾವಾಗುತ್ತಾನೆ. ಆದರೆ ಕೇಮ ತನ್ನ ಅಪ್ಪನಲ್ಲಿ, ಸಾವು ಬದುಕಿನ ನಡುವೆ ಹೊರಳಾಡುತ್ತಿರುವ ಸೇಕರನ್ನು ಆಸ್ಪತ್ರೆಗೆ ಕರೆದೊಯ್ಯೋಣ ಎನ್ನುತ್ತದೆ. ಇದೇ ಕಾರುಣ್ಯ. ಶೋಷಿತ ಸಮುದಾಯದ ಆದಿಮ ಗುಣವದು.

ಇದನ್ನೂ ಓದಿರಿ: ವಿಕ್ರಾಂತ್‌ ರೋಣ ಸಿನಿಮಾ ದಲಿತರನ್ನು ಚಿತ್ರಿಸಿರುವ ರೀತಿ ಅಪಾಯಕಾರಿ ಏಕೆ?

ಯಾರನ್ನೂ ನೋಯಿಸದ, ಅನ್ಯಾಯವನ್ನು ಪ್ರಶ್ನಿಸಿದ ಮಾತ್ರಕ್ಕೆ ದಲಿತ ಸಮುದಾಯ ತಾನೇ ನೋಯುವ ಸಂಕಟ ಇದೆಯಲ್ಲ- ಅದಕ್ಕೆ ಶತಶತಮಾನಗಳ ಚರಿತ್ರೆ ಇದೆ. ಇದರ ಜೊತೆಗೆ ಶೋಷಕ ಸಮುದಾಯದ ಆತ್ಮವಿಮರ್ಶೆಯ ಅಗತ್ಯವನ್ನು ಇಲ್ಲಿ ತೆರೆದಿರುವ ಪ್ರಯತ್ನವನ್ನು ಪ.ರಂಜಿತ್ ಮಾಡಿದ್ದಾರೆ. ಗುದ್ದಾಡಿ ಹೈರಾಣಾಗಿರುವ ಗುಣನ ಮೇಲೆ ಮುಗಿ ಬೀಳಲು ಹೋಗುವ ಸಹೋದರನನ್ನು ಇನ್ನೊಬ್ಬ ಸಹೋದರ ತಡೆಯುವುದು ಕೂಡ ಮನಃ ಪರಿವರ್ತನೆಯ ದಾರಿಯೂ ಹೌದು.

ಶೋಷಿತನ ಕಾರುಣ್ಯವನ್ನು, ಶೋಷಕನ ಮನಃಪರಿವರ್ತನೆಯನ್ನು ರೂಪಕವಾಗಿ ತೆರೆದಿರುವ ಪ್ರಯತ್ನವನ್ನು ಪ.ರಂಜಿತ್ ಮಾಡಿರುವುದು ‘ಧಮ್ಮಮ್‌’ನ ಹೆಗ್ಗಳಿಕೆ. ಧಮ್ಮದ ತಾತ್ವಿಕತೆಯನ್ನು ಹೊಸ ಕಾಲದ ವಿದ್ಯಮಾನಗಳೊಂದಿಗೆ ವಿವರಿಸುವ ಪ್ರಯತ್ನವೂ ಇದಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...