Homeಮುಖಪುಟಹಿಂಸೆಯೊಳಗಣ ಕಾರುಣ್ಯ: ಪ.ರಂಜಿತ್‌ ನಿರ್ದೇಶನದ ‘ಧಮ್ಮಮ್‌’ ತೆರೆದಿಟ್ಟ ತಾತ್ವಿಕತೆ

ಹಿಂಸೆಯೊಳಗಣ ಕಾರುಣ್ಯ: ಪ.ರಂಜಿತ್‌ ನಿರ್ದೇಶನದ ‘ಧಮ್ಮಮ್‌’ ತೆರೆದಿಟ್ಟ ತಾತ್ವಿಕತೆ

- Advertisement -
- Advertisement -

ಸೋನಿ ಲೈವ್‌ ಒಟಿಟಿಯಲ್ಲಿ ಬಿಡುಗಡೆಯಾಗಿರುವ ‘ವಿಕ್ಟಿಮ್’ ಎಂಬ ಆಂಥಾಲಜಿಯ ಮೊದಲ ಚಾಪ್ಟರ್‌ ‘ಧಮ್ಮಮ್‌’- ವಿಮರ್ಶಕರ ಮನಗೆದ್ದಿದೆ. ದಲಿತ ಪ್ರತಿರೋಧದ ಕಥನಗಳನ್ನು ತಮಿಳು ನೆಲದಲ್ಲಿ ಕಟ್ಟಿಕೊಡುತ್ತಿರುವ ಪ.ರಂಜಿತ್‌, ‘ಧಮ್ಮಮ್‌’ ನಿರ್ದೇಶಕರೆಂಬುದು ಮತ್ತೊಂದು ಗಮನಾರ್ಹ ಸಂಗತಿ.

ಅರ್ಧ ಗಂಟೆಯಲ್ಲಿ ಮುಗಿದು ಹೋಗುವ ಧಮ್ಮಮ್‌, ಹಿಂಸೆಯಾಚೆ ಅವಿತಿರುವ ಪ್ರೀತಿ ಮತ್ತು ಕಾರುಣ್ಯವನ್ನು ಶೋಧಿಸುವ ಪ್ರಯತ್ನ ಮಾಡಿದೆ. ಮನುಷ್ಯನ ಜಾತಿ ಅಹಂಕಾರದ ಕುರಿತು ಗಂಭೀರವಾದ ಚರ್ಚೆಗೆ ಅವಕಾಶ ನೀಡಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

‘ಧಮ್ಮಮ್‌’ ಸ್ಟ್ರೀಮ್ ಆಗುತ್ತಿರುವ ಹೊತ್ತಿನಲ್ಲಿಯೇ ತಮಿಳುನಾಡಿನ ಶಿವಗಂಗೈ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ವಿಶೇಷ ನ್ಯಾಯಾಲಯವು, ಮೂವರು ದಲಿತರ ತ್ರಿವಳಿ ಹತ್ಯೆಗೆ ಸಂಬಂಧಿಸಿದಂತೆ 27 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಸುದ್ದಿ ಬಂತು. ದಲಿತರ ಆರ್ಥಿಕ ಸ್ವಾವಲಂಬನೆಯೇ ಸವರ್ಣೀಯರ ಅಸಹನೆಗೆ ಕಾರಣವಾಗಿತ್ತು. ಅಗಮುಡಿಯಾರ್ (ಪ್ರಬಲವಾದ ತೇವರ್ ಜಾತಿ ಸಮೂಹದ ಒಂದು ಭಾಗ) ಸಮುದಾಯದವರ ಮನೆಯ ಮುಂದೆ ದಲಿತ ಯುವಕನೊಬ್ಬ ಜೋರಾಗಿ ಫೋನಿನಲ್ಲಿ ಮಾತನಾಡಿದ ಎಂಬುದಷ್ಟೇ ಸವರ್ಣೀಯರ ಅಹಂಗೆ ಪೆಟ್ಟು ನೀಡಿತ್ತು. ಮಾರಕಾಸ್ತ್ರಗಳಿಂದ ದಾಳಿ ಮಾಡಿದ ಅಗಮುಡಿಯಾರರು ಮೂವರು ದಲಿತರನ್ನು ಕೊಂದು, ಐವರನ್ನು ಭೀಕರವಾಗಿ ಗಾಯಗೊಳಿಸಿದ್ದರು. ಈ ಪ್ರಕರಣದಲ್ಲಿ 27 ಅಪರಾಧಿಗಳಿಗೆ ಇತ್ತೀಚೆಗಷ್ಟೇ ಶಿಕ್ಷೆ ನೀಡಲಾಗಿದೆ. ಪ.ರಂಜಿತ್ ಅವರ ‘ಧಮ್ಮಮ್‌’ ಕೂಡ ಶಿವಗಂಗೈ ಪ್ರಕರಣವನ್ನು ಕೊಂಚ ನೆನಪಿಸುತ್ತದೆ.

ವಿಶಾಲವಾದ ಗದ್ದೆ ಬಯಲು. ಸುತ್ತಲು ಹಸಿರು. ನಡುವೆ ಇನ್ನೂ ನಾಟಿ ಮಾಡದಿರುವ ಗದ್ದೆ. ಅಲ್ಲೊಬ್ಬ ಶೋಷಿತ ಸಮುದಾಯದ ವ್ಯಕ್ತಿ. ಆತನ ಹೆಸರು ‘ಗುಣ’. ಬದುವಿನಲ್ಲಿ ಬುದ್ಧನ ವಿಗ್ರಹ. ಆ ಶೋಷಿತನ ಪುಟ್ಟ ಮಗಳು ‘ಕೇಮ’.

ಬುದ್ಧನ ಮೇಲೆ ಹತ್ತಿ ನಿಂತು ಹಕ್ಕಿಯಂತೆ ಹಾರುತ್ತೇನೆಂಬ ಸೂಚನೆಗಳನ್ನು ನೀಡುತ್ತಿರುವ ಮಗುವಿಗೆ, “ದೇವರ ಮೇಲೆ ನಿಲ್ಲಬಾರದು. ಕೆಳಗಿಳಿ” ಎಂದು ಗುಣ ಎಚ್ಚರಿಸುತ್ತಾನೆ. “ದೇವರೇ ಇಲ್ಲವೆಂದು ಬುದ್ಧ ಹೇಳಿದ್ದಾನೆ. ಆತನನ್ನು ದೇವರು ಅನ್ನುತ್ತೀಯಲ್ಲ” ಎಂದು ಅಪ್ಪನಿಗೆ ಮಗಳು ತಿರುಗೇಟು ನೀಡುತ್ತಾಳೆ. ಅಪ್ಪಾ ಕಕ್ಕಾಬಿಕ್ಕಿ. ಪ್ರಶ್ನಿಸುವ ರೂಪಕವೇ ಬುದ್ಧ. ಹಳೆಯ ಕಾಲಕ್ಕೆ ಜೋತು ಬಿದ್ದಿರುವ ಅಪ್ಪನ ಎದುರು, ಹೊಸದಾರಿಯ ಹುಡುಕಾಟದಲ್ಲಿರುವ ಮಗು!

ಇದನ್ನೂ ಓದಿರಿ: ಡಬ್‌‌ ಸಿನಿಮಾ ‘ಡೊಳ್ಳು’ ಸಿಂಕ್‌ಸೌಂಡ್‌ ವಿಭಾಗದಲ್ಲಿ ಆಯ್ಕೆ: ‘ರಾಷ್ಟ್ರಪ್ರಶಸ್ತಿ ಲಾಬಿ’ ರಾಜಕಾರಣದ ಕಥೆ ಇದು!

ಈ ಶೋಷಿತ ಸಮುದಾಯದ ಹೊಸತಲೆಮಾರಲ್ಲಿ ಅನ್ಯಾಯವನ್ನು ಪ್ರಶ್ನಿಸುವ, ನ್ಯಾಯೋಚಿತವಾಗಿ ಸಿಡಿದೇಳುವ ಗುಣ ಮನೆಮಾಡಿದೆ. ಇದನ್ನು ಇನ್ನೊಂದು ಬದಿಯಲ್ಲಿರುವವರು ತಮ್ಮ ಅಹಂಕಾರಕ್ಕೆ ಪೆಟ್ಟೆಂದು ಭಾವಿಸುತ್ತಾರೆ. ದಲಿತನ ಸಣ್ಣ ಪ್ರತಿರೋಧವೂ ಬಲಾಢ್ಯರಲ್ಲಿ ದೊಡ್ಡ ಅಸಹನೆಯನ್ನು ಹುಟ್ಟಿಹಾಕಿಬಿಡುತ್ತದೆ. ಸವರ್ಣೀಯರು ಎಸಗುವ ದೌರ್ಜನ್ಯದಲ್ಲಿ ನಿತ್ಯವೂ ನಲುಗುತ್ತಿರುವ ದಲಿತ ಎಲ್ಲ ಹಿಂಸೆಗಳಾಚೆಗೆ ಜಿಗಿದು ಪ್ರೀತಿ, ಮಮತೆ, ಕಾರುಣ್ಯವನ್ನು ಶೋಷಕ ಸಮುದಾಯಕ್ಕೂ ತೋರುವ ಗುಣವೇ ಬೌದ್ಧತತ್ವ.

ಮತ್ತೆ ಮತ್ತೆ ಕಿರಿಕಿರಿ ಮಾಡುತ್ತಲೇ ಇರುವ ಬಲಾಢ್ಯ ಜಾತಿಯ ಸೇಕರ, ದಲಿತನಾದ ಗುಣನನ್ನು ಕಿಚಾಯಿಸುತ್ತಲೇ ಇದ್ದಾನೆ.‌ ದಲಿತನೊಬ್ಬ ಭೂಮಿ ಉಳುಮೆ ಮಾಡುತ್ತಿರುವುದೇ ಈ ಬಲಾಢ್ಯನ ಅಸಹನೆಯ ಮೂಲ ಎಂದು ಬಿಡಿಸಿ ಹೇಳಬೇಕಿಲ್ಲ. ದಲಿತನ ಪುಟ್ಟ ಮಗಳು ಕೇಮ ಆ ಗದ್ದೆಯ ಬದುವಿಯಲ್ಲಿ ಆಟವಾಡುತ್ತಿದ್ದಾಳೆ. ಯಾವುದೇ ಹಿಂಸೆ ನೀಡುವ ಗುರಿ ಇಲ್ಲವಾದರೂ ಆ ಮೀನನ್ನು ಹಿಡಿಯುವ ವ್ಯರ್ಥ ಪ್ರಯತ್ನದಲ್ಲಿ ಆ ಮಗು ತೊಡಗಿದೆ.

ಕಾಲು ಕೆರೆದು ಜಗಳ ಮಾಡಲೆತ್ನಿಸುತ್ತಿರುವ ಸೇಕರ, ಬದುವಿನಲ್ಲಿ ನಡೆದು ಬರುವಾಗ ಕೇಮ ಕೂಡ ಅದೇ ದಾರಿಯಲ್ಲಿ ಸಾಗುತ್ತಿದ್ದಾಳೆ. ಕಿರಿದಾದ ಬದು. ಪಕ್ಕಕ್ಕೆ ಹೆಜ್ಜೆ ಇಟ್ಟರೆ ಕೆಸರು. ತಾನು ಮೊದಲು ನಡೆದು ಬಂದ ಕಾರಣ, ನನಗೆ ಅತ್ತ ಹೋಗಲು ದಾರಿ ನೀಡಬೇಕು ಎಂದು ಕೇಮ ವಾದಿಸುತ್ತಾಳೆ. ಇದನ್ನು ಸಹಿಸದ ಸೇಕರ, ಹಿಂದೆ ಹೋಗುವಂತೆ ಮಗುವನ್ನು ಗದರುತ್ತಾನೆ. ಗುಣ ಕೂಡ ಇದನ್ನು ಗಮನಿಸುತ್ತಾ, ಮುಂದಾಗುವ ಅನಾಹುತವನ್ನು ಊಹಿಸಿ, ಹಳೆಯ ತಲೆಮಾರಿನ ವರಸೆಯನ್ನೂ ತೋರುತ್ತಾ, ‘ಕೇಮ ಬದಿಗೆ ಸರಿಯಮ್ಮ’ ಎನ್ನುತ್ತಾನೆ. ಆದರೆ ಮಗು, “ನಾನು ಮೊದಲು ಬಂದಿದ್ದು, ನಾನೇಕೆ ಜಾಗ” ಬಿಡಲಿ ಎಂದು ನ್ಯಾಯೋಚಿತವಾಗಿ ಪ್ರಶ್ನಿಸುತ್ತದೆ.

ಸೇಕರ ಮುಂದೆ ನುಗ್ಗಲು ಬಂದಾಗ, ಆತನನ್ನು ಗದ್ದೆಯ ಕೆಸರಿಗೆ ನೂಕಿ ಕೇಮ ಮುಂದೆ ಸಾಗುತ್ತಾಳೆ. ಆತನ ಬಿಳಿ ಬಟ್ಟೆಗೆ ಕೆಸರು ಮೆತ್ತಿಕೊಳ್ಳುತ್ತದೆ. ಇದನ್ನೆಲ್ಲ ನೋಡುತ್ತಿದ್ದ ಗುಣ, ಮಗಳನ್ನು ಕಾಪಾಡಲು ಬಂದಾಗ ಆಕಸ್ಮಿಕವಾಗಿ ಬಲಾಢ್ಯನ ರಕ್ತ ಹರಿಯುತ್ತದೆ. ಸೇಕರನ ಮನೆಗೆ ವಿಷಯ ತಿಳಿದು ಆತನ ತಂದೆ, ಕಿರಿಯ ಮಗ ಹಾಗೂ ಹಿರಿಯ ಮಗ ಅಲ್ಲಿಗೆ ಧಾವಿಸುತ್ತಾರೆ.

ಸಾವು, ಬದುಕಿನ ನಡುವೆ ಸೇಕರ ಹೊರಳಾಡುತ್ತಿದ್ದರೂ ಆತನನ್ನು ರಕ್ಷಿಸದೆ ಗುಣನ ಹೆಣ ಉರುಳಿಸಬೇಕೆಂಬುದು ಹಪಾಹಪಿಸುತ್ತಾರೆ. ಇವರಿಂದ ತಪ್ಪಿಸಿಕೊಳ್ಳಲೆತ್ನಿಸುವ ದಲಿತ ಅನಿವಾರ್ಯವಾಗಿ ಮಿಕ್ಕವರನ್ನೂ ಗಾಯಗೊಳಿಸಿ ಬಚಾವಾಗುತ್ತಾನೆ. ಆದರೆ ಕೇಮ ತನ್ನ ಅಪ್ಪನಲ್ಲಿ, ಸಾವು ಬದುಕಿನ ನಡುವೆ ಹೊರಳಾಡುತ್ತಿರುವ ಸೇಕರನ್ನು ಆಸ್ಪತ್ರೆಗೆ ಕರೆದೊಯ್ಯೋಣ ಎನ್ನುತ್ತದೆ. ಇದೇ ಕಾರುಣ್ಯ. ಶೋಷಿತ ಸಮುದಾಯದ ಆದಿಮ ಗುಣವದು.

ಇದನ್ನೂ ಓದಿರಿ: ವಿಕ್ರಾಂತ್‌ ರೋಣ ಸಿನಿಮಾ ದಲಿತರನ್ನು ಚಿತ್ರಿಸಿರುವ ರೀತಿ ಅಪಾಯಕಾರಿ ಏಕೆ?

ಯಾರನ್ನೂ ನೋಯಿಸದ, ಅನ್ಯಾಯವನ್ನು ಪ್ರಶ್ನಿಸಿದ ಮಾತ್ರಕ್ಕೆ ದಲಿತ ಸಮುದಾಯ ತಾನೇ ನೋಯುವ ಸಂಕಟ ಇದೆಯಲ್ಲ- ಅದಕ್ಕೆ ಶತಶತಮಾನಗಳ ಚರಿತ್ರೆ ಇದೆ. ಇದರ ಜೊತೆಗೆ ಶೋಷಕ ಸಮುದಾಯದ ಆತ್ಮವಿಮರ್ಶೆಯ ಅಗತ್ಯವನ್ನು ಇಲ್ಲಿ ತೆರೆದಿರುವ ಪ್ರಯತ್ನವನ್ನು ಪ.ರಂಜಿತ್ ಮಾಡಿದ್ದಾರೆ. ಗುದ್ದಾಡಿ ಹೈರಾಣಾಗಿರುವ ಗುಣನ ಮೇಲೆ ಮುಗಿ ಬೀಳಲು ಹೋಗುವ ಸಹೋದರನನ್ನು ಇನ್ನೊಬ್ಬ ಸಹೋದರ ತಡೆಯುವುದು ಕೂಡ ಮನಃ ಪರಿವರ್ತನೆಯ ದಾರಿಯೂ ಹೌದು.

ಶೋಷಿತನ ಕಾರುಣ್ಯವನ್ನು, ಶೋಷಕನ ಮನಃಪರಿವರ್ತನೆಯನ್ನು ರೂಪಕವಾಗಿ ತೆರೆದಿರುವ ಪ್ರಯತ್ನವನ್ನು ಪ.ರಂಜಿತ್ ಮಾಡಿರುವುದು ‘ಧಮ್ಮಮ್‌’ನ ಹೆಗ್ಗಳಿಕೆ. ಧಮ್ಮದ ತಾತ್ವಿಕತೆಯನ್ನು ಹೊಸ ಕಾಲದ ವಿದ್ಯಮಾನಗಳೊಂದಿಗೆ ವಿವರಿಸುವ ಪ್ರಯತ್ನವೂ ಇದಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...