Homeಮುಖಪುಟಹಿಂಸೆಯೊಳಗಣ ಕಾರುಣ್ಯ: ಪ.ರಂಜಿತ್‌ ನಿರ್ದೇಶನದ ‘ಧಮ್ಮಮ್‌’ ತೆರೆದಿಟ್ಟ ತಾತ್ವಿಕತೆ

ಹಿಂಸೆಯೊಳಗಣ ಕಾರುಣ್ಯ: ಪ.ರಂಜಿತ್‌ ನಿರ್ದೇಶನದ ‘ಧಮ್ಮಮ್‌’ ತೆರೆದಿಟ್ಟ ತಾತ್ವಿಕತೆ

- Advertisement -
- Advertisement -

ಸೋನಿ ಲೈವ್‌ ಒಟಿಟಿಯಲ್ಲಿ ಬಿಡುಗಡೆಯಾಗಿರುವ ‘ವಿಕ್ಟಿಮ್’ ಎಂಬ ಆಂಥಾಲಜಿಯ ಮೊದಲ ಚಾಪ್ಟರ್‌ ‘ಧಮ್ಮಮ್‌’- ವಿಮರ್ಶಕರ ಮನಗೆದ್ದಿದೆ. ದಲಿತ ಪ್ರತಿರೋಧದ ಕಥನಗಳನ್ನು ತಮಿಳು ನೆಲದಲ್ಲಿ ಕಟ್ಟಿಕೊಡುತ್ತಿರುವ ಪ.ರಂಜಿತ್‌, ‘ಧಮ್ಮಮ್‌’ ನಿರ್ದೇಶಕರೆಂಬುದು ಮತ್ತೊಂದು ಗಮನಾರ್ಹ ಸಂಗತಿ.

ಅರ್ಧ ಗಂಟೆಯಲ್ಲಿ ಮುಗಿದು ಹೋಗುವ ಧಮ್ಮಮ್‌, ಹಿಂಸೆಯಾಚೆ ಅವಿತಿರುವ ಪ್ರೀತಿ ಮತ್ತು ಕಾರುಣ್ಯವನ್ನು ಶೋಧಿಸುವ ಪ್ರಯತ್ನ ಮಾಡಿದೆ. ಮನುಷ್ಯನ ಜಾತಿ ಅಹಂಕಾರದ ಕುರಿತು ಗಂಭೀರವಾದ ಚರ್ಚೆಗೆ ಅವಕಾಶ ನೀಡಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

‘ಧಮ್ಮಮ್‌’ ಸ್ಟ್ರೀಮ್ ಆಗುತ್ತಿರುವ ಹೊತ್ತಿನಲ್ಲಿಯೇ ತಮಿಳುನಾಡಿನ ಶಿವಗಂಗೈ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ವಿಶೇಷ ನ್ಯಾಯಾಲಯವು, ಮೂವರು ದಲಿತರ ತ್ರಿವಳಿ ಹತ್ಯೆಗೆ ಸಂಬಂಧಿಸಿದಂತೆ 27 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಸುದ್ದಿ ಬಂತು. ದಲಿತರ ಆರ್ಥಿಕ ಸ್ವಾವಲಂಬನೆಯೇ ಸವರ್ಣೀಯರ ಅಸಹನೆಗೆ ಕಾರಣವಾಗಿತ್ತು. ಅಗಮುಡಿಯಾರ್ (ಪ್ರಬಲವಾದ ತೇವರ್ ಜಾತಿ ಸಮೂಹದ ಒಂದು ಭಾಗ) ಸಮುದಾಯದವರ ಮನೆಯ ಮುಂದೆ ದಲಿತ ಯುವಕನೊಬ್ಬ ಜೋರಾಗಿ ಫೋನಿನಲ್ಲಿ ಮಾತನಾಡಿದ ಎಂಬುದಷ್ಟೇ ಸವರ್ಣೀಯರ ಅಹಂಗೆ ಪೆಟ್ಟು ನೀಡಿತ್ತು. ಮಾರಕಾಸ್ತ್ರಗಳಿಂದ ದಾಳಿ ಮಾಡಿದ ಅಗಮುಡಿಯಾರರು ಮೂವರು ದಲಿತರನ್ನು ಕೊಂದು, ಐವರನ್ನು ಭೀಕರವಾಗಿ ಗಾಯಗೊಳಿಸಿದ್ದರು. ಈ ಪ್ರಕರಣದಲ್ಲಿ 27 ಅಪರಾಧಿಗಳಿಗೆ ಇತ್ತೀಚೆಗಷ್ಟೇ ಶಿಕ್ಷೆ ನೀಡಲಾಗಿದೆ. ಪ.ರಂಜಿತ್ ಅವರ ‘ಧಮ್ಮಮ್‌’ ಕೂಡ ಶಿವಗಂಗೈ ಪ್ರಕರಣವನ್ನು ಕೊಂಚ ನೆನಪಿಸುತ್ತದೆ.

ವಿಶಾಲವಾದ ಗದ್ದೆ ಬಯಲು. ಸುತ್ತಲು ಹಸಿರು. ನಡುವೆ ಇನ್ನೂ ನಾಟಿ ಮಾಡದಿರುವ ಗದ್ದೆ. ಅಲ್ಲೊಬ್ಬ ಶೋಷಿತ ಸಮುದಾಯದ ವ್ಯಕ್ತಿ. ಆತನ ಹೆಸರು ‘ಗುಣ’. ಬದುವಿನಲ್ಲಿ ಬುದ್ಧನ ವಿಗ್ರಹ. ಆ ಶೋಷಿತನ ಪುಟ್ಟ ಮಗಳು ‘ಕೇಮ’.

ಬುದ್ಧನ ಮೇಲೆ ಹತ್ತಿ ನಿಂತು ಹಕ್ಕಿಯಂತೆ ಹಾರುತ್ತೇನೆಂಬ ಸೂಚನೆಗಳನ್ನು ನೀಡುತ್ತಿರುವ ಮಗುವಿಗೆ, “ದೇವರ ಮೇಲೆ ನಿಲ್ಲಬಾರದು. ಕೆಳಗಿಳಿ” ಎಂದು ಗುಣ ಎಚ್ಚರಿಸುತ್ತಾನೆ. “ದೇವರೇ ಇಲ್ಲವೆಂದು ಬುದ್ಧ ಹೇಳಿದ್ದಾನೆ. ಆತನನ್ನು ದೇವರು ಅನ್ನುತ್ತೀಯಲ್ಲ” ಎಂದು ಅಪ್ಪನಿಗೆ ಮಗಳು ತಿರುಗೇಟು ನೀಡುತ್ತಾಳೆ. ಅಪ್ಪಾ ಕಕ್ಕಾಬಿಕ್ಕಿ. ಪ್ರಶ್ನಿಸುವ ರೂಪಕವೇ ಬುದ್ಧ. ಹಳೆಯ ಕಾಲಕ್ಕೆ ಜೋತು ಬಿದ್ದಿರುವ ಅಪ್ಪನ ಎದುರು, ಹೊಸದಾರಿಯ ಹುಡುಕಾಟದಲ್ಲಿರುವ ಮಗು!

ಇದನ್ನೂ ಓದಿರಿ: ಡಬ್‌‌ ಸಿನಿಮಾ ‘ಡೊಳ್ಳು’ ಸಿಂಕ್‌ಸೌಂಡ್‌ ವಿಭಾಗದಲ್ಲಿ ಆಯ್ಕೆ: ‘ರಾಷ್ಟ್ರಪ್ರಶಸ್ತಿ ಲಾಬಿ’ ರಾಜಕಾರಣದ ಕಥೆ ಇದು!

ಈ ಶೋಷಿತ ಸಮುದಾಯದ ಹೊಸತಲೆಮಾರಲ್ಲಿ ಅನ್ಯಾಯವನ್ನು ಪ್ರಶ್ನಿಸುವ, ನ್ಯಾಯೋಚಿತವಾಗಿ ಸಿಡಿದೇಳುವ ಗುಣ ಮನೆಮಾಡಿದೆ. ಇದನ್ನು ಇನ್ನೊಂದು ಬದಿಯಲ್ಲಿರುವವರು ತಮ್ಮ ಅಹಂಕಾರಕ್ಕೆ ಪೆಟ್ಟೆಂದು ಭಾವಿಸುತ್ತಾರೆ. ದಲಿತನ ಸಣ್ಣ ಪ್ರತಿರೋಧವೂ ಬಲಾಢ್ಯರಲ್ಲಿ ದೊಡ್ಡ ಅಸಹನೆಯನ್ನು ಹುಟ್ಟಿಹಾಕಿಬಿಡುತ್ತದೆ. ಸವರ್ಣೀಯರು ಎಸಗುವ ದೌರ್ಜನ್ಯದಲ್ಲಿ ನಿತ್ಯವೂ ನಲುಗುತ್ತಿರುವ ದಲಿತ ಎಲ್ಲ ಹಿಂಸೆಗಳಾಚೆಗೆ ಜಿಗಿದು ಪ್ರೀತಿ, ಮಮತೆ, ಕಾರುಣ್ಯವನ್ನು ಶೋಷಕ ಸಮುದಾಯಕ್ಕೂ ತೋರುವ ಗುಣವೇ ಬೌದ್ಧತತ್ವ.

ಮತ್ತೆ ಮತ್ತೆ ಕಿರಿಕಿರಿ ಮಾಡುತ್ತಲೇ ಇರುವ ಬಲಾಢ್ಯ ಜಾತಿಯ ಸೇಕರ, ದಲಿತನಾದ ಗುಣನನ್ನು ಕಿಚಾಯಿಸುತ್ತಲೇ ಇದ್ದಾನೆ.‌ ದಲಿತನೊಬ್ಬ ಭೂಮಿ ಉಳುಮೆ ಮಾಡುತ್ತಿರುವುದೇ ಈ ಬಲಾಢ್ಯನ ಅಸಹನೆಯ ಮೂಲ ಎಂದು ಬಿಡಿಸಿ ಹೇಳಬೇಕಿಲ್ಲ. ದಲಿತನ ಪುಟ್ಟ ಮಗಳು ಕೇಮ ಆ ಗದ್ದೆಯ ಬದುವಿಯಲ್ಲಿ ಆಟವಾಡುತ್ತಿದ್ದಾಳೆ. ಯಾವುದೇ ಹಿಂಸೆ ನೀಡುವ ಗುರಿ ಇಲ್ಲವಾದರೂ ಆ ಮೀನನ್ನು ಹಿಡಿಯುವ ವ್ಯರ್ಥ ಪ್ರಯತ್ನದಲ್ಲಿ ಆ ಮಗು ತೊಡಗಿದೆ.

ಕಾಲು ಕೆರೆದು ಜಗಳ ಮಾಡಲೆತ್ನಿಸುತ್ತಿರುವ ಸೇಕರ, ಬದುವಿನಲ್ಲಿ ನಡೆದು ಬರುವಾಗ ಕೇಮ ಕೂಡ ಅದೇ ದಾರಿಯಲ್ಲಿ ಸಾಗುತ್ತಿದ್ದಾಳೆ. ಕಿರಿದಾದ ಬದು. ಪಕ್ಕಕ್ಕೆ ಹೆಜ್ಜೆ ಇಟ್ಟರೆ ಕೆಸರು. ತಾನು ಮೊದಲು ನಡೆದು ಬಂದ ಕಾರಣ, ನನಗೆ ಅತ್ತ ಹೋಗಲು ದಾರಿ ನೀಡಬೇಕು ಎಂದು ಕೇಮ ವಾದಿಸುತ್ತಾಳೆ. ಇದನ್ನು ಸಹಿಸದ ಸೇಕರ, ಹಿಂದೆ ಹೋಗುವಂತೆ ಮಗುವನ್ನು ಗದರುತ್ತಾನೆ. ಗುಣ ಕೂಡ ಇದನ್ನು ಗಮನಿಸುತ್ತಾ, ಮುಂದಾಗುವ ಅನಾಹುತವನ್ನು ಊಹಿಸಿ, ಹಳೆಯ ತಲೆಮಾರಿನ ವರಸೆಯನ್ನೂ ತೋರುತ್ತಾ, ‘ಕೇಮ ಬದಿಗೆ ಸರಿಯಮ್ಮ’ ಎನ್ನುತ್ತಾನೆ. ಆದರೆ ಮಗು, “ನಾನು ಮೊದಲು ಬಂದಿದ್ದು, ನಾನೇಕೆ ಜಾಗ” ಬಿಡಲಿ ಎಂದು ನ್ಯಾಯೋಚಿತವಾಗಿ ಪ್ರಶ್ನಿಸುತ್ತದೆ.

ಸೇಕರ ಮುಂದೆ ನುಗ್ಗಲು ಬಂದಾಗ, ಆತನನ್ನು ಗದ್ದೆಯ ಕೆಸರಿಗೆ ನೂಕಿ ಕೇಮ ಮುಂದೆ ಸಾಗುತ್ತಾಳೆ. ಆತನ ಬಿಳಿ ಬಟ್ಟೆಗೆ ಕೆಸರು ಮೆತ್ತಿಕೊಳ್ಳುತ್ತದೆ. ಇದನ್ನೆಲ್ಲ ನೋಡುತ್ತಿದ್ದ ಗುಣ, ಮಗಳನ್ನು ಕಾಪಾಡಲು ಬಂದಾಗ ಆಕಸ್ಮಿಕವಾಗಿ ಬಲಾಢ್ಯನ ರಕ್ತ ಹರಿಯುತ್ತದೆ. ಸೇಕರನ ಮನೆಗೆ ವಿಷಯ ತಿಳಿದು ಆತನ ತಂದೆ, ಕಿರಿಯ ಮಗ ಹಾಗೂ ಹಿರಿಯ ಮಗ ಅಲ್ಲಿಗೆ ಧಾವಿಸುತ್ತಾರೆ.

ಸಾವು, ಬದುಕಿನ ನಡುವೆ ಸೇಕರ ಹೊರಳಾಡುತ್ತಿದ್ದರೂ ಆತನನ್ನು ರಕ್ಷಿಸದೆ ಗುಣನ ಹೆಣ ಉರುಳಿಸಬೇಕೆಂಬುದು ಹಪಾಹಪಿಸುತ್ತಾರೆ. ಇವರಿಂದ ತಪ್ಪಿಸಿಕೊಳ್ಳಲೆತ್ನಿಸುವ ದಲಿತ ಅನಿವಾರ್ಯವಾಗಿ ಮಿಕ್ಕವರನ್ನೂ ಗಾಯಗೊಳಿಸಿ ಬಚಾವಾಗುತ್ತಾನೆ. ಆದರೆ ಕೇಮ ತನ್ನ ಅಪ್ಪನಲ್ಲಿ, ಸಾವು ಬದುಕಿನ ನಡುವೆ ಹೊರಳಾಡುತ್ತಿರುವ ಸೇಕರನ್ನು ಆಸ್ಪತ್ರೆಗೆ ಕರೆದೊಯ್ಯೋಣ ಎನ್ನುತ್ತದೆ. ಇದೇ ಕಾರುಣ್ಯ. ಶೋಷಿತ ಸಮುದಾಯದ ಆದಿಮ ಗುಣವದು.

ಇದನ್ನೂ ಓದಿರಿ: ವಿಕ್ರಾಂತ್‌ ರೋಣ ಸಿನಿಮಾ ದಲಿತರನ್ನು ಚಿತ್ರಿಸಿರುವ ರೀತಿ ಅಪಾಯಕಾರಿ ಏಕೆ?

ಯಾರನ್ನೂ ನೋಯಿಸದ, ಅನ್ಯಾಯವನ್ನು ಪ್ರಶ್ನಿಸಿದ ಮಾತ್ರಕ್ಕೆ ದಲಿತ ಸಮುದಾಯ ತಾನೇ ನೋಯುವ ಸಂಕಟ ಇದೆಯಲ್ಲ- ಅದಕ್ಕೆ ಶತಶತಮಾನಗಳ ಚರಿತ್ರೆ ಇದೆ. ಇದರ ಜೊತೆಗೆ ಶೋಷಕ ಸಮುದಾಯದ ಆತ್ಮವಿಮರ್ಶೆಯ ಅಗತ್ಯವನ್ನು ಇಲ್ಲಿ ತೆರೆದಿರುವ ಪ್ರಯತ್ನವನ್ನು ಪ.ರಂಜಿತ್ ಮಾಡಿದ್ದಾರೆ. ಗುದ್ದಾಡಿ ಹೈರಾಣಾಗಿರುವ ಗುಣನ ಮೇಲೆ ಮುಗಿ ಬೀಳಲು ಹೋಗುವ ಸಹೋದರನನ್ನು ಇನ್ನೊಬ್ಬ ಸಹೋದರ ತಡೆಯುವುದು ಕೂಡ ಮನಃ ಪರಿವರ್ತನೆಯ ದಾರಿಯೂ ಹೌದು.

ಶೋಷಿತನ ಕಾರುಣ್ಯವನ್ನು, ಶೋಷಕನ ಮನಃಪರಿವರ್ತನೆಯನ್ನು ರೂಪಕವಾಗಿ ತೆರೆದಿರುವ ಪ್ರಯತ್ನವನ್ನು ಪ.ರಂಜಿತ್ ಮಾಡಿರುವುದು ‘ಧಮ್ಮಮ್‌’ನ ಹೆಗ್ಗಳಿಕೆ. ಧಮ್ಮದ ತಾತ್ವಿಕತೆಯನ್ನು ಹೊಸ ಕಾಲದ ವಿದ್ಯಮಾನಗಳೊಂದಿಗೆ ವಿವರಿಸುವ ಪ್ರಯತ್ನವೂ ಇದಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...