Homeಮುಖಪುಟಅನುಕಂಪದ ಆಧಾರದ ಮೇಲೆ ಸರ್ಕಾರಿ ಉದ್ಯೋಗ ಪಡೆಯುವುದು ಸ್ಥಾಪಿತ ಹಕ್ಕಲ್ಲ : ಸುಪ್ರೀಂ ಕೋರ್ಟ್

ಅನುಕಂಪದ ಆಧಾರದ ಮೇಲೆ ಸರ್ಕಾರಿ ಉದ್ಯೋಗ ಪಡೆಯುವುದು ಸ್ಥಾಪಿತ ಹಕ್ಕಲ್ಲ : ಸುಪ್ರೀಂ ಕೋರ್ಟ್

- Advertisement -
- Advertisement -

ಅನುಕಂಪದ ಆಧಾರದ ಮೇಲೆ ಸರ್ಕಾರಿ ಉದ್ಯೋಗ ಪಡೆಯುವುದು ವ್ಯಕ್ತಿಯ ಸ್ಥಾಪಿತ ಹಕ್ಕಲ್ಲ. ಅದು, ಸೇವೆಯಲ್ಲಿ ಇರುವಾಗಲೇ ಮೃತಪಡುವ ನೌಕರನೊಬ್ಬ ಹೊಂದಿರುವ ಸೇವಾ ಷರತ್ತೂ ಅಲ್ಲ ಎಂದು ಸುಪ್ರೀಂ ಕೋರ್ಟ್‌ ಬುಧವಾರ (ನ.13) ಹೇಳಿದೆ.

1997ರಲ್ಲಿ ಮೃತಪಟ್ಟ ಪೊಲೀಸ್ ಕಾನ್‌ಸ್ಟೇಬಲ್ ಒಬ್ಬರ ಪುತ್ರನಿಗೆ ಅನುಕಂಪ ಆಧಾರಿತ ಉದ್ಯೋಗ ನೀಡಲು ನಿರ್ದೇಶಿಸುವಂತೆ ಕೋರಿ ಸಲ್ಲಿಕೆಯಾಗಿದ್ದ ಅರ್ಜಿಯನ್ನು ತಿರಸ್ಕರಿಸುವ ವೇಳೆ, ನ್ಯಾಯಮೂರ್ತಿಗಳಾದ ಅಭಯ್‌ ಎಸ್‌.ಓಕಾ, ಅಹ್ಸಾನುದ್ದೀನ್ ಅಮಾನುಲ್ಲಾ ಮತ್ತು ಆಗಸ್ಟಿನ್ ಜಾರ್ಜ್ ಮಸೀಹ್ ಅವರಿದ್ದ ಪೀಠ ಮೇಲಿನಂತೆ ತಿಳಿಸಿದೆ.

ಅನುಕಂಪದ ಆಧಾರದ ಮೇಲೆ ಸರ್ಕಾರಿ ಉದ್ಯೋಗ ಪಡೆಯುವುದು ಯಾವುದೇ ವ್ಯಕ್ತಿಯ ಸ್ಥಾಪಿತ ಹಕ್ಕಲ್ಲ. ನಿಗದಿತ ಕಾಲ ಮಿತಿಯೊಳಗೆ ಇಂತಹ ಉದ್ಯೋಗಕ್ಕೆ ಮನವಿ ಮಾಡಿದರೆ ಪರಿಗಣಿಸಲಾಗುವುದು ಎಂದು ಪೀಠ ಹೇಳಿದೆ.

ನೇಮಕಾತಿ ನೀತಿಗೆ ವಿರುದ್ದವಾಗಿ ಮತ್ತು ಕಾನೂನು ಬಾಹಿರವಾಗಿ ಒಬ್ಬರ ಪರವಾಗಿ ಕ್ರಮ ಕೈಗೊಳ್ಳುವಂತೆ ರಾಜ್ಯ ಸರ್ಕಾರಗಳಿಗೆ ನಿರ್ದೇಶನ ನೀಡಲು ಸಾಧ್ಯವಿಲ್ಲ. ಅನುಕಂಪ ಆಧಾರಿತ ನೇಮಕಾತಿಯು, ಮೃತರ ಕುಟುಂಬಕ್ಕೆ ಆ ಸಮಯದಲ್ಲಿ ತುರ್ತು ಆರ್ಥಿಕ ಸಹಾಯ ಮಾಡಲು ಇರುವುದೇ ಹೊರತು, ಅದು ಅವರ ಪರಿಪೂರ್ಣ ಹಕ್ಕಲ್ಲ ಎಂದು ಪೀಠ ಸ್ಪಷ್ಟಪಡಿಸಿದೆ.

ಪ್ರಕರಣದ ಹಿನ್ನೆಲೆ : 1997ರಲ್ಲಿ ಜೈ ಪ್ರಕಾಶ್ ಎಂಬ ಪೊಲೀಸ್ ಕಾನ್‌ಸ್ಟೇಬಲ್ ಕರ್ತವ್ಯದ ವೇಳೆ ಸಾವನ್ನಪ್ಪಿದ್ದರು. ಆಗ ಅವರ ಮಗ ಟಿಂಕು ಕೇವಲ 7 ವರ್ಷದವನಾಗಿದ್ದ. ಪ್ರಕಾಶ್ ಪತ್ನಿ ಅನಕ್ಷರಸ್ಥೆಯಾಗಿದ್ದ ಕಾರಣ, ಅನುಕಂಪದ ಆಧಾರದಲ್ಲಿ ತನಗೆ ಉದ್ಯೋಗ ಕೊಡುವಂತೆ ಅವರು ಅರ್ಜಿ ಸಲ್ಲಿಸಿರಲಿಲ್ಲ. ಬದಲಾಗಿ, ಅಪ್ರಾಪ್ತ ಮಗ ವಯಸ್ಸಿಗೆ ಬಂದಾಗ ಆತನಿಗೆ ಉದ್ಯೋಗ ಕೊಡಿ ಎಂದು ಮನವಿ ಮಾಡಿದ್ದರು.

ಅದರಂತೆ, ಟಿಂಕು ವಯಸ್ಸಿಗೆ ಬಂದ ಮೇಲೆ 2008ರಲ್ಲಿ ಕಾನ್‌ಸ್ಟೇಬಲ್ ಹುದ್ದೆಗೆ ಅರ್ಜಿ ಸಲ್ಲಿಸಿದ್ದ. ಅದನ್ನು ತಿರಸ್ಕರಿಸಿದ್ದ ಅಧಿಕಾರಿಗಳು, ನೌಕರ ಸಾವನ್ನಪ್ಪಿ 3 ವರ್ಷದೊಳಗೆ ಅರ್ಜಿ ಸಲ್ಲಿಸಬಹುದಷ್ಟೇ ಎಂದಿದ್ದರು. ಪಂಜಾಬ್ ಹಾಗೂ ಹರಿಯಾಣ ಸರ್ಕಾರಗಳು ಕೂಡ ಉದ್ಯೋಗ ಕೋರಿದ್ದ ಮನವಿ ತಿರಸ್ಕರಿಸಿತ್ತು. ಹಾಗಾಗಿ, ಕಾನ್‌ಸ್ಟೇಬಲ್ ಕುಟುಂಬ ಸುಪ್ರೀಂ ಕೋರ್ಟ್ ಮೊರೆ ಹೋಗಿತ್ತು. ಸುಪ್ರೀಂ ಕೋರ್ಟ್ ಅರ್ಜಿ ತಿರಸ್ಕರಿಸಿ, ಕುಟುಂಬಕ್ಕೆ ಆರ್ಥಿಕ ನೆರವು ಒದಗಿಸುವಂತೆ ಸರ್ಕಾರಕ್ಕೆ ಸೂಚಿಸಿದೆ.

ಇದನ್ನೂ ಓದಿ : ‘ಸ್ಮಾರಕ ವಶಕ್ಕೆ ಪಡೆಯಲು ಎಷ್ಟು ಧೈರ್ಯ ನಿಮಗೆ?’ | ದೆಹಲಿ ಕಾಲೊನಿ ಅಸೋಸಿಯೇಷನ್ ವಿರುದ್ಧ ಸುಪ್ರೀಂಕೋರ್ಟ್ ಆಕ್ರೋಶ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪೊಲೀಸ್ ತುರ್ತು ವಾಹನದ ಚಾಲಕ ಸೇರಿ ಐವರಿಂದ ಯುವತಿ ಮೇಲೆ ಅತ್ಯಾಚಾರ!

ಪೊಲೀಸ್ ತುರ್ತು ಸೇವೆ (112) ವಾಹನದ ಚಾಲಕ ಸೇರಿದಂತೆ ಐವರು ಪುರುಷರು 19 ವರ್ಷದ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಛತ್ತೀಸ್‌ಗಢದ ಕೋರ್ಬಾ ಜಿಲ್ಲೆಯ ಬಂಕಿಮೊಂಗ್ರ ಪ್ರದೇಶದಲ್ಲಿ ನಡೆದಿದೆ. ಜನವರಿ...

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...