Homeಮುಖಪುಟಕಾಡುಗೊಲ್ಲ ಅಭಿವೃದ್ಧಿ ನಿಗಮವೇ ಅಯೋಮಯ: ಆದರೂ ಅಧ್ಯಕ್ಷ ಸ್ಥಾನಕ್ಕೆ ಪೈಪೋಟಿ

ಕಾಡುಗೊಲ್ಲ ಅಭಿವೃದ್ಧಿ ನಿಗಮವೇ ಅಯೋಮಯ: ಆದರೂ ಅಧ್ಯಕ್ಷ ಸ್ಥಾನಕ್ಕೆ ಪೈಪೋಟಿ

ಯಾದವ VS/ ಕಾಡುಗೊಲ್ಲರ ನಡುವೆ ಕಿತ್ತಾಟ ಮುಂದುವರಿದಿದೆ. ಬಿಜೆಪಿಗೂ ಇದೇ ಬೇಕಾಗಿದೆ. ನಿಮ್ಮಲ್ಲೇ ಜಗಳವಿದೆ, ಸರಿಪಡಿಸಿಕೊಂಡು ಬನ್ನಿ ಎಂದು ಹೇಳಲು ಸರ್ಕಾರಕ್ಕೆ ಕಾರಣ ಸಿಕ್ಕಿದೆ.

- Advertisement -
- Advertisement -

ಶಿರಾ ಉಪಚುನಾವಣೆಯ ಹಿನ್ನೆಲೆಯಲ್ಲಿ ದಿಢೀರ್ ಸ್ಥಾಪನೆಯಾದ ಕಾಡುಗೊಲ್ಲ ಅಭಿವೃದ್ಧಿ ನಿಗಮ ಇನ್ನೂ ಪೂರ್ಣವಾಗಿ ಅಸ್ತಿತ್ವಕ್ಕೆ ಬಂದಿಲ್ಲ. ಸಂಪುಟ ಸಭೆ ಒಪ್ಪಿಗೆಯನ್ನೂ ಪಡೆದುಕೊಂಡಿಲ್ಲ. ಅನುದಾನವನ್ನೂ ನಿಗದಿ ಮಾಡಿಲ್ಲ. ಆದರೆ ಅಭಿವೃದ್ಧಿ ನಿಗಮಕ್ಕೆ ಅಧ್ಯಕ್ಷರಾಗಲು ಹಲವರ ನಡುವೆ ತೆರೆಮರೆಯಲ್ಲೇ ಪೈಪೋಟಿ ಎದ್ದಿದೆ. ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರದಲ್ಲಿದ್ದು ಬಿಜೆಪಿ ಬೆಂಬಲಿಗರನ್ನು ಹೊರತುಪಡಿಸಿ ಬೇರೆಯವರನ್ನು ಅಧ್ಯಕ್ಷರನ್ನಾಗಿ ಮಾಡುವುದು ಸಾಧ್ಯವಿಲ್ಲದ ಮಾತು. ಹಾಗಾಗಿ ಬಿಜೆಪಿ ಮುಖಂಡರನ್ನು ಮುಂದಿಟ್ಟುಕೊಂಡು  ಕಾಡುಗೊಲ್ಲ ಅಭಿವೃದ್ಧಿ ನಿಗಮಕ್ಕೆ ಅಧ್ಯಕ್ಷರಾಗಲು ಪೈಪೋಟಿ ನಡೆಯುತ್ತಿದೆ.

ನಿವೃತ್ತ ಐಎಫ್ಎಸ್ ಅಧಿಕಾರಿ ಚಿಕ್ಕಪ್ಪಯ್ಯ, ತುಮಕೂರು ಜಿಲ್ಲಾ ಸರ್ಕಾರಿ ನೌಕರರ ಸಂಘದ ಮಾಜಿ ಜಿಲ್ಲಾಧ್ಯಕ್ಷ ಹಾಗೂ ನಿವೃತ್ತ ತಹಶೀಲ್ದಾರ್ ಜಿ.ಎಂ. ಸಣ್ಣಮುದ್ದಯ್ಯ, ಬಿಬಿಎಂಪಿ ಮಾಜಿ ಸದಸ್ಯ ರಾಜಣ್ಣ, ಚಂದ್ರಶೇಖರಗೌಡ, ಚಿಕ್ಕಣ್ಣಸ್ವಾಮಿ, ದೇವಾಲಯದ ಪೂಜಾರಿ ಪಾಪಣ್ಣ, ಶ್ರೀರಂಗ ಯಾದವ್ ಮೊದಲಾದವರು ಆಕಾಂಕ್ಷಿಗಳಾಗಿದ್ದಾರೆ. ಸಣ್ಣಮುದ್ದಯ್ಯ ವಿರುದ್ದ ಸಾಕಷ್ಟು ದೂರುಗಳನ್ನು ನೀಡಲಾಗಿದೆ. ಯಾವುದೇ ಕಾರಣಕ್ಕೂ ಸಣ್ಣಮುದ್ದಯ್ಯ ಅವರನ್ನು ಅಧ್ಯಕ್ಷರನ್ನಾಗಿ ನೇಮಕ ಮಾಡಬಾರದು ಎಂಬ ದೂರುಗಳು ಬಿಜೆಪಿ ಮುಖಂಡರಿಗೆ ರವಾನೆಯಾಗಿವೆ.

ಇನ್ನೊಂದೆಡೆ ಕಾಡುಗೊಲ್ಲ ಅಭಿವೃದ್ಧಿ ನಿಗಮದ ಹೆಸರು ಬದಲಾವಣೆಗೆ ಒತ್ತಾಯ ವ್ಯಕ್ತವಾಗುತ್ತಿದೆ. ಇದಕ್ಕೆ  ರಾಜ್ಯ ಯಾದವ ಸಂಘದ ಅಧ್ಯಕ್ಷ ಡಿ.ಟಿ.ಶ್ರೀನಿವಾಸ್ ನೇತೃತ್ವ ವಹಿಸಿದ್ದಾರೆ. ಹೆಸರು ಬದಲಾದರೆ ತಾನೇ ಅಧ್ಯಕ್ಷ ಎಂದು ಹೇಳಿಕೊಂಡು ಒಡಾಡುತ್ತಿದ್ದಾರೆ. ಹೀಗಾಗಿ ಯಾದವ VS/ ಕಾಡುಗೊಲ್ಲರ ನಡುವೆ ಕಿತ್ತಾಟ ಮುಂದುವರಿದಿದೆ. ಬಿಜೆಪಿಗೂ ಇದೇ ಬೇಕಾಗಿದೆ. ನಿಮ್ಮಲ್ಲೇ ಜಗಳವಿದೆ, ಸರಿಪಡಿಸಿಕೊಂಡು ಬನ್ನಿ ಎಂದು ಹೇಳಲು ಸರ್ಕಾರಕ್ಕೆ ಕಾರಣ ಸಿಕ್ಕಿದೆ. ಹಾಗಾಗಿ ಬಿಜೆಪಿ ದಾಳ ಉರುಳಿಸುತ್ತಲೇ ಇದೆ. ಇದನ್ನು ಅರ್ಥ ಮಾಡಿಕೊಳ್ಳದ ಕಾಡುಗೊಲ್ಲ ಸಮುದಾಯ ವ್ಯರ್ಥ ಕಸರತ್ತು ನಡೆಸುತ್ತಿದೆ ಎಂಬ ವಿಶ್ಲೇಷಣೆ ನಡಯುತ್ತಿದೆ.

ಯಾದವರು ಒಂದು ಕಡೆ ಸಭೆ ನಡೆಸಿದರೆ, ಕಾಡುಗೊಲ್ಲರು ಮತ್ತೊಂದು ಕಡೆ ಸಭೆ ನಡೆಸಿ ಮುಂದಿನ ಕಾರ್ಯಕ್ರಮಗಳ ರೂಪುರೇಷೆಗಳನ್ನು ಸಿದ್ದಪಡಿಸಲಾಗುತ್ತಿದೆ. ಯಾದವ (ಗೊಲ್ಲ) ಸಂಘದ ರಾಜ್ಯಧ್ಯಕ್ಷ, ಮಾಜಿ ಸಚಿವ ಎ.ಕೃಷ್ಣಪ್ಪ ಅಳಿಯ ಮತ್ತು ಶಾಸಕಿ ಪೂರ್ಣಿಮಾ ಪತಿ ಡಿ.ಟಿ.ಶ್ರೀನಿವಾಸ್ ಡಿಸೆಂಬರ್ 6ರಂದು ಬೆಂಗಳೂರಿನಲ್ಲಿ ಸಭೆ ಕರೆದಿದ್ದು, ಕಾಡುಗೊಲ್ಲ ಎಂಬುದನ್ನು ಗೊಲ್ಲ ಅಭಿವೃದ್ಧಿ ನಿಗಮವಾಗಿ ಬದಲಾಯಿಸಬೇಕು ಎಂದು ಸರ್ಕಾರದ ಮೇಲೆ ಒತ್ತಡ ಹಾಕಲು ತಯಾರಿ ನಡೆಸುತ್ತಿರುವುದು ಸಾಕಷ್ಟು ಚರ್ಚೆಗೆ ಕಾರಣವಾಗಿದೆ.

ಇದೇ ಕಾರಣವನ್ನು ಮುಂದಿಟ್ಟುಕೊಂಡು ನವೆಂಬರ್ 29 ರಂದು ತುಮಕೂರಿನಲ್ಲಿ ರಾಜ್ಯಮಟ್ಟದ ಕಾಡುಗೊಲ್ಲ ಸಮುದಾಯದ ಮುಖಂಡರ ಸಭೆ ನಡೆದಿದೆ. ಸಭೆಯಲ್ಲಿ ಸುಮಾರು 100ಕ್ಕೂ ಹೆಚ್ಚು ಮಂದಿ ಭಾಗವಹಿಸಿದ್ದರು ಎಂದು ತಿಳಿದುಬಂದಿದೆ. ಕಾಡುಗೊಲ್ಲರನ್ನು ಪರಿಶಿಷ್ಟ ಪಂಗಡಕ್ಕೆ ಸೇರ್ಪಡೆ ಮಾಡಬೇಕು. ಹಟ್ಟಿಗಳನ್ನು ಕಂದಾಯ ಗ್ರಾಮಗಳನ್ನಾಗಿ ಮಾಡಬೇಕು. ಕಾಡುಗೊಲ್ಲ ಹೆಸರಿನಲ್ಲಿ ಜಾತಿ ಪ್ರಮಾಣ ಪತ್ರ ನೀಡಬೇಕು. ಅಭಿವೃದ್ಧಿ ನಿಗಮಕ್ಕೆ ಕಾಡುಗೊಲ್ಲ ಸಮುದಾಯದ ಪ್ರಮುಖರನ್ನೇ ಅಧ್ಯಕ್ಷರನ್ನಾಗಿ ಮಾಡಬೇಕು ಎಂಬ ನಿರ್ಣಯಗಳನ್ನು ಕೈಗೊಳ್ಳಲಾಯಿತು ಎಂದು ಸಭೆಯಲ್ಲಿ ಭಾಗವಹಿಸಿದ್ದ ಮುಖಂಡರೊಬ್ಬರು ನಾನುಗೌರಿ.ಕಾಂಗೆ ಮಾಹಿತಿ ನೀಡಿದರು.

ಸಭೆಯಲ್ಲಿ ಬಿಜೆಪಿ ಬೆಂಬಲಿಗರೇ ಹೆಚ್ಚು ಸಂಖ್ಯೆಯಲ್ಲಿ ಭಾಗವಹಿಸಿದ್ದರು. ಬಿಬಿಎಂಪಿ ಮಾಜಿ ಸದಸ್ಯ ರಾಜಣ್ಣ, ಚೆಂಗಾವರ ಕರಿಯಪ್ಪ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಕೆಲಸ ಮಾಡುವವರು ಸಭೆಯಲ್ಲಿ ಪಾಲ್ಗೊಂಡು ಹೋರಾಟದ ಮುಂದಿನ ರೂಪುರೇಷೆಗಳ ಕುರಿತು ಸಲಹೆ ನೀಡಿದರು. ಸಭೆಯಲ್ಲಿ ಬಿಜೆಪಿ ಬೆಂಬಲಿಗರೇ ಹೆಚ್ಚು ಸಂಖ್ಯೆಯಲ್ಲಿದ್ದು ಸಂಘವನ್ನು ಬಿಜೆಪಿಗೆ ಒತ್ತೆ ಇಟ್ಟರೆ ಹೇಗೆ? ಜನಾಂಗದ ಸಮಸ್ಯೆಗಳನ್ನು ಪರಿಹರಿಸುವುದು ಹೇಗೆ ಎಂಬ ಪ್ರಶ್ನೆಯೂ ವ್ಯಕ್ತವಾಯಿತು. ಇದಕ್ಕೆ ಮುಖಂಡರು ಪಕ್ಷವೇ ಬೇರೆ, ಸಂಘವೇ ಬೇರೆ ಎಂಬ ಉತ್ತರ ನೀಡಿದರು ಎಂದು ಹೇಳಲಾಗಿದೆ.

ಕಾಡುಗೊಲ್ಲ ಅಭಿವೃದ್ಧಿ ನಿಗಮವೇ ಅಯೋಮಯವಾಗಿದೆ. ಅದು ಕಾನೂನುಬದ್ದವಾಗಿಲ್ಲ. ಸಚಿವ ಸಂಪುಟದಲ್ಲಿ ಅನುಮೋದನೆ ದೊರೆತಿಲ್ಲ. ನಿಗಮ ಊರ್ಜಿತವಾಗುತ್ತದೆಯೇ ಎಂಬ ಪ್ರಶ್ನೆ ಸಮುದಾಯದ ಕೆಲ ಮುಖಂಡರನ್ನು ಕಾಡತೊಡಗಿದೆ. ರಾಜ್ಯದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿರುವ ಕಾಡುಗೊಲ್ಲರಿಗೆ ಇದು ಪ್ರತಿಷ್ಠೆಯ ಪ್ರಶ್ನೆಯಾಗಿದೆ.


ಇದನ್ನೂ ಓದಿ: ಕಾಡುಗೊಲ್ಲ ಅಭಿವೃದ್ಧಿ ನಿಗಮದ ಹೆಸರು ಬದಲಿಸಿದ್ದೇಕೆ?; ಸಿಎಂ ಮೇಲೆ ಒತ್ತಡ ತಂದವರು ಯಾರು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...