Homeಮುಖಪುಟಕಾಡುಗೊಲ್ಲ ಅಭಿವೃದ್ಧಿ ನಿಗಮವೇ ಅಯೋಮಯ: ಆದರೂ ಅಧ್ಯಕ್ಷ ಸ್ಥಾನಕ್ಕೆ ಪೈಪೋಟಿ

ಕಾಡುಗೊಲ್ಲ ಅಭಿವೃದ್ಧಿ ನಿಗಮವೇ ಅಯೋಮಯ: ಆದರೂ ಅಧ್ಯಕ್ಷ ಸ್ಥಾನಕ್ಕೆ ಪೈಪೋಟಿ

ಯಾದವ VS/ ಕಾಡುಗೊಲ್ಲರ ನಡುವೆ ಕಿತ್ತಾಟ ಮುಂದುವರಿದಿದೆ. ಬಿಜೆಪಿಗೂ ಇದೇ ಬೇಕಾಗಿದೆ. ನಿಮ್ಮಲ್ಲೇ ಜಗಳವಿದೆ, ಸರಿಪಡಿಸಿಕೊಂಡು ಬನ್ನಿ ಎಂದು ಹೇಳಲು ಸರ್ಕಾರಕ್ಕೆ ಕಾರಣ ಸಿಕ್ಕಿದೆ.

- Advertisement -
- Advertisement -

ಶಿರಾ ಉಪಚುನಾವಣೆಯ ಹಿನ್ನೆಲೆಯಲ್ಲಿ ದಿಢೀರ್ ಸ್ಥಾಪನೆಯಾದ ಕಾಡುಗೊಲ್ಲ ಅಭಿವೃದ್ಧಿ ನಿಗಮ ಇನ್ನೂ ಪೂರ್ಣವಾಗಿ ಅಸ್ತಿತ್ವಕ್ಕೆ ಬಂದಿಲ್ಲ. ಸಂಪುಟ ಸಭೆ ಒಪ್ಪಿಗೆಯನ್ನೂ ಪಡೆದುಕೊಂಡಿಲ್ಲ. ಅನುದಾನವನ್ನೂ ನಿಗದಿ ಮಾಡಿಲ್ಲ. ಆದರೆ ಅಭಿವೃದ್ಧಿ ನಿಗಮಕ್ಕೆ ಅಧ್ಯಕ್ಷರಾಗಲು ಹಲವರ ನಡುವೆ ತೆರೆಮರೆಯಲ್ಲೇ ಪೈಪೋಟಿ ಎದ್ದಿದೆ. ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರದಲ್ಲಿದ್ದು ಬಿಜೆಪಿ ಬೆಂಬಲಿಗರನ್ನು ಹೊರತುಪಡಿಸಿ ಬೇರೆಯವರನ್ನು ಅಧ್ಯಕ್ಷರನ್ನಾಗಿ ಮಾಡುವುದು ಸಾಧ್ಯವಿಲ್ಲದ ಮಾತು. ಹಾಗಾಗಿ ಬಿಜೆಪಿ ಮುಖಂಡರನ್ನು ಮುಂದಿಟ್ಟುಕೊಂಡು  ಕಾಡುಗೊಲ್ಲ ಅಭಿವೃದ್ಧಿ ನಿಗಮಕ್ಕೆ ಅಧ್ಯಕ್ಷರಾಗಲು ಪೈಪೋಟಿ ನಡೆಯುತ್ತಿದೆ.

ನಿವೃತ್ತ ಐಎಫ್ಎಸ್ ಅಧಿಕಾರಿ ಚಿಕ್ಕಪ್ಪಯ್ಯ, ತುಮಕೂರು ಜಿಲ್ಲಾ ಸರ್ಕಾರಿ ನೌಕರರ ಸಂಘದ ಮಾಜಿ ಜಿಲ್ಲಾಧ್ಯಕ್ಷ ಹಾಗೂ ನಿವೃತ್ತ ತಹಶೀಲ್ದಾರ್ ಜಿ.ಎಂ. ಸಣ್ಣಮುದ್ದಯ್ಯ, ಬಿಬಿಎಂಪಿ ಮಾಜಿ ಸದಸ್ಯ ರಾಜಣ್ಣ, ಚಂದ್ರಶೇಖರಗೌಡ, ಚಿಕ್ಕಣ್ಣಸ್ವಾಮಿ, ದೇವಾಲಯದ ಪೂಜಾರಿ ಪಾಪಣ್ಣ, ಶ್ರೀರಂಗ ಯಾದವ್ ಮೊದಲಾದವರು ಆಕಾಂಕ್ಷಿಗಳಾಗಿದ್ದಾರೆ. ಸಣ್ಣಮುದ್ದಯ್ಯ ವಿರುದ್ದ ಸಾಕಷ್ಟು ದೂರುಗಳನ್ನು ನೀಡಲಾಗಿದೆ. ಯಾವುದೇ ಕಾರಣಕ್ಕೂ ಸಣ್ಣಮುದ್ದಯ್ಯ ಅವರನ್ನು ಅಧ್ಯಕ್ಷರನ್ನಾಗಿ ನೇಮಕ ಮಾಡಬಾರದು ಎಂಬ ದೂರುಗಳು ಬಿಜೆಪಿ ಮುಖಂಡರಿಗೆ ರವಾನೆಯಾಗಿವೆ.

ಇನ್ನೊಂದೆಡೆ ಕಾಡುಗೊಲ್ಲ ಅಭಿವೃದ್ಧಿ ನಿಗಮದ ಹೆಸರು ಬದಲಾವಣೆಗೆ ಒತ್ತಾಯ ವ್ಯಕ್ತವಾಗುತ್ತಿದೆ. ಇದಕ್ಕೆ  ರಾಜ್ಯ ಯಾದವ ಸಂಘದ ಅಧ್ಯಕ್ಷ ಡಿ.ಟಿ.ಶ್ರೀನಿವಾಸ್ ನೇತೃತ್ವ ವಹಿಸಿದ್ದಾರೆ. ಹೆಸರು ಬದಲಾದರೆ ತಾನೇ ಅಧ್ಯಕ್ಷ ಎಂದು ಹೇಳಿಕೊಂಡು ಒಡಾಡುತ್ತಿದ್ದಾರೆ. ಹೀಗಾಗಿ ಯಾದವ VS/ ಕಾಡುಗೊಲ್ಲರ ನಡುವೆ ಕಿತ್ತಾಟ ಮುಂದುವರಿದಿದೆ. ಬಿಜೆಪಿಗೂ ಇದೇ ಬೇಕಾಗಿದೆ. ನಿಮ್ಮಲ್ಲೇ ಜಗಳವಿದೆ, ಸರಿಪಡಿಸಿಕೊಂಡು ಬನ್ನಿ ಎಂದು ಹೇಳಲು ಸರ್ಕಾರಕ್ಕೆ ಕಾರಣ ಸಿಕ್ಕಿದೆ. ಹಾಗಾಗಿ ಬಿಜೆಪಿ ದಾಳ ಉರುಳಿಸುತ್ತಲೇ ಇದೆ. ಇದನ್ನು ಅರ್ಥ ಮಾಡಿಕೊಳ್ಳದ ಕಾಡುಗೊಲ್ಲ ಸಮುದಾಯ ವ್ಯರ್ಥ ಕಸರತ್ತು ನಡೆಸುತ್ತಿದೆ ಎಂಬ ವಿಶ್ಲೇಷಣೆ ನಡಯುತ್ತಿದೆ.

ಯಾದವರು ಒಂದು ಕಡೆ ಸಭೆ ನಡೆಸಿದರೆ, ಕಾಡುಗೊಲ್ಲರು ಮತ್ತೊಂದು ಕಡೆ ಸಭೆ ನಡೆಸಿ ಮುಂದಿನ ಕಾರ್ಯಕ್ರಮಗಳ ರೂಪುರೇಷೆಗಳನ್ನು ಸಿದ್ದಪಡಿಸಲಾಗುತ್ತಿದೆ. ಯಾದವ (ಗೊಲ್ಲ) ಸಂಘದ ರಾಜ್ಯಧ್ಯಕ್ಷ, ಮಾಜಿ ಸಚಿವ ಎ.ಕೃಷ್ಣಪ್ಪ ಅಳಿಯ ಮತ್ತು ಶಾಸಕಿ ಪೂರ್ಣಿಮಾ ಪತಿ ಡಿ.ಟಿ.ಶ್ರೀನಿವಾಸ್ ಡಿಸೆಂಬರ್ 6ರಂದು ಬೆಂಗಳೂರಿನಲ್ಲಿ ಸಭೆ ಕರೆದಿದ್ದು, ಕಾಡುಗೊಲ್ಲ ಎಂಬುದನ್ನು ಗೊಲ್ಲ ಅಭಿವೃದ್ಧಿ ನಿಗಮವಾಗಿ ಬದಲಾಯಿಸಬೇಕು ಎಂದು ಸರ್ಕಾರದ ಮೇಲೆ ಒತ್ತಡ ಹಾಕಲು ತಯಾರಿ ನಡೆಸುತ್ತಿರುವುದು ಸಾಕಷ್ಟು ಚರ್ಚೆಗೆ ಕಾರಣವಾಗಿದೆ.

ಇದೇ ಕಾರಣವನ್ನು ಮುಂದಿಟ್ಟುಕೊಂಡು ನವೆಂಬರ್ 29 ರಂದು ತುಮಕೂರಿನಲ್ಲಿ ರಾಜ್ಯಮಟ್ಟದ ಕಾಡುಗೊಲ್ಲ ಸಮುದಾಯದ ಮುಖಂಡರ ಸಭೆ ನಡೆದಿದೆ. ಸಭೆಯಲ್ಲಿ ಸುಮಾರು 100ಕ್ಕೂ ಹೆಚ್ಚು ಮಂದಿ ಭಾಗವಹಿಸಿದ್ದರು ಎಂದು ತಿಳಿದುಬಂದಿದೆ. ಕಾಡುಗೊಲ್ಲರನ್ನು ಪರಿಶಿಷ್ಟ ಪಂಗಡಕ್ಕೆ ಸೇರ್ಪಡೆ ಮಾಡಬೇಕು. ಹಟ್ಟಿಗಳನ್ನು ಕಂದಾಯ ಗ್ರಾಮಗಳನ್ನಾಗಿ ಮಾಡಬೇಕು. ಕಾಡುಗೊಲ್ಲ ಹೆಸರಿನಲ್ಲಿ ಜಾತಿ ಪ್ರಮಾಣ ಪತ್ರ ನೀಡಬೇಕು. ಅಭಿವೃದ್ಧಿ ನಿಗಮಕ್ಕೆ ಕಾಡುಗೊಲ್ಲ ಸಮುದಾಯದ ಪ್ರಮುಖರನ್ನೇ ಅಧ್ಯಕ್ಷರನ್ನಾಗಿ ಮಾಡಬೇಕು ಎಂಬ ನಿರ್ಣಯಗಳನ್ನು ಕೈಗೊಳ್ಳಲಾಯಿತು ಎಂದು ಸಭೆಯಲ್ಲಿ ಭಾಗವಹಿಸಿದ್ದ ಮುಖಂಡರೊಬ್ಬರು ನಾನುಗೌರಿ.ಕಾಂಗೆ ಮಾಹಿತಿ ನೀಡಿದರು.

ಸಭೆಯಲ್ಲಿ ಬಿಜೆಪಿ ಬೆಂಬಲಿಗರೇ ಹೆಚ್ಚು ಸಂಖ್ಯೆಯಲ್ಲಿ ಭಾಗವಹಿಸಿದ್ದರು. ಬಿಬಿಎಂಪಿ ಮಾಜಿ ಸದಸ್ಯ ರಾಜಣ್ಣ, ಚೆಂಗಾವರ ಕರಿಯಪ್ಪ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಕೆಲಸ ಮಾಡುವವರು ಸಭೆಯಲ್ಲಿ ಪಾಲ್ಗೊಂಡು ಹೋರಾಟದ ಮುಂದಿನ ರೂಪುರೇಷೆಗಳ ಕುರಿತು ಸಲಹೆ ನೀಡಿದರು. ಸಭೆಯಲ್ಲಿ ಬಿಜೆಪಿ ಬೆಂಬಲಿಗರೇ ಹೆಚ್ಚು ಸಂಖ್ಯೆಯಲ್ಲಿದ್ದು ಸಂಘವನ್ನು ಬಿಜೆಪಿಗೆ ಒತ್ತೆ ಇಟ್ಟರೆ ಹೇಗೆ? ಜನಾಂಗದ ಸಮಸ್ಯೆಗಳನ್ನು ಪರಿಹರಿಸುವುದು ಹೇಗೆ ಎಂಬ ಪ್ರಶ್ನೆಯೂ ವ್ಯಕ್ತವಾಯಿತು. ಇದಕ್ಕೆ ಮುಖಂಡರು ಪಕ್ಷವೇ ಬೇರೆ, ಸಂಘವೇ ಬೇರೆ ಎಂಬ ಉತ್ತರ ನೀಡಿದರು ಎಂದು ಹೇಳಲಾಗಿದೆ.

ಕಾಡುಗೊಲ್ಲ ಅಭಿವೃದ್ಧಿ ನಿಗಮವೇ ಅಯೋಮಯವಾಗಿದೆ. ಅದು ಕಾನೂನುಬದ್ದವಾಗಿಲ್ಲ. ಸಚಿವ ಸಂಪುಟದಲ್ಲಿ ಅನುಮೋದನೆ ದೊರೆತಿಲ್ಲ. ನಿಗಮ ಊರ್ಜಿತವಾಗುತ್ತದೆಯೇ ಎಂಬ ಪ್ರಶ್ನೆ ಸಮುದಾಯದ ಕೆಲ ಮುಖಂಡರನ್ನು ಕಾಡತೊಡಗಿದೆ. ರಾಜ್ಯದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿರುವ ಕಾಡುಗೊಲ್ಲರಿಗೆ ಇದು ಪ್ರತಿಷ್ಠೆಯ ಪ್ರಶ್ನೆಯಾಗಿದೆ.


ಇದನ್ನೂ ಓದಿ: ಕಾಡುಗೊಲ್ಲ ಅಭಿವೃದ್ಧಿ ನಿಗಮದ ಹೆಸರು ಬದಲಿಸಿದ್ದೇಕೆ?; ಸಿಎಂ ಮೇಲೆ ಒತ್ತಡ ತಂದವರು ಯಾರು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...

TMC ತೊರೆದು BJP ಸೇರಿದ ಮಾಜಿ ಸಂಸದರಿಗೆ ಬಿಜೆಪಿಯಿಂದ ರಾಜ್ಯಸಭಾ ಟಿಕೆಟ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (TMC) ಪಕ್ಷದ ರಾಜ್ಯಸಭಾ ಸ್ಥಾನಗಳಿಗೆ ರಾಜೀನಾಮೆ ನೀಡಿದ ಕೆಲವೇ ವಾರಗಳಲ್ಲಿ, ಆ ಮೂವರು ಮಾಜಿ ಸಂಸದರು ಈಗ ಬೇರೆ ಬಣ್ಣದ (BJP) ಶಾಲು ಧರಿಸಿ ಮತ್ತೆ...