Homeಮುಖಪುಟಕಾಡುಗೊಲ್ಲ ಅಭಿವೃದ್ಧಿ ನಿಗಮವೇ ಅಯೋಮಯ: ಆದರೂ ಅಧ್ಯಕ್ಷ ಸ್ಥಾನಕ್ಕೆ ಪೈಪೋಟಿ

ಕಾಡುಗೊಲ್ಲ ಅಭಿವೃದ್ಧಿ ನಿಗಮವೇ ಅಯೋಮಯ: ಆದರೂ ಅಧ್ಯಕ್ಷ ಸ್ಥಾನಕ್ಕೆ ಪೈಪೋಟಿ

ಯಾದವ VS/ ಕಾಡುಗೊಲ್ಲರ ನಡುವೆ ಕಿತ್ತಾಟ ಮುಂದುವರಿದಿದೆ. ಬಿಜೆಪಿಗೂ ಇದೇ ಬೇಕಾಗಿದೆ. ನಿಮ್ಮಲ್ಲೇ ಜಗಳವಿದೆ, ಸರಿಪಡಿಸಿಕೊಂಡು ಬನ್ನಿ ಎಂದು ಹೇಳಲು ಸರ್ಕಾರಕ್ಕೆ ಕಾರಣ ಸಿಕ್ಕಿದೆ.

- Advertisement -
- Advertisement -

ಶಿರಾ ಉಪಚುನಾವಣೆಯ ಹಿನ್ನೆಲೆಯಲ್ಲಿ ದಿಢೀರ್ ಸ್ಥಾಪನೆಯಾದ ಕಾಡುಗೊಲ್ಲ ಅಭಿವೃದ್ಧಿ ನಿಗಮ ಇನ್ನೂ ಪೂರ್ಣವಾಗಿ ಅಸ್ತಿತ್ವಕ್ಕೆ ಬಂದಿಲ್ಲ. ಸಂಪುಟ ಸಭೆ ಒಪ್ಪಿಗೆಯನ್ನೂ ಪಡೆದುಕೊಂಡಿಲ್ಲ. ಅನುದಾನವನ್ನೂ ನಿಗದಿ ಮಾಡಿಲ್ಲ. ಆದರೆ ಅಭಿವೃದ್ಧಿ ನಿಗಮಕ್ಕೆ ಅಧ್ಯಕ್ಷರಾಗಲು ಹಲವರ ನಡುವೆ ತೆರೆಮರೆಯಲ್ಲೇ ಪೈಪೋಟಿ ಎದ್ದಿದೆ. ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರದಲ್ಲಿದ್ದು ಬಿಜೆಪಿ ಬೆಂಬಲಿಗರನ್ನು ಹೊರತುಪಡಿಸಿ ಬೇರೆಯವರನ್ನು ಅಧ್ಯಕ್ಷರನ್ನಾಗಿ ಮಾಡುವುದು ಸಾಧ್ಯವಿಲ್ಲದ ಮಾತು. ಹಾಗಾಗಿ ಬಿಜೆಪಿ ಮುಖಂಡರನ್ನು ಮುಂದಿಟ್ಟುಕೊಂಡು  ಕಾಡುಗೊಲ್ಲ ಅಭಿವೃದ್ಧಿ ನಿಗಮಕ್ಕೆ ಅಧ್ಯಕ್ಷರಾಗಲು ಪೈಪೋಟಿ ನಡೆಯುತ್ತಿದೆ.

ನಿವೃತ್ತ ಐಎಫ್ಎಸ್ ಅಧಿಕಾರಿ ಚಿಕ್ಕಪ್ಪಯ್ಯ, ತುಮಕೂರು ಜಿಲ್ಲಾ ಸರ್ಕಾರಿ ನೌಕರರ ಸಂಘದ ಮಾಜಿ ಜಿಲ್ಲಾಧ್ಯಕ್ಷ ಹಾಗೂ ನಿವೃತ್ತ ತಹಶೀಲ್ದಾರ್ ಜಿ.ಎಂ. ಸಣ್ಣಮುದ್ದಯ್ಯ, ಬಿಬಿಎಂಪಿ ಮಾಜಿ ಸದಸ್ಯ ರಾಜಣ್ಣ, ಚಂದ್ರಶೇಖರಗೌಡ, ಚಿಕ್ಕಣ್ಣಸ್ವಾಮಿ, ದೇವಾಲಯದ ಪೂಜಾರಿ ಪಾಪಣ್ಣ, ಶ್ರೀರಂಗ ಯಾದವ್ ಮೊದಲಾದವರು ಆಕಾಂಕ್ಷಿಗಳಾಗಿದ್ದಾರೆ. ಸಣ್ಣಮುದ್ದಯ್ಯ ವಿರುದ್ದ ಸಾಕಷ್ಟು ದೂರುಗಳನ್ನು ನೀಡಲಾಗಿದೆ. ಯಾವುದೇ ಕಾರಣಕ್ಕೂ ಸಣ್ಣಮುದ್ದಯ್ಯ ಅವರನ್ನು ಅಧ್ಯಕ್ಷರನ್ನಾಗಿ ನೇಮಕ ಮಾಡಬಾರದು ಎಂಬ ದೂರುಗಳು ಬಿಜೆಪಿ ಮುಖಂಡರಿಗೆ ರವಾನೆಯಾಗಿವೆ.

ಇನ್ನೊಂದೆಡೆ ಕಾಡುಗೊಲ್ಲ ಅಭಿವೃದ್ಧಿ ನಿಗಮದ ಹೆಸರು ಬದಲಾವಣೆಗೆ ಒತ್ತಾಯ ವ್ಯಕ್ತವಾಗುತ್ತಿದೆ. ಇದಕ್ಕೆ  ರಾಜ್ಯ ಯಾದವ ಸಂಘದ ಅಧ್ಯಕ್ಷ ಡಿ.ಟಿ.ಶ್ರೀನಿವಾಸ್ ನೇತೃತ್ವ ವಹಿಸಿದ್ದಾರೆ. ಹೆಸರು ಬದಲಾದರೆ ತಾನೇ ಅಧ್ಯಕ್ಷ ಎಂದು ಹೇಳಿಕೊಂಡು ಒಡಾಡುತ್ತಿದ್ದಾರೆ. ಹೀಗಾಗಿ ಯಾದವ VS/ ಕಾಡುಗೊಲ್ಲರ ನಡುವೆ ಕಿತ್ತಾಟ ಮುಂದುವರಿದಿದೆ. ಬಿಜೆಪಿಗೂ ಇದೇ ಬೇಕಾಗಿದೆ. ನಿಮ್ಮಲ್ಲೇ ಜಗಳವಿದೆ, ಸರಿಪಡಿಸಿಕೊಂಡು ಬನ್ನಿ ಎಂದು ಹೇಳಲು ಸರ್ಕಾರಕ್ಕೆ ಕಾರಣ ಸಿಕ್ಕಿದೆ. ಹಾಗಾಗಿ ಬಿಜೆಪಿ ದಾಳ ಉರುಳಿಸುತ್ತಲೇ ಇದೆ. ಇದನ್ನು ಅರ್ಥ ಮಾಡಿಕೊಳ್ಳದ ಕಾಡುಗೊಲ್ಲ ಸಮುದಾಯ ವ್ಯರ್ಥ ಕಸರತ್ತು ನಡೆಸುತ್ತಿದೆ ಎಂಬ ವಿಶ್ಲೇಷಣೆ ನಡಯುತ್ತಿದೆ.

ಯಾದವರು ಒಂದು ಕಡೆ ಸಭೆ ನಡೆಸಿದರೆ, ಕಾಡುಗೊಲ್ಲರು ಮತ್ತೊಂದು ಕಡೆ ಸಭೆ ನಡೆಸಿ ಮುಂದಿನ ಕಾರ್ಯಕ್ರಮಗಳ ರೂಪುರೇಷೆಗಳನ್ನು ಸಿದ್ದಪಡಿಸಲಾಗುತ್ತಿದೆ. ಯಾದವ (ಗೊಲ್ಲ) ಸಂಘದ ರಾಜ್ಯಧ್ಯಕ್ಷ, ಮಾಜಿ ಸಚಿವ ಎ.ಕೃಷ್ಣಪ್ಪ ಅಳಿಯ ಮತ್ತು ಶಾಸಕಿ ಪೂರ್ಣಿಮಾ ಪತಿ ಡಿ.ಟಿ.ಶ್ರೀನಿವಾಸ್ ಡಿಸೆಂಬರ್ 6ರಂದು ಬೆಂಗಳೂರಿನಲ್ಲಿ ಸಭೆ ಕರೆದಿದ್ದು, ಕಾಡುಗೊಲ್ಲ ಎಂಬುದನ್ನು ಗೊಲ್ಲ ಅಭಿವೃದ್ಧಿ ನಿಗಮವಾಗಿ ಬದಲಾಯಿಸಬೇಕು ಎಂದು ಸರ್ಕಾರದ ಮೇಲೆ ಒತ್ತಡ ಹಾಕಲು ತಯಾರಿ ನಡೆಸುತ್ತಿರುವುದು ಸಾಕಷ್ಟು ಚರ್ಚೆಗೆ ಕಾರಣವಾಗಿದೆ.

ಇದೇ ಕಾರಣವನ್ನು ಮುಂದಿಟ್ಟುಕೊಂಡು ನವೆಂಬರ್ 29 ರಂದು ತುಮಕೂರಿನಲ್ಲಿ ರಾಜ್ಯಮಟ್ಟದ ಕಾಡುಗೊಲ್ಲ ಸಮುದಾಯದ ಮುಖಂಡರ ಸಭೆ ನಡೆದಿದೆ. ಸಭೆಯಲ್ಲಿ ಸುಮಾರು 100ಕ್ಕೂ ಹೆಚ್ಚು ಮಂದಿ ಭಾಗವಹಿಸಿದ್ದರು ಎಂದು ತಿಳಿದುಬಂದಿದೆ. ಕಾಡುಗೊಲ್ಲರನ್ನು ಪರಿಶಿಷ್ಟ ಪಂಗಡಕ್ಕೆ ಸೇರ್ಪಡೆ ಮಾಡಬೇಕು. ಹಟ್ಟಿಗಳನ್ನು ಕಂದಾಯ ಗ್ರಾಮಗಳನ್ನಾಗಿ ಮಾಡಬೇಕು. ಕಾಡುಗೊಲ್ಲ ಹೆಸರಿನಲ್ಲಿ ಜಾತಿ ಪ್ರಮಾಣ ಪತ್ರ ನೀಡಬೇಕು. ಅಭಿವೃದ್ಧಿ ನಿಗಮಕ್ಕೆ ಕಾಡುಗೊಲ್ಲ ಸಮುದಾಯದ ಪ್ರಮುಖರನ್ನೇ ಅಧ್ಯಕ್ಷರನ್ನಾಗಿ ಮಾಡಬೇಕು ಎಂಬ ನಿರ್ಣಯಗಳನ್ನು ಕೈಗೊಳ್ಳಲಾಯಿತು ಎಂದು ಸಭೆಯಲ್ಲಿ ಭಾಗವಹಿಸಿದ್ದ ಮುಖಂಡರೊಬ್ಬರು ನಾನುಗೌರಿ.ಕಾಂಗೆ ಮಾಹಿತಿ ನೀಡಿದರು.

ಸಭೆಯಲ್ಲಿ ಬಿಜೆಪಿ ಬೆಂಬಲಿಗರೇ ಹೆಚ್ಚು ಸಂಖ್ಯೆಯಲ್ಲಿ ಭಾಗವಹಿಸಿದ್ದರು. ಬಿಬಿಎಂಪಿ ಮಾಜಿ ಸದಸ್ಯ ರಾಜಣ್ಣ, ಚೆಂಗಾವರ ಕರಿಯಪ್ಪ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಕೆಲಸ ಮಾಡುವವರು ಸಭೆಯಲ್ಲಿ ಪಾಲ್ಗೊಂಡು ಹೋರಾಟದ ಮುಂದಿನ ರೂಪುರೇಷೆಗಳ ಕುರಿತು ಸಲಹೆ ನೀಡಿದರು. ಸಭೆಯಲ್ಲಿ ಬಿಜೆಪಿ ಬೆಂಬಲಿಗರೇ ಹೆಚ್ಚು ಸಂಖ್ಯೆಯಲ್ಲಿದ್ದು ಸಂಘವನ್ನು ಬಿಜೆಪಿಗೆ ಒತ್ತೆ ಇಟ್ಟರೆ ಹೇಗೆ? ಜನಾಂಗದ ಸಮಸ್ಯೆಗಳನ್ನು ಪರಿಹರಿಸುವುದು ಹೇಗೆ ಎಂಬ ಪ್ರಶ್ನೆಯೂ ವ್ಯಕ್ತವಾಯಿತು. ಇದಕ್ಕೆ ಮುಖಂಡರು ಪಕ್ಷವೇ ಬೇರೆ, ಸಂಘವೇ ಬೇರೆ ಎಂಬ ಉತ್ತರ ನೀಡಿದರು ಎಂದು ಹೇಳಲಾಗಿದೆ.

ಕಾಡುಗೊಲ್ಲ ಅಭಿವೃದ್ಧಿ ನಿಗಮವೇ ಅಯೋಮಯವಾಗಿದೆ. ಅದು ಕಾನೂನುಬದ್ದವಾಗಿಲ್ಲ. ಸಚಿವ ಸಂಪುಟದಲ್ಲಿ ಅನುಮೋದನೆ ದೊರೆತಿಲ್ಲ. ನಿಗಮ ಊರ್ಜಿತವಾಗುತ್ತದೆಯೇ ಎಂಬ ಪ್ರಶ್ನೆ ಸಮುದಾಯದ ಕೆಲ ಮುಖಂಡರನ್ನು ಕಾಡತೊಡಗಿದೆ. ರಾಜ್ಯದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿರುವ ಕಾಡುಗೊಲ್ಲರಿಗೆ ಇದು ಪ್ರತಿಷ್ಠೆಯ ಪ್ರಶ್ನೆಯಾಗಿದೆ.


ಇದನ್ನೂ ಓದಿ: ಕಾಡುಗೊಲ್ಲ ಅಭಿವೃದ್ಧಿ ನಿಗಮದ ಹೆಸರು ಬದಲಿಸಿದ್ದೇಕೆ?; ಸಿಎಂ ಮೇಲೆ ಒತ್ತಡ ತಂದವರು ಯಾರು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...