Homeಮುಖಪುಟಕಾಡುಗೊಲ್ಲ ಅಭಿವೃದ್ಧಿ ನಿಗಮವೇ ಅಯೋಮಯ: ಆದರೂ ಅಧ್ಯಕ್ಷ ಸ್ಥಾನಕ್ಕೆ ಪೈಪೋಟಿ

ಕಾಡುಗೊಲ್ಲ ಅಭಿವೃದ್ಧಿ ನಿಗಮವೇ ಅಯೋಮಯ: ಆದರೂ ಅಧ್ಯಕ್ಷ ಸ್ಥಾನಕ್ಕೆ ಪೈಪೋಟಿ

ಯಾದವ VS/ ಕಾಡುಗೊಲ್ಲರ ನಡುವೆ ಕಿತ್ತಾಟ ಮುಂದುವರಿದಿದೆ. ಬಿಜೆಪಿಗೂ ಇದೇ ಬೇಕಾಗಿದೆ. ನಿಮ್ಮಲ್ಲೇ ಜಗಳವಿದೆ, ಸರಿಪಡಿಸಿಕೊಂಡು ಬನ್ನಿ ಎಂದು ಹೇಳಲು ಸರ್ಕಾರಕ್ಕೆ ಕಾರಣ ಸಿಕ್ಕಿದೆ.

- Advertisement -
- Advertisement -

ಶಿರಾ ಉಪಚುನಾವಣೆಯ ಹಿನ್ನೆಲೆಯಲ್ಲಿ ದಿಢೀರ್ ಸ್ಥಾಪನೆಯಾದ ಕಾಡುಗೊಲ್ಲ ಅಭಿವೃದ್ಧಿ ನಿಗಮ ಇನ್ನೂ ಪೂರ್ಣವಾಗಿ ಅಸ್ತಿತ್ವಕ್ಕೆ ಬಂದಿಲ್ಲ. ಸಂಪುಟ ಸಭೆ ಒಪ್ಪಿಗೆಯನ್ನೂ ಪಡೆದುಕೊಂಡಿಲ್ಲ. ಅನುದಾನವನ್ನೂ ನಿಗದಿ ಮಾಡಿಲ್ಲ. ಆದರೆ ಅಭಿವೃದ್ಧಿ ನಿಗಮಕ್ಕೆ ಅಧ್ಯಕ್ಷರಾಗಲು ಹಲವರ ನಡುವೆ ತೆರೆಮರೆಯಲ್ಲೇ ಪೈಪೋಟಿ ಎದ್ದಿದೆ. ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರದಲ್ಲಿದ್ದು ಬಿಜೆಪಿ ಬೆಂಬಲಿಗರನ್ನು ಹೊರತುಪಡಿಸಿ ಬೇರೆಯವರನ್ನು ಅಧ್ಯಕ್ಷರನ್ನಾಗಿ ಮಾಡುವುದು ಸಾಧ್ಯವಿಲ್ಲದ ಮಾತು. ಹಾಗಾಗಿ ಬಿಜೆಪಿ ಮುಖಂಡರನ್ನು ಮುಂದಿಟ್ಟುಕೊಂಡು  ಕಾಡುಗೊಲ್ಲ ಅಭಿವೃದ್ಧಿ ನಿಗಮಕ್ಕೆ ಅಧ್ಯಕ್ಷರಾಗಲು ಪೈಪೋಟಿ ನಡೆಯುತ್ತಿದೆ.

ನಿವೃತ್ತ ಐಎಫ್ಎಸ್ ಅಧಿಕಾರಿ ಚಿಕ್ಕಪ್ಪಯ್ಯ, ತುಮಕೂರು ಜಿಲ್ಲಾ ಸರ್ಕಾರಿ ನೌಕರರ ಸಂಘದ ಮಾಜಿ ಜಿಲ್ಲಾಧ್ಯಕ್ಷ ಹಾಗೂ ನಿವೃತ್ತ ತಹಶೀಲ್ದಾರ್ ಜಿ.ಎಂ. ಸಣ್ಣಮುದ್ದಯ್ಯ, ಬಿಬಿಎಂಪಿ ಮಾಜಿ ಸದಸ್ಯ ರಾಜಣ್ಣ, ಚಂದ್ರಶೇಖರಗೌಡ, ಚಿಕ್ಕಣ್ಣಸ್ವಾಮಿ, ದೇವಾಲಯದ ಪೂಜಾರಿ ಪಾಪಣ್ಣ, ಶ್ರೀರಂಗ ಯಾದವ್ ಮೊದಲಾದವರು ಆಕಾಂಕ್ಷಿಗಳಾಗಿದ್ದಾರೆ. ಸಣ್ಣಮುದ್ದಯ್ಯ ವಿರುದ್ದ ಸಾಕಷ್ಟು ದೂರುಗಳನ್ನು ನೀಡಲಾಗಿದೆ. ಯಾವುದೇ ಕಾರಣಕ್ಕೂ ಸಣ್ಣಮುದ್ದಯ್ಯ ಅವರನ್ನು ಅಧ್ಯಕ್ಷರನ್ನಾಗಿ ನೇಮಕ ಮಾಡಬಾರದು ಎಂಬ ದೂರುಗಳು ಬಿಜೆಪಿ ಮುಖಂಡರಿಗೆ ರವಾನೆಯಾಗಿವೆ.

ಇನ್ನೊಂದೆಡೆ ಕಾಡುಗೊಲ್ಲ ಅಭಿವೃದ್ಧಿ ನಿಗಮದ ಹೆಸರು ಬದಲಾವಣೆಗೆ ಒತ್ತಾಯ ವ್ಯಕ್ತವಾಗುತ್ತಿದೆ. ಇದಕ್ಕೆ  ರಾಜ್ಯ ಯಾದವ ಸಂಘದ ಅಧ್ಯಕ್ಷ ಡಿ.ಟಿ.ಶ್ರೀನಿವಾಸ್ ನೇತೃತ್ವ ವಹಿಸಿದ್ದಾರೆ. ಹೆಸರು ಬದಲಾದರೆ ತಾನೇ ಅಧ್ಯಕ್ಷ ಎಂದು ಹೇಳಿಕೊಂಡು ಒಡಾಡುತ್ತಿದ್ದಾರೆ. ಹೀಗಾಗಿ ಯಾದವ VS/ ಕಾಡುಗೊಲ್ಲರ ನಡುವೆ ಕಿತ್ತಾಟ ಮುಂದುವರಿದಿದೆ. ಬಿಜೆಪಿಗೂ ಇದೇ ಬೇಕಾಗಿದೆ. ನಿಮ್ಮಲ್ಲೇ ಜಗಳವಿದೆ, ಸರಿಪಡಿಸಿಕೊಂಡು ಬನ್ನಿ ಎಂದು ಹೇಳಲು ಸರ್ಕಾರಕ್ಕೆ ಕಾರಣ ಸಿಕ್ಕಿದೆ. ಹಾಗಾಗಿ ಬಿಜೆಪಿ ದಾಳ ಉರುಳಿಸುತ್ತಲೇ ಇದೆ. ಇದನ್ನು ಅರ್ಥ ಮಾಡಿಕೊಳ್ಳದ ಕಾಡುಗೊಲ್ಲ ಸಮುದಾಯ ವ್ಯರ್ಥ ಕಸರತ್ತು ನಡೆಸುತ್ತಿದೆ ಎಂಬ ವಿಶ್ಲೇಷಣೆ ನಡಯುತ್ತಿದೆ.

ಯಾದವರು ಒಂದು ಕಡೆ ಸಭೆ ನಡೆಸಿದರೆ, ಕಾಡುಗೊಲ್ಲರು ಮತ್ತೊಂದು ಕಡೆ ಸಭೆ ನಡೆಸಿ ಮುಂದಿನ ಕಾರ್ಯಕ್ರಮಗಳ ರೂಪುರೇಷೆಗಳನ್ನು ಸಿದ್ದಪಡಿಸಲಾಗುತ್ತಿದೆ. ಯಾದವ (ಗೊಲ್ಲ) ಸಂಘದ ರಾಜ್ಯಧ್ಯಕ್ಷ, ಮಾಜಿ ಸಚಿವ ಎ.ಕೃಷ್ಣಪ್ಪ ಅಳಿಯ ಮತ್ತು ಶಾಸಕಿ ಪೂರ್ಣಿಮಾ ಪತಿ ಡಿ.ಟಿ.ಶ್ರೀನಿವಾಸ್ ಡಿಸೆಂಬರ್ 6ರಂದು ಬೆಂಗಳೂರಿನಲ್ಲಿ ಸಭೆ ಕರೆದಿದ್ದು, ಕಾಡುಗೊಲ್ಲ ಎಂಬುದನ್ನು ಗೊಲ್ಲ ಅಭಿವೃದ್ಧಿ ನಿಗಮವಾಗಿ ಬದಲಾಯಿಸಬೇಕು ಎಂದು ಸರ್ಕಾರದ ಮೇಲೆ ಒತ್ತಡ ಹಾಕಲು ತಯಾರಿ ನಡೆಸುತ್ತಿರುವುದು ಸಾಕಷ್ಟು ಚರ್ಚೆಗೆ ಕಾರಣವಾಗಿದೆ.

ಇದೇ ಕಾರಣವನ್ನು ಮುಂದಿಟ್ಟುಕೊಂಡು ನವೆಂಬರ್ 29 ರಂದು ತುಮಕೂರಿನಲ್ಲಿ ರಾಜ್ಯಮಟ್ಟದ ಕಾಡುಗೊಲ್ಲ ಸಮುದಾಯದ ಮುಖಂಡರ ಸಭೆ ನಡೆದಿದೆ. ಸಭೆಯಲ್ಲಿ ಸುಮಾರು 100ಕ್ಕೂ ಹೆಚ್ಚು ಮಂದಿ ಭಾಗವಹಿಸಿದ್ದರು ಎಂದು ತಿಳಿದುಬಂದಿದೆ. ಕಾಡುಗೊಲ್ಲರನ್ನು ಪರಿಶಿಷ್ಟ ಪಂಗಡಕ್ಕೆ ಸೇರ್ಪಡೆ ಮಾಡಬೇಕು. ಹಟ್ಟಿಗಳನ್ನು ಕಂದಾಯ ಗ್ರಾಮಗಳನ್ನಾಗಿ ಮಾಡಬೇಕು. ಕಾಡುಗೊಲ್ಲ ಹೆಸರಿನಲ್ಲಿ ಜಾತಿ ಪ್ರಮಾಣ ಪತ್ರ ನೀಡಬೇಕು. ಅಭಿವೃದ್ಧಿ ನಿಗಮಕ್ಕೆ ಕಾಡುಗೊಲ್ಲ ಸಮುದಾಯದ ಪ್ರಮುಖರನ್ನೇ ಅಧ್ಯಕ್ಷರನ್ನಾಗಿ ಮಾಡಬೇಕು ಎಂಬ ನಿರ್ಣಯಗಳನ್ನು ಕೈಗೊಳ್ಳಲಾಯಿತು ಎಂದು ಸಭೆಯಲ್ಲಿ ಭಾಗವಹಿಸಿದ್ದ ಮುಖಂಡರೊಬ್ಬರು ನಾನುಗೌರಿ.ಕಾಂಗೆ ಮಾಹಿತಿ ನೀಡಿದರು.

ಸಭೆಯಲ್ಲಿ ಬಿಜೆಪಿ ಬೆಂಬಲಿಗರೇ ಹೆಚ್ಚು ಸಂಖ್ಯೆಯಲ್ಲಿ ಭಾಗವಹಿಸಿದ್ದರು. ಬಿಬಿಎಂಪಿ ಮಾಜಿ ಸದಸ್ಯ ರಾಜಣ್ಣ, ಚೆಂಗಾವರ ಕರಿಯಪ್ಪ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಕೆಲಸ ಮಾಡುವವರು ಸಭೆಯಲ್ಲಿ ಪಾಲ್ಗೊಂಡು ಹೋರಾಟದ ಮುಂದಿನ ರೂಪುರೇಷೆಗಳ ಕುರಿತು ಸಲಹೆ ನೀಡಿದರು. ಸಭೆಯಲ್ಲಿ ಬಿಜೆಪಿ ಬೆಂಬಲಿಗರೇ ಹೆಚ್ಚು ಸಂಖ್ಯೆಯಲ್ಲಿದ್ದು ಸಂಘವನ್ನು ಬಿಜೆಪಿಗೆ ಒತ್ತೆ ಇಟ್ಟರೆ ಹೇಗೆ? ಜನಾಂಗದ ಸಮಸ್ಯೆಗಳನ್ನು ಪರಿಹರಿಸುವುದು ಹೇಗೆ ಎಂಬ ಪ್ರಶ್ನೆಯೂ ವ್ಯಕ್ತವಾಯಿತು. ಇದಕ್ಕೆ ಮುಖಂಡರು ಪಕ್ಷವೇ ಬೇರೆ, ಸಂಘವೇ ಬೇರೆ ಎಂಬ ಉತ್ತರ ನೀಡಿದರು ಎಂದು ಹೇಳಲಾಗಿದೆ.

ಕಾಡುಗೊಲ್ಲ ಅಭಿವೃದ್ಧಿ ನಿಗಮವೇ ಅಯೋಮಯವಾಗಿದೆ. ಅದು ಕಾನೂನುಬದ್ದವಾಗಿಲ್ಲ. ಸಚಿವ ಸಂಪುಟದಲ್ಲಿ ಅನುಮೋದನೆ ದೊರೆತಿಲ್ಲ. ನಿಗಮ ಊರ್ಜಿತವಾಗುತ್ತದೆಯೇ ಎಂಬ ಪ್ರಶ್ನೆ ಸಮುದಾಯದ ಕೆಲ ಮುಖಂಡರನ್ನು ಕಾಡತೊಡಗಿದೆ. ರಾಜ್ಯದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿರುವ ಕಾಡುಗೊಲ್ಲರಿಗೆ ಇದು ಪ್ರತಿಷ್ಠೆಯ ಪ್ರಶ್ನೆಯಾಗಿದೆ.


ಇದನ್ನೂ ಓದಿ: ಕಾಡುಗೊಲ್ಲ ಅಭಿವೃದ್ಧಿ ನಿಗಮದ ಹೆಸರು ಬದಲಿಸಿದ್ದೇಕೆ?; ಸಿಎಂ ಮೇಲೆ ಒತ್ತಡ ತಂದವರು ಯಾರು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....