Homeಕರ್ನಾಟಕವರುಣ ಜೊತೆಗೆ ಕೋಲಾರದಿಂದಲೂ ಸ್ಪರ್ಧೆ: ಸಿದ್ದರಾಮಯ್ಯ

ವರುಣ ಜೊತೆಗೆ ಕೋಲಾರದಿಂದಲೂ ಸ್ಪರ್ಧೆ: ಸಿದ್ದರಾಮಯ್ಯ

- Advertisement -
- Advertisement -

ವರುಣ ವಿಧಾನಸಭಾ ಕ್ಷೇತ್ರದ ಜೊತೆಗೆ ಕೋಲಾರದಿಂದಲೂ ಸ್ಪರ್ಧೆ ಮಾಡುವುದಾಗಿ ಹೇಳಿಕೆ ನೀಡಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ಪರ್ಧಾಕ್ಷೇತ್ರದ ಕುತೂಹಲಕ್ಕೆ ತೆರೆ ಎಳೆದಿದ್ದಾರೆ.

ಎಚ್‌ಡಿ ಕೋಟೆಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿರುವ ಅವರು,  “ವರುಣ ಕ್ಷೇತ್ರದಿಂದ ಗೆದ್ದಾಗಲೇ ನಾನು ಸಿಎಂ ಆಗಿದ್ದು. ವರುಣ ಕ್ಷೇತ್ರವೇ ನನ್ನ ಹುಟ್ಟೂರು. ನನ್ನ ಕೊನೆ ಚುನಾವಣೆ ಹುಟ್ಟೂರಿನಲ್ಲಿ ಆಗಬೇಕೆಂಬ ಆಸೆ ಇದೆ, ಹಾಗಾಗಿ ಇಲ್ಲಿಂದ ಸ್ಪರ್ಧೆ ಮಾಡುತ್ತಿದ್ದೇನೆ” ಎಂದಿದ್ದಾರೆ.

“ಯಾವುದೇ ಒಂದು ಕ್ಷೇತ್ರ ಲಕ್ಕಿ ಹಾಗೂ ಅನ್‌ಲಕ್ಕಿ ಅಲ್ಲ. ನನಗೆ ಅದರ ಮೇಲೆ ನಂಬಿಕೆಯೂ ಇಲ್ಲ. ಕೋಲಾರ ಕ್ಷೇತ್ರದ ಜನರಿಂದ ಹೆಚ್ಚು ಒತ್ತಡ ಬರುತ್ತಿದೆ. ಹೀಗಾಗಿ ವರುಣಾ ಜತೆಗೆ ಕೋಲಾರದಿಂದಲೂ ಸ್ಪರ್ಧೆ ಮಾಡುತ್ತೇನೆ” ಎಂದು ಸ್ಪಷ್ಟಪಡಿಸಿದ್ದಾರೆ.

“ಕಳೆದ ಚುನಾವಣೆಯಲ್ಲಿ ಬಿಜೆಪಿ ಮತ್ತು ಜೆಡಿಎಸ್ ಮ್ಯಾಚ್ ಫಿಕ್ಸ್ ಮಾಡಿಕೊಂಡಿತ್ತು. ಈ ಚುನಾವಣೆಯಲ್ಲೂ ಅದರ ಸಾಧ್ಯತೆ ಇದೆ. ಎರಡೂ ಪಕ್ಷಗಳು ಮೈತ್ರಿ ಮಾಡಿಕೊಂಡರೂ ಅಚ್ಚರಿ ಇಲ್ಲ” ಎಂದು ತಿಳಿಸಿದ್ದಾರೆ.

ಕಾಂಗ್ರೆಸ್ ಹೈಕಮಾಂಡ್‌‌ ಜತೆ ಮಾತನಾಡಿದ್ದೇನೆ ಎಂಬ ಕುಮಾರಸ್ವಾಮಿ ಹೇಳಿಕೆ ವಿಚಾರಕ್ಕೆ ತಿರುಗೇಟು ನೀಡಿದ ಅವರು, “ನಮ್ಮ ಹೈಕಮಾಂಡ್ ಜತೆಗೆ ಯಾರೂ ಮಾತನಾಡಿಲ್ಲ. ಮಾತನಾಡುವುದೂ ಇಲ್ಲ. ಈ ಬಾರಿ ನಾವು ಏಕಾಂಗಿಯಾಗಿ ಅಧಿಕಾರಕ್ಕೆ ಬರುತ್ತೇವೆ” ಎಂದು ಹೇಳಿದ್ದಾರೆ.

ಯಡಿಯೂರಪ್ಪ ನಿವಾಸದ ಮೇಲಿನ ಕಲ್ಲು ತೂರಾಟದ ವಿಚಾರದ ಬಗ್ಗೆ ಮಾತನಾಡಿದ ಸಿದ್ದರಾಮಯ್ಯ, ಬೊಮ್ಮಾಯಿಯವರು ಇದು ಕಾಂಗ್ರೆಸ್‌ನವರ ಕೃತ್ಯ ಎನ್ನುತ್ತಾರೆ. ಯಡಿಯೂರಪ್ಪನವರೇ ಕಾಂಗ್ರೆಸ್ ನವರು ಅಲ್ಲ ಅಂತ ಹೇಳಿದ್ದಾರೆ. ಯಡಿಯೂರಪ್ಪನವರಿಗಿಂತ ಬೊಮ್ಮಾಯಿಗೆ ಈ ವಿಚಾರ ಹೆಚ್ಚು ಗೊತ್ತೇ? ಎಂದು ಪ್ರಶ್ನಿಸಿದ್ದಾರೆ.

ಮೀಸಲಾತಿಗೆ ಕಾಂಗ್ರೆಸ್ ವಿರೋಧ ಇರಲಿಲ್ಲ. ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಮೀಸಲಾತಿ ಕೊಡಬೇಕಿತ್ತು. ಮೂರುವರೆ ವರ್ಷದಿಂದ ಈ ಬಗ್ಗೆ ಸುಮ್ಮನಿದ್ದ ಬಿಜೆಪಿ ಈಗ ಏನು ಮಾಡುತ್ತಿದೆ? ಎಂದು ಕೇಳಿದ್ದಾರೆ.

ಸಿದ್ದರಾಮಯ್ಯನವರು ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಯಾವ ಕ್ಷೇತ್ರದಿಂದ ಸ್ಪರ್ಧಿಸುತ್ತಾರೆ ಎಂಬುದು ಬಹುಕಾಲದಿಂದ ಚರ್ಚೆಯಾಗುತ್ತಿರುವ ವಿಷಯವಾಗಿದೆ. ಅವರು ಸದ್ಯ ಪ್ರತಿನಿಧಿಸುತ್ತಿರುವ ಬಾದಾಮಿ ಕ್ಷೇತ್ರ ದೂರವಾದ್ದರಿಂದ ಬೆಂಗಳೂರಿಗೆ ಹತ್ತಿರದ ಕ್ಷೇತ್ರ ಇದ್ದರೆ ಸೂಕ್ತ ಎಂದು ಕೆಲ ದಿನಗಳ ಹಿಂದೆ ಕೋಲಾರದಿಂದ ಸ್ಪರ್ಧಿಸುವ ಇಂಗಿತ ವ್ಯಕ್ತಪಡಿಸಿದ್ದರು. ಆದರೆ ಸದ್ಯ ಅವರು ಕೋಲಾರದಿಂದ ಹಿಂದೆ ಸರಿಯುತ್ತಾರೆ ಅಥವಾ ಕೋಲಾರ ಮತ್ತು ವರುಣಾ ಎರಡು ಕ್ಷೇತ್ರಗಳಿಂದಲೂ ಸ್ಪರ್ಧಿಸುತ್ತಾರೆ ಎಂಬ ವದಂತಿಗಳು ಹಬ್ಬಿದ್ದವು. ಈಗ ಸ್ಪಷ್ಟ ಚಿತ್ರಣ ಸಿಕ್ಕಿದೆ.

ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದಲ್ಲಿ ನಡೆದ 13 ಚುನಾವಣೆಗಳ ಪೈಕಿ ಐದು ಬಾರಿ ಸಿದ್ದರಾಮಯ್ಯನವರು ಗೆದ್ದಿದ್ದರು. ಸಿದ್ದರಾಮಯ್ಯನವರಿಗೆ ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದ ನಂತರದಲ್ಲಿ ರಾಜಕೀಯ ನೆಲೆಯನ್ನು ಒದಗಿಸಿದ್ದು ವರುಣ. ಕುಲದೀಪ್ ಸಿಂಗ್ ನೇತೃತ್ವದ ಕ್ಷೇತ್ರ ಪುನರ್ ವಿಂಗಡಣಾ ವರದಿಯಂತೆ ವರುಣ ಹೋಬಳಿಯನ್ನು ಪ್ರತ್ಯೇಕಿಸಿ, ಟಿ.ನರಸೀಪರ ಹಾಗೂ ವರುಣದ ಭಾಗಶಃ ಪ್ರದೇಶಗಳನ್ನು ಸೇರಿಸಿ ವರುಣ ವಿಧಾನಸಭಾ ಕ್ಷೇತ್ರವನ್ನು 2008ರಲ್ಲಿ ರಚಿಸಲಾಯಿತು. ಈವರೆಗೆ ನಡೆದಿರುವ ಮೂರು ವಿಧಾನಸಭಾ ಚುನಾವಣೆಗಳ ಪೈಕಿ ಎರಡು ಬಾರಿ ಸಿದ್ದರಾಮಯ್ಯ, ಒಂದು ಭಾರಿ ಸಿದ್ದರಾಮಯ್ಯನವರ ಪುತ್ರ ಡಾ.ಯತೀಂದ್ರ ಸಿದ್ದರಾಮಯ್ಯ ಇಲ್ಲಿ ಆಯ್ಕೆಯಾಗಿದ್ದಾರೆ. 2018ರಲ್ಲಿ ಚಾಮುಂಡೇಶ್ವರಿ ಮತ್ತು ಬಾದಾಮಿ – ಎರಡು ಕ್ಷೇತ್ರಗಳಲ್ಲಿ ಸ್ಪರ್ಧಿಸಿದ್ದ ಸಿದ್ದರಾಮಯ್ಯನವರು ಬಾದಾಮಿಯಲ್ಲಿ ಗೆದ್ದು, ಚಾಮುಂಡೇಶ್ವರಿಯಲ್ಲಿ ಸೋತಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...