Homeಕರ್ನಾಟಕವರುಣ ಜೊತೆಗೆ ಕೋಲಾರದಿಂದಲೂ ಸ್ಪರ್ಧೆ: ಸಿದ್ದರಾಮಯ್ಯ

ವರುಣ ಜೊತೆಗೆ ಕೋಲಾರದಿಂದಲೂ ಸ್ಪರ್ಧೆ: ಸಿದ್ದರಾಮಯ್ಯ

- Advertisement -
- Advertisement -

ವರುಣ ವಿಧಾನಸಭಾ ಕ್ಷೇತ್ರದ ಜೊತೆಗೆ ಕೋಲಾರದಿಂದಲೂ ಸ್ಪರ್ಧೆ ಮಾಡುವುದಾಗಿ ಹೇಳಿಕೆ ನೀಡಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ಪರ್ಧಾಕ್ಷೇತ್ರದ ಕುತೂಹಲಕ್ಕೆ ತೆರೆ ಎಳೆದಿದ್ದಾರೆ.

ಎಚ್‌ಡಿ ಕೋಟೆಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿರುವ ಅವರು,  “ವರುಣ ಕ್ಷೇತ್ರದಿಂದ ಗೆದ್ದಾಗಲೇ ನಾನು ಸಿಎಂ ಆಗಿದ್ದು. ವರುಣ ಕ್ಷೇತ್ರವೇ ನನ್ನ ಹುಟ್ಟೂರು. ನನ್ನ ಕೊನೆ ಚುನಾವಣೆ ಹುಟ್ಟೂರಿನಲ್ಲಿ ಆಗಬೇಕೆಂಬ ಆಸೆ ಇದೆ, ಹಾಗಾಗಿ ಇಲ್ಲಿಂದ ಸ್ಪರ್ಧೆ ಮಾಡುತ್ತಿದ್ದೇನೆ” ಎಂದಿದ್ದಾರೆ.

“ಯಾವುದೇ ಒಂದು ಕ್ಷೇತ್ರ ಲಕ್ಕಿ ಹಾಗೂ ಅನ್‌ಲಕ್ಕಿ ಅಲ್ಲ. ನನಗೆ ಅದರ ಮೇಲೆ ನಂಬಿಕೆಯೂ ಇಲ್ಲ. ಕೋಲಾರ ಕ್ಷೇತ್ರದ ಜನರಿಂದ ಹೆಚ್ಚು ಒತ್ತಡ ಬರುತ್ತಿದೆ. ಹೀಗಾಗಿ ವರುಣಾ ಜತೆಗೆ ಕೋಲಾರದಿಂದಲೂ ಸ್ಪರ್ಧೆ ಮಾಡುತ್ತೇನೆ” ಎಂದು ಸ್ಪಷ್ಟಪಡಿಸಿದ್ದಾರೆ.

“ಕಳೆದ ಚುನಾವಣೆಯಲ್ಲಿ ಬಿಜೆಪಿ ಮತ್ತು ಜೆಡಿಎಸ್ ಮ್ಯಾಚ್ ಫಿಕ್ಸ್ ಮಾಡಿಕೊಂಡಿತ್ತು. ಈ ಚುನಾವಣೆಯಲ್ಲೂ ಅದರ ಸಾಧ್ಯತೆ ಇದೆ. ಎರಡೂ ಪಕ್ಷಗಳು ಮೈತ್ರಿ ಮಾಡಿಕೊಂಡರೂ ಅಚ್ಚರಿ ಇಲ್ಲ” ಎಂದು ತಿಳಿಸಿದ್ದಾರೆ.

ಕಾಂಗ್ರೆಸ್ ಹೈಕಮಾಂಡ್‌‌ ಜತೆ ಮಾತನಾಡಿದ್ದೇನೆ ಎಂಬ ಕುಮಾರಸ್ವಾಮಿ ಹೇಳಿಕೆ ವಿಚಾರಕ್ಕೆ ತಿರುಗೇಟು ನೀಡಿದ ಅವರು, “ನಮ್ಮ ಹೈಕಮಾಂಡ್ ಜತೆಗೆ ಯಾರೂ ಮಾತನಾಡಿಲ್ಲ. ಮಾತನಾಡುವುದೂ ಇಲ್ಲ. ಈ ಬಾರಿ ನಾವು ಏಕಾಂಗಿಯಾಗಿ ಅಧಿಕಾರಕ್ಕೆ ಬರುತ್ತೇವೆ” ಎಂದು ಹೇಳಿದ್ದಾರೆ.

ಯಡಿಯೂರಪ್ಪ ನಿವಾಸದ ಮೇಲಿನ ಕಲ್ಲು ತೂರಾಟದ ವಿಚಾರದ ಬಗ್ಗೆ ಮಾತನಾಡಿದ ಸಿದ್ದರಾಮಯ್ಯ, ಬೊಮ್ಮಾಯಿಯವರು ಇದು ಕಾಂಗ್ರೆಸ್‌ನವರ ಕೃತ್ಯ ಎನ್ನುತ್ತಾರೆ. ಯಡಿಯೂರಪ್ಪನವರೇ ಕಾಂಗ್ರೆಸ್ ನವರು ಅಲ್ಲ ಅಂತ ಹೇಳಿದ್ದಾರೆ. ಯಡಿಯೂರಪ್ಪನವರಿಗಿಂತ ಬೊಮ್ಮಾಯಿಗೆ ಈ ವಿಚಾರ ಹೆಚ್ಚು ಗೊತ್ತೇ? ಎಂದು ಪ್ರಶ್ನಿಸಿದ್ದಾರೆ.

ಮೀಸಲಾತಿಗೆ ಕಾಂಗ್ರೆಸ್ ವಿರೋಧ ಇರಲಿಲ್ಲ. ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಮೀಸಲಾತಿ ಕೊಡಬೇಕಿತ್ತು. ಮೂರುವರೆ ವರ್ಷದಿಂದ ಈ ಬಗ್ಗೆ ಸುಮ್ಮನಿದ್ದ ಬಿಜೆಪಿ ಈಗ ಏನು ಮಾಡುತ್ತಿದೆ? ಎಂದು ಕೇಳಿದ್ದಾರೆ.

ಸಿದ್ದರಾಮಯ್ಯನವರು ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಯಾವ ಕ್ಷೇತ್ರದಿಂದ ಸ್ಪರ್ಧಿಸುತ್ತಾರೆ ಎಂಬುದು ಬಹುಕಾಲದಿಂದ ಚರ್ಚೆಯಾಗುತ್ತಿರುವ ವಿಷಯವಾಗಿದೆ. ಅವರು ಸದ್ಯ ಪ್ರತಿನಿಧಿಸುತ್ತಿರುವ ಬಾದಾಮಿ ಕ್ಷೇತ್ರ ದೂರವಾದ್ದರಿಂದ ಬೆಂಗಳೂರಿಗೆ ಹತ್ತಿರದ ಕ್ಷೇತ್ರ ಇದ್ದರೆ ಸೂಕ್ತ ಎಂದು ಕೆಲ ದಿನಗಳ ಹಿಂದೆ ಕೋಲಾರದಿಂದ ಸ್ಪರ್ಧಿಸುವ ಇಂಗಿತ ವ್ಯಕ್ತಪಡಿಸಿದ್ದರು. ಆದರೆ ಸದ್ಯ ಅವರು ಕೋಲಾರದಿಂದ ಹಿಂದೆ ಸರಿಯುತ್ತಾರೆ ಅಥವಾ ಕೋಲಾರ ಮತ್ತು ವರುಣಾ ಎರಡು ಕ್ಷೇತ್ರಗಳಿಂದಲೂ ಸ್ಪರ್ಧಿಸುತ್ತಾರೆ ಎಂಬ ವದಂತಿಗಳು ಹಬ್ಬಿದ್ದವು. ಈಗ ಸ್ಪಷ್ಟ ಚಿತ್ರಣ ಸಿಕ್ಕಿದೆ.

ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದಲ್ಲಿ ನಡೆದ 13 ಚುನಾವಣೆಗಳ ಪೈಕಿ ಐದು ಬಾರಿ ಸಿದ್ದರಾಮಯ್ಯನವರು ಗೆದ್ದಿದ್ದರು. ಸಿದ್ದರಾಮಯ್ಯನವರಿಗೆ ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದ ನಂತರದಲ್ಲಿ ರಾಜಕೀಯ ನೆಲೆಯನ್ನು ಒದಗಿಸಿದ್ದು ವರುಣ. ಕುಲದೀಪ್ ಸಿಂಗ್ ನೇತೃತ್ವದ ಕ್ಷೇತ್ರ ಪುನರ್ ವಿಂಗಡಣಾ ವರದಿಯಂತೆ ವರುಣ ಹೋಬಳಿಯನ್ನು ಪ್ರತ್ಯೇಕಿಸಿ, ಟಿ.ನರಸೀಪರ ಹಾಗೂ ವರುಣದ ಭಾಗಶಃ ಪ್ರದೇಶಗಳನ್ನು ಸೇರಿಸಿ ವರುಣ ವಿಧಾನಸಭಾ ಕ್ಷೇತ್ರವನ್ನು 2008ರಲ್ಲಿ ರಚಿಸಲಾಯಿತು. ಈವರೆಗೆ ನಡೆದಿರುವ ಮೂರು ವಿಧಾನಸಭಾ ಚುನಾವಣೆಗಳ ಪೈಕಿ ಎರಡು ಬಾರಿ ಸಿದ್ದರಾಮಯ್ಯ, ಒಂದು ಭಾರಿ ಸಿದ್ದರಾಮಯ್ಯನವರ ಪುತ್ರ ಡಾ.ಯತೀಂದ್ರ ಸಿದ್ದರಾಮಯ್ಯ ಇಲ್ಲಿ ಆಯ್ಕೆಯಾಗಿದ್ದಾರೆ. 2018ರಲ್ಲಿ ಚಾಮುಂಡೇಶ್ವರಿ ಮತ್ತು ಬಾದಾಮಿ – ಎರಡು ಕ್ಷೇತ್ರಗಳಲ್ಲಿ ಸ್ಪರ್ಧಿಸಿದ್ದ ಸಿದ್ದರಾಮಯ್ಯನವರು ಬಾದಾಮಿಯಲ್ಲಿ ಗೆದ್ದು, ಚಾಮುಂಡೇಶ್ವರಿಯಲ್ಲಿ ಸೋತಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...