Homeಕರ್ನಾಟಕವರುಣ ಜೊತೆಗೆ ಕೋಲಾರದಿಂದಲೂ ಸ್ಪರ್ಧೆ: ಸಿದ್ದರಾಮಯ್ಯ

ವರುಣ ಜೊತೆಗೆ ಕೋಲಾರದಿಂದಲೂ ಸ್ಪರ್ಧೆ: ಸಿದ್ದರಾಮಯ್ಯ

- Advertisement -
- Advertisement -

ವರುಣ ವಿಧಾನಸಭಾ ಕ್ಷೇತ್ರದ ಜೊತೆಗೆ ಕೋಲಾರದಿಂದಲೂ ಸ್ಪರ್ಧೆ ಮಾಡುವುದಾಗಿ ಹೇಳಿಕೆ ನೀಡಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ಪರ್ಧಾಕ್ಷೇತ್ರದ ಕುತೂಹಲಕ್ಕೆ ತೆರೆ ಎಳೆದಿದ್ದಾರೆ.

ಎಚ್‌ಡಿ ಕೋಟೆಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿರುವ ಅವರು,  “ವರುಣ ಕ್ಷೇತ್ರದಿಂದ ಗೆದ್ದಾಗಲೇ ನಾನು ಸಿಎಂ ಆಗಿದ್ದು. ವರುಣ ಕ್ಷೇತ್ರವೇ ನನ್ನ ಹುಟ್ಟೂರು. ನನ್ನ ಕೊನೆ ಚುನಾವಣೆ ಹುಟ್ಟೂರಿನಲ್ಲಿ ಆಗಬೇಕೆಂಬ ಆಸೆ ಇದೆ, ಹಾಗಾಗಿ ಇಲ್ಲಿಂದ ಸ್ಪರ್ಧೆ ಮಾಡುತ್ತಿದ್ದೇನೆ” ಎಂದಿದ್ದಾರೆ.

“ಯಾವುದೇ ಒಂದು ಕ್ಷೇತ್ರ ಲಕ್ಕಿ ಹಾಗೂ ಅನ್‌ಲಕ್ಕಿ ಅಲ್ಲ. ನನಗೆ ಅದರ ಮೇಲೆ ನಂಬಿಕೆಯೂ ಇಲ್ಲ. ಕೋಲಾರ ಕ್ಷೇತ್ರದ ಜನರಿಂದ ಹೆಚ್ಚು ಒತ್ತಡ ಬರುತ್ತಿದೆ. ಹೀಗಾಗಿ ವರುಣಾ ಜತೆಗೆ ಕೋಲಾರದಿಂದಲೂ ಸ್ಪರ್ಧೆ ಮಾಡುತ್ತೇನೆ” ಎಂದು ಸ್ಪಷ್ಟಪಡಿಸಿದ್ದಾರೆ.

“ಕಳೆದ ಚುನಾವಣೆಯಲ್ಲಿ ಬಿಜೆಪಿ ಮತ್ತು ಜೆಡಿಎಸ್ ಮ್ಯಾಚ್ ಫಿಕ್ಸ್ ಮಾಡಿಕೊಂಡಿತ್ತು. ಈ ಚುನಾವಣೆಯಲ್ಲೂ ಅದರ ಸಾಧ್ಯತೆ ಇದೆ. ಎರಡೂ ಪಕ್ಷಗಳು ಮೈತ್ರಿ ಮಾಡಿಕೊಂಡರೂ ಅಚ್ಚರಿ ಇಲ್ಲ” ಎಂದು ತಿಳಿಸಿದ್ದಾರೆ.

ಕಾಂಗ್ರೆಸ್ ಹೈಕಮಾಂಡ್‌‌ ಜತೆ ಮಾತನಾಡಿದ್ದೇನೆ ಎಂಬ ಕುಮಾರಸ್ವಾಮಿ ಹೇಳಿಕೆ ವಿಚಾರಕ್ಕೆ ತಿರುಗೇಟು ನೀಡಿದ ಅವರು, “ನಮ್ಮ ಹೈಕಮಾಂಡ್ ಜತೆಗೆ ಯಾರೂ ಮಾತನಾಡಿಲ್ಲ. ಮಾತನಾಡುವುದೂ ಇಲ್ಲ. ಈ ಬಾರಿ ನಾವು ಏಕಾಂಗಿಯಾಗಿ ಅಧಿಕಾರಕ್ಕೆ ಬರುತ್ತೇವೆ” ಎಂದು ಹೇಳಿದ್ದಾರೆ.

ಯಡಿಯೂರಪ್ಪ ನಿವಾಸದ ಮೇಲಿನ ಕಲ್ಲು ತೂರಾಟದ ವಿಚಾರದ ಬಗ್ಗೆ ಮಾತನಾಡಿದ ಸಿದ್ದರಾಮಯ್ಯ, ಬೊಮ್ಮಾಯಿಯವರು ಇದು ಕಾಂಗ್ರೆಸ್‌ನವರ ಕೃತ್ಯ ಎನ್ನುತ್ತಾರೆ. ಯಡಿಯೂರಪ್ಪನವರೇ ಕಾಂಗ್ರೆಸ್ ನವರು ಅಲ್ಲ ಅಂತ ಹೇಳಿದ್ದಾರೆ. ಯಡಿಯೂರಪ್ಪನವರಿಗಿಂತ ಬೊಮ್ಮಾಯಿಗೆ ಈ ವಿಚಾರ ಹೆಚ್ಚು ಗೊತ್ತೇ? ಎಂದು ಪ್ರಶ್ನಿಸಿದ್ದಾರೆ.

ಮೀಸಲಾತಿಗೆ ಕಾಂಗ್ರೆಸ್ ವಿರೋಧ ಇರಲಿಲ್ಲ. ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಮೀಸಲಾತಿ ಕೊಡಬೇಕಿತ್ತು. ಮೂರುವರೆ ವರ್ಷದಿಂದ ಈ ಬಗ್ಗೆ ಸುಮ್ಮನಿದ್ದ ಬಿಜೆಪಿ ಈಗ ಏನು ಮಾಡುತ್ತಿದೆ? ಎಂದು ಕೇಳಿದ್ದಾರೆ.

ಸಿದ್ದರಾಮಯ್ಯನವರು ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಯಾವ ಕ್ಷೇತ್ರದಿಂದ ಸ್ಪರ್ಧಿಸುತ್ತಾರೆ ಎಂಬುದು ಬಹುಕಾಲದಿಂದ ಚರ್ಚೆಯಾಗುತ್ತಿರುವ ವಿಷಯವಾಗಿದೆ. ಅವರು ಸದ್ಯ ಪ್ರತಿನಿಧಿಸುತ್ತಿರುವ ಬಾದಾಮಿ ಕ್ಷೇತ್ರ ದೂರವಾದ್ದರಿಂದ ಬೆಂಗಳೂರಿಗೆ ಹತ್ತಿರದ ಕ್ಷೇತ್ರ ಇದ್ದರೆ ಸೂಕ್ತ ಎಂದು ಕೆಲ ದಿನಗಳ ಹಿಂದೆ ಕೋಲಾರದಿಂದ ಸ್ಪರ್ಧಿಸುವ ಇಂಗಿತ ವ್ಯಕ್ತಪಡಿಸಿದ್ದರು. ಆದರೆ ಸದ್ಯ ಅವರು ಕೋಲಾರದಿಂದ ಹಿಂದೆ ಸರಿಯುತ್ತಾರೆ ಅಥವಾ ಕೋಲಾರ ಮತ್ತು ವರುಣಾ ಎರಡು ಕ್ಷೇತ್ರಗಳಿಂದಲೂ ಸ್ಪರ್ಧಿಸುತ್ತಾರೆ ಎಂಬ ವದಂತಿಗಳು ಹಬ್ಬಿದ್ದವು. ಈಗ ಸ್ಪಷ್ಟ ಚಿತ್ರಣ ಸಿಕ್ಕಿದೆ.

ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದಲ್ಲಿ ನಡೆದ 13 ಚುನಾವಣೆಗಳ ಪೈಕಿ ಐದು ಬಾರಿ ಸಿದ್ದರಾಮಯ್ಯನವರು ಗೆದ್ದಿದ್ದರು. ಸಿದ್ದರಾಮಯ್ಯನವರಿಗೆ ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದ ನಂತರದಲ್ಲಿ ರಾಜಕೀಯ ನೆಲೆಯನ್ನು ಒದಗಿಸಿದ್ದು ವರುಣ. ಕುಲದೀಪ್ ಸಿಂಗ್ ನೇತೃತ್ವದ ಕ್ಷೇತ್ರ ಪುನರ್ ವಿಂಗಡಣಾ ವರದಿಯಂತೆ ವರುಣ ಹೋಬಳಿಯನ್ನು ಪ್ರತ್ಯೇಕಿಸಿ, ಟಿ.ನರಸೀಪರ ಹಾಗೂ ವರುಣದ ಭಾಗಶಃ ಪ್ರದೇಶಗಳನ್ನು ಸೇರಿಸಿ ವರುಣ ವಿಧಾನಸಭಾ ಕ್ಷೇತ್ರವನ್ನು 2008ರಲ್ಲಿ ರಚಿಸಲಾಯಿತು. ಈವರೆಗೆ ನಡೆದಿರುವ ಮೂರು ವಿಧಾನಸಭಾ ಚುನಾವಣೆಗಳ ಪೈಕಿ ಎರಡು ಬಾರಿ ಸಿದ್ದರಾಮಯ್ಯ, ಒಂದು ಭಾರಿ ಸಿದ್ದರಾಮಯ್ಯನವರ ಪುತ್ರ ಡಾ.ಯತೀಂದ್ರ ಸಿದ್ದರಾಮಯ್ಯ ಇಲ್ಲಿ ಆಯ್ಕೆಯಾಗಿದ್ದಾರೆ. 2018ರಲ್ಲಿ ಚಾಮುಂಡೇಶ್ವರಿ ಮತ್ತು ಬಾದಾಮಿ – ಎರಡು ಕ್ಷೇತ್ರಗಳಲ್ಲಿ ಸ್ಪರ್ಧಿಸಿದ್ದ ಸಿದ್ದರಾಮಯ್ಯನವರು ಬಾದಾಮಿಯಲ್ಲಿ ಗೆದ್ದು, ಚಾಮುಂಡೇಶ್ವರಿಯಲ್ಲಿ ಸೋತಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...

ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ : ಮೊದಲ ಬೀದಿ ಹೋರಾಟಕ್ಕೆ ಸಜ್ಜಾದ ಕಾಕ್ರೋಚ್ ಜನತಾ ಪಾರ್ಟಿ

ಸಾಮಾಜಿಕ ಜಾಲತಾಣಗಳಲ್ಲಿ ಹೊಸ ಅಲೆಯನ್ನು ಸೃಷ್ಟಿಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ತನ್ನ ಮೊದಲ ಬೀದಿ ಹೋರಾಟಕ್ಕೆ ಸಜ್ಜಾಗಿದೆ. ಜೂನ್ 6, 2026ರಂದು ನವದೆಹಲಿಯ ಜಂತರ್ ಮಂತರ್‌ನಲ್ಲಿ ಸಿಜೆಪಿ ಪ್ರತಿಭಟನೆ ಆಯೋಜಿಸಿದ್ದು, ಇದರ...

ದೆಹಲಿ: ‘ಮಾಳವೀಯ ನಗರ’ ಅಗ್ನಿ ದುರಂತಕ್ಕೆ 21 ಜನರು ಬಲಿ: ವ್ಯವಸ್ಥೆಯ ವೈಫಲ್ಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿರುವ ನಾಗರೀಕರು 

ದೆಹಲಿಯ ಅತ್ಯಂತ ಜನನಿಬಿಡ ಮತ್ತು ವಾಣಿಜ್ಯ ಪ್ರದೇಶವಾದ ಮಾಳವೀಯ ನಗರದಲ್ಲಿ 2026 ಜೂನ್ 3, ಬುಧವಾರ ನಸುಕಿನ ಜಾವ ಸಂಭವಿಸಿದ ಭೀಕರ ಅಗ್ನಿ ದುರಂತವು ಇಡೀ ದೇಶವನ್ನು ಬೆಚ್ಚಿಬೀಳಿಸಿದೆ. 'ಫ್ಲೋರಿಶ್ ಸ್ಟೇ ಬಿ...

“ವಿಷ ಕಾರದೆ ಮಾತನಾಡಿ”: ಕಲ್ಲಡ್ಕ ಪ್ರಭಾಕರ ಭಟ್‌ಗೆ ಹೈಕೋರ್ಟ್ ತಾಕೀತು

ಹೆಚ್ಚು ಮಕ್ಕಳನ್ನು ಹೆರುವ ಮುಸ್ಲಿಂ ಮಹಿಳೆಯರನ್ನು ಲೇವಡಿ ಮಾಡುವ ಮೂಲಕ ಕೋಮು ದ್ವೇಷ ಹರಡಿದ್ದಾರೆ ಎಂಬ ಆರೋಪ ಎದುರಿಸುತ್ತಿರುವ ಹಿಂದುತ್ವ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಕಲ್ಲಡ್ಕ ಅವರಿಗೆ ತಮ್ಮ ಮುಂದಿನ ಭಾಷಣಗಳಲ್ಲಿ...

ಪತ್ರಕರ್ತ- ಚಿತ್ರ ನಿರ್ಮಾಪಕ ಸೇರಿದಂತೆ ಹಲವು ಕ್ಷೇತ್ರಗಳ ಪ್ರಮುಖರನ್ನು ವಕ್ತಾರರನ್ನಾಗಿ ನೇಮಿಸಿದ ಸಿಜೆಪಿ

ಆನ್‌ಲೈನ್ ಸೆನ್ಸೇಷನ್ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ)ಯು ಶಿಕ್ಷಣ ವ್ಯವಸ್ಥೆಯಲ್ಲಿನ ವೈಫಲ್ಯಗಳ ವಿರುದ್ಧ ಪ್ರಸ್ತಾಪಿಸಿದ ಪ್ರತಿಭಟನೆಗೆ ಮುಂಚಿತವಾಗಿ ತನ್ನ ವ್ಯಾಪ್ತಿಯನ್ನು ವಿಸ್ತರಿಸುವ ಸಲುವಾಗಿ ಮೂವರು ವಕ್ತಾರರ ಹೆಸರನ್ನು ಘೋಷಿಸಿದೆ. ಎಕ್ಸ್‌ನಲ್ಲಿನ ಪೋಸ್ಟ್‌ ಮಾಡಿರುವ ಅಭಿಜೀತ್...

CBSE ಪರೀಕ್ಷೆಯಲ್ಲಿ OSM ವಿವಾದ | ಸಂಸದೀಯ ಸಮಿತಿಯ ಮುಂದೆ ಹಾಜರಾದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್

ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್‌ಸಿ) ಆನ್-ಸ್ಕ್ರೀನ್ ಮಾರ್ಕಿಂಗ್ (ಒಎಸ್‌ಎಂ) ಮೌಲ್ಯಮಾಪನ ವ್ಯವಸ್ಥೆಯಲ್ಲಿನ ಗಂಭೀರ ಲೋಪಗಳ ಕುರಿತು ವಿವಾದ ಭುಗಿಲೆದ್ದಿರುವ ನಡುವೆ, 17 ವರ್ಷದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್ ನವದೆಹಲಿಯ ಸಂಸತ್ ಭವನದಲ್ಲಿ...