Homeಕರ್ನಾಟಕ‘ನಿಂಗೆ ಬಿಟ್ಟಿ ಎಜುಕೇಷನ್‌ ಬೇಕಾ?’ ಎಂದಿದ್ದ ಡಿಸಿ ವಿರುದ್ಧ ಸಿಎಂಗೆ ದೂರು

‘ನಿಂಗೆ ಬಿಟ್ಟಿ ಎಜುಕೇಷನ್‌ ಬೇಕಾ?’ ಎಂದಿದ್ದ ಡಿಸಿ ವಿರುದ್ಧ ಸಿಎಂಗೆ ದೂರು

- Advertisement -
- Advertisement -

“ನಿಂಗೆ ಬಿಟ್ಟಿ ಎಜುಕೇಷನ್‌ ಬೇಕಾ? ಫೀಸ್‌ ಕಟ್ಟೋಕೆ ಆಗೋದಿಲ್ವಾ? ಸುಮ್ನೆ ಕೂತ್ಕೋಳಯ್ಯ, ಎಷ್ಟು ಮಾತಾಡ್ತೀಯಾ”- ನ್ಯಾಯಕೇಳಲು ಬಂದವರ ಬಳಿ ಬೆಂಗಳೂರು ನಗರ ಜಿಲ್ಲಾಧಿಕಾರಿ ಜೆ.ಮಂಜುನಾಥ್‌ ಹೀಗೆ ಬೆದರಿಕೆ ಹಾಕಿರುವ ಆರೋಪ ಕೇಳಿಬಂದಿದ್ದು, ಈ ಸಂಬಂಧ ಮಾನವ ಹಕ್ಕುಗಳ ಆಯೋಗದಲ್ಲಿ ದೂರು ದಾಖಲಾಗಿದೆ. ಜೊತೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರಿಗೂ ದೂರು ನೀಡಲಾಗಿದೆ.

ಖಾಸಗಿ ಶಾಲೆಗಳು ಹೆಚ್ಚಿನ ಶುಲ್ಕ ಕೇಳಿ ಪೀಡಿಸಿದರೆ ಜಿಲ್ಲಾ ವ್ಯಾಪ್ತಿಯಲ್ಲಿನ ‘ಜಿಲ್ಲಾ ಶಿಕ್ಷಣ ನಿಯಂತ್ರಣ ಪ್ರಾಧಿಕಾರ’ಕ್ಕೆ ದೂರು ನೀಡಬಹುದು. ಈ ಪ್ರಾಧಿಕಾರಕ್ಕೆ ಜಿಲ್ಲಾಧಿಕಾರಿಗಳೇ ಅಧಿಕಾರಿಯಾಗಿರುತ್ತಾರೆ. ಪೋಷಕರು ದೂರು ನೀಡಲು ಬಂದಾಗ ಜಿಲ್ಲಾಧಿಕಾರಿ ತಮ್ಮ ಜವಾಬ್ದಾರಿ ಮರೆತು ವರ್ತಿಸಿದ್ದಾರೆ ಎನ್ನಲಾಗಿದೆ.

ಪಾಲಕರು ದೂರನ್ನು ವಿಚಾರಿಸುವ ವೇಳೆ, “ನಿಂಗೆ ಬಿಟ್ಟಿ ಎಜುಕೇಷನ್‌ ಬೇಕಾ, ಫೀಸ್‌ ಕಟ್ಟೋಕೆ ಆಗಲ್ವಾ? ಸುಮ್ನೆ ಕೂತ್ಕೊಳಯ್ಯ ಎಷ್ಟು ಮಾತಾಡ್ತೀಯಾ? ಶುಲ್ಕ ಕಟ್ಟು, ಇಲ್ಲವಾದರೆ ಸರ್ಕಾರಿ ಶಾಲೆಗೆ ಮಗುವನ್ನು ಸೇರಿಸು” ಎಂದು ಗದರಿಸಿರುವುದಾಗಿ ಮಾನವ ಹಕ್ಕುಗಳ ಆಯೋಗಕ್ಕೆ ದೂರು ನೀಡಲಾಗಿದೆ.

ಶ್ರೀ ವಾಣಿ ಎಜುಕೇಷನ್‌ ಸೆಂಟರ್‌ ವಿರುದ್ಧ ಪ್ರಾಧಿಕಾರಕ್ಕೆ ಜಿ.ರವಿಕುಮಾರ್‌, ಲಕ್ಷ್ಮಿನಾರಾಯಣ ಮತ್ತು ಡಾ.ಅರುಣ್‌ಕುಮಾರ್‌‌ ದೂರು ನೀಡಲು ಬಂದಾಗ ಘಟನೆ ನಡೆದಿದೆ. ಸೆಪ್ಟೆಂಬರ್‌‌ ತಿಂಗಳಲ್ಲಿ ಘಟನೆ ನಡೆದಿದ್ದು, ಮಾನವ ಹಕ್ಕುಗಳ ಆಯೋಗದ ಸದಸ್ಯ ಆರ್‌.ಕೆ.ದತ್ತ ಅವರು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿಗೆ ನೋಟೀಸ್‌ ಜಾರಿಗೊಳಿಸಿದ್ದಾರೆ. ಈ ಬಗ್ಗೆ ವರದಿ ನೀಡುವಂತೆ ಆಯೋಗವು ಸರ್ಕಾರಕ್ಕೆ ಸೂಚನೆ ನೀಡಿದೆ.

ದೂರು ಈಗ ಮುಖ್ಯಮಂತ್ರಿಯವರಿಗೂ ತಲುಪಿದ್ದು, ಜಿಲ್ಲಾ ಶಿಕ್ಷಣ ನಿಯಂತ್ರಣ ಪ್ರಾಧಿಕಾರದ ಅಧ್ಯಕ್ಷರೂ ಆಗಿರುವ ಜಿಲ್ಲಾಧಿಕಾರಿ ವಿರುದ್ಧ ಶಿಸ್ತು ಕ್ರಮಕ್ಕೆ ಆಗ್ರಹಿಸಿ ಕರ್ನಾಟಕ ರಾಜ್ಯ ಖಾಸಗಿ ಶಾಲಾ ಪೋಷಕರ ಸಂಘಟನೆಗಳ ಸಮನ್ವಯ ವೇದಿಕೆಯು ಒತ್ತಾಯಿಸಿದೆ.

‘ಹೆಚ್ಚುವರಿ ಶುಲ್ಕ ಪಡೆಯುತ್ತಿರುವ ಬಗ್ಗೆ ದಾಖಲಾಗಿದ್ದ ದೂರುಗಳನ್ನು ಪರಿಶೀಲಿಸಲು ಆ.5ರಂದು ಜಿಲ್ಲಾಧಿಕಾರಿ ಸಭೆ ನಡೆಸಿದ್ದರು. ದೂರು ಸಲ್ಲಿಸಿದ್ದ ಪೋಷಕರ ವಿರುದ್ಧ ಜಿಲ್ಲಾಕಾರಿ ಧಮಕಿ ಹಾಕಿದ್ದಾರೆ. ಯಾವ ಡಿಪಾರ್ಟ್‌ಮೆಂಟ್ ನಿಂದು, ನಿಂಗೆ ಬಿಟ್ಟಿ ಎಜುಕೇಷನ್ ಬೇಕಾ, ಫೀಸ್ ಕಟ್ಟೋಕೆ ಆಗಲ್ವಾ, ನಿಂಗೆ ಸಂಬಳ ಕೊಡೊದು ಯಾಕೆ, ಸಂಬಳ ಕಟ್ ಮಾಡಿಸ್ತೀನಿ, ಡಾಕ್ಟರ್ ಅಂತೀಯ ಎಷ್ಟು ಸಂಬಳ, ನಿನ್ನ ಮೇಲೆ ಯಾಕೆ ಕ್ರಮ ತೆಗೆದುಕೊಳ್ಳಬಾರದು ಎಂದೆಲ್ಲಾ ಏಕ ವಚನದಲ್ಲೇ ನಿಂದಿಸಿದ್ದಾರೆ’ ಎಂದು ವೇದಿಕೆಯು ದೂರಿನಲ್ಲಿ ಉಲ್ಲೇಖಿಸಿದೆ.

‘ಸಿಸಿಟಿವಿ ಕ್ಯಾಮರಾದಲ್ಲಿ ಎಲ್ಲವೂ ಸೆರೆಯಾಗಿದ್ದು, ಪರಿಶೀಲನೆ ನಡೆಸಿ ಪೋಷಕರನ್ನು ನಿಂದಿಸಿ ಬೆದರಿಕೆ ಹಾಕಿರುವ ಜಿಲ್ಲಾಧಿಕಾರಿ ವಿರುದ್ಧ ಕ್ರಮ ಕೈಗೊಳ್ಳಬೇಕು’ ಎಂದು ಸಂಘಟನೆ ಒತ್ತಾಯಿಸಿದೆ.

ಜಿಲ್ಲಾಧಿಕಾರಿ ಪ್ರತಿಕ್ರಿಯೆ

ತಮ್ಮ ಮೇಲಿನ ಆರೋಪವನ್ನು ಅಲ್ಲಗಳೆದಿರುವ ಜಿಲ್ಲಾಧಿಕಾರಿ ಜೆ.ಮಂಜುನಾಥ್‌, ‘ಪ್ರತಿನಿತ್ಯ ನೂರಾರು ಜನ ಸಂಪರ್ಕ ಮಾಡುತ್ತಾರೆ. ಯಾವ ಹಂತದಲ್ಲೂ ಯಾರಿಗೂ ಅವಮಾನವಾಗುವಂತೆ ವರ್ತಿಸಿಲ್ಲ. ಶಾಲೆಗಳಲ್ಲಿ ಶುಲ್ಕ ಹೆಚ್ಚಳ ಆಗಿದ್ದರೆ ಪರಿಶೀಲಿಸುತ್ತೇವೆ. ಎರಡು ವರ್ಷದಿಂದ ಶುಲ್ಕವನ್ನೇ ಪಾವತಿಸದ ಪೋಷಕರಿಗೆ ಬಾಕಿ ಶುಲ್ಕ ಪಾವತಿಸಿ ಬನ್ನಿ ಎಂದಷ್ಟೇ ಹೇಳಿದ್ದೇನೆ. ಯಾವ ಪೋಷಕರನ್ನೂ ನಿಂದಿಸಿಲ್ಲ’ ಎಂದು ತಿಳಿಸಿದ್ದಾರೆ.


ಇದನ್ನೂ ಓದಿರಿ: ಹಳೆಯ ಪ್ರಕರಣ ಕೆದಕಿದ ಯುಪಿ ಪೊಲೀಸರು: ಸಿಎಎ ವಿರೋಧಿ ನಾಲ್ವರು ಪ್ರತಿಭಟನಾಕಾರರ ಬಂಧನ; ಜಾಮೀನು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

TMC ತೊರೆದು BJP ಸೇರಿದ ಮಾಜಿ ಸಂಸದರಿಗೆ ಬಿಜೆಪಿಯಿಂದ ರಾಜ್ಯಸಭಾ ಟಿಕೆಟ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (TMC) ಪಕ್ಷದ ರಾಜ್ಯಸಭಾ ಸ್ಥಾನಗಳಿಗೆ ರಾಜೀನಾಮೆ ನೀಡಿದ ಕೆಲವೇ ವಾರಗಳಲ್ಲಿ, ಆ ಮೂವರು ಮಾಜಿ ಸಂಸದರು ಈಗ ಬೇರೆ ಬಣ್ಣದ (BJP) ಶಾಲು ಧರಿಸಿ ಮತ್ತೆ...

ಪಶ್ಚಿಮ ಬಂಗಾಳ: ಟಿಎಂಸಿ ಖಾತೆ ಫ್ರೀಜ್ ಮಾಡಿದ್ದ ಪೊಲೀಸರಿಗೆ ಕಲ್ಕತ್ತಾ ಹೈಕೋರ್ಟ್ ತರಾಟೆ!

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಹಲವು ಬ್ಯಾಂಕ್ ಖಾತೆಗಳನ್ನು ಜಾರಿ ನಿರ್ದೇಶನಾಲಯ (ಇಡಿ) ಮುಟ್ಟುಗೋಲು ಹಾಕಿಕೊಂಡ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು ಮುಟ್ಟುಗೋಲು ಹಾಕಿಕೊಂಡಿದ್ದ ಪಕ್ಷದ ಮೂರು ಬ್ಯಾಂಕ್...

ಬಂಗಾಳದ ಬಿಸಿಯೂಟ ಇಸ್ಕಾನ್‌ಗೆ ಹಸ್ತಾಂತರವಿಲ್ಲ: ಸರ್ಕಾರದ ಸ್ಪಷ್ಟನೆ, ಕಲ್ಕತ್ತಾ ಹೈಕೋರ್ಟ್‌ನಿಂದ ಅಫಿಡವಿಟ್‌ಗೆ ನಿರ್ದೇಶನ 

ಕೋಲ್ಕತ್ತಾ: ರಾಜ್ಯದ ಶಾಲೆಗಳಲ್ಲಿ ಜಾರಿಯಲ್ಲಿರುವ ಪಿಎಂ-ಪೋಷಣ್ (ಮಧ್ಯಾಹ್ನದ ಬಿಸಿಯೂಟ) ಯೋಜನೆಯ ನಿರ್ವಹಣೆಯನ್ನು ಇಸ್ಕಾನ್ ಸಂಸ್ಥೆಗೆ ಹಸ್ತಾಂತರಿಸುವ ಯಾವುದೇ ಅನುಮೋದಿತ ಪ್ರಸ್ತಾಪ ಸರ್ಕಾರಕ್ಕಿಲ್ಲ ಎಂದು ಪಶ್ಚಿಮ ಬಂಗಾಳ ಸರ್ಕಾರ ಸ್ಪಷ್ಟಪಡಿಸಿದೆ. ಈ ಕುರಿತು ಅಫಿಡವಿಟ್...

ಗಾಜಿಯಾಬಾದ್‌| ಗೋಮಾಂಸ ಸಾಗಾಣಿಕೆ ಆರೋಪ; ವ್ಯಕ್ತಿ ಮೇಲೆ ಗುಂಪಿನಿಂದ ಹಲ್ಲೆ

ಉತ್ತರ ಪ್ರದೇಶದ ಗಾಜಿಯಾಬಾದ್‌ ನಗರದ ಶಾಸ್ತ್ರಿ ನಗರದಲ್ಲಿ ಗೋಮಾಂಸ ಸಾಗಿಸುತ್ತಿದ್ದಾರೆ ಎಂಬ ಅನುಮಾನದ ಮೇಲೆ ಸಲೀಂ ಎಂದು ಗುರುತಿಸಲಾದ ವ್ಯಕ್ತಿಯ ಮೇಲೆ ನಕಲಿ ಗೋರಕ್ಷಕರ ಗುಂಪೊಂದು ಹಲ್ಲೆ ನಡೆಸಿದೆ. ಸಾಮಾಜಿಕ ಮಾಧ್ಯಮದಲ್ಲಿ ವೀಡಿಯೊ...

ಬಾಂಗ್ಲಾ ಗಡಿಯಾಚೆಗೆ ತಳ್ಳಿದ್ದ ನಾಲ್ವರು ಭಾರತೀಯರನ್ನು ವಾಪಸ್ ಕರೆತಂದ ಕೇಂದ್ರ ಸರ್ಕಾರ

ವರ್ಷದ ಹಿಂದೆ, ಅಂದರೆ 2025ರ ಜೂನ್ ತಿಂಗಳಲ್ಲಿ ಬಾಂಗ್ಲಾದೇಶದ ಗಡಿಯಾಚೆಗೆ ತಳ್ಳಿದ್ದ ನಾಲ್ವರು ಭಾರತೀಯರು ಬುಧವಾರ (ಜು.8) ಪಶ್ಚಿಮ ಬಂಗಾಳದ ಬೀರ್‌ಭೂಮ್ ಜಿಲ್ಲೆಯ ತಮ್ಮ ಗ್ರಾಮಕ್ಕೆ ಹಿಂದಿರುಗಿದ್ದಾರೆ ಎಂದು ವರದಿಯಾಗಿದೆ. ಸುನಾಲಿ...

ಬೆಂಗಳೂರಿನ ಜ್ವಲಂತ ನಾಗರಿಕ ಸಮಸ್ಯೆಗಳ ವಿರುದ್ಧ ಜುಲೈ 12ಕ್ಕೆ ಬೃಹತ್ ‘ಜನಾಕ್ರೋಶ ಸಮಾವೇಶ

ಸಿಲಿಕಾನ್ ಸಿಟಿ ಬೆಂಗಳೂರಿನ ನಾಗರಿಕರು ಪ್ರತಿನಿತ್ಯ ಎದುರಿಸುತ್ತಿರುವ ನರಕಸದೃಶ ಸಮಸ್ಯೆಗಳ ವಿರುದ್ಧ ಮತ್ತು ಆಡಳಿತ ವ್ಯವಸ್ಥೆಯ ಭ್ರಷ್ಟಾಚಾರವನ್ನು ಖಂಡಿಸಿ ಭಾರತ ಕಮ್ಯುನಿಸ್ಟ್ ಪಕ್ಷ (ಮಾರ್ಕ್ಸ್‌ವಾದಿ) ಬೃಹತ್ ‘ಜನಾಕ್ರೋಶ ಸಮಾವೇಶ’ವನ್ನು ಹಮ್ಮಿಕೊಂಡಿದೆ. ಈ ‘ಜನಾಕ್ರೋಶ...

ಭೀಕರ ಪ್ರವಾಹಕ್ಕೆ ಕೊಚ್ಚಿಹೋದ 3 ಸಾವಿರ LPG ಸಿಲಿಂಡರ್

ಮಹಾರಾಷ್ಟ್ರದಲ್ಲಿ ವಾರದಿಂದ ಸುರಿಯುತ್ತಿರುವ ಮಳೆ ಇಡೀ ಜನಜೀವನವನ್ನು ಅಸ್ತವ್ಯಸ್ತಗೊಳಿಸಿದ್ದು, ಪ್ರಕೃತಿಯ ವಿಕೋಪದ ನಡುವೆ ರಾಯಗಢ ಜಿಲ್ಲೆಯಿಂದ ಅತ್ಯಂತ ಆಘಾತಕಾರಿ ವಿಡಿಯೋವೊಂದು ವೈರಲ್ ಆಗಿದೆ. ಇಲ್ಲಿನ ಎಚ್‌ಪಿಸಿಎಲ್ (HPCL) ಪಾತಾಳಗಂಗಾ ಎಲ್‌ಪಿಜಿ ಬಾಟ್ಲಿಂಗ್...

ಹೈದರಾಬಾದ್‌| ಪವನ್‌ ಕಲ್ಯಾಣ್‌ ಟೀಕಿಸಿದ ಯೂಟ್ಯೂಬರ್ ರಾವಣ್ ಮೇಲೆ ಯುಎಪಿಎ ಕೇಸ್; ನಿವಾಸದಲ್ಲಿ ಪೊಲೀಸರ ಶೋಧ

ತೆಲುಗು ಯೂಟ್ಯೂಬರ್, ಸಾಮಾಜಿಕ ಕಾರ್ಯಕರ್ತ ರಾವಣ್‌ (ಬಚಲಕೂರಿ ಜೋಸೆಫ್) ಅವರನ್ನು ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆ (ಯುಎಪಿಎ) ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಪೊಲೀಸರು ಬಂಧಿಸಿದ್ದು, ಆಂಧ್ರಪ್ರದೇಶ ಪೊಲೀಸರು ಹೈದರಾಬಾದ್‌ನಲ್ಲಿರುವ ಯೂಟ್ಯೂಬರ್ ರಾವಣ್ ನಿವಾಸದಲ್ಲಿ...

ಬೀದಿಬದಿ ವ್ಯಾಪಾರಿಗಳ ಒಕ್ಕಲೆಬ್ಬಿಸುವಿಕೆ ಖಂಡಿಸಿ ಸರ್ಕಾರದ ವಿರುದ್ದ ಬೃಹತ್ ಪ್ರತಿಭಟನೆ

ಬೆಂಗಳೂರು ನಗರದಲ್ಲಿ ಫುಟ್‌ಪಾತ್ ಒತ್ತುವರಿ ತೆರವಿನ ಹೆಸರಿನಲ್ಲಿ ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ನಡೆಸುತ್ತಿರುವ ಏಕಪಕ್ಷೀಯ ಕಾರ್ಯಾಚರಣೆ ಬಡ ಬೀದಿಬದಿ ವ್ಯಾಪಾರಿಗಳ ಬದುಕನ್ನು ಬೀದಿಗೆ ತಳ್ಳಿದೆ. ಪ್ರಾಧಿಕಾರದ ಈ ಜನವಿರೋಧಿ ‘ಆಪರೇಷನ್’ ಖಂಡಿಸಿ,...

ಬಿಹಾರ| ಹಿಜಾಬ್ ತೆಗೆದು ಹಣೆಗೆ ಸಿಂಧೂರ ಇಟ್ಟುಕೊಳ್ಳುವಂತೆ ಮುಸ್ಲಿಂ ಮಹಿಳೆಗೆ ಒತ್ತಾಯಿಸಿದ ಗುಂಪು

ಪುರುಷರ ಗುಂಪೊಂದು ದಾರಿಯಲ್ಲಿ ಹೋಗುತ್ತಿದ್ದ ಮುಸ್ಲಿಂ ಮಹಿಳೆಯನ್ನು ತಡೆದು ದೌರ್ಜನ್ಯ ಎಸಗಿದ್ದು, ಆಕೆ ಧರಿಸಿದ್ದ ಹಿಜಾಬ್ ತಗೆದು ಹಣೆಗೆ ಸಿಂಧೂರ ಇಟ್ಟುಕೊಳ್ಳುವಂತೆ ಹಿಂದುತ್ವ ಕಿಡಿಗೇಡಿಗಳು ಒತ್ತಾಯಿಸಿರುವ ವಿಡಿಯೊ ವೈರಲ್ ಆಗಿದೆ. ಜುಲೈ 8 ರ...