Homeಕರ್ನಾಟಕ‘ನಿಂಗೆ ಬಿಟ್ಟಿ ಎಜುಕೇಷನ್‌ ಬೇಕಾ?’ ಎಂದಿದ್ದ ಡಿಸಿ ವಿರುದ್ಧ ಸಿಎಂಗೆ ದೂರು

‘ನಿಂಗೆ ಬಿಟ್ಟಿ ಎಜುಕೇಷನ್‌ ಬೇಕಾ?’ ಎಂದಿದ್ದ ಡಿಸಿ ವಿರುದ್ಧ ಸಿಎಂಗೆ ದೂರು

- Advertisement -
- Advertisement -

“ನಿಂಗೆ ಬಿಟ್ಟಿ ಎಜುಕೇಷನ್‌ ಬೇಕಾ? ಫೀಸ್‌ ಕಟ್ಟೋಕೆ ಆಗೋದಿಲ್ವಾ? ಸುಮ್ನೆ ಕೂತ್ಕೋಳಯ್ಯ, ಎಷ್ಟು ಮಾತಾಡ್ತೀಯಾ”- ನ್ಯಾಯಕೇಳಲು ಬಂದವರ ಬಳಿ ಬೆಂಗಳೂರು ನಗರ ಜಿಲ್ಲಾಧಿಕಾರಿ ಜೆ.ಮಂಜುನಾಥ್‌ ಹೀಗೆ ಬೆದರಿಕೆ ಹಾಕಿರುವ ಆರೋಪ ಕೇಳಿಬಂದಿದ್ದು, ಈ ಸಂಬಂಧ ಮಾನವ ಹಕ್ಕುಗಳ ಆಯೋಗದಲ್ಲಿ ದೂರು ದಾಖಲಾಗಿದೆ. ಜೊತೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರಿಗೂ ದೂರು ನೀಡಲಾಗಿದೆ.

ಖಾಸಗಿ ಶಾಲೆಗಳು ಹೆಚ್ಚಿನ ಶುಲ್ಕ ಕೇಳಿ ಪೀಡಿಸಿದರೆ ಜಿಲ್ಲಾ ವ್ಯಾಪ್ತಿಯಲ್ಲಿನ ‘ಜಿಲ್ಲಾ ಶಿಕ್ಷಣ ನಿಯಂತ್ರಣ ಪ್ರಾಧಿಕಾರ’ಕ್ಕೆ ದೂರು ನೀಡಬಹುದು. ಈ ಪ್ರಾಧಿಕಾರಕ್ಕೆ ಜಿಲ್ಲಾಧಿಕಾರಿಗಳೇ ಅಧಿಕಾರಿಯಾಗಿರುತ್ತಾರೆ. ಪೋಷಕರು ದೂರು ನೀಡಲು ಬಂದಾಗ ಜಿಲ್ಲಾಧಿಕಾರಿ ತಮ್ಮ ಜವಾಬ್ದಾರಿ ಮರೆತು ವರ್ತಿಸಿದ್ದಾರೆ ಎನ್ನಲಾಗಿದೆ.

ಪಾಲಕರು ದೂರನ್ನು ವಿಚಾರಿಸುವ ವೇಳೆ, “ನಿಂಗೆ ಬಿಟ್ಟಿ ಎಜುಕೇಷನ್‌ ಬೇಕಾ, ಫೀಸ್‌ ಕಟ್ಟೋಕೆ ಆಗಲ್ವಾ? ಸುಮ್ನೆ ಕೂತ್ಕೊಳಯ್ಯ ಎಷ್ಟು ಮಾತಾಡ್ತೀಯಾ? ಶುಲ್ಕ ಕಟ್ಟು, ಇಲ್ಲವಾದರೆ ಸರ್ಕಾರಿ ಶಾಲೆಗೆ ಮಗುವನ್ನು ಸೇರಿಸು” ಎಂದು ಗದರಿಸಿರುವುದಾಗಿ ಮಾನವ ಹಕ್ಕುಗಳ ಆಯೋಗಕ್ಕೆ ದೂರು ನೀಡಲಾಗಿದೆ.

ಶ್ರೀ ವಾಣಿ ಎಜುಕೇಷನ್‌ ಸೆಂಟರ್‌ ವಿರುದ್ಧ ಪ್ರಾಧಿಕಾರಕ್ಕೆ ಜಿ.ರವಿಕುಮಾರ್‌, ಲಕ್ಷ್ಮಿನಾರಾಯಣ ಮತ್ತು ಡಾ.ಅರುಣ್‌ಕುಮಾರ್‌‌ ದೂರು ನೀಡಲು ಬಂದಾಗ ಘಟನೆ ನಡೆದಿದೆ. ಸೆಪ್ಟೆಂಬರ್‌‌ ತಿಂಗಳಲ್ಲಿ ಘಟನೆ ನಡೆದಿದ್ದು, ಮಾನವ ಹಕ್ಕುಗಳ ಆಯೋಗದ ಸದಸ್ಯ ಆರ್‌.ಕೆ.ದತ್ತ ಅವರು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿಗೆ ನೋಟೀಸ್‌ ಜಾರಿಗೊಳಿಸಿದ್ದಾರೆ. ಈ ಬಗ್ಗೆ ವರದಿ ನೀಡುವಂತೆ ಆಯೋಗವು ಸರ್ಕಾರಕ್ಕೆ ಸೂಚನೆ ನೀಡಿದೆ.

ದೂರು ಈಗ ಮುಖ್ಯಮಂತ್ರಿಯವರಿಗೂ ತಲುಪಿದ್ದು, ಜಿಲ್ಲಾ ಶಿಕ್ಷಣ ನಿಯಂತ್ರಣ ಪ್ರಾಧಿಕಾರದ ಅಧ್ಯಕ್ಷರೂ ಆಗಿರುವ ಜಿಲ್ಲಾಧಿಕಾರಿ ವಿರುದ್ಧ ಶಿಸ್ತು ಕ್ರಮಕ್ಕೆ ಆಗ್ರಹಿಸಿ ಕರ್ನಾಟಕ ರಾಜ್ಯ ಖಾಸಗಿ ಶಾಲಾ ಪೋಷಕರ ಸಂಘಟನೆಗಳ ಸಮನ್ವಯ ವೇದಿಕೆಯು ಒತ್ತಾಯಿಸಿದೆ.

‘ಹೆಚ್ಚುವರಿ ಶುಲ್ಕ ಪಡೆಯುತ್ತಿರುವ ಬಗ್ಗೆ ದಾಖಲಾಗಿದ್ದ ದೂರುಗಳನ್ನು ಪರಿಶೀಲಿಸಲು ಆ.5ರಂದು ಜಿಲ್ಲಾಧಿಕಾರಿ ಸಭೆ ನಡೆಸಿದ್ದರು. ದೂರು ಸಲ್ಲಿಸಿದ್ದ ಪೋಷಕರ ವಿರುದ್ಧ ಜಿಲ್ಲಾಕಾರಿ ಧಮಕಿ ಹಾಕಿದ್ದಾರೆ. ಯಾವ ಡಿಪಾರ್ಟ್‌ಮೆಂಟ್ ನಿಂದು, ನಿಂಗೆ ಬಿಟ್ಟಿ ಎಜುಕೇಷನ್ ಬೇಕಾ, ಫೀಸ್ ಕಟ್ಟೋಕೆ ಆಗಲ್ವಾ, ನಿಂಗೆ ಸಂಬಳ ಕೊಡೊದು ಯಾಕೆ, ಸಂಬಳ ಕಟ್ ಮಾಡಿಸ್ತೀನಿ, ಡಾಕ್ಟರ್ ಅಂತೀಯ ಎಷ್ಟು ಸಂಬಳ, ನಿನ್ನ ಮೇಲೆ ಯಾಕೆ ಕ್ರಮ ತೆಗೆದುಕೊಳ್ಳಬಾರದು ಎಂದೆಲ್ಲಾ ಏಕ ವಚನದಲ್ಲೇ ನಿಂದಿಸಿದ್ದಾರೆ’ ಎಂದು ವೇದಿಕೆಯು ದೂರಿನಲ್ಲಿ ಉಲ್ಲೇಖಿಸಿದೆ.

‘ಸಿಸಿಟಿವಿ ಕ್ಯಾಮರಾದಲ್ಲಿ ಎಲ್ಲವೂ ಸೆರೆಯಾಗಿದ್ದು, ಪರಿಶೀಲನೆ ನಡೆಸಿ ಪೋಷಕರನ್ನು ನಿಂದಿಸಿ ಬೆದರಿಕೆ ಹಾಕಿರುವ ಜಿಲ್ಲಾಧಿಕಾರಿ ವಿರುದ್ಧ ಕ್ರಮ ಕೈಗೊಳ್ಳಬೇಕು’ ಎಂದು ಸಂಘಟನೆ ಒತ್ತಾಯಿಸಿದೆ.

ಜಿಲ್ಲಾಧಿಕಾರಿ ಪ್ರತಿಕ್ರಿಯೆ

ತಮ್ಮ ಮೇಲಿನ ಆರೋಪವನ್ನು ಅಲ್ಲಗಳೆದಿರುವ ಜಿಲ್ಲಾಧಿಕಾರಿ ಜೆ.ಮಂಜುನಾಥ್‌, ‘ಪ್ರತಿನಿತ್ಯ ನೂರಾರು ಜನ ಸಂಪರ್ಕ ಮಾಡುತ್ತಾರೆ. ಯಾವ ಹಂತದಲ್ಲೂ ಯಾರಿಗೂ ಅವಮಾನವಾಗುವಂತೆ ವರ್ತಿಸಿಲ್ಲ. ಶಾಲೆಗಳಲ್ಲಿ ಶುಲ್ಕ ಹೆಚ್ಚಳ ಆಗಿದ್ದರೆ ಪರಿಶೀಲಿಸುತ್ತೇವೆ. ಎರಡು ವರ್ಷದಿಂದ ಶುಲ್ಕವನ್ನೇ ಪಾವತಿಸದ ಪೋಷಕರಿಗೆ ಬಾಕಿ ಶುಲ್ಕ ಪಾವತಿಸಿ ಬನ್ನಿ ಎಂದಷ್ಟೇ ಹೇಳಿದ್ದೇನೆ. ಯಾವ ಪೋಷಕರನ್ನೂ ನಿಂದಿಸಿಲ್ಲ’ ಎಂದು ತಿಳಿಸಿದ್ದಾರೆ.


ಇದನ್ನೂ ಓದಿರಿ: ಹಳೆಯ ಪ್ರಕರಣ ಕೆದಕಿದ ಯುಪಿ ಪೊಲೀಸರು: ಸಿಎಎ ವಿರೋಧಿ ನಾಲ್ವರು ಪ್ರತಿಭಟನಾಕಾರರ ಬಂಧನ; ಜಾಮೀನು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...