Homeಕರ್ನಾಟಕ‘ನಿಂಗೆ ಬಿಟ್ಟಿ ಎಜುಕೇಷನ್‌ ಬೇಕಾ?’ ಎಂದಿದ್ದ ಡಿಸಿ ವಿರುದ್ಧ ಸಿಎಂಗೆ ದೂರು

‘ನಿಂಗೆ ಬಿಟ್ಟಿ ಎಜುಕೇಷನ್‌ ಬೇಕಾ?’ ಎಂದಿದ್ದ ಡಿಸಿ ವಿರುದ್ಧ ಸಿಎಂಗೆ ದೂರು

- Advertisement -
- Advertisement -

“ನಿಂಗೆ ಬಿಟ್ಟಿ ಎಜುಕೇಷನ್‌ ಬೇಕಾ? ಫೀಸ್‌ ಕಟ್ಟೋಕೆ ಆಗೋದಿಲ್ವಾ? ಸುಮ್ನೆ ಕೂತ್ಕೋಳಯ್ಯ, ಎಷ್ಟು ಮಾತಾಡ್ತೀಯಾ”- ನ್ಯಾಯಕೇಳಲು ಬಂದವರ ಬಳಿ ಬೆಂಗಳೂರು ನಗರ ಜಿಲ್ಲಾಧಿಕಾರಿ ಜೆ.ಮಂಜುನಾಥ್‌ ಹೀಗೆ ಬೆದರಿಕೆ ಹಾಕಿರುವ ಆರೋಪ ಕೇಳಿಬಂದಿದ್ದು, ಈ ಸಂಬಂಧ ಮಾನವ ಹಕ್ಕುಗಳ ಆಯೋಗದಲ್ಲಿ ದೂರು ದಾಖಲಾಗಿದೆ. ಜೊತೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರಿಗೂ ದೂರು ನೀಡಲಾಗಿದೆ.

ಖಾಸಗಿ ಶಾಲೆಗಳು ಹೆಚ್ಚಿನ ಶುಲ್ಕ ಕೇಳಿ ಪೀಡಿಸಿದರೆ ಜಿಲ್ಲಾ ವ್ಯಾಪ್ತಿಯಲ್ಲಿನ ‘ಜಿಲ್ಲಾ ಶಿಕ್ಷಣ ನಿಯಂತ್ರಣ ಪ್ರಾಧಿಕಾರ’ಕ್ಕೆ ದೂರು ನೀಡಬಹುದು. ಈ ಪ್ರಾಧಿಕಾರಕ್ಕೆ ಜಿಲ್ಲಾಧಿಕಾರಿಗಳೇ ಅಧಿಕಾರಿಯಾಗಿರುತ್ತಾರೆ. ಪೋಷಕರು ದೂರು ನೀಡಲು ಬಂದಾಗ ಜಿಲ್ಲಾಧಿಕಾರಿ ತಮ್ಮ ಜವಾಬ್ದಾರಿ ಮರೆತು ವರ್ತಿಸಿದ್ದಾರೆ ಎನ್ನಲಾಗಿದೆ.

ಪಾಲಕರು ದೂರನ್ನು ವಿಚಾರಿಸುವ ವೇಳೆ, “ನಿಂಗೆ ಬಿಟ್ಟಿ ಎಜುಕೇಷನ್‌ ಬೇಕಾ, ಫೀಸ್‌ ಕಟ್ಟೋಕೆ ಆಗಲ್ವಾ? ಸುಮ್ನೆ ಕೂತ್ಕೊಳಯ್ಯ ಎಷ್ಟು ಮಾತಾಡ್ತೀಯಾ? ಶುಲ್ಕ ಕಟ್ಟು, ಇಲ್ಲವಾದರೆ ಸರ್ಕಾರಿ ಶಾಲೆಗೆ ಮಗುವನ್ನು ಸೇರಿಸು” ಎಂದು ಗದರಿಸಿರುವುದಾಗಿ ಮಾನವ ಹಕ್ಕುಗಳ ಆಯೋಗಕ್ಕೆ ದೂರು ನೀಡಲಾಗಿದೆ.

ಶ್ರೀ ವಾಣಿ ಎಜುಕೇಷನ್‌ ಸೆಂಟರ್‌ ವಿರುದ್ಧ ಪ್ರಾಧಿಕಾರಕ್ಕೆ ಜಿ.ರವಿಕುಮಾರ್‌, ಲಕ್ಷ್ಮಿನಾರಾಯಣ ಮತ್ತು ಡಾ.ಅರುಣ್‌ಕುಮಾರ್‌‌ ದೂರು ನೀಡಲು ಬಂದಾಗ ಘಟನೆ ನಡೆದಿದೆ. ಸೆಪ್ಟೆಂಬರ್‌‌ ತಿಂಗಳಲ್ಲಿ ಘಟನೆ ನಡೆದಿದ್ದು, ಮಾನವ ಹಕ್ಕುಗಳ ಆಯೋಗದ ಸದಸ್ಯ ಆರ್‌.ಕೆ.ದತ್ತ ಅವರು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿಗೆ ನೋಟೀಸ್‌ ಜಾರಿಗೊಳಿಸಿದ್ದಾರೆ. ಈ ಬಗ್ಗೆ ವರದಿ ನೀಡುವಂತೆ ಆಯೋಗವು ಸರ್ಕಾರಕ್ಕೆ ಸೂಚನೆ ನೀಡಿದೆ.

ದೂರು ಈಗ ಮುಖ್ಯಮಂತ್ರಿಯವರಿಗೂ ತಲುಪಿದ್ದು, ಜಿಲ್ಲಾ ಶಿಕ್ಷಣ ನಿಯಂತ್ರಣ ಪ್ರಾಧಿಕಾರದ ಅಧ್ಯಕ್ಷರೂ ಆಗಿರುವ ಜಿಲ್ಲಾಧಿಕಾರಿ ವಿರುದ್ಧ ಶಿಸ್ತು ಕ್ರಮಕ್ಕೆ ಆಗ್ರಹಿಸಿ ಕರ್ನಾಟಕ ರಾಜ್ಯ ಖಾಸಗಿ ಶಾಲಾ ಪೋಷಕರ ಸಂಘಟನೆಗಳ ಸಮನ್ವಯ ವೇದಿಕೆಯು ಒತ್ತಾಯಿಸಿದೆ.

‘ಹೆಚ್ಚುವರಿ ಶುಲ್ಕ ಪಡೆಯುತ್ತಿರುವ ಬಗ್ಗೆ ದಾಖಲಾಗಿದ್ದ ದೂರುಗಳನ್ನು ಪರಿಶೀಲಿಸಲು ಆ.5ರಂದು ಜಿಲ್ಲಾಧಿಕಾರಿ ಸಭೆ ನಡೆಸಿದ್ದರು. ದೂರು ಸಲ್ಲಿಸಿದ್ದ ಪೋಷಕರ ವಿರುದ್ಧ ಜಿಲ್ಲಾಕಾರಿ ಧಮಕಿ ಹಾಕಿದ್ದಾರೆ. ಯಾವ ಡಿಪಾರ್ಟ್‌ಮೆಂಟ್ ನಿಂದು, ನಿಂಗೆ ಬಿಟ್ಟಿ ಎಜುಕೇಷನ್ ಬೇಕಾ, ಫೀಸ್ ಕಟ್ಟೋಕೆ ಆಗಲ್ವಾ, ನಿಂಗೆ ಸಂಬಳ ಕೊಡೊದು ಯಾಕೆ, ಸಂಬಳ ಕಟ್ ಮಾಡಿಸ್ತೀನಿ, ಡಾಕ್ಟರ್ ಅಂತೀಯ ಎಷ್ಟು ಸಂಬಳ, ನಿನ್ನ ಮೇಲೆ ಯಾಕೆ ಕ್ರಮ ತೆಗೆದುಕೊಳ್ಳಬಾರದು ಎಂದೆಲ್ಲಾ ಏಕ ವಚನದಲ್ಲೇ ನಿಂದಿಸಿದ್ದಾರೆ’ ಎಂದು ವೇದಿಕೆಯು ದೂರಿನಲ್ಲಿ ಉಲ್ಲೇಖಿಸಿದೆ.

‘ಸಿಸಿಟಿವಿ ಕ್ಯಾಮರಾದಲ್ಲಿ ಎಲ್ಲವೂ ಸೆರೆಯಾಗಿದ್ದು, ಪರಿಶೀಲನೆ ನಡೆಸಿ ಪೋಷಕರನ್ನು ನಿಂದಿಸಿ ಬೆದರಿಕೆ ಹಾಕಿರುವ ಜಿಲ್ಲಾಧಿಕಾರಿ ವಿರುದ್ಧ ಕ್ರಮ ಕೈಗೊಳ್ಳಬೇಕು’ ಎಂದು ಸಂಘಟನೆ ಒತ್ತಾಯಿಸಿದೆ.

ಜಿಲ್ಲಾಧಿಕಾರಿ ಪ್ರತಿಕ್ರಿಯೆ

ತಮ್ಮ ಮೇಲಿನ ಆರೋಪವನ್ನು ಅಲ್ಲಗಳೆದಿರುವ ಜಿಲ್ಲಾಧಿಕಾರಿ ಜೆ.ಮಂಜುನಾಥ್‌, ‘ಪ್ರತಿನಿತ್ಯ ನೂರಾರು ಜನ ಸಂಪರ್ಕ ಮಾಡುತ್ತಾರೆ. ಯಾವ ಹಂತದಲ್ಲೂ ಯಾರಿಗೂ ಅವಮಾನವಾಗುವಂತೆ ವರ್ತಿಸಿಲ್ಲ. ಶಾಲೆಗಳಲ್ಲಿ ಶುಲ್ಕ ಹೆಚ್ಚಳ ಆಗಿದ್ದರೆ ಪರಿಶೀಲಿಸುತ್ತೇವೆ. ಎರಡು ವರ್ಷದಿಂದ ಶುಲ್ಕವನ್ನೇ ಪಾವತಿಸದ ಪೋಷಕರಿಗೆ ಬಾಕಿ ಶುಲ್ಕ ಪಾವತಿಸಿ ಬನ್ನಿ ಎಂದಷ್ಟೇ ಹೇಳಿದ್ದೇನೆ. ಯಾವ ಪೋಷಕರನ್ನೂ ನಿಂದಿಸಿಲ್ಲ’ ಎಂದು ತಿಳಿಸಿದ್ದಾರೆ.


ಇದನ್ನೂ ಓದಿರಿ: ಹಳೆಯ ಪ್ರಕರಣ ಕೆದಕಿದ ಯುಪಿ ಪೊಲೀಸರು: ಸಿಎಎ ವಿರೋಧಿ ನಾಲ್ವರು ಪ್ರತಿಭಟನಾಕಾರರ ಬಂಧನ; ಜಾಮೀನು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...

ನಾವು ದಾಖಲೆಗಳನ್ನು ಕೊಟ್ಟರೂ ನಮ್ಮನ್ನು ಹಕ್ಕುಗಳಿಂದ ವಂಚಿಸಲಾಗುತ್ತದೆ ಎಚ್ಚರ- ಡಿ.ಹೆಚ್.ಕಂಬಳಿ

ಸಿಂಧನೂರು: SIR ವಿರೋಧಿಸಿ ನಡೆಸಲಾಗುತ್ತಿರುವ ಜಾಗೃತಿ ಜಾಥ ರಾಯಚೂರು ಜಿಲ್ಲೆಯ ಸಿಂಧನೂರು ಪ್ರವೇಶಿಸಿತ್ತು. ನಗರದ ಜಮಾತ್ ಎ ಇಸ್ಲಾಂ ಹಿಂದ್ ಕಚೇರಿಯಲ್ಲಿ ಹಲವು ಸಮುದಾಯದ ಮುಖಂಡರು ಹಾಗೂ ಹೋರಾಟಗಾರರು ಹಾಜರಿದ್ದರು. ಜಾಥಾದ ಭಾಗವಾಗಿ...

ಹುಬ್ಬಳ್ಳಿಯಲ್ಲಿ ಎಸ್‌ಐಆರ್ ವಿರೋಧಿ ಜನಜಾಗೃತಿ ಸಭೆ ; ಒಗ್ಗಟ್ಟಿನ ಹೋರಾಟಕ್ಕೆ ಕರೆ

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರೋಧಿಸಿ ಹುಬ್ಬಳ್ಳಿಯ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಜ್ಞಾನ ಮಂಟಪದಲ್ಲಿ ಮಂಗಳವಾರ (ಜೂ.16) ಸಂಜೆ ವಿವಿಧ ಜನ ಸಂಘಟನೆಗಳು ಮತ್ತು...

ಎಸ್ಐಆರ್ ಮೂಲಕ ಮನುವಾದದ ಮರು ಜಾರಿಗೆ ಯತ್ನ : ಡಾ. ಗಣೇಶ್ ದೇವಿ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ಮೂಲಕ ಮನುವಾದದ ಮರು ಜಾರಿಗೆ ಪ್ರಯತ್ನಿಸಲಾಗುತ್ತಿದೆ ಎಂದು ಪದ್ಮಶ್ರೀ ಪುರಸ್ಕೃತ ಡಾ. ಗಣೇಶ್ ದೇವಿ ಹೇಳಿದರು. ಮಂಗಳವಾರ (ಜೂ.16) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಬಳಿಯ...

ಎಡದೊರೆಯ ನಾಡಿನಲ್ಲಿ ಮೊಳಗಿದ SIR ವಿರೋಧಿ ಕೂಗು

ಕರ್ನಾಟಕದಲ್ಲಿ ಅವೈಜ್ಞಾನಿಕವಾಗಿ ಜಾರಿಮಾಡಲು ಹೊರಟಿರುವ SIR ಅನ್ನು ವಿರೋಧಿಸಿ ಜನಜಾಗೃತಿ ಜಾಥಾವು ಇಂದು ಕಲ್ಯಾಣ ಕರ್ನಾಟಕ ಭಾಗದ ರಾಯಚೂರು ಜಿಲ್ಲೆಯನ್ನು ಪ್ರವೇಶಿಸಿತು. ಹೋರಾಟಗಳ ನೆಲ ರಾಯಚೂರಿನಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಹೋರಾಟಗಾರರು, ವಿವಿಧ ಸಮುದಾಯದ...

ಜೂನ್ 20ರ ಬೆಂಗಳೂರಿನ ‘SIR’ ವಿರೋಧಿ ಸಮಾವೇಶಕ್ಕೆ ಶಿವಮೊಗ್ಗದಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಹಿರಿಯ ವಕೀಲರಾದ ಶ್ರೀಪಾಲ್ ಕರೆ

ಜೂನ್ 20 ರಂದು ಬೆಂಗಳೂರಿನಲ್ಲಿ ಹಮ್ಮಿಕೊಳ್ಳಲಾಗಿರುವ ‘SIR’ ವಿರೋಧಿ ಜನಜಾಗೃತಿ ಸಮಾವೇಶಕ್ಕೆ ಶಿವಮೊಗ್ಗ ಜಿಲ್ಲೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸಬೇಕೆಂದು ಹಿರಿಯ ವಕೀಲರಾದ ಶ್ರೀಪಾಲ್ ಕರೆ ನೀಡಿದ್ದಾರೆ. ನಗರದ ಪತ್ರಿಕಾ ಭವನದಲ್ಲಿ ಪ್ರಗತಿಪರ ಸಂಘಟನೆಗಳ...