Homeಮುಖಪುಟಕಾಳಿ ದೇವಿ ಕುರಿತ ಹೇಳಿಕೆಗೆ ದೂರು: ಟಿಎಂಸಿ ಸಂಸದೆ ಮಹುವಾ ಮೊಯಿತ್ರ ಹೇಳಿದ್ದೇನು?

ಕಾಳಿ ದೇವಿ ಕುರಿತ ಹೇಳಿಕೆಗೆ ದೂರು: ಟಿಎಂಸಿ ಸಂಸದೆ ಮಹುವಾ ಮೊಯಿತ್ರ ಹೇಳಿದ್ದೇನು?

- Advertisement -
- Advertisement -

ಕಾಳಿ ದೇವಿ ಕುರಿತು ಟಿಎಂಸಿ ಸಂಸದೆ ಮಹುವಾ ಮೊಯಿತ್ರ ನೀಡಿದ ಹೇಳಿಕೆಗಳು ಹಿಂದೂ ಧಾರ್ಮಿಕ ಭಾವನೆಗೆ ಧಕ್ಕೆ ತಂದಿದೆ ಎಂದು ಬಿಜೆಪಿ ಆರೋಪಿಸಿದೆ. ಈ ಕುರಿತು ಕೋಲ್ಕತ್ತಾದಲ್ಲಿ ಬಿಜೆಪಿ ಮುಖಂಡ ಜಿತಿನ್ ಚಟರ್ಜಿ ಎಂಬುವವರು ಪೊಲೀಸರಿಗೆ ದೂರು ನೀಡಿದ್ದಾರೆ.

ಇಂಡಿಯಾ ಟುಡೆಯ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ್ದ ಸಂಸದೆ ಮಹುವಾ ಮೊಯಿತ್ರಾರವರು “ಜನರು ತಮ್ಮ ದೇವರನ್ನು ಹೇಗೆ ನೋಡುತ್ತಾರೆ, ಕಲ್ಪಿಸಿಕೊಳ್ಳುತ್ತಾರೆ ಎಂಬುದು ಅವರಿಗೆ ಬಿಟ್ಟದ್ದು. ಅವರು ತಮಗಿಷ್ಟ ಬಂದಂತೆ ತಮ್ಮ ದೇವರನ್ನು ಪೂಜಿಸಬಹುದು. ಉದಾಹರಣೆಗೆ ನೀವು ಭೂತಾನ್ ಅಥವಾ ಸಿಕ್ಕಿಂಗೆ ಹೋದರೆ, ಅವರು ಪೂಜೆ ಮಾಡುವಾಗ ತಮ್ಮ ದೇವರಿಗೆ ವಿಸ್ಕಿ ಅರ್ಪಿಸುತ್ತಾರೆ. ಆದರೆ ನೀವು ಉತ್ತರ ಪ್ರದೇಶಕ್ಕೆ ಹೋಗಿ ನಿಮ್ಮ ದೇವರಿಗೆ ವಿಸ್ಕಿಯನ್ನು ಪ್ರಸಾದವಾಗಿ ಅರ್ಪಿಸಿ ಎಂದು ಹೇಳಿದರೆ, ಅದು ಧರ್ಮನಿಂದನೆಯೆಂದು ಕರೆಸಿಕೊಳ್ಳುತ್ತದೆ” ಎಂದು ಹೇಳಿದ್ದರು.

ಮುಂದುವರಿದು, “ನನಗೆ ಕಾಳಿ ದೇವಿಯು ಮಾಂಸ ತಿನ್ನುವ ಮತ್ತು ಮದ್ಯವನ್ನು ಸ್ವೀಕರಿಸುವ ದೇವತೆಯಂತೆ ಕಾಣುತ್ತಾರೆ. ನೀವು ತಾರಾಪೀಠಕ್ಕೆ ಹೋದರೆ, ನೀವು ಧೂಮಪಾನ ಮಾಡುವ ಸಾಧುಗಳನ್ನು ನೋಡುತ್ತೀರಿ. ಆ ರಿತಿಯಾಗಿ ಅವರು ಕಾಳಿಯನ್ನು ಪೂಜಿಸುತ್ತಾರೆ. ನಾನು ಹಿಂದೂ ಧರ್ಮದಲ್ಲಿ, ಕಾಳಿ ಆರಾಧಕಳಾಗಿ ಕಾಳಿಯನ್ನು ಆ ರೀತಿಯಲ್ಲಿ ಕಲ್ಪಿಸಿಕೊಳ್ಳುವ ಹಕ್ಕಿದೆ; ಅದು ನನ್ನ ಸ್ವಾತಂತ್ರ್ಯ” ಎಂದು ಹೇಳಿದ್ದರು.

“ನಿಮ್ಮ ದೇವರನ್ನು ಸಸ್ಯಾಹಾರಿಯಾಗಿ ಮತ್ತು ಬಿಳಿ ಬಟ್ಟೆ ತೊಟ್ಟವರಂತೆ ಪೂಜಿಸಲು ನಿಮಗೆ ಎಷ್ಟು ಸ್ವಾತಂತ್ರ್ಯವಿದೆಯೋ ಹಾಗೆಯೇ ಮಾಂಸ ತಿನ್ನುವ ದೇವತೆಯಾಗಿ ಕಲ್ಪಿಸಿಕೊಳ್ಳುವ ಹಕ್ಕು ಸಹ ನನಗಿದೆ” ಎಂದು ಹೇಳಿದ್ದರು.

ಈ ಕುರಿತು ಬಿಜೆಪಿ ಆಕ್ಷೇಪ ವ್ಯಕ್ತಪಡಿಸಿತ್ತು. ಅದರ ಬೆನ್ನಲ್ಲೆ ಟಿಎಂಸಿ ಪಕ್ಷ ಸಹ ಮಹುವಾ ಹೇಳಿಕೆಯನ್ನು ಖಂಡಿಸಿತ್ತು. ಆ ಕುರಿತು ಟ್ವೀಟ್ ಮಾಡಿ, “#IndiaTodayConclaveEast2022 ನಲ್ಲಿ ಮಹುವಾ ಮೊಯಿತ್ರಾರವರು ನೀಡಿದ ಹೇಳಿಕೆ ಮತ್ತು ಕಾಳಿ ದೇವಿಯ ಕುರಿತು ಅವರ ಅಭಿಪ್ರಾಯಗಳನ್ನು ಅವರ ವೈಯಕ್ತಿಕವಾದವುಗಳಾಗಿವೆ. ಅವಗಳನ್ನು ಯಾವುದೇ ರೀತಿಯಲ್ಲಿ ಅಥವಾ ರೂಪದಲ್ಲಿ ಪಕ್ಷವು ಅನುಮೋದಿಸುವುದಿಲ್ಲ. ಇಂತಹ ಹೇಳಿಕೆಗಳನ್ನು ಅಖಿಲ ಭಾರತ ತೃಣಮೂಲ ಕಾಂಗ್ರೆಸ್ ಬಲವಾಗಿ ಖಂಡಿಸುತ್ತದೆ” ಎಂದು ಪಕ್ಷ ಟ್ವೀಟ್ ಮಾಡಿತು. ಆದಾದ ನಂತರ ಮಹುವಾ ಮೊಯಿತ್ರ ಪಕ್ಷದ ಟ್ವಿಟರ್ ಖಾತೆಯನ್ನು ಅನ್‌ಫಾಲೋ ಮಾಡಿದ್ದರು.

ಕೆಲದಿನಗಳ ಹಿಂದೆ ಸಿನಿಮಾ ನಿರ್ದೇಶಕಿಯೊಬ್ಬರು ಕಾಳಿ ದೇವಿ ಸಿಗರೇಟ್ ಸೇದುತ್ತಿರುವ ಫೋಟೊವನ್ನು ತಮ್ಮ ಸಿನಿಮಾಗೆ ಬಳಸಿಕೊಂಡಿದ್ದರು. ಈ ಕುರಿತು ವಿವಾದ ಉಂಟಾಗಿ ಅವರ ಮೇಲೆ ದೂರು ದಾಖಲಾಗಿತ್ತು. ಅವರನ್ನು ಮಹುವಾ ಮೊಹಿತ್ರ ಬೆಂಬಲಿಸುತ್ತಿದ್ದಾರೆ ಎಂದು ಬಿಜೆಪಿಗರು ಆರೋಪಿಸಿದ್ದರು.

ಇದಕ್ಕೆ ಪ್ರತಿಕ್ರಿಯಿಸಿದ್ದ ಮಹುವಾ, “ನಿಮಗೆಲ್ಲ ಸಂಘಿ-ಸುಳ್ಳು ಹೇಳುವುದು ನಿಮ್ಮನ್ನು ಉತ್ತಮ ಹಿಂದೂಗಳನ್ನಾಗಿ ಮಾಡುವುದಿಲ್ಲ. ನಾನು ಯಾವುದೇ ಚಲನಚಿತ್ರ ಅಥವಾ ಪೋಸ್ಟರ್ ಅನ್ನು ಬೆಂಬಲಿಸಿಲ್ಲ ಅಥವಾ ಧೂಮಪಾನದ ಪದವನ್ನು ಉಲ್ಲೇಖಿಸಿಲ್ಲ. ಭೋಗ್ ಆಗಿ ಯಾವ ಆಹಾರ ಮತ್ತು ಪಾನೀಯವನ್ನು ನೀಡಲಾಗುತ್ತದೆ ಎಂಬುದನ್ನು ನೋಡಲು ತಾರಾಪೀಠದಲ್ಲಿರುವ ನನ್ನ ಮಾ ಕಾಳಿ ದೇವಾಲಯಕ್ಕೆ ಭೇಟಿ ನೀಡಿ ಎಂದು ಸಲಹೆ ನೀಡಿದ್ದೇನೆ ಅಷ್ಟೆ” ಎಂದು ಟ್ವೀಟ್ ಮಾಡಿದ್ದಾರೆ.

ಪ್ರಕರಣ ವಿವಾದದ ಸ್ವರೂಪ ಪಡೆದುಕೊಂಡ ಕೂಡಲೇ ಮಹುವಾ ಮೊಯಿತ್ರರವರು “ಜೈ ಮಾ ಕಾಳಿ, ಬಂಗಾಳಿಗರು ದೇವರನ್ನು ಯಾವುದೇ ಭಯವಿಲ್ಲದೆ ಆರಾಧನೆ ಮಾಡುತ್ತಾರೆಯೇ ಹೊರತು ತುಷ್ಟೀಕರಣ ಮಾಡುವುದಿಲ್ಲ” ಎಂದು ಮತ್ತೊಂದು ಟ್ವೀಟ್ ಮಾಡಿದ್ದಾರೆ.

ತಮ್ಮ ವಿರುದ್ಧ ದೂರು ನೀಡಿದ ಬಿಜೆಪಿ ವಿರುದ್ಧವೂ ಅವರು ಕಿಡಿಕಾರಿದ್ದಾರೆ. “ನಾನು ಕಾಳಿಯ ಆರಾಧಕಿ, ನನಗೆ ಯಾರ ಭಯವಿಲ್ಲ. ನಿಮ್ಮ ಅಜ್ಞಾನಿಗಳ, ನಿಮ್ಮ ಗೂಂಡಾಗಳ, ನಿಮ್ಮ ಪೊಲೀಸರ ಎಲ್ಲಕ್ಕಿಂತ ಹೆಚ್ಚಾಗಿ ನಿಮ್ಮ ಟ್ರೋಲ್ ಪಡೆಯ ಭಯ ನನಗಿಲ್ಲ” ಎಂದು ಅವರು ಟ್ವೀಟ್ ಮಾಡಿದ್ದಾರೆ.

ಮಹುವಾ ಮೊಯಿತ್ರಾರವರ ವಿರುದ್ದದ ದಾಳಿಗಳನ್ನು ಖಂಡಿಸಿರುವ ಕಾಂಗ್ರೆಸ್ ಸಂಸದ ಶಶಿ ತರೂರ್ ಅವರ ಬೆಂಬಲಕ್ಕೆ ನಿಂತಿದ್ದಾರೆ. ನಮ್ಮ ಧಾರ್ಮಿಕ ಆಚರಣೆಗಳು ಇಡೀ ದೇಶಾದ್ಯಂತ ವಿಭಿನ್ನವಾಗಿವೆ ಎಂಬುದನ್ನು ಎಲ್ಲಾ ಹಿಂದೂಗಳು ತಿಳಿದಿದ್ದಾರೆ. ಅದನ್ನೆ ಮಹುವಾರವರು ಹೇಳಿದ್ದಾರೆ ಎಂದಿದ್ದಾರೆ.

ಅವೈದಿಕ ದೇವರುಗಳಿಗೆ ಮಾಂಸಾಹಾರವನ್ನು ಪ್ರಸಾದ, ನೈವೈದ್ಯವಾಗಿ ಅರ್ಪಿಸುವ ಪದ್ದತಿ ಕರ್ನಾಟಕದಲ್ಲಿಯೂ ನಡೆದುಕೊಂಡು ಬಂದಿದೆ. ಮಂಟೇಸ್ವಾಮಿ, ಮಾರಮ್ಮ ಸೇರಿದಂತೆ ಹಲವು ದೇವರುಗಳಿಗೆ ಕುರಿ-ಕೋಳಿಗಳನ್ನು ಬಲಿಕೊಟ್ಟು ಅಡುಗೆ ಮಾಡಿ ಬಡಿಸುವುದು ಎಲ್ಲರಿಗೂ ತಿಳಿದೇ ಇದೆ.

ಈ ಕುರಿತು ನಾನುಗೌರಿ.ಕಾಂ ಜೊತೆ ಮಾತನಾಡಿದ ಲೇಖಕ, ಹೋರಾಟಗಾರ ಜಿ.ಎನ್ ನಾಗರಾಜುರವರು, “ಚೌಡಮ್ಮ, ಕಾಳಮ್ಮ, ಮಾರಮ್ಮ, ಊರಮ್ಮ ಇತ್ಯಾದಿ ನಮ್ಮ ಬಹಳಷ್ಟು ಅಮ್ಮ ದೇವತೆಗಳು ಮಾಂಸಾಹಾರಿಗಳು. ಬುಡಕಟ್ಟುಗಳ ಆರಾಧ್ಯ ದೇವತೆಗಳಾದ ಇವರು ಹಿಂದೆ ಸ್ವತಃ ಬೇಟೆ ಮತ್ತು ಯುದ್ದದಲ್ಲಿ ಭಾಗವಹಿಸುತ್ತಿದ್ದರು. ಆದ ಕಾರಣ ಇವರು ಮಾಂಸಾಹಾರಿಗಳು ಮತ್ತು ಆಯಾ ಬುಡಕಟ್ಟಿನ ಮದ್ಯವನ್ನು ಸೇವನೆ ಮಾಡುತ್ತಿದ್ದರು. ಇವೆಲ್ಲವೂ ಬುಡಕಟ್ಟು ಪದ್ದತಿಗಳಾಗಿವೆ” ಎಂದರು.

ಬುಡಕಟ್ಟು ಜನರು ತಮ್ಮ ಕುಲದೇವತೆಗಳೆಂದು ಪೂಜಿಸುತ್ತಾರೆ. ತಮ್ಮನ್ನು ಅಮ್ಮನ ಒಕ್ಕಲು ಎಂದು ಕರೆದುಕೊಳ್ಳುತ್ತಾರೆ. ಕಾಳೆ, ದುರ್ಗೆ, ಚಾಮುಂಡಿ ಎಲ್ಲರೂ ಇಂತಹ ಕುಲದೇವತೆಗಳೆ ಆಗಿದ್ದಾರೆ. ಅವರ ನಡುವೆಯೇ ಒಬ್ಬ ಪೂಜಾರಿ ಇದ್ದು ಪೂಜೆ ಸಲ್ಲಿಸುತ್ತಾರೆ. ದೇವಾಲಯದಲ್ಲಿಯೇ ಬಲಿ ಕೊಡಲಾಗುತ್ತಿತ್ತು. ಆದರೆ ಈ ದೇವಾಲಯಗಳಲ್ಲಿ ಕೆಲವು ಹೆಚ್ಚು ಆದಾಯ ತಂದ ನಂತರ ಅಲ್ಲಿ ಬ್ರಾಹ್ಮಣ ಪೂಜಾರಿಗಳು ಬಂದರು. ಕಾಲ ಅದನ್ನು ಸಸ್ಯಾಹಾರಿಗಳೆಂದು ಬಿಂಬಿಸುವುದು ಆರಂಭವಾಯಿತು. ಹಾಗಾಗಿ ಜನರು ದೇವಾಲಯದ ದೂರದಲ್ಲಿ ಬಲಿಕೊಡುವುದು ಇಂದಿಗೂ ನಡೆದುಕೊಂಡು ಬಂದಿದೆ. ನಮ್ಮ ಪುರುಷ ದೇವರುಗಳು ಸಹ ಮಾಂಸಾಹಾರಿಗಳೆ. ಸಸ್ಯಾಹಾರಿ ದೇವರುಗಳೆ ನನಗೆ ಕಂಡುಬರುವುದಿಲ್ಲ” ಎಂದರು.

ಕಾಳಿ ದೇವಿಯ ವಿಷಯಕ್ಕೆ ಬಂದರೆ ಅವರನ್ನು ಬಗೆ ಬಗೆಯಾಗಿ ಜನರು ಆರಾಧಿಸುತ್ತಾರೆ. ಕಪ್ಪು ಬಣ್ಣದ ಅರ್ಥ ನೀಡುವ ಕಾಳಿ ಬುಡಕಟ್ಟುಗಳ ಆರಾಧ್ಯ ದೈವ. ಕಾಳಿಯನ್ನು ಹೆಚ್ಚಾಗಿ ಪೂಜಿಸುವ ತಾಂತ್ರಿಕರು ಪಂಚಮಕರವನ್ನು ನಂಬಿದ್ದಾರೆ. ಅವರ ಪ್ರಕಾರ “ಮದ್ಯ, ಮಾಂಸ, ಮತ್ಸ್ಯ, ಮುದ್ರೆ ಮತ್ತು ಮೈಥುನ” ಇವೆಲ್ಲವ ಪೂಜ್ಯವಾಗಿವೆ, ಇವುಗಳಿಂದ ದೇವರು ಸಂಪ್ರೀತರಾಗುತ್ತಾರೆ ಎಂದು ನಂಬಿದ್ದಾರೆ.

ಇದನ್ನೂ ಓದಿ: ಭದ್ರಾವತಿ: ಬಜರಂಗದಳದ ದುಷ್ಕರ್ಮಿಗಳಿಂದ ದಾಂಧಲೆ; 6 ಮಂದಿ ವಿರುದ್ಧ ಎಫ್‌ಐಆರ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಎಲ್ಲಾ ಪ್ರಣಿಗಳು ತಮ್ಮ ಹಸಿವಿಗಾಗಿ ಆಹಾರ ಸೇವನೆ ಮಾಡುತ್ತವೆ ,ನಾಯಿ,ಹಂದಿಗಳು ಜನರ ಹೊಲಸು ತಿನ್ನುವ ಕಾರಣ ಮಾನವ ಸಹ ಪ್ರಾಣಿ ಸಂಕುಲದ ಭಾಗ ಆಗಾಗಿ ಇವಳು ನಾಯಿ,ಹಂದಿ ತಿನ್ನುವ ಹೊಲಸನ್ನು ತಿನ್ನಲಿ ,ಹಿಂದೂ ಭಾವನೆಗಳಿಗೆ ಧಕ್ಕೆ ತರುವ ಈ ರೀತಿಯ ಚೀನೀ ಬೆಂಬಲಿತ ಹೊಲಸು ತಿನ್ನುವ ಇಂತ ಕಮ್ಯೂನಿಸ್ಟ್ ಪಕ್ಷದ ಮೊಯಿತ್ರಾ ಸಂಸದರ ನಡವಳಿಕೆ ಅವರ ಕೊಳಕುತನ ನೋಡಿಸುತ್ತೇ

  2. ಎಲ್ಲಾ ಪ್ರಣಿಗಳು ತಮ್ಮ ಹಸಿವಿಗಾಗಿ ಆಹಾರ ಸೇವನೆ ಮಾಡುತ್ತವೆ ,ನಾಯಿ,ಹಂದಿಗಳು ಜನರ ಹೊಲಸು ತಿನ್ನುವ ಕಾರಣ ಮಾನವ ಸಹ ಪ್ರಾಣಿ ಸಂಕುಲದ ಭಾಗ ಆಗಾಗಿ ಇವಳು ನಾಯಿ,ಹಂದಿ ತಿನ್ನುವ ಹೊಲಸನ್ನು ತಿನ್ನಲಿ ,ಹಿಂದೂ ಭಾವನೆಗಳಿಗೆ ಧಕ್ಕೆ ತರುವ ಈ ರೀತಿಯ ಚೀನೀ ಬೆಂಬಲಿತ ಹೊಲಸು ತಿನ್ನುವ ಇಂತ ಪಕ್ಷದ ಮೊಯಿತ್ರಾ ಸಂಸದರ ನಡವಳಿಕೆ ಅವರ ಕೊಳಕುತನ ನೋಡಿಸುತ್ತೇ

LEAVE A REPLY

Please enter your comment!
Please enter your name here

- Advertisment -

ಬಿಹಾರ| ರಾಜ್ಯಸಭಾ ಚುನಾವಣೆ ಮತದಾನದಿಂದ ಹೊರಗುಳಿದ ನಾಲ್ವರು ಶಾಸಕರು; ಮಹಾಘಟಬಂಧನ್‌ಗೆ ಹಿನ್ನಡೆ

ಸೋಮವಾರ ಸಂಜೆ 4 ಗಂಟೆಗೆ ಮುಕ್ತಾಯಗೊಂಡ ರಾಜ್ಯಸಭಾ ಚುನಾವಣೆಯಲ್ಲಿ ನಾಲ್ವರು ಶಾಸಕರು ಮತದಾನದಿಂದ ಹೊರಗುಳಿಯುವ ಮೂಲಕ ಬಿಹಾರದ ಮಹಾಘಟಬಂಧನ್‌ಗೆ ಭಾರಿ ಹಿನ್ನಡೆಯಾಗಿದೆ. ಐದನೇ ಸ್ಥಾನಕ್ಕಾಗಿ ನಡೆಯುವ ಸ್ಪರ್ಧೆಯಲ್ಲಿ ವಿರೋಧ ಮೈತ್ರಿಕೂಟದ ನಿರೀಕ್ಷೆಗೆ ಭಾರಿ...

ರಾಜ್ಯಸಭೆಯಲ್ಲಿ LPG ಕೊರತೆ ಪ್ರಸ್ತಾಪಿಸಿದ ಮಲ್ಲಿಕಾರ್ಜುನ ಖರ್ಗೆ; ಪ್ರತಿಪಕ್ಷ ಅರಾಜಕತೆ ಸೃಷ್ಟಿಸಲು ಯತ್ನಿಸುತ್ತಿದೆ ಎಂದ ಸರ್ಕಾರ !

ನವದೆಹಲಿ: ರಾಜ್ಯಸಭೆಯಲ್ಲಿ ಸೋಮವಾರ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಎಲ್‌ಪಿಜಿ ಕೊರತೆಯ ವಿಷಯವನ್ನು ಪ್ರಸ್ತಾಪಿಸಿದರು ಮತ್ತು ಅಡುಗೆ ಅನಿಲದ ಬಿಕ್ಕಟ್ಟು ಮತ್ತು ಕಾಳಸಂತೆಕೋರತನವನ್ನು ತಡೆಯಲು ಸರ್ಕಾರ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡಿಲ್ಲ ಎಂದು...

ಬೆಂಗಳೂರು| ಹಣ ನೀಡಲು ನಿರಾಕರಿಸಿದ ವ್ಯಕ್ತಿಯನ್ನು ಮಕ್ಕಳ ಮುಂದೆಯೇ ಥಳಿಸಿ ಕೊಂದ ಗುಂಪು

ಹಣ ನೀಡಲು ನಿರಾಕರಿಸಿದ ತಂದೆಯನ್ನು ಮಕ್ಕಳ ಮುಂದೆಯೇ ಗುಂಪೊಂದು ಥಳಿಸಿ ಕೊಂದಿರುವ ಘಟನೆ ಬೆಂಗಳೂರಿನ ವಿಲ್ಸನ್ ಗಾರ್ಡನ್‌ನಲ್ಲಿ ಭಾನುವಾರ ರಾತ್ರಿ ನಡೆದಿದೆ. ವಿಲ್ಸನ್ ಗಾರ್ಡನ್‌ನ ಬಡಾ ಮಕನ್ ರಸ್ತೆ ಬಳಿ ರಶೀದ್ ಪಾಷಾ ಎಂದು...

ಅಬಕಾರಿ ನೀತಿ ಪ್ರಕರಣದಲ್ಲಿ ಖುಲಾಸೆ ಪ್ರಶ್ನಿಸಿ ಸಿಬಿಐ ಅರ್ಜಿ; ಪ್ರತಿಕ್ರಿಯಿಸಲು ಕೇಜ್ರಿವಾಲ್-ಸಿಸೋಡಿಯಾಗೆ ಸಮಯ ನೀಡಿದ ದೆಹಲಿ ಹೈಕೋರ್ಟ್

ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮತ್ತು ಇತರ 21 ಜನರ ತಮ್ಮ ಬಿಡುಗಡೆಯನ್ನು ಪ್ರಶ್ನಿಸಿ ಸಿಬಿಐ ಅರ್ಜಿಗೆ ಪ್ರತಿಕ್ರಿಯೆಗಳನ್ನು ಸಲ್ಲಿಸಲು ದೆಹಲಿ...

ಪ್ರಶ್ನೆಗಳಿಗೆ ಉತ್ತರಿಸದ ಸಚಿವರು: ಸದನ ಮುಂದೂಡಿದ ಸ್ಪೀಕರ್ ಯು.ಟಿ ಖಾದರ್

ಶಾಸಕರು ಕೇಳುವ ಪ್ರಶ್ನೆಗಳಿಗೆ ಉತ್ತರ ಒದಗಿಸದ ಸಚಿವರು ಮತ್ತು ಅಧಿಕಾರಿಗಳ ವಿರುದ್ದ ಸೋಮವಾರ (ಮಾ.16) ತೀವ್ರ ಅಸಮಾಧಾನ ವ್ಯಕ್ತಪಡಿಸಿದ ವಿಧಾನಸಭೆಯ ಸ್ಪೀಕರ್ ಯು.ಟಿ ಖಾದರ್, ಸದನವನ್ನು ಮುಂದೂಡಿಕೆ ಮಾಡಿ ಸರ್ಕಾರಕ್ಕೆ ಬಿಸಿ ಮುಟ್ಟಿಸಿದರು. ವಿಧಾನಸಭೆಯಲ್ಲಿ...

‘ಆಪರೇಷನ್ ಸಿಂಧೂರ್’ ಕುರಿತ ಪೋಸ್ಟ್: ಪ್ರೊಫೆಸರ್ ಅಲಿ ಖಾನ್ ಮಹ್ಮದಾಬಾದ್ ವಿರುದ್ಧದ ಪ್ರಕರಣಗಳನ್ನು ಕೈಬಿಟ್ಟ ಹರಿಯಾಣ ಸರ್ಕಾರ

'ಆಪರೇಷನ್ ಸಿಂಧೂರ್' ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದಕ್ಕಾಗಿ ಅಶೋಕ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಅಲಿ ಖಾನ್ ಮಹ್ಮದಾಬಾದ್ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಪ್ರಕರಣ ದಾಖಲಾಗಿತ್ತು. ಅವರ ವಿರುದ್ಧದ ಈ ಪ್ರಕರಣಗಳನ್ನು ಕೈಬಿಟ್ಟಿರುವುದಾಗಿ ಹರಿಯಾಣ...

ಎಲ್‌ಪಿಜಿ ಬಿಕ್ಕಟ್ಟಿನ ನಡುವೆ ಆಧಾರ್ ಮೂಲಕ ‘ಇ-ಕೆವೈಸಿ’ ಮಾಡಿಸಿಕೊಳ್ಳುವಂತೆ ಸರ್ಕಾರದ ಸೂಚನೆ

ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಬಳಸುವ 330 ಮಿಲಿಯನ್‌ಗಿಂತಲೂ ಹೆಚ್ಚು ಗ್ರಾಹಕರು ತಮ್ಮ ಎಲೆಕ್ಟ್ರಾನಿಕ್ ನೋ ಯುವರ್ ಕಸ್ಟಮರ್ (ಇ-ಕೆವೈಸಿ) ಅನ್ನು ಬಯೋಮೆಟ್ರಿಕ್ ಆಧಾರ್ ದೃಢೀಕರಣ ವ್ಯವಸ್ಥೆಯ ಮೂಲಕ ಮಾಡಿಸಿಕೊಳ್ಳಬೇಕು ಎಂದು ಸರ್ಕಾರ...

ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಪಶ್ಚಿಮ ಬಂಗಾಳದ ಮುಖ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ, ಉನ್ನತ ಪೊಲೀಸ್ ಅಧಿಕಾರಿಗಳನ್ನು ಬದಲಾಯಿಸಿದ ಚು. ಆಯೋಗ

ನಿರೀಕ್ಷೆಯಂತೆ ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಚುನಾವಣಾ ಆಯೋಗ ಪಶ್ಚಿಮ ಬಂಗಾಳದಲ್ಲಿ ತನ್ನ ಆಟ ಶುರು ಮಾಡಿದೆ. ರಾಜ್ಯದ ಸರ್ಕಾದ ಮುಖ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ ಮತ್ತು ಉನ್ನತ ಪೊಲೀಸ್ ಅಧಿಕಾರಿಗಳನ್ನು ಬದಲಾಯಿಸಿದೆ. ಪಶ್ಚಿಮ ಬಂಗಾಳ...

ಉತ್ತರ ಪ್ರದೇಶ| ಪಾಕ್ ಸಂಪರ್ಕದ ಆರೋಪ; ಮಹಿಳೆ ಸೇರಿದಂತೆ 6 ಜನರ ಬಂಧನ

ಪಾಕಿಸ್ತಾನದ ದೇಶದ ಕೋಡ್‌ನಲ್ಲಿ ನೋಂದಾಯಿಸಲಾದ ವಿದೇಶಿ ಸಂಖ್ಯೆಯೊಂದಿಗೆ ಭದ್ರತಾ ಕಚೇರಿಗಳು, ತನಿಖಾ ಸಂಸ್ಥೆಗಳು ಮತ್ತು ರೈಲ್ವೆ ನಿಲ್ದಾಣಗಳಂತಹ ಸಾರ್ವಜನಿಕ ಸ್ಥಳಗಳ ಬಗ್ಗೆ ಸೂಕ್ಷ್ಮ ಮಾಹಿತಿಯನ್ನು ಚಿತ್ರೀಕರಿಸಿ ಹಂಚಿಕೊಂಡ ಆರೋಪದ ಮೇಲೆ ಗಾಜಿಯಾಬಾದ್‌ನಲ್ಲಿ ಮಹಿಳೆ...

ವೈರಮುತ್ತುಗೆ ಜ್ಞಾನಪೀಠ ಪ್ರಶಸ್ತಿ : ಚಿನ್ಮಯಿ ಶ್ರೀಪಾದ, ಟಿಎಂ ಕೃಷ್ಣ ಸೇರಿ ಹಲವರಿಂದ ಟೀಕೆ

ಲಿಂಗತಾರತಮ್ಯ ಮತ್ತು ಲೈಂಗಿಕ ಕಿರುಕುಳದಂತಹ ಗಂಭೀರ ಆರೋಪಗಳನ್ನು ಎದುರಿಸುತ್ತಿರುವ ತಮಿಳು ಸಾಹಿತಿ ವೈರಮುತ್ತು ಅವರಿಗೆ 2025ನೇ ಸಾಲಿನ ಪ್ರತಿಷ್ಠಿತ ಜ್ಞಾನಪೀಠ ಪ್ರಶಸ್ತಿ ಘೋಷಿಸಿರುವುದು ವ್ಯಾಪಕ ಟೀಕೆಗೆ ಗುರಿಯಾಗಿದೆ.  ಸಾಹಿತ್ಯ ಕ್ಷೇತ್ರದಲ್ಲಿನ ಅವರ ಕೊಡುಗೆಯನ್ನು ಪರಿಗಣಿಸಿ...