Homeಮುಖಪುಟಕಾಳಿ ದೇವಿ ಕುರಿತ ಹೇಳಿಕೆಗೆ ದೂರು: ಟಿಎಂಸಿ ಸಂಸದೆ ಮಹುವಾ ಮೊಯಿತ್ರ ಹೇಳಿದ್ದೇನು?

ಕಾಳಿ ದೇವಿ ಕುರಿತ ಹೇಳಿಕೆಗೆ ದೂರು: ಟಿಎಂಸಿ ಸಂಸದೆ ಮಹುವಾ ಮೊಯಿತ್ರ ಹೇಳಿದ್ದೇನು?

- Advertisement -
- Advertisement -

ಕಾಳಿ ದೇವಿ ಕುರಿತು ಟಿಎಂಸಿ ಸಂಸದೆ ಮಹುವಾ ಮೊಯಿತ್ರ ನೀಡಿದ ಹೇಳಿಕೆಗಳು ಹಿಂದೂ ಧಾರ್ಮಿಕ ಭಾವನೆಗೆ ಧಕ್ಕೆ ತಂದಿದೆ ಎಂದು ಬಿಜೆಪಿ ಆರೋಪಿಸಿದೆ. ಈ ಕುರಿತು ಕೋಲ್ಕತ್ತಾದಲ್ಲಿ ಬಿಜೆಪಿ ಮುಖಂಡ ಜಿತಿನ್ ಚಟರ್ಜಿ ಎಂಬುವವರು ಪೊಲೀಸರಿಗೆ ದೂರು ನೀಡಿದ್ದಾರೆ.

ಇಂಡಿಯಾ ಟುಡೆಯ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ್ದ ಸಂಸದೆ ಮಹುವಾ ಮೊಯಿತ್ರಾರವರು “ಜನರು ತಮ್ಮ ದೇವರನ್ನು ಹೇಗೆ ನೋಡುತ್ತಾರೆ, ಕಲ್ಪಿಸಿಕೊಳ್ಳುತ್ತಾರೆ ಎಂಬುದು ಅವರಿಗೆ ಬಿಟ್ಟದ್ದು. ಅವರು ತಮಗಿಷ್ಟ ಬಂದಂತೆ ತಮ್ಮ ದೇವರನ್ನು ಪೂಜಿಸಬಹುದು. ಉದಾಹರಣೆಗೆ ನೀವು ಭೂತಾನ್ ಅಥವಾ ಸಿಕ್ಕಿಂಗೆ ಹೋದರೆ, ಅವರು ಪೂಜೆ ಮಾಡುವಾಗ ತಮ್ಮ ದೇವರಿಗೆ ವಿಸ್ಕಿ ಅರ್ಪಿಸುತ್ತಾರೆ. ಆದರೆ ನೀವು ಉತ್ತರ ಪ್ರದೇಶಕ್ಕೆ ಹೋಗಿ ನಿಮ್ಮ ದೇವರಿಗೆ ವಿಸ್ಕಿಯನ್ನು ಪ್ರಸಾದವಾಗಿ ಅರ್ಪಿಸಿ ಎಂದು ಹೇಳಿದರೆ, ಅದು ಧರ್ಮನಿಂದನೆಯೆಂದು ಕರೆಸಿಕೊಳ್ಳುತ್ತದೆ” ಎಂದು ಹೇಳಿದ್ದರು.

ಮುಂದುವರಿದು, “ನನಗೆ ಕಾಳಿ ದೇವಿಯು ಮಾಂಸ ತಿನ್ನುವ ಮತ್ತು ಮದ್ಯವನ್ನು ಸ್ವೀಕರಿಸುವ ದೇವತೆಯಂತೆ ಕಾಣುತ್ತಾರೆ. ನೀವು ತಾರಾಪೀಠಕ್ಕೆ ಹೋದರೆ, ನೀವು ಧೂಮಪಾನ ಮಾಡುವ ಸಾಧುಗಳನ್ನು ನೋಡುತ್ತೀರಿ. ಆ ರಿತಿಯಾಗಿ ಅವರು ಕಾಳಿಯನ್ನು ಪೂಜಿಸುತ್ತಾರೆ. ನಾನು ಹಿಂದೂ ಧರ್ಮದಲ್ಲಿ, ಕಾಳಿ ಆರಾಧಕಳಾಗಿ ಕಾಳಿಯನ್ನು ಆ ರೀತಿಯಲ್ಲಿ ಕಲ್ಪಿಸಿಕೊಳ್ಳುವ ಹಕ್ಕಿದೆ; ಅದು ನನ್ನ ಸ್ವಾತಂತ್ರ್ಯ” ಎಂದು ಹೇಳಿದ್ದರು.

“ನಿಮ್ಮ ದೇವರನ್ನು ಸಸ್ಯಾಹಾರಿಯಾಗಿ ಮತ್ತು ಬಿಳಿ ಬಟ್ಟೆ ತೊಟ್ಟವರಂತೆ ಪೂಜಿಸಲು ನಿಮಗೆ ಎಷ್ಟು ಸ್ವಾತಂತ್ರ್ಯವಿದೆಯೋ ಹಾಗೆಯೇ ಮಾಂಸ ತಿನ್ನುವ ದೇವತೆಯಾಗಿ ಕಲ್ಪಿಸಿಕೊಳ್ಳುವ ಹಕ್ಕು ಸಹ ನನಗಿದೆ” ಎಂದು ಹೇಳಿದ್ದರು.

ಈ ಕುರಿತು ಬಿಜೆಪಿ ಆಕ್ಷೇಪ ವ್ಯಕ್ತಪಡಿಸಿತ್ತು. ಅದರ ಬೆನ್ನಲ್ಲೆ ಟಿಎಂಸಿ ಪಕ್ಷ ಸಹ ಮಹುವಾ ಹೇಳಿಕೆಯನ್ನು ಖಂಡಿಸಿತ್ತು. ಆ ಕುರಿತು ಟ್ವೀಟ್ ಮಾಡಿ, “#IndiaTodayConclaveEast2022 ನಲ್ಲಿ ಮಹುವಾ ಮೊಯಿತ್ರಾರವರು ನೀಡಿದ ಹೇಳಿಕೆ ಮತ್ತು ಕಾಳಿ ದೇವಿಯ ಕುರಿತು ಅವರ ಅಭಿಪ್ರಾಯಗಳನ್ನು ಅವರ ವೈಯಕ್ತಿಕವಾದವುಗಳಾಗಿವೆ. ಅವಗಳನ್ನು ಯಾವುದೇ ರೀತಿಯಲ್ಲಿ ಅಥವಾ ರೂಪದಲ್ಲಿ ಪಕ್ಷವು ಅನುಮೋದಿಸುವುದಿಲ್ಲ. ಇಂತಹ ಹೇಳಿಕೆಗಳನ್ನು ಅಖಿಲ ಭಾರತ ತೃಣಮೂಲ ಕಾಂಗ್ರೆಸ್ ಬಲವಾಗಿ ಖಂಡಿಸುತ್ತದೆ” ಎಂದು ಪಕ್ಷ ಟ್ವೀಟ್ ಮಾಡಿತು. ಆದಾದ ನಂತರ ಮಹುವಾ ಮೊಯಿತ್ರ ಪಕ್ಷದ ಟ್ವಿಟರ್ ಖಾತೆಯನ್ನು ಅನ್‌ಫಾಲೋ ಮಾಡಿದ್ದರು.

ಕೆಲದಿನಗಳ ಹಿಂದೆ ಸಿನಿಮಾ ನಿರ್ದೇಶಕಿಯೊಬ್ಬರು ಕಾಳಿ ದೇವಿ ಸಿಗರೇಟ್ ಸೇದುತ್ತಿರುವ ಫೋಟೊವನ್ನು ತಮ್ಮ ಸಿನಿಮಾಗೆ ಬಳಸಿಕೊಂಡಿದ್ದರು. ಈ ಕುರಿತು ವಿವಾದ ಉಂಟಾಗಿ ಅವರ ಮೇಲೆ ದೂರು ದಾಖಲಾಗಿತ್ತು. ಅವರನ್ನು ಮಹುವಾ ಮೊಹಿತ್ರ ಬೆಂಬಲಿಸುತ್ತಿದ್ದಾರೆ ಎಂದು ಬಿಜೆಪಿಗರು ಆರೋಪಿಸಿದ್ದರು.

ಇದಕ್ಕೆ ಪ್ರತಿಕ್ರಿಯಿಸಿದ್ದ ಮಹುವಾ, “ನಿಮಗೆಲ್ಲ ಸಂಘಿ-ಸುಳ್ಳು ಹೇಳುವುದು ನಿಮ್ಮನ್ನು ಉತ್ತಮ ಹಿಂದೂಗಳನ್ನಾಗಿ ಮಾಡುವುದಿಲ್ಲ. ನಾನು ಯಾವುದೇ ಚಲನಚಿತ್ರ ಅಥವಾ ಪೋಸ್ಟರ್ ಅನ್ನು ಬೆಂಬಲಿಸಿಲ್ಲ ಅಥವಾ ಧೂಮಪಾನದ ಪದವನ್ನು ಉಲ್ಲೇಖಿಸಿಲ್ಲ. ಭೋಗ್ ಆಗಿ ಯಾವ ಆಹಾರ ಮತ್ತು ಪಾನೀಯವನ್ನು ನೀಡಲಾಗುತ್ತದೆ ಎಂಬುದನ್ನು ನೋಡಲು ತಾರಾಪೀಠದಲ್ಲಿರುವ ನನ್ನ ಮಾ ಕಾಳಿ ದೇವಾಲಯಕ್ಕೆ ಭೇಟಿ ನೀಡಿ ಎಂದು ಸಲಹೆ ನೀಡಿದ್ದೇನೆ ಅಷ್ಟೆ” ಎಂದು ಟ್ವೀಟ್ ಮಾಡಿದ್ದಾರೆ.

ಪ್ರಕರಣ ವಿವಾದದ ಸ್ವರೂಪ ಪಡೆದುಕೊಂಡ ಕೂಡಲೇ ಮಹುವಾ ಮೊಯಿತ್ರರವರು “ಜೈ ಮಾ ಕಾಳಿ, ಬಂಗಾಳಿಗರು ದೇವರನ್ನು ಯಾವುದೇ ಭಯವಿಲ್ಲದೆ ಆರಾಧನೆ ಮಾಡುತ್ತಾರೆಯೇ ಹೊರತು ತುಷ್ಟೀಕರಣ ಮಾಡುವುದಿಲ್ಲ” ಎಂದು ಮತ್ತೊಂದು ಟ್ವೀಟ್ ಮಾಡಿದ್ದಾರೆ.

ತಮ್ಮ ವಿರುದ್ಧ ದೂರು ನೀಡಿದ ಬಿಜೆಪಿ ವಿರುದ್ಧವೂ ಅವರು ಕಿಡಿಕಾರಿದ್ದಾರೆ. “ನಾನು ಕಾಳಿಯ ಆರಾಧಕಿ, ನನಗೆ ಯಾರ ಭಯವಿಲ್ಲ. ನಿಮ್ಮ ಅಜ್ಞಾನಿಗಳ, ನಿಮ್ಮ ಗೂಂಡಾಗಳ, ನಿಮ್ಮ ಪೊಲೀಸರ ಎಲ್ಲಕ್ಕಿಂತ ಹೆಚ್ಚಾಗಿ ನಿಮ್ಮ ಟ್ರೋಲ್ ಪಡೆಯ ಭಯ ನನಗಿಲ್ಲ” ಎಂದು ಅವರು ಟ್ವೀಟ್ ಮಾಡಿದ್ದಾರೆ.

ಮಹುವಾ ಮೊಯಿತ್ರಾರವರ ವಿರುದ್ದದ ದಾಳಿಗಳನ್ನು ಖಂಡಿಸಿರುವ ಕಾಂಗ್ರೆಸ್ ಸಂಸದ ಶಶಿ ತರೂರ್ ಅವರ ಬೆಂಬಲಕ್ಕೆ ನಿಂತಿದ್ದಾರೆ. ನಮ್ಮ ಧಾರ್ಮಿಕ ಆಚರಣೆಗಳು ಇಡೀ ದೇಶಾದ್ಯಂತ ವಿಭಿನ್ನವಾಗಿವೆ ಎಂಬುದನ್ನು ಎಲ್ಲಾ ಹಿಂದೂಗಳು ತಿಳಿದಿದ್ದಾರೆ. ಅದನ್ನೆ ಮಹುವಾರವರು ಹೇಳಿದ್ದಾರೆ ಎಂದಿದ್ದಾರೆ.

ಅವೈದಿಕ ದೇವರುಗಳಿಗೆ ಮಾಂಸಾಹಾರವನ್ನು ಪ್ರಸಾದ, ನೈವೈದ್ಯವಾಗಿ ಅರ್ಪಿಸುವ ಪದ್ದತಿ ಕರ್ನಾಟಕದಲ್ಲಿಯೂ ನಡೆದುಕೊಂಡು ಬಂದಿದೆ. ಮಂಟೇಸ್ವಾಮಿ, ಮಾರಮ್ಮ ಸೇರಿದಂತೆ ಹಲವು ದೇವರುಗಳಿಗೆ ಕುರಿ-ಕೋಳಿಗಳನ್ನು ಬಲಿಕೊಟ್ಟು ಅಡುಗೆ ಮಾಡಿ ಬಡಿಸುವುದು ಎಲ್ಲರಿಗೂ ತಿಳಿದೇ ಇದೆ.

ಈ ಕುರಿತು ನಾನುಗೌರಿ.ಕಾಂ ಜೊತೆ ಮಾತನಾಡಿದ ಲೇಖಕ, ಹೋರಾಟಗಾರ ಜಿ.ಎನ್ ನಾಗರಾಜುರವರು, “ಚೌಡಮ್ಮ, ಕಾಳಮ್ಮ, ಮಾರಮ್ಮ, ಊರಮ್ಮ ಇತ್ಯಾದಿ ನಮ್ಮ ಬಹಳಷ್ಟು ಅಮ್ಮ ದೇವತೆಗಳು ಮಾಂಸಾಹಾರಿಗಳು. ಬುಡಕಟ್ಟುಗಳ ಆರಾಧ್ಯ ದೇವತೆಗಳಾದ ಇವರು ಹಿಂದೆ ಸ್ವತಃ ಬೇಟೆ ಮತ್ತು ಯುದ್ದದಲ್ಲಿ ಭಾಗವಹಿಸುತ್ತಿದ್ದರು. ಆದ ಕಾರಣ ಇವರು ಮಾಂಸಾಹಾರಿಗಳು ಮತ್ತು ಆಯಾ ಬುಡಕಟ್ಟಿನ ಮದ್ಯವನ್ನು ಸೇವನೆ ಮಾಡುತ್ತಿದ್ದರು. ಇವೆಲ್ಲವೂ ಬುಡಕಟ್ಟು ಪದ್ದತಿಗಳಾಗಿವೆ” ಎಂದರು.

ಬುಡಕಟ್ಟು ಜನರು ತಮ್ಮ ಕುಲದೇವತೆಗಳೆಂದು ಪೂಜಿಸುತ್ತಾರೆ. ತಮ್ಮನ್ನು ಅಮ್ಮನ ಒಕ್ಕಲು ಎಂದು ಕರೆದುಕೊಳ್ಳುತ್ತಾರೆ. ಕಾಳೆ, ದುರ್ಗೆ, ಚಾಮುಂಡಿ ಎಲ್ಲರೂ ಇಂತಹ ಕುಲದೇವತೆಗಳೆ ಆಗಿದ್ದಾರೆ. ಅವರ ನಡುವೆಯೇ ಒಬ್ಬ ಪೂಜಾರಿ ಇದ್ದು ಪೂಜೆ ಸಲ್ಲಿಸುತ್ತಾರೆ. ದೇವಾಲಯದಲ್ಲಿಯೇ ಬಲಿ ಕೊಡಲಾಗುತ್ತಿತ್ತು. ಆದರೆ ಈ ದೇವಾಲಯಗಳಲ್ಲಿ ಕೆಲವು ಹೆಚ್ಚು ಆದಾಯ ತಂದ ನಂತರ ಅಲ್ಲಿ ಬ್ರಾಹ್ಮಣ ಪೂಜಾರಿಗಳು ಬಂದರು. ಕಾಲ ಅದನ್ನು ಸಸ್ಯಾಹಾರಿಗಳೆಂದು ಬಿಂಬಿಸುವುದು ಆರಂಭವಾಯಿತು. ಹಾಗಾಗಿ ಜನರು ದೇವಾಲಯದ ದೂರದಲ್ಲಿ ಬಲಿಕೊಡುವುದು ಇಂದಿಗೂ ನಡೆದುಕೊಂಡು ಬಂದಿದೆ. ನಮ್ಮ ಪುರುಷ ದೇವರುಗಳು ಸಹ ಮಾಂಸಾಹಾರಿಗಳೆ. ಸಸ್ಯಾಹಾರಿ ದೇವರುಗಳೆ ನನಗೆ ಕಂಡುಬರುವುದಿಲ್ಲ” ಎಂದರು.

ಕಾಳಿ ದೇವಿಯ ವಿಷಯಕ್ಕೆ ಬಂದರೆ ಅವರನ್ನು ಬಗೆ ಬಗೆಯಾಗಿ ಜನರು ಆರಾಧಿಸುತ್ತಾರೆ. ಕಪ್ಪು ಬಣ್ಣದ ಅರ್ಥ ನೀಡುವ ಕಾಳಿ ಬುಡಕಟ್ಟುಗಳ ಆರಾಧ್ಯ ದೈವ. ಕಾಳಿಯನ್ನು ಹೆಚ್ಚಾಗಿ ಪೂಜಿಸುವ ತಾಂತ್ರಿಕರು ಪಂಚಮಕರವನ್ನು ನಂಬಿದ್ದಾರೆ. ಅವರ ಪ್ರಕಾರ “ಮದ್ಯ, ಮಾಂಸ, ಮತ್ಸ್ಯ, ಮುದ್ರೆ ಮತ್ತು ಮೈಥುನ” ಇವೆಲ್ಲವ ಪೂಜ್ಯವಾಗಿವೆ, ಇವುಗಳಿಂದ ದೇವರು ಸಂಪ್ರೀತರಾಗುತ್ತಾರೆ ಎಂದು ನಂಬಿದ್ದಾರೆ.

ಇದನ್ನೂ ಓದಿ: ಭದ್ರಾವತಿ: ಬಜರಂಗದಳದ ದುಷ್ಕರ್ಮಿಗಳಿಂದ ದಾಂಧಲೆ; 6 ಮಂದಿ ವಿರುದ್ಧ ಎಫ್‌ಐಆರ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಎಲ್ಲಾ ಪ್ರಣಿಗಳು ತಮ್ಮ ಹಸಿವಿಗಾಗಿ ಆಹಾರ ಸೇವನೆ ಮಾಡುತ್ತವೆ ,ನಾಯಿ,ಹಂದಿಗಳು ಜನರ ಹೊಲಸು ತಿನ್ನುವ ಕಾರಣ ಮಾನವ ಸಹ ಪ್ರಾಣಿ ಸಂಕುಲದ ಭಾಗ ಆಗಾಗಿ ಇವಳು ನಾಯಿ,ಹಂದಿ ತಿನ್ನುವ ಹೊಲಸನ್ನು ತಿನ್ನಲಿ ,ಹಿಂದೂ ಭಾವನೆಗಳಿಗೆ ಧಕ್ಕೆ ತರುವ ಈ ರೀತಿಯ ಚೀನೀ ಬೆಂಬಲಿತ ಹೊಲಸು ತಿನ್ನುವ ಇಂತ ಕಮ್ಯೂನಿಸ್ಟ್ ಪಕ್ಷದ ಮೊಯಿತ್ರಾ ಸಂಸದರ ನಡವಳಿಕೆ ಅವರ ಕೊಳಕುತನ ನೋಡಿಸುತ್ತೇ

  2. ಎಲ್ಲಾ ಪ್ರಣಿಗಳು ತಮ್ಮ ಹಸಿವಿಗಾಗಿ ಆಹಾರ ಸೇವನೆ ಮಾಡುತ್ತವೆ ,ನಾಯಿ,ಹಂದಿಗಳು ಜನರ ಹೊಲಸು ತಿನ್ನುವ ಕಾರಣ ಮಾನವ ಸಹ ಪ್ರಾಣಿ ಸಂಕುಲದ ಭಾಗ ಆಗಾಗಿ ಇವಳು ನಾಯಿ,ಹಂದಿ ತಿನ್ನುವ ಹೊಲಸನ್ನು ತಿನ್ನಲಿ ,ಹಿಂದೂ ಭಾವನೆಗಳಿಗೆ ಧಕ್ಕೆ ತರುವ ಈ ರೀತಿಯ ಚೀನೀ ಬೆಂಬಲಿತ ಹೊಲಸು ತಿನ್ನುವ ಇಂತ ಪಕ್ಷದ ಮೊಯಿತ್ರಾ ಸಂಸದರ ನಡವಳಿಕೆ ಅವರ ಕೊಳಕುತನ ನೋಡಿಸುತ್ತೇ

LEAVE A REPLY

Please enter your comment!
Please enter your name here

- Advertisment -

ಅಸ್ಸಾಂನ ನಾಲ್ವರು ಮುಸ್ಲಿಂ ಮಹಿಳೆಯರ ಗಡೀಪಾರು ಪ್ರಕ್ರಿಯೆಗೆ ಸುಪ್ರೀಂ ತಡೆ: ಕೇಂದ್ರ, ರಾಜ್ಯ ಸರ್ಕಾರಗಳಿಗೆ ನೋಟಿಸ್‌

ಅಸ್ಸಾಂನಲ್ಲಿ 'ವಿದೇಶಿಯರು' ಎಂದು ಘೋಷಿತರಾಗಿ ಗಡೀಪಾರು ಭೀತಿ ಎದುರಿಸುತ್ತಿದ್ದ ನಾಲ್ವರು ಮುಸ್ಲಿಂ ಮಹಿಳೆಯರ ವಿಚಾರದಲ್ಲಿ ಭಾರತದ ಸುಪ್ರೀಂ ಕೋರ್ಟ್ ಮಹತ್ವದ ಮಧ್ಯಪ್ರವೇಶ ಮಾಡಿದೆ. ಈ ಮಹಿಳೆಯರನ್ನು ದೇಶದಿಂದ ಹೊರಹಾಕುವ (ಗಡೀಪಾರು ಮಾಡುವ) ಪ್ರಕ್ರಿಯೆಗೆ...

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...