Homeಮುಖಪುಟಕಾಳಿ ದೇವಿ ಕುರಿತ ಹೇಳಿಕೆಗೆ ದೂರು: ಟಿಎಂಸಿ ಸಂಸದೆ ಮಹುವಾ ಮೊಯಿತ್ರ ಹೇಳಿದ್ದೇನು?

ಕಾಳಿ ದೇವಿ ಕುರಿತ ಹೇಳಿಕೆಗೆ ದೂರು: ಟಿಎಂಸಿ ಸಂಸದೆ ಮಹುವಾ ಮೊಯಿತ್ರ ಹೇಳಿದ್ದೇನು?

- Advertisement -
- Advertisement -

ಕಾಳಿ ದೇವಿ ಕುರಿತು ಟಿಎಂಸಿ ಸಂಸದೆ ಮಹುವಾ ಮೊಯಿತ್ರ ನೀಡಿದ ಹೇಳಿಕೆಗಳು ಹಿಂದೂ ಧಾರ್ಮಿಕ ಭಾವನೆಗೆ ಧಕ್ಕೆ ತಂದಿದೆ ಎಂದು ಬಿಜೆಪಿ ಆರೋಪಿಸಿದೆ. ಈ ಕುರಿತು ಕೋಲ್ಕತ್ತಾದಲ್ಲಿ ಬಿಜೆಪಿ ಮುಖಂಡ ಜಿತಿನ್ ಚಟರ್ಜಿ ಎಂಬುವವರು ಪೊಲೀಸರಿಗೆ ದೂರು ನೀಡಿದ್ದಾರೆ.

ಇಂಡಿಯಾ ಟುಡೆಯ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ್ದ ಸಂಸದೆ ಮಹುವಾ ಮೊಯಿತ್ರಾರವರು “ಜನರು ತಮ್ಮ ದೇವರನ್ನು ಹೇಗೆ ನೋಡುತ್ತಾರೆ, ಕಲ್ಪಿಸಿಕೊಳ್ಳುತ್ತಾರೆ ಎಂಬುದು ಅವರಿಗೆ ಬಿಟ್ಟದ್ದು. ಅವರು ತಮಗಿಷ್ಟ ಬಂದಂತೆ ತಮ್ಮ ದೇವರನ್ನು ಪೂಜಿಸಬಹುದು. ಉದಾಹರಣೆಗೆ ನೀವು ಭೂತಾನ್ ಅಥವಾ ಸಿಕ್ಕಿಂಗೆ ಹೋದರೆ, ಅವರು ಪೂಜೆ ಮಾಡುವಾಗ ತಮ್ಮ ದೇವರಿಗೆ ವಿಸ್ಕಿ ಅರ್ಪಿಸುತ್ತಾರೆ. ಆದರೆ ನೀವು ಉತ್ತರ ಪ್ರದೇಶಕ್ಕೆ ಹೋಗಿ ನಿಮ್ಮ ದೇವರಿಗೆ ವಿಸ್ಕಿಯನ್ನು ಪ್ರಸಾದವಾಗಿ ಅರ್ಪಿಸಿ ಎಂದು ಹೇಳಿದರೆ, ಅದು ಧರ್ಮನಿಂದನೆಯೆಂದು ಕರೆಸಿಕೊಳ್ಳುತ್ತದೆ” ಎಂದು ಹೇಳಿದ್ದರು.

ಮುಂದುವರಿದು, “ನನಗೆ ಕಾಳಿ ದೇವಿಯು ಮಾಂಸ ತಿನ್ನುವ ಮತ್ತು ಮದ್ಯವನ್ನು ಸ್ವೀಕರಿಸುವ ದೇವತೆಯಂತೆ ಕಾಣುತ್ತಾರೆ. ನೀವು ತಾರಾಪೀಠಕ್ಕೆ ಹೋದರೆ, ನೀವು ಧೂಮಪಾನ ಮಾಡುವ ಸಾಧುಗಳನ್ನು ನೋಡುತ್ತೀರಿ. ಆ ರಿತಿಯಾಗಿ ಅವರು ಕಾಳಿಯನ್ನು ಪೂಜಿಸುತ್ತಾರೆ. ನಾನು ಹಿಂದೂ ಧರ್ಮದಲ್ಲಿ, ಕಾಳಿ ಆರಾಧಕಳಾಗಿ ಕಾಳಿಯನ್ನು ಆ ರೀತಿಯಲ್ಲಿ ಕಲ್ಪಿಸಿಕೊಳ್ಳುವ ಹಕ್ಕಿದೆ; ಅದು ನನ್ನ ಸ್ವಾತಂತ್ರ್ಯ” ಎಂದು ಹೇಳಿದ್ದರು.

“ನಿಮ್ಮ ದೇವರನ್ನು ಸಸ್ಯಾಹಾರಿಯಾಗಿ ಮತ್ತು ಬಿಳಿ ಬಟ್ಟೆ ತೊಟ್ಟವರಂತೆ ಪೂಜಿಸಲು ನಿಮಗೆ ಎಷ್ಟು ಸ್ವಾತಂತ್ರ್ಯವಿದೆಯೋ ಹಾಗೆಯೇ ಮಾಂಸ ತಿನ್ನುವ ದೇವತೆಯಾಗಿ ಕಲ್ಪಿಸಿಕೊಳ್ಳುವ ಹಕ್ಕು ಸಹ ನನಗಿದೆ” ಎಂದು ಹೇಳಿದ್ದರು.

ಈ ಕುರಿತು ಬಿಜೆಪಿ ಆಕ್ಷೇಪ ವ್ಯಕ್ತಪಡಿಸಿತ್ತು. ಅದರ ಬೆನ್ನಲ್ಲೆ ಟಿಎಂಸಿ ಪಕ್ಷ ಸಹ ಮಹುವಾ ಹೇಳಿಕೆಯನ್ನು ಖಂಡಿಸಿತ್ತು. ಆ ಕುರಿತು ಟ್ವೀಟ್ ಮಾಡಿ, “#IndiaTodayConclaveEast2022 ನಲ್ಲಿ ಮಹುವಾ ಮೊಯಿತ್ರಾರವರು ನೀಡಿದ ಹೇಳಿಕೆ ಮತ್ತು ಕಾಳಿ ದೇವಿಯ ಕುರಿತು ಅವರ ಅಭಿಪ್ರಾಯಗಳನ್ನು ಅವರ ವೈಯಕ್ತಿಕವಾದವುಗಳಾಗಿವೆ. ಅವಗಳನ್ನು ಯಾವುದೇ ರೀತಿಯಲ್ಲಿ ಅಥವಾ ರೂಪದಲ್ಲಿ ಪಕ್ಷವು ಅನುಮೋದಿಸುವುದಿಲ್ಲ. ಇಂತಹ ಹೇಳಿಕೆಗಳನ್ನು ಅಖಿಲ ಭಾರತ ತೃಣಮೂಲ ಕಾಂಗ್ರೆಸ್ ಬಲವಾಗಿ ಖಂಡಿಸುತ್ತದೆ” ಎಂದು ಪಕ್ಷ ಟ್ವೀಟ್ ಮಾಡಿತು. ಆದಾದ ನಂತರ ಮಹುವಾ ಮೊಯಿತ್ರ ಪಕ್ಷದ ಟ್ವಿಟರ್ ಖಾತೆಯನ್ನು ಅನ್‌ಫಾಲೋ ಮಾಡಿದ್ದರು.

ಕೆಲದಿನಗಳ ಹಿಂದೆ ಸಿನಿಮಾ ನಿರ್ದೇಶಕಿಯೊಬ್ಬರು ಕಾಳಿ ದೇವಿ ಸಿಗರೇಟ್ ಸೇದುತ್ತಿರುವ ಫೋಟೊವನ್ನು ತಮ್ಮ ಸಿನಿಮಾಗೆ ಬಳಸಿಕೊಂಡಿದ್ದರು. ಈ ಕುರಿತು ವಿವಾದ ಉಂಟಾಗಿ ಅವರ ಮೇಲೆ ದೂರು ದಾಖಲಾಗಿತ್ತು. ಅವರನ್ನು ಮಹುವಾ ಮೊಹಿತ್ರ ಬೆಂಬಲಿಸುತ್ತಿದ್ದಾರೆ ಎಂದು ಬಿಜೆಪಿಗರು ಆರೋಪಿಸಿದ್ದರು.

ಇದಕ್ಕೆ ಪ್ರತಿಕ್ರಿಯಿಸಿದ್ದ ಮಹುವಾ, “ನಿಮಗೆಲ್ಲ ಸಂಘಿ-ಸುಳ್ಳು ಹೇಳುವುದು ನಿಮ್ಮನ್ನು ಉತ್ತಮ ಹಿಂದೂಗಳನ್ನಾಗಿ ಮಾಡುವುದಿಲ್ಲ. ನಾನು ಯಾವುದೇ ಚಲನಚಿತ್ರ ಅಥವಾ ಪೋಸ್ಟರ್ ಅನ್ನು ಬೆಂಬಲಿಸಿಲ್ಲ ಅಥವಾ ಧೂಮಪಾನದ ಪದವನ್ನು ಉಲ್ಲೇಖಿಸಿಲ್ಲ. ಭೋಗ್ ಆಗಿ ಯಾವ ಆಹಾರ ಮತ್ತು ಪಾನೀಯವನ್ನು ನೀಡಲಾಗುತ್ತದೆ ಎಂಬುದನ್ನು ನೋಡಲು ತಾರಾಪೀಠದಲ್ಲಿರುವ ನನ್ನ ಮಾ ಕಾಳಿ ದೇವಾಲಯಕ್ಕೆ ಭೇಟಿ ನೀಡಿ ಎಂದು ಸಲಹೆ ನೀಡಿದ್ದೇನೆ ಅಷ್ಟೆ” ಎಂದು ಟ್ವೀಟ್ ಮಾಡಿದ್ದಾರೆ.

ಪ್ರಕರಣ ವಿವಾದದ ಸ್ವರೂಪ ಪಡೆದುಕೊಂಡ ಕೂಡಲೇ ಮಹುವಾ ಮೊಯಿತ್ರರವರು “ಜೈ ಮಾ ಕಾಳಿ, ಬಂಗಾಳಿಗರು ದೇವರನ್ನು ಯಾವುದೇ ಭಯವಿಲ್ಲದೆ ಆರಾಧನೆ ಮಾಡುತ್ತಾರೆಯೇ ಹೊರತು ತುಷ್ಟೀಕರಣ ಮಾಡುವುದಿಲ್ಲ” ಎಂದು ಮತ್ತೊಂದು ಟ್ವೀಟ್ ಮಾಡಿದ್ದಾರೆ.

ತಮ್ಮ ವಿರುದ್ಧ ದೂರು ನೀಡಿದ ಬಿಜೆಪಿ ವಿರುದ್ಧವೂ ಅವರು ಕಿಡಿಕಾರಿದ್ದಾರೆ. “ನಾನು ಕಾಳಿಯ ಆರಾಧಕಿ, ನನಗೆ ಯಾರ ಭಯವಿಲ್ಲ. ನಿಮ್ಮ ಅಜ್ಞಾನಿಗಳ, ನಿಮ್ಮ ಗೂಂಡಾಗಳ, ನಿಮ್ಮ ಪೊಲೀಸರ ಎಲ್ಲಕ್ಕಿಂತ ಹೆಚ್ಚಾಗಿ ನಿಮ್ಮ ಟ್ರೋಲ್ ಪಡೆಯ ಭಯ ನನಗಿಲ್ಲ” ಎಂದು ಅವರು ಟ್ವೀಟ್ ಮಾಡಿದ್ದಾರೆ.

ಮಹುವಾ ಮೊಯಿತ್ರಾರವರ ವಿರುದ್ದದ ದಾಳಿಗಳನ್ನು ಖಂಡಿಸಿರುವ ಕಾಂಗ್ರೆಸ್ ಸಂಸದ ಶಶಿ ತರೂರ್ ಅವರ ಬೆಂಬಲಕ್ಕೆ ನಿಂತಿದ್ದಾರೆ. ನಮ್ಮ ಧಾರ್ಮಿಕ ಆಚರಣೆಗಳು ಇಡೀ ದೇಶಾದ್ಯಂತ ವಿಭಿನ್ನವಾಗಿವೆ ಎಂಬುದನ್ನು ಎಲ್ಲಾ ಹಿಂದೂಗಳು ತಿಳಿದಿದ್ದಾರೆ. ಅದನ್ನೆ ಮಹುವಾರವರು ಹೇಳಿದ್ದಾರೆ ಎಂದಿದ್ದಾರೆ.

ಅವೈದಿಕ ದೇವರುಗಳಿಗೆ ಮಾಂಸಾಹಾರವನ್ನು ಪ್ರಸಾದ, ನೈವೈದ್ಯವಾಗಿ ಅರ್ಪಿಸುವ ಪದ್ದತಿ ಕರ್ನಾಟಕದಲ್ಲಿಯೂ ನಡೆದುಕೊಂಡು ಬಂದಿದೆ. ಮಂಟೇಸ್ವಾಮಿ, ಮಾರಮ್ಮ ಸೇರಿದಂತೆ ಹಲವು ದೇವರುಗಳಿಗೆ ಕುರಿ-ಕೋಳಿಗಳನ್ನು ಬಲಿಕೊಟ್ಟು ಅಡುಗೆ ಮಾಡಿ ಬಡಿಸುವುದು ಎಲ್ಲರಿಗೂ ತಿಳಿದೇ ಇದೆ.

ಈ ಕುರಿತು ನಾನುಗೌರಿ.ಕಾಂ ಜೊತೆ ಮಾತನಾಡಿದ ಲೇಖಕ, ಹೋರಾಟಗಾರ ಜಿ.ಎನ್ ನಾಗರಾಜುರವರು, “ಚೌಡಮ್ಮ, ಕಾಳಮ್ಮ, ಮಾರಮ್ಮ, ಊರಮ್ಮ ಇತ್ಯಾದಿ ನಮ್ಮ ಬಹಳಷ್ಟು ಅಮ್ಮ ದೇವತೆಗಳು ಮಾಂಸಾಹಾರಿಗಳು. ಬುಡಕಟ್ಟುಗಳ ಆರಾಧ್ಯ ದೇವತೆಗಳಾದ ಇವರು ಹಿಂದೆ ಸ್ವತಃ ಬೇಟೆ ಮತ್ತು ಯುದ್ದದಲ್ಲಿ ಭಾಗವಹಿಸುತ್ತಿದ್ದರು. ಆದ ಕಾರಣ ಇವರು ಮಾಂಸಾಹಾರಿಗಳು ಮತ್ತು ಆಯಾ ಬುಡಕಟ್ಟಿನ ಮದ್ಯವನ್ನು ಸೇವನೆ ಮಾಡುತ್ತಿದ್ದರು. ಇವೆಲ್ಲವೂ ಬುಡಕಟ್ಟು ಪದ್ದತಿಗಳಾಗಿವೆ” ಎಂದರು.

ಬುಡಕಟ್ಟು ಜನರು ತಮ್ಮ ಕುಲದೇವತೆಗಳೆಂದು ಪೂಜಿಸುತ್ತಾರೆ. ತಮ್ಮನ್ನು ಅಮ್ಮನ ಒಕ್ಕಲು ಎಂದು ಕರೆದುಕೊಳ್ಳುತ್ತಾರೆ. ಕಾಳೆ, ದುರ್ಗೆ, ಚಾಮುಂಡಿ ಎಲ್ಲರೂ ಇಂತಹ ಕುಲದೇವತೆಗಳೆ ಆಗಿದ್ದಾರೆ. ಅವರ ನಡುವೆಯೇ ಒಬ್ಬ ಪೂಜಾರಿ ಇದ್ದು ಪೂಜೆ ಸಲ್ಲಿಸುತ್ತಾರೆ. ದೇವಾಲಯದಲ್ಲಿಯೇ ಬಲಿ ಕೊಡಲಾಗುತ್ತಿತ್ತು. ಆದರೆ ಈ ದೇವಾಲಯಗಳಲ್ಲಿ ಕೆಲವು ಹೆಚ್ಚು ಆದಾಯ ತಂದ ನಂತರ ಅಲ್ಲಿ ಬ್ರಾಹ್ಮಣ ಪೂಜಾರಿಗಳು ಬಂದರು. ಕಾಲ ಅದನ್ನು ಸಸ್ಯಾಹಾರಿಗಳೆಂದು ಬಿಂಬಿಸುವುದು ಆರಂಭವಾಯಿತು. ಹಾಗಾಗಿ ಜನರು ದೇವಾಲಯದ ದೂರದಲ್ಲಿ ಬಲಿಕೊಡುವುದು ಇಂದಿಗೂ ನಡೆದುಕೊಂಡು ಬಂದಿದೆ. ನಮ್ಮ ಪುರುಷ ದೇವರುಗಳು ಸಹ ಮಾಂಸಾಹಾರಿಗಳೆ. ಸಸ್ಯಾಹಾರಿ ದೇವರುಗಳೆ ನನಗೆ ಕಂಡುಬರುವುದಿಲ್ಲ” ಎಂದರು.

ಕಾಳಿ ದೇವಿಯ ವಿಷಯಕ್ಕೆ ಬಂದರೆ ಅವರನ್ನು ಬಗೆ ಬಗೆಯಾಗಿ ಜನರು ಆರಾಧಿಸುತ್ತಾರೆ. ಕಪ್ಪು ಬಣ್ಣದ ಅರ್ಥ ನೀಡುವ ಕಾಳಿ ಬುಡಕಟ್ಟುಗಳ ಆರಾಧ್ಯ ದೈವ. ಕಾಳಿಯನ್ನು ಹೆಚ್ಚಾಗಿ ಪೂಜಿಸುವ ತಾಂತ್ರಿಕರು ಪಂಚಮಕರವನ್ನು ನಂಬಿದ್ದಾರೆ. ಅವರ ಪ್ರಕಾರ “ಮದ್ಯ, ಮಾಂಸ, ಮತ್ಸ್ಯ, ಮುದ್ರೆ ಮತ್ತು ಮೈಥುನ” ಇವೆಲ್ಲವ ಪೂಜ್ಯವಾಗಿವೆ, ಇವುಗಳಿಂದ ದೇವರು ಸಂಪ್ರೀತರಾಗುತ್ತಾರೆ ಎಂದು ನಂಬಿದ್ದಾರೆ.

ಇದನ್ನೂ ಓದಿ: ಭದ್ರಾವತಿ: ಬಜರಂಗದಳದ ದುಷ್ಕರ್ಮಿಗಳಿಂದ ದಾಂಧಲೆ; 6 ಮಂದಿ ವಿರುದ್ಧ ಎಫ್‌ಐಆರ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಎಲ್ಲಾ ಪ್ರಣಿಗಳು ತಮ್ಮ ಹಸಿವಿಗಾಗಿ ಆಹಾರ ಸೇವನೆ ಮಾಡುತ್ತವೆ ,ನಾಯಿ,ಹಂದಿಗಳು ಜನರ ಹೊಲಸು ತಿನ್ನುವ ಕಾರಣ ಮಾನವ ಸಹ ಪ್ರಾಣಿ ಸಂಕುಲದ ಭಾಗ ಆಗಾಗಿ ಇವಳು ನಾಯಿ,ಹಂದಿ ತಿನ್ನುವ ಹೊಲಸನ್ನು ತಿನ್ನಲಿ ,ಹಿಂದೂ ಭಾವನೆಗಳಿಗೆ ಧಕ್ಕೆ ತರುವ ಈ ರೀತಿಯ ಚೀನೀ ಬೆಂಬಲಿತ ಹೊಲಸು ತಿನ್ನುವ ಇಂತ ಕಮ್ಯೂನಿಸ್ಟ್ ಪಕ್ಷದ ಮೊಯಿತ್ರಾ ಸಂಸದರ ನಡವಳಿಕೆ ಅವರ ಕೊಳಕುತನ ನೋಡಿಸುತ್ತೇ

  2. ಎಲ್ಲಾ ಪ್ರಣಿಗಳು ತಮ್ಮ ಹಸಿವಿಗಾಗಿ ಆಹಾರ ಸೇವನೆ ಮಾಡುತ್ತವೆ ,ನಾಯಿ,ಹಂದಿಗಳು ಜನರ ಹೊಲಸು ತಿನ್ನುವ ಕಾರಣ ಮಾನವ ಸಹ ಪ್ರಾಣಿ ಸಂಕುಲದ ಭಾಗ ಆಗಾಗಿ ಇವಳು ನಾಯಿ,ಹಂದಿ ತಿನ್ನುವ ಹೊಲಸನ್ನು ತಿನ್ನಲಿ ,ಹಿಂದೂ ಭಾವನೆಗಳಿಗೆ ಧಕ್ಕೆ ತರುವ ಈ ರೀತಿಯ ಚೀನೀ ಬೆಂಬಲಿತ ಹೊಲಸು ತಿನ್ನುವ ಇಂತ ಪಕ್ಷದ ಮೊಯಿತ್ರಾ ಸಂಸದರ ನಡವಳಿಕೆ ಅವರ ಕೊಳಕುತನ ನೋಡಿಸುತ್ತೇ

LEAVE A REPLY

Please enter your comment!
Please enter your name here

- Advertisment -

SIR: ಕೇಂದ್ರ ಸರ್ಕಾರದ SIRಗೆ ಕೌಂಟರ್‌, ಮಹತ್ವದ ಆದೇಶಗಳನ್ನು ಹೊರಡಿಸಿದ ಕರ್ನಾಟಕ ಸರ್ಕಾರ

ಕೇಂದ್ರ ಸರ್ಕಾರ ಚುನಾವಣಾ ಆಯೋಗದ ಮೂಲಕ ನಡೆಸುತ್ತಿರುವ ವಿಶೇಷ ಮತದಾರ ಪಟ್ಟಿ ಪರಿಷ್ಕರಣೆ ಕುರಿತಂತೆ ದೇಶದಾದ್ಯಂತ ಭಾರೀ ವಿರೋಧ ವ್ಯಕ್ತವಾಗಿದ್ದವು. ಸುಪ್ರೀಂ ಕೋರ್ಟ್‌ ಆ ಪ್ರಕ್ರಿಯೆಯನ್ನು ಮಾನ್ಯ ಮಾಡಿತ್ತು. ಕರ್ನಾಟಕದಲ್ಲಿ ನಾಳೆಯಿಂದ (ಜೂನ್.30)‌...

ರಾಮಮಂದಿರದ ದೇಣಿಗೆ ಕಳ್ಳತನ: ಆರೋಪಿಗಳ ಪರ ಯಾವುದೇ ವಕೀಲರು ವಾದಿಸುವಂತಿಲ್ಲ , ವಾದಿಸಿದರೆ ರೂ. 5ಲಕ್ಷ ದಂಡ

ರಾಮಮಂದಿರದ ದೇಣಿಗೆ ಕಳ್ಳತನ ಪ್ರಕರಣದಲ್ಲಿ ಬಂಧಿತರಾಗಿರುವ ಆರೋಪಿಗಳ ಪರವಾಗಿ ಯಾವುದೇ ವಕೀಲರು ನ್ಯಾಯಾಲಯದಲ್ಲಿ ವಕಾಲತ್ತು ವಹಿಸಬಾರದು ಎಂದು ಅಯೋಧ್ಯೆ ಬಾರ್ ಅಸೋಸಿಯೇಷನ್ ಮಹತ್ವದ ನಿರ್ಧಾರ ಕೈಗೊಂಡಿದೆ. ಒಂದು ವೇಳೆ ಸಂಘದ ಈ ತೀರ್ಮಾನವನ್ನು...

ವೋಟರ್ ಲಿಸ್ಟ್‌ನಿಂದ ಹೆಸರು ಡಿಲೀಟ್: ದಿ ಟೆಲಿಗ್ರಾಫ್’ ಪತ್ರಿಕೆಯ ಮಾಜಿ ಸಂಪಾದಕ ರಾಜಗೋಪಾಲ್ ಪಾಸ್‌ಪೋರ್ಟ್ ನವೀಕರಣಕ್ಕೆ ಬ್ರೇಕ್! ಬಂಗಾಳ ಸಿಎಂ ಗೆ ಪತ್ರ ಬರೆದ ಕೇರಳ ಸಿಎಂ

ಹಿರಿಯ ಪತ್ರಕರ್ತ ಮತ್ತು ‘ದಿ ಟೆಲಿಗ್ರಾಫ್’ ಪತ್ರಿಕೆಯ ಮಾಜಿ ಸಂಪಾದಕ ರಾಜಗೋಪಾಲ್ ರಾಮದಾಸ್ ಅವರ ಪಾಸ್‌ಪೋರ್ಟ್ ನವೀಕರಣ ವಿವಾದವು ಸೋಮವಾರ ಮತ್ತಷ್ಟು ತೀವ್ರಗೊಂಡಿದೆ. ಈ ಸಮಸ್ಯೆಯನ್ನು ತಕ್ಷಣವೇ ಬಗೆಹರಿಸಲು ಮಧ್ಯಪ್ರವೇಶಿಸಬೇಕು ಎಂದು ಕೋರಿ...

ರಾಮ ಮಂದಿರ ದೇಣಿಗೆ ಹಗರಣ: ಅರ್ಜಿ ವಿಚಾರಣೆ ಕೆಲ ದಿನ ತಡವಾದರೆ ‘ಆಕಾಶವೇನೂ ಉರುಳಿ ಬೀಳುವುದಿಲ್ಲ’ ಎಂದ ಸುಪ್ರೀಂ ಕೋರ್ಟ್

ಅಯೋಧ್ಯೆಯ ರಾಮ ಮಂದಿರಕ್ಕೆ ಭಕ್ತರಿಂದ ಬಂದ ದೇಣಿಗೆ ಹಣ ದುರುಪಯೋಗ ಆಗಿರುವ ಕುರಿತು ಸಿಬಿಐ ನೇತೃತ್ವದ ಬಹು-ಸಂಸ್ಥೆಗಳ ಜಂಟಿ ತನಿಖೆಗೆ ಆದೇಶಿಸಬೇಕೆಂದು ಕೋರಿ ಸಲ್ಲಿಕೆಯಾಗಿದ್ದ ಅರ್ಜಿಗಳ ತುರ್ತು ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಸೋಮವಾರ...

ಕಾಕ್ರೋಚ್ ಪಾರ್ಟಿ ಧರಣಿ : ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಆರಂಭಿಸಿದ ಸೋನಮ್ ವಾಂಗ್‌ಚುಕ್

ನೀಟ್ ಸೇರಿದಂತೆ ವಿವಿಧ ಪರೀಕ್ಷೆಗಳ ಪ್ರಶ್ನೆ ಪತ್ರಿಕೆ ಸೋರಿಕೆ, ಹಲವು ಅಕ್ರಮ, ಶೈಕ್ಷಣಿಕ ಅವ್ಯವಸ್ಥೆಗಳ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿ ಕಾಕ್ರೋಚ್ ಜನತಾ...

SIR ವೇಳೆ ಮತಪಟ್ಟಿಯಿಂದ ಹೆಸರು ಡಿಲೀಟ್: ‘ದಿ ಟೆಲಿಗ್ರಾಫ್’ ಮಾಜಿ ಸಂಪಾದಕ ರಾಜಗೋಪಾಲ್ ಪಾಸ್‌ಪೋರ್ಟ್ ನವೀಕರಣಕ್ಕೆ ತಡೆ

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ವೇಳೆ ಮತದಾರರ ಪಟ್ಟಿಯಿಂದ ಹೆಸರು ತೆಗೆದುಹಾಕಿದ ಕಾರಣ ಪಾಸ್‌ಪೋರ್ಟ್ ನವೀಕರಿಸಲು ಆಗುತ್ತಿಲ್ಲ ಎಂದು ದೇಶದ ಖ್ಯಾತ ಇಂಗ್ಲಿಷ್ ದಿನಪತ್ರಿಕೆ ‘ದಿ ಟೆಲಿಗ್ರಾಫ್’ನ ಮಾಜಿ ಸಂಪಾದಕ ಆರ್. ರಾಜಗೋಪಾಲ್...

‘ಈಗಲೂ ಮಮತಾ ಬ್ಯಾನರ್ಜಿಯೇ ನಮ್ಮ ನಾಯಕಿ’ : ಟಿಎಂಸಿ ಬಂಡಾಯ ಬಣದ ಅಧ್ಯಕ್ಷ ಅರೂಪ್ ರಾಯ್ ಹೇಳಿಕೆ

"ಮಮತಾ ಬ್ಯಾನರ್ಜಿ ಅವರೇ ಇಂದಿಗೂ ನಮ್ಮ ನಾಯಕಿ. ಅವರೇ ಈ ಪಕ್ಷವನ್ನು ಸ್ಥಾಪಿಸಿದವರು. ಅವರೇ ನಮ್ಮ ಪಕ್ಷದ ಕಾಂದಾರಿ (ಮಾರ್ಗದರ್ಶಕರು ಅಥವಾ ಪಕ್ಷವನ್ನು ಮುನ್ನಡೆಸುವವರು). ಮಮತಾ ಬ್ಯಾನರ್ಜಿ ಅವರಿಂದಾಗಿಯೇ ನಾವು ಈ ಪಕ್ಷವನ್ನು...

ಪಶ್ಚಿಮ ಬಂಗಾಳದ ಆಹಾರ ಸಂಸ್ಕೃತಿಯನ್ನು ಗೌರವಿಸುತ್ತೇವೆ ಎಂಬ ಬಿಜೆಪಿಯ ಚುನಾವಣಾ ಭರವಸೆಗೆ ಈಗ ‘ಮೊಟ್ಟೆ’ ಮೊದಲ ಬಲಿ

ಚುನಾವಣಾ ಸಮಯದಲ್ಲಿ, ಬಿಜೆಪಿ ಪರಿಸ್ಥಿತಿಯನ್ನು ಮತ್ತು ಮೀನಿನ ಮಾರುಕಟ್ಟೆಯ ನಾಡಿಮಿಡಿತವನ್ನು ಸರಿಯಾಗಿಯೇ ಅರ್ಥಮಾಡಿಕೊಂಡಿತ್ತು. ಅವರ ನಾಯಕರು ಟಿವಿ ಕ್ಯಾಮೆರಾಗಳ ಮುಂದೆ ಮೀನುಗಳನ್ನು ಪ್ರದರ್ಶಿಸಿದರು ಮತ್ತು ಕುರಿ ಮಾಂಸದೂಟವನ್ನು ಸವಿದಿದ್ದರು. ಬಂಗಾಳಿಗಳ ತಟ್ಟೆಗೆ (ಆಹಾರಕ್ಕೆ)...

24 ಗಂಟೆಗೂ ಮೊದಲೇ ಮಹಾರಾಷ್ಟ್ರದಲ್ಲಿ TET ಪ್ರಶ್ನೆ ಪತ್ರಿಕೆ ಸೋರಿಕೆ: ರದ್ದಾದ ಪರೀಕ್ಷೆ

ಮಹಾರಾಷ್ಟ್ರದಲ್ಲಿ ಮತ್ತೊಂದು ಪರೀಕ್ಷಾ ಅಕ್ರಮದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಜೂನ್ 28ರ ಭಾನುವಾರ ನಡೆಯಬೇಕಿದ್ದ ‘ಶಿಕ್ಷಕರ ಅರ್ಹತಾ ಪರೀಕ್ಷೆ’ (TET) ಆರಂಭಕ್ಕೆ ಕೇವಲ 24 ಗಂಟೆಗಳ ಮುನ್ನವೇ ಪ್ರಶ್ನೆ ಪತ್ರಿಕೆ ಸೋರಿಕೆಯಾದ...

ಸೌತೆಕಾಯಿ ಕೃಷಿಗೆ ತನ್ನ ಸಚಿವಾಲಯದಿಂದಲೇ ₹99 ಲಕ್ಷ ಸಬ್ಸಿಡಿ ಪಡೆದ ಕೇಂದ್ರ BJP ಸಚಿವ ಭಾಗೀರಥ್ ಚೌಧರಿ

ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವ ಭಾಗೀರಥ್ ಚೌಧರಿ ಅವರು ತಮ್ಮದೇ ಸಚಿವಾಲಯದ ವ್ಯಾಪ್ತಿಗೆ ಒರುವ ಯೋಜನೆಯಡಿ, ವಾಣಿಜ್ಯ ಸೌತೆಕಾಯಿ ಕೃಷಿ ಯೋಜನೆಗಾಗಿ 99.03 ಲಕ್ಷ ರೂ. ಸಬ್ಸಿಡಿ (ಸಹಾಯಧನ) ಪಡೆದಿರುವುದು ತನಿಖಾ...