Homeಮುಖಪುಟಬೂಕರ್ ಪ್ರಶಸ್ತಿ ಪಡೆದ ಕಾದಂಬರಿ ವಿರುದ್ಧ ದೂರು; ಆಗ್ರಾದಲ್ಲಿ ಲೇಖಕಿಗೆ ಏರ್ಪಡಿಸಿದ್ದ ಸನ್ಮಾನ ಕಾರ್ಯಕ್ರಮ ರದ್ದು!

ಬೂಕರ್ ಪ್ರಶಸ್ತಿ ಪಡೆದ ಕಾದಂಬರಿ ವಿರುದ್ಧ ದೂರು; ಆಗ್ರಾದಲ್ಲಿ ಲೇಖಕಿಗೆ ಏರ್ಪಡಿಸಿದ್ದ ಸನ್ಮಾನ ಕಾರ್ಯಕ್ರಮ ರದ್ದು!

- Advertisement -
- Advertisement -

ಅಂತಾರಾಷ್ಟ್ರೀಯ ಬೂಕರ್ ಪ್ರಶಸ್ತಿ ವಿಜೇತೆ ಗೀತಾಂಜಲಿ ಶ್ರೀ ಅವರನ್ನು ಗೌರವಿಸಲು ಆಗ್ರಾದಲ್ಲಿ ಶನಿವಾರ ನಡೆಯಬೇಕಿದ್ದ ಕಾರ್ಯಕ್ರಮವನ್ನು ಅವರ ಬಹುಮಾನ ವಿಜೇತ ಕಾದಂಬರಿ ‘ರೆತ್‌ ಸಮಾಧಿ’ ವಿರುದ್ಧ ದೂರು ದಾಖಲಿಸಿದ ಕಾರಣ ರದ್ದುಗೊಳಿಸಲಾಗಿದೆ ಎಂದು ಸಂಘಟಕರು ತಿಳಿಸಿರುವುದಾಗಿ ‘ಸ್ಕ್ರಾಲ್‌.ಇನ್‌’ ವರದಿ ಮಾಡಿದೆ.

ಉತ್ತರ ಪ್ರದೇಶದ ಹತ್ರಾಸ್ ನಿವಾಸಿ ಸಂದೀಪ್ ಕುಮಾರ್ ಪಾಠಕ್ ಎಂಬವರು ನಗರದಲ್ಲಿ ದೂರು ದಾಖಲಿಸಿದ್ದು, ಪುಸ್ತಕದಲ್ಲಿ ಹಿಂದೂ ದೇವತೆಗಳಾದ ಶಿವ ಮತ್ತು ಪಾರ್ವತಿಯ ಬಗ್ಗೆ ಆಕ್ಷೇಪಾರ್ಹ ಅಭಿಪ್ರಾಯಗಳಿವೆ ಎಂದು ಆರೋಪಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಈ ಕುರಿತು ಎಫ್‌ಐಆರ್‌ ದಾಖಲಾಗಬೇಕು ಎಂದು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮತ್ತು ರಾಜ್ಯ ಪೊಲೀಸ್ ಮುಖ್ಯಸ್ಥರನ್ನು ಅವರು ಟ್ವೀಟ್‌ ಮೂಲಕ ಒತ್ತಾಯಿಸಿರುವುದಾಗಿ ಕಾರ್ಯಕ್ರಮ ಸಂಘಟಕರು ಶನಿವಾರ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಎಫ್‌ಐಆರ್ ದಾಖಲಿಸುವ ಬಗ್ಗೆ ನಿರ್ಧರಿಸುವ ಮೊದಲು ಪುಸ್ತಕವನ್ನು ಓದುತ್ತೇವೆ ಎಂದು ಪೊಲೀಸರು ಪ್ರತಿಕ್ರಿಯೆ ನೀಡಿದ್ದಾರೆ.

ವಿಷಯ ಬೆಳಕಿಗೆ ಬರುತ್ತಿದ್ದಂತೆ ಪ್ರತಿಕ್ರಿಯೆ ನೀಡಿರುವ ಗೀತಾಂಜಲಿ ಶ್ರೀ, “ನನಗೆ ನೋವಾಗಿದ್ದು, ಸದ್ಯಕ್ಕೆ ಯಾವುದೇ ಸಾರ್ವಜನಿಕ ಕಾರ್ಯಕ್ರಮಗಳಿಗೆ ಹಾಜರಾಗಲು ಇಚ್ಛಿಸುವುದಿಲ್ಲ” ಎಂದು ಸಂಘಟಕರಿಗೆ ತಿಳಿಸಿದ್ದಾರೆ.

ಹತ್ರಾಸ್‌ನಲ್ಲಿ ದಾಖಲಾಗಿರುವ ದೂರಿನ ಕುರಿತು ಸ್ಥಳೀಯ ಮಾಧ್ಯಮಗಳು ಬುಧವಾರ ವರದಿ ಮಾಡಿದ ನಂತರ, ದೆಹಲಿಯ ಜವಾಹರಲಾಲ್ ನೆಹರೂ ವಿಶ್ವವಿದ್ಯಾಲಯದಲ್ಲಿ ನಡೆದ ಸನ್ಮಾನ ಕಾರ್ಯಕ್ರಮಕ್ಕೆ ಕೆಲವು ಸಮಾಜ ವಿರೋಧಿಗಳು ಅಡ್ಡಿಪಡಿಸಲು ಪ್ರಯತ್ನಿಸಿರುವುದಾಗಿ ಅವರು ಮಾಹಿತಿ ನೀಡಿದ್ದಾರೆ.

“ನನ್ನ ಕಾದಂಬರಿಯನ್ನು ಬಲವಂತವಾಗಿ ರಾಜಕೀಯ ವಿವಾದಕ್ಕೆ ಎಳೆಯಲಾಗುತ್ತಿದೆ. ಕಾದಂಬರಿಯಲ್ಲಿ ಮಾಡಲಾದ ಉಲ್ಲೇಖಗಳು ಭಾರತೀಯ ಪುರಾಣಗಳ ಅವಿಭಾಜ್ಯ ಅಂಗವಾಗಿವೆ. ಈ ವಿವರಣೆಗಳ ಬಗ್ಗೆ ಆಕ್ಷೇಪವಿರುವವರು ಹಿಂದೂ ಪುರಾಣ ಗ್ರಂಥಗಳನ್ನು ನ್ಯಾಯಾಲಯದಲ್ಲಿ ಪ್ರಶ್ನಿಸಬೇಕು” ಎಂದು ಗೀತಾಂಜಲಿ ಪ್ರತಿಕ್ರಿಯೆ ನೀಡಿದ್ದಾರೆ.

ಗೀತಾಂಜಲಿಯವರ ‘ರೆತ್‌ ಸಮಾಧಿ’ ಕೃತಿಯನ್ನು ಡೈಸಿ ರಾಕ್‌ವೆಲ್ ಅವರು ‘ಟಾಂಬ್ ಆಫ್ ಸ್ಯಾಂಡ್’ ಎಂದು ಇಂಗ್ಲಿಷ್‌ಗೆ ಅನುವಾದಿಸಿದ್ದಾರೆ. ಇದು ಮೇ ತಿಂಗಳಲ್ಲಿ ಅಂತಾರಾಷ್ಟ್ರೀಯ ಬೂಕರ್ ಪ್ರಶಸ್ತಿ 2022 ಅನ್ನು ಗೆದ್ದಿದೆ. ಅನುವಾದಗೊಂಡು ಬೂಕರ್‌ ಪ್ರಶಸ್ತಿಯನ್ನು ಗೆದ್ದ ಮೊದಲ ಹಿಂದಿ ಕಾದಂಬರಿ, ಭಾರತ ಮತ್ತು ದಕ್ಷಿಣ ಏಷ್ಯಾದಿಂದ ಆಯ್ಕೆಯಾದ ಮೊದಲ ಕಾದಂಬರಿ ಎಂಬ ಹೆಗ್ಗಳಿಕೆಗೂ ಈ ಕೃತಿ ಪಾತ್ರವಾಗಿದೆ.

ಸಾಂಸ್ಕೃತಿಕ ಸಂಸ್ಥೆಗಳಾದ ರಂಗಲೀಲಾ ಮತ್ತು ಆಗ್ರಾ ಥಿಯೇಟರ್ ಕ್ಲಬ್ ಅಭಿನಂದನಾ ಕಾರ್ಯಕ್ರಮವನ್ನು ಆಯೋಜಿಸಿದ್ದವು. ಆಗ್ರಾದ ಕ್ಲಾರ್ಕ್ಸ್ ಶಿರಾಜ್ ಹೋಟೆಲ್‌ನಲ್ಲಿ ಶನಿವಾರ ಸಂಜೆ ಕಾರ್ಯಕ್ರಮ ನಡೆಯಬೇಕಿತ್ತು.

ಇದನ್ನೂ ಓದಿರಿ: ಡಬ್‌‌ ಸಿನಿಮಾ ‘ಡೊಳ್ಳು’ ಸಿಂಕ್‌ಸೌಂಡ್‌ ವಿಭಾಗದಲ್ಲಿ ಆಯ್ಕೆ: ‘ರಾಷ್ಟ್ರಪ್ರಶಸ್ತಿ ಲಾಬಿ’ ರಾಜಕಾರಣದ ಕಥೆ ಇದು!

ಬಹುದೊಡ್ಡ ಗೌರವಕ್ಕೆ ಪಾತ್ರರಾಗಿರುವ ಗೀತಾಂಜಲಿಯವರನ್ನು ಉತ್ತರಪ್ರದೇಶದ ಮುಖ್ಯಮಂತ್ರಿ ಆದಿತ್ಯನಾಥ್ ಅವರು ಆದರ್ಶಯುತವಾಗಿ ಗೌರವಿಸಬೇಕಿತ್ತು ಎಂದು ರಂಗಲೀಲಾ ವಕ್ತಾರ ರಾಮಭಾರತ್ ಉಪಾಧ್ಯಾಯ ಅವರು ಸ್ಕ್ರಾಲ್‌ ಜಾಲತಾಣಕ್ಕೆ ಪ್ರತಿಕ್ರಿಯಿಸಿದ್ದಾರೆ.

“ಉತ್ತರ ಪ್ರದೇಶ ಗೀತಾಂಜಲಿಯವರ ಜನ್ಮಸ್ಥಳ. ಸರ್ಕಾರ, ಮುಖ್ಯಮಂತ್ರಿಯವರು ಗೀತಾಂಜಲಿಯವರನ್ನು ಸನ್ಮಾನಿಸಬೇಕಿತ್ತು. ಬದಲಿಗೆ ನಾವು ಈ ಕಾರ್ಯಕ್ರಮವನ್ನು ರದ್ದುಗೊಳಿಸಬೇಕಾಗಿದೆ. ಇದು ನಾಚಿಕೆಗೇಡಿನ ವಿಷಯ” ಎಂದು ವಿಷಾದಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...