Homeಮುಖಪುಟಬೂಕರ್ ಪ್ರಶಸ್ತಿ ಪಡೆದ ಕಾದಂಬರಿ ವಿರುದ್ಧ ದೂರು; ಆಗ್ರಾದಲ್ಲಿ ಲೇಖಕಿಗೆ ಏರ್ಪಡಿಸಿದ್ದ ಸನ್ಮಾನ ಕಾರ್ಯಕ್ರಮ ರದ್ದು!

ಬೂಕರ್ ಪ್ರಶಸ್ತಿ ಪಡೆದ ಕಾದಂಬರಿ ವಿರುದ್ಧ ದೂರು; ಆಗ್ರಾದಲ್ಲಿ ಲೇಖಕಿಗೆ ಏರ್ಪಡಿಸಿದ್ದ ಸನ್ಮಾನ ಕಾರ್ಯಕ್ರಮ ರದ್ದು!

- Advertisement -
- Advertisement -

ಅಂತಾರಾಷ್ಟ್ರೀಯ ಬೂಕರ್ ಪ್ರಶಸ್ತಿ ವಿಜೇತೆ ಗೀತಾಂಜಲಿ ಶ್ರೀ ಅವರನ್ನು ಗೌರವಿಸಲು ಆಗ್ರಾದಲ್ಲಿ ಶನಿವಾರ ನಡೆಯಬೇಕಿದ್ದ ಕಾರ್ಯಕ್ರಮವನ್ನು ಅವರ ಬಹುಮಾನ ವಿಜೇತ ಕಾದಂಬರಿ ‘ರೆತ್‌ ಸಮಾಧಿ’ ವಿರುದ್ಧ ದೂರು ದಾಖಲಿಸಿದ ಕಾರಣ ರದ್ದುಗೊಳಿಸಲಾಗಿದೆ ಎಂದು ಸಂಘಟಕರು ತಿಳಿಸಿರುವುದಾಗಿ ‘ಸ್ಕ್ರಾಲ್‌.ಇನ್‌’ ವರದಿ ಮಾಡಿದೆ.

ಉತ್ತರ ಪ್ರದೇಶದ ಹತ್ರಾಸ್ ನಿವಾಸಿ ಸಂದೀಪ್ ಕುಮಾರ್ ಪಾಠಕ್ ಎಂಬವರು ನಗರದಲ್ಲಿ ದೂರು ದಾಖಲಿಸಿದ್ದು, ಪುಸ್ತಕದಲ್ಲಿ ಹಿಂದೂ ದೇವತೆಗಳಾದ ಶಿವ ಮತ್ತು ಪಾರ್ವತಿಯ ಬಗ್ಗೆ ಆಕ್ಷೇಪಾರ್ಹ ಅಭಿಪ್ರಾಯಗಳಿವೆ ಎಂದು ಆರೋಪಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಈ ಕುರಿತು ಎಫ್‌ಐಆರ್‌ ದಾಖಲಾಗಬೇಕು ಎಂದು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮತ್ತು ರಾಜ್ಯ ಪೊಲೀಸ್ ಮುಖ್ಯಸ್ಥರನ್ನು ಅವರು ಟ್ವೀಟ್‌ ಮೂಲಕ ಒತ್ತಾಯಿಸಿರುವುದಾಗಿ ಕಾರ್ಯಕ್ರಮ ಸಂಘಟಕರು ಶನಿವಾರ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಎಫ್‌ಐಆರ್ ದಾಖಲಿಸುವ ಬಗ್ಗೆ ನಿರ್ಧರಿಸುವ ಮೊದಲು ಪುಸ್ತಕವನ್ನು ಓದುತ್ತೇವೆ ಎಂದು ಪೊಲೀಸರು ಪ್ರತಿಕ್ರಿಯೆ ನೀಡಿದ್ದಾರೆ.

ವಿಷಯ ಬೆಳಕಿಗೆ ಬರುತ್ತಿದ್ದಂತೆ ಪ್ರತಿಕ್ರಿಯೆ ನೀಡಿರುವ ಗೀತಾಂಜಲಿ ಶ್ರೀ, “ನನಗೆ ನೋವಾಗಿದ್ದು, ಸದ್ಯಕ್ಕೆ ಯಾವುದೇ ಸಾರ್ವಜನಿಕ ಕಾರ್ಯಕ್ರಮಗಳಿಗೆ ಹಾಜರಾಗಲು ಇಚ್ಛಿಸುವುದಿಲ್ಲ” ಎಂದು ಸಂಘಟಕರಿಗೆ ತಿಳಿಸಿದ್ದಾರೆ.

ಹತ್ರಾಸ್‌ನಲ್ಲಿ ದಾಖಲಾಗಿರುವ ದೂರಿನ ಕುರಿತು ಸ್ಥಳೀಯ ಮಾಧ್ಯಮಗಳು ಬುಧವಾರ ವರದಿ ಮಾಡಿದ ನಂತರ, ದೆಹಲಿಯ ಜವಾಹರಲಾಲ್ ನೆಹರೂ ವಿಶ್ವವಿದ್ಯಾಲಯದಲ್ಲಿ ನಡೆದ ಸನ್ಮಾನ ಕಾರ್ಯಕ್ರಮಕ್ಕೆ ಕೆಲವು ಸಮಾಜ ವಿರೋಧಿಗಳು ಅಡ್ಡಿಪಡಿಸಲು ಪ್ರಯತ್ನಿಸಿರುವುದಾಗಿ ಅವರು ಮಾಹಿತಿ ನೀಡಿದ್ದಾರೆ.

“ನನ್ನ ಕಾದಂಬರಿಯನ್ನು ಬಲವಂತವಾಗಿ ರಾಜಕೀಯ ವಿವಾದಕ್ಕೆ ಎಳೆಯಲಾಗುತ್ತಿದೆ. ಕಾದಂಬರಿಯಲ್ಲಿ ಮಾಡಲಾದ ಉಲ್ಲೇಖಗಳು ಭಾರತೀಯ ಪುರಾಣಗಳ ಅವಿಭಾಜ್ಯ ಅಂಗವಾಗಿವೆ. ಈ ವಿವರಣೆಗಳ ಬಗ್ಗೆ ಆಕ್ಷೇಪವಿರುವವರು ಹಿಂದೂ ಪುರಾಣ ಗ್ರಂಥಗಳನ್ನು ನ್ಯಾಯಾಲಯದಲ್ಲಿ ಪ್ರಶ್ನಿಸಬೇಕು” ಎಂದು ಗೀತಾಂಜಲಿ ಪ್ರತಿಕ್ರಿಯೆ ನೀಡಿದ್ದಾರೆ.

ಗೀತಾಂಜಲಿಯವರ ‘ರೆತ್‌ ಸಮಾಧಿ’ ಕೃತಿಯನ್ನು ಡೈಸಿ ರಾಕ್‌ವೆಲ್ ಅವರು ‘ಟಾಂಬ್ ಆಫ್ ಸ್ಯಾಂಡ್’ ಎಂದು ಇಂಗ್ಲಿಷ್‌ಗೆ ಅನುವಾದಿಸಿದ್ದಾರೆ. ಇದು ಮೇ ತಿಂಗಳಲ್ಲಿ ಅಂತಾರಾಷ್ಟ್ರೀಯ ಬೂಕರ್ ಪ್ರಶಸ್ತಿ 2022 ಅನ್ನು ಗೆದ್ದಿದೆ. ಅನುವಾದಗೊಂಡು ಬೂಕರ್‌ ಪ್ರಶಸ್ತಿಯನ್ನು ಗೆದ್ದ ಮೊದಲ ಹಿಂದಿ ಕಾದಂಬರಿ, ಭಾರತ ಮತ್ತು ದಕ್ಷಿಣ ಏಷ್ಯಾದಿಂದ ಆಯ್ಕೆಯಾದ ಮೊದಲ ಕಾದಂಬರಿ ಎಂಬ ಹೆಗ್ಗಳಿಕೆಗೂ ಈ ಕೃತಿ ಪಾತ್ರವಾಗಿದೆ.

ಸಾಂಸ್ಕೃತಿಕ ಸಂಸ್ಥೆಗಳಾದ ರಂಗಲೀಲಾ ಮತ್ತು ಆಗ್ರಾ ಥಿಯೇಟರ್ ಕ್ಲಬ್ ಅಭಿನಂದನಾ ಕಾರ್ಯಕ್ರಮವನ್ನು ಆಯೋಜಿಸಿದ್ದವು. ಆಗ್ರಾದ ಕ್ಲಾರ್ಕ್ಸ್ ಶಿರಾಜ್ ಹೋಟೆಲ್‌ನಲ್ಲಿ ಶನಿವಾರ ಸಂಜೆ ಕಾರ್ಯಕ್ರಮ ನಡೆಯಬೇಕಿತ್ತು.

ಇದನ್ನೂ ಓದಿರಿ: ಡಬ್‌‌ ಸಿನಿಮಾ ‘ಡೊಳ್ಳು’ ಸಿಂಕ್‌ಸೌಂಡ್‌ ವಿಭಾಗದಲ್ಲಿ ಆಯ್ಕೆ: ‘ರಾಷ್ಟ್ರಪ್ರಶಸ್ತಿ ಲಾಬಿ’ ರಾಜಕಾರಣದ ಕಥೆ ಇದು!

ಬಹುದೊಡ್ಡ ಗೌರವಕ್ಕೆ ಪಾತ್ರರಾಗಿರುವ ಗೀತಾಂಜಲಿಯವರನ್ನು ಉತ್ತರಪ್ರದೇಶದ ಮುಖ್ಯಮಂತ್ರಿ ಆದಿತ್ಯನಾಥ್ ಅವರು ಆದರ್ಶಯುತವಾಗಿ ಗೌರವಿಸಬೇಕಿತ್ತು ಎಂದು ರಂಗಲೀಲಾ ವಕ್ತಾರ ರಾಮಭಾರತ್ ಉಪಾಧ್ಯಾಯ ಅವರು ಸ್ಕ್ರಾಲ್‌ ಜಾಲತಾಣಕ್ಕೆ ಪ್ರತಿಕ್ರಿಯಿಸಿದ್ದಾರೆ.

“ಉತ್ತರ ಪ್ರದೇಶ ಗೀತಾಂಜಲಿಯವರ ಜನ್ಮಸ್ಥಳ. ಸರ್ಕಾರ, ಮುಖ್ಯಮಂತ್ರಿಯವರು ಗೀತಾಂಜಲಿಯವರನ್ನು ಸನ್ಮಾನಿಸಬೇಕಿತ್ತು. ಬದಲಿಗೆ ನಾವು ಈ ಕಾರ್ಯಕ್ರಮವನ್ನು ರದ್ದುಗೊಳಿಸಬೇಕಾಗಿದೆ. ಇದು ನಾಚಿಕೆಗೇಡಿನ ವಿಷಯ” ಎಂದು ವಿಷಾದಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮೆರಿಕದಿಂದ ದಾಳಿ ಬೆದರಿಕೆ : ಇರಾನ್ ತೊರೆಯುವಂತೆ ಭಾರತೀಯ ಪ್ರಜೆಗಳಿಗೆ ಸೂಚನೆ

ಅಮೆರಿಕದ ದಾಳಿ ಬೆದರಿಕೆ ಹಾಗೂ ಮತ್ತೆ ಪ್ರತಿಭಟನೆಗಳು ಭುಗಿಲೆದ್ದಿರುವ ಕಾರಣ, ಇರಾನ್‌ನಲ್ಲಿರುವ ಎಲ್ಲಾ ಭಾರತೀಯರು ವಾಣಿಜ್ಯ ವಿಮಾನಗಳು ಸೇರಿದಂತೆ ಲಭ್ಯವಿರುವ ಸಾರಿಗೆ ವ್ಯವಸ್ಥೆಯ ಮೂಲಕ ತಕ್ಷಣ ದೇಶ ತೊರೆಯುವಂತೆ ತೆಹ್ರಾನ್‌ನಲ್ಲಿರುವ ಭಾರತೀಯ ರಾಯಭಾರ...

ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್‌ಐಆರ್

ಕೇಂದ್ರ ಅಪರಾಧ ಶಾಖೆ (ಸಿಸಿಬಿ) ವಶಕ್ಕೆ ಪಡೆದು ವಿಚಾರಣೆ ನಡೆಸಿದ ಕೆಲವು ದಿನಗಳ ನಂತರ, ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್‌ಐಆರ್ ದಾಖಲಾಗಿದೆ.  ಪವಿತ್ರಾ ಬಿ.ಎನ್ ಸಲ್ಲಿಸಿದ ದೂರಿನ ಆಧಾರದ ಮೇಲೆ...

ವಾರಣಾಸಿಯಲ್ಲಿ ಆಚರಿಸುವ ಪ್ರಸಿದ್ಧ ‘ಭಸ್ಮ ಹೋಳಿ’ಗೆ ಸಂಸ್ಕೃತ ವಿದ್ವಾಂಸರು ಮತ್ತು ಕಾಶಿ ವಿದ್ವತ್ ಪರಿಷತ್ ವಿರೋಧ 

ವಾರಣಾಸಿ (ಉತ್ತರ ಪ್ರದೇಶ): ನಗರದ ಸ್ಮಶಾನ ಭೂಮಿಗಳಾದ ಮಣಿಕರ್ಣಿಕಾ ಮತ್ತು ಹರಿಶ್ಚಂದ್ರ ಘಾಟ್‌ಗಳಲ್ಲಿ 'ಮಸಾನೆ ಕಿ ಹೋ ಲಿ ' ನುಡಿಸುವ ಸಂಪ್ರದಾಯವನ್ನು ಸಂಸ್ಕೃತ ವಿದ್ವಾಂಸರು ಮತ್ತು ಹಿಂದೂ ಧರ್ಮಗ್ರಂಥಗಳ ತಜ್ಞರ ಪರಿಷತ್ತು...

ಮುಸ್ಲಿಮರೆಂದು ತಿಳಿದು ಮಹಿಳೆಯರಿಗೆ ವಿತರಿಸಿದ್ದ ಕಂಬಳಿ ವಾಪಸ್ ಪಡೆದ ಬಿಜೆಪಿ ಮಾಜಿ ಸಂಸದ

ಬಿಜೆಪಿಯ ಮಾಜಿ ಸಂಸದ ಸುಖ್‌ವೀರ್ ಸಿಂಗ್ ಜೌನ್‌ಪುರಿಯಾ ಅವರು, ಮುಸ್ಲಿಮರೆಂದು ಗೊತ್ತಾದ ಬಳಿಕ ಮಹಿಳೆಯರಿಗೆ ವಿತರಿಸಿದ್ದ ಕಂಬಳಿಯನ್ನು ವಾಪಸ್ ಪಡೆದಿದ್ದಾರೆ ಎಂದು ರಾಜಸ್ಥಾನ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಟಿಕರಾಮ್ ಜುಲ್ಲಿ ಭಾನುವಾರ...

ಜೆಎನ್‌ಯು: ಎಡಪಂಥೀಯ ವಿದ್ಯಾರ್ಥಿ ಸಂಘಟನೆ ಮತ್ತು ಎಬಿವಿಪಿ ನಡುವೆ ಘರ್ಷಣೆ: ಉದ್ವಿಗ್ನತೆ  

ಸೋಮವಾರ ಮುಂಜಾನೆ ನಡೆದ ಪ್ರತಿಭಟನಾ ಮೆರವಣಿಗೆಯಲ್ಲಿ ಎಡಪಂಥೀಯ ಮತ್ತು ಬಲಪಂಥೀಯ ವಿದ್ಯಾರ್ಥಿ ಗುಂಪುಗಳು ಪರಸ್ಪರ ಹಿಂಸಾಚಾರವನ್ನು ಬಿಚ್ಚಿಟ್ಟಿದ್ದಾರೆ ಎಂದು ಆರೋಪಿಸಿದ ನಂತರ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯ (ಜೆಎನ್‌ಯು) ಆವರಣದಲ್ಲಿ ಉದ್ವಿಗ್ನತೆ ಉಂಟಾಗಿದೆ.  ಸೋಮವಾರ ಬೆಳಗಿನ...

ಡ್ರಗ್ ದೊರೆ ‘ಎಲ್ ಮೆಂಚೊ’ ಹತ್ಯೆ : ಮೆಕ್ಸಿಕೋದಲ್ಲಿ ಭುಗಿಲೆದ್ದ ಹಿಂಸಾಚಾರ

'ಎಲ್ ಮೆಂಚೊ' ಎಂದೇ ಪರಿಚಿತನಾಗಿದ್ದ ಡ್ರಗ್ ದೊರೆ ನೆಮೆಸಿಯೊ ಒಸೆಗುಯೆರಾನನ್ನು ಕಾರ್ಯಾಚರಣೆಯೊಂದರಲ್ಲಿ ಕೊಂದಿರುವುದಾಗಿ ಮೆಕ್ಸಿಕನ್ ಸೇನೆ ಭಾನುವಾರ (ಫೆ.22) ಘೋಷಿಸಿದೆ. ಆ ಬಳಿಕ ದೇಶದ ವಿವಿಧ ಭಾಗಗಳಲ್ಲಿ ಭಾರೀ ಹಿಂಸಾಚಾರ ಭುಗಿಲೆದ್ದಿದೆ ಎಂದು...

ನೇಪಾಳ ಬಸ್ ಅಪಘಾತ: ಧಾಡಿಂಗ್‌ನಲ್ಲಿ ತ್ರಿಶೂಲಿ ನದಿಗೆ ಬಸ್ ಬಿದ್ದು 18 ಮಂದಿ ಸಾವು; ಮುಂದುವರಿದ ರಕ್ಷಣಾ ಕಾರ್ಯಾಚರಣೆ

ಧಾಡಿಂಗ್ (ನೇಪಾಳ): ಸೋಮವಾರ ಮುಂಜಾನೆ ನೇಪಾಳದ ಧಾಡಿಂಗ್‌ನಲ್ಲಿ ಪ್ರಯಾಣಿಕರ ಬಸ್ ತ್ರಿಶೂಲಿ ನದಿಗೆ ಉರುಳಿಬಿದ್ದ ಪರಿಣಾಮ ಕನಿಷ್ಠ 18 ಜನರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಅಪಘಾತದಲ್ಲಿ 24 ಕ್ಕೂ ಹೆಚ್ಚು ಪ್ರಯಾಣಿಕರು...

ಅಜಿತ್ ಪವಾರ್ ಸಾವು | ಪತನಗೊಂಡ ವಿಮಾನದ ನಿರ್ವಹಣಾ ಸಂಸ್ಥೆಗೂ ಟಿಡಿಪಿಗೂ ನಂಟು : ರೋಹಿತ್ ಪವಾರ್

ಅಜಿತ್ ಪವಾರ್ ಸಾವಿಗೆ ಕಾರಣವಾದ ಪತನಗೊಂಡ ವಿಮಾನದ ನಿರ್ವಾಹಕ ಸಂಸ್ಥೆ ವಿಎಸ್ಆರ್ ವೆಂಚರ್ಸ್ ಮತ್ತು ತೆಲುಗು ದೇಶಂ ಪಕ್ಷದ (ಟಿಡಿಪಿ) ನಡುವೆ ಸಂಬಂಧವಿದೆ ಎಂದು ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ (ಶರದ್ ಪವಾರ್ ಬಣದ)...

ಆಪರೇಷನ್ ಡೆಮಾಲಿಶ್‌ಮೆಂಟ್ ಅಡಿಯಲ್ಲಿ 200ಕ್ಕೂ ಹೆಚ್ಚು ನಕ್ಸಲ್ ಸ್ಮಾರಕಗಳನ್ನು ನೆಲಸಮಗೊಳಿಸಿದ ಭದ್ರತಾ ಪಡೆಗಳು 

ನವದೆಹಲಿ: ನಕ್ಸಲ್ ಚಟುವಟಿಕೆಗಳ ವಿರುದ್ಧ ತೀವ್ರಗೊಂಡ ಕಾರ್ಯಾಚರಣೆ ನಿರ್ಣಾಯಕ ಹಂತವನ್ನು ಪ್ರವೇಶಿಸಿರುವುದಾಗಿ ಭದ್ರತಾಪಡೆಯ ಅಧಿಕಾರಿಗಳು ತಿಳಿಸಿದ್ದಾರೆ.  ಆಪರೇಷನ್ ಡೆಮಾಲಿಶ್‌ಮೆಂಟ್ ಎಂದು ಕರೆಯಲ್ಪಡುವ ಇತ್ತೀಚಿನ ಕಾರ್ಯಾಚರಣೆಯ ಅಡಿಯಲ್ಲಿ ನಕ್ಸಲ್ ಕಾರ್ಯಕರ್ತರು ತಮ್ಮ ನಾಯಕರನ್ನು ಸ್ಮರಿಸಲು ಮತ್ತು...

ಮುಸ್ಲಿಮರಿಗೆ ನೀಡಿದ್ದ 5% ಮೀಸಲಾತಿ ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಕ್ರಮ ಪ್ರಶ್ನಿಸಿ ಬಾಂಬೆ ಹೈಕೋರ್ಟ್ ಗೆ ಅರ್ಜಿ 

ಶಿಕ್ಷಣ ಮತ್ತು ಸರ್ಕಾರಿ ಉದ್ಯೋಗಗಳಲ್ಲಿ ಮುಸ್ಲಿಮರಿಗೆ 5% ಮೀಸಲಾತಿಯನ್ನು ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಇತ್ತೀಚಿನ ನಿರ್ಧಾರವನ್ನು ಮುಂಬೈ ಮೂಲದ ವಕೀಲರು ಬಾಂಬೆ ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದಾರೆ. ವಕೀಲ ಸೈಯದ್ ಎಜಾಜ್ ಅಬ್ಬಾಸ್ ನಖ್ವಿ ಅವರು ವಕೀಲ...