Homeಮುಖಪುಟಬೂಕರ್ ಪ್ರಶಸ್ತಿ ಪಡೆದ ಕಾದಂಬರಿ ವಿರುದ್ಧ ದೂರು; ಆಗ್ರಾದಲ್ಲಿ ಲೇಖಕಿಗೆ ಏರ್ಪಡಿಸಿದ್ದ ಸನ್ಮಾನ ಕಾರ್ಯಕ್ರಮ ರದ್ದು!

ಬೂಕರ್ ಪ್ರಶಸ್ತಿ ಪಡೆದ ಕಾದಂಬರಿ ವಿರುದ್ಧ ದೂರು; ಆಗ್ರಾದಲ್ಲಿ ಲೇಖಕಿಗೆ ಏರ್ಪಡಿಸಿದ್ದ ಸನ್ಮಾನ ಕಾರ್ಯಕ್ರಮ ರದ್ದು!

- Advertisement -
- Advertisement -

ಅಂತಾರಾಷ್ಟ್ರೀಯ ಬೂಕರ್ ಪ್ರಶಸ್ತಿ ವಿಜೇತೆ ಗೀತಾಂಜಲಿ ಶ್ರೀ ಅವರನ್ನು ಗೌರವಿಸಲು ಆಗ್ರಾದಲ್ಲಿ ಶನಿವಾರ ನಡೆಯಬೇಕಿದ್ದ ಕಾರ್ಯಕ್ರಮವನ್ನು ಅವರ ಬಹುಮಾನ ವಿಜೇತ ಕಾದಂಬರಿ ‘ರೆತ್‌ ಸಮಾಧಿ’ ವಿರುದ್ಧ ದೂರು ದಾಖಲಿಸಿದ ಕಾರಣ ರದ್ದುಗೊಳಿಸಲಾಗಿದೆ ಎಂದು ಸಂಘಟಕರು ತಿಳಿಸಿರುವುದಾಗಿ ‘ಸ್ಕ್ರಾಲ್‌.ಇನ್‌’ ವರದಿ ಮಾಡಿದೆ.

ಉತ್ತರ ಪ್ರದೇಶದ ಹತ್ರಾಸ್ ನಿವಾಸಿ ಸಂದೀಪ್ ಕುಮಾರ್ ಪಾಠಕ್ ಎಂಬವರು ನಗರದಲ್ಲಿ ದೂರು ದಾಖಲಿಸಿದ್ದು, ಪುಸ್ತಕದಲ್ಲಿ ಹಿಂದೂ ದೇವತೆಗಳಾದ ಶಿವ ಮತ್ತು ಪಾರ್ವತಿಯ ಬಗ್ಗೆ ಆಕ್ಷೇಪಾರ್ಹ ಅಭಿಪ್ರಾಯಗಳಿವೆ ಎಂದು ಆರೋಪಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಈ ಕುರಿತು ಎಫ್‌ಐಆರ್‌ ದಾಖಲಾಗಬೇಕು ಎಂದು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮತ್ತು ರಾಜ್ಯ ಪೊಲೀಸ್ ಮುಖ್ಯಸ್ಥರನ್ನು ಅವರು ಟ್ವೀಟ್‌ ಮೂಲಕ ಒತ್ತಾಯಿಸಿರುವುದಾಗಿ ಕಾರ್ಯಕ್ರಮ ಸಂಘಟಕರು ಶನಿವಾರ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಎಫ್‌ಐಆರ್ ದಾಖಲಿಸುವ ಬಗ್ಗೆ ನಿರ್ಧರಿಸುವ ಮೊದಲು ಪುಸ್ತಕವನ್ನು ಓದುತ್ತೇವೆ ಎಂದು ಪೊಲೀಸರು ಪ್ರತಿಕ್ರಿಯೆ ನೀಡಿದ್ದಾರೆ.

ವಿಷಯ ಬೆಳಕಿಗೆ ಬರುತ್ತಿದ್ದಂತೆ ಪ್ರತಿಕ್ರಿಯೆ ನೀಡಿರುವ ಗೀತಾಂಜಲಿ ಶ್ರೀ, “ನನಗೆ ನೋವಾಗಿದ್ದು, ಸದ್ಯಕ್ಕೆ ಯಾವುದೇ ಸಾರ್ವಜನಿಕ ಕಾರ್ಯಕ್ರಮಗಳಿಗೆ ಹಾಜರಾಗಲು ಇಚ್ಛಿಸುವುದಿಲ್ಲ” ಎಂದು ಸಂಘಟಕರಿಗೆ ತಿಳಿಸಿದ್ದಾರೆ.

ಹತ್ರಾಸ್‌ನಲ್ಲಿ ದಾಖಲಾಗಿರುವ ದೂರಿನ ಕುರಿತು ಸ್ಥಳೀಯ ಮಾಧ್ಯಮಗಳು ಬುಧವಾರ ವರದಿ ಮಾಡಿದ ನಂತರ, ದೆಹಲಿಯ ಜವಾಹರಲಾಲ್ ನೆಹರೂ ವಿಶ್ವವಿದ್ಯಾಲಯದಲ್ಲಿ ನಡೆದ ಸನ್ಮಾನ ಕಾರ್ಯಕ್ರಮಕ್ಕೆ ಕೆಲವು ಸಮಾಜ ವಿರೋಧಿಗಳು ಅಡ್ಡಿಪಡಿಸಲು ಪ್ರಯತ್ನಿಸಿರುವುದಾಗಿ ಅವರು ಮಾಹಿತಿ ನೀಡಿದ್ದಾರೆ.

“ನನ್ನ ಕಾದಂಬರಿಯನ್ನು ಬಲವಂತವಾಗಿ ರಾಜಕೀಯ ವಿವಾದಕ್ಕೆ ಎಳೆಯಲಾಗುತ್ತಿದೆ. ಕಾದಂಬರಿಯಲ್ಲಿ ಮಾಡಲಾದ ಉಲ್ಲೇಖಗಳು ಭಾರತೀಯ ಪುರಾಣಗಳ ಅವಿಭಾಜ್ಯ ಅಂಗವಾಗಿವೆ. ಈ ವಿವರಣೆಗಳ ಬಗ್ಗೆ ಆಕ್ಷೇಪವಿರುವವರು ಹಿಂದೂ ಪುರಾಣ ಗ್ರಂಥಗಳನ್ನು ನ್ಯಾಯಾಲಯದಲ್ಲಿ ಪ್ರಶ್ನಿಸಬೇಕು” ಎಂದು ಗೀತಾಂಜಲಿ ಪ್ರತಿಕ್ರಿಯೆ ನೀಡಿದ್ದಾರೆ.

ಗೀತಾಂಜಲಿಯವರ ‘ರೆತ್‌ ಸಮಾಧಿ’ ಕೃತಿಯನ್ನು ಡೈಸಿ ರಾಕ್‌ವೆಲ್ ಅವರು ‘ಟಾಂಬ್ ಆಫ್ ಸ್ಯಾಂಡ್’ ಎಂದು ಇಂಗ್ಲಿಷ್‌ಗೆ ಅನುವಾದಿಸಿದ್ದಾರೆ. ಇದು ಮೇ ತಿಂಗಳಲ್ಲಿ ಅಂತಾರಾಷ್ಟ್ರೀಯ ಬೂಕರ್ ಪ್ರಶಸ್ತಿ 2022 ಅನ್ನು ಗೆದ್ದಿದೆ. ಅನುವಾದಗೊಂಡು ಬೂಕರ್‌ ಪ್ರಶಸ್ತಿಯನ್ನು ಗೆದ್ದ ಮೊದಲ ಹಿಂದಿ ಕಾದಂಬರಿ, ಭಾರತ ಮತ್ತು ದಕ್ಷಿಣ ಏಷ್ಯಾದಿಂದ ಆಯ್ಕೆಯಾದ ಮೊದಲ ಕಾದಂಬರಿ ಎಂಬ ಹೆಗ್ಗಳಿಕೆಗೂ ಈ ಕೃತಿ ಪಾತ್ರವಾಗಿದೆ.

ಸಾಂಸ್ಕೃತಿಕ ಸಂಸ್ಥೆಗಳಾದ ರಂಗಲೀಲಾ ಮತ್ತು ಆಗ್ರಾ ಥಿಯೇಟರ್ ಕ್ಲಬ್ ಅಭಿನಂದನಾ ಕಾರ್ಯಕ್ರಮವನ್ನು ಆಯೋಜಿಸಿದ್ದವು. ಆಗ್ರಾದ ಕ್ಲಾರ್ಕ್ಸ್ ಶಿರಾಜ್ ಹೋಟೆಲ್‌ನಲ್ಲಿ ಶನಿವಾರ ಸಂಜೆ ಕಾರ್ಯಕ್ರಮ ನಡೆಯಬೇಕಿತ್ತು.

ಇದನ್ನೂ ಓದಿರಿ: ಡಬ್‌‌ ಸಿನಿಮಾ ‘ಡೊಳ್ಳು’ ಸಿಂಕ್‌ಸೌಂಡ್‌ ವಿಭಾಗದಲ್ಲಿ ಆಯ್ಕೆ: ‘ರಾಷ್ಟ್ರಪ್ರಶಸ್ತಿ ಲಾಬಿ’ ರಾಜಕಾರಣದ ಕಥೆ ಇದು!

ಬಹುದೊಡ್ಡ ಗೌರವಕ್ಕೆ ಪಾತ್ರರಾಗಿರುವ ಗೀತಾಂಜಲಿಯವರನ್ನು ಉತ್ತರಪ್ರದೇಶದ ಮುಖ್ಯಮಂತ್ರಿ ಆದಿತ್ಯನಾಥ್ ಅವರು ಆದರ್ಶಯುತವಾಗಿ ಗೌರವಿಸಬೇಕಿತ್ತು ಎಂದು ರಂಗಲೀಲಾ ವಕ್ತಾರ ರಾಮಭಾರತ್ ಉಪಾಧ್ಯಾಯ ಅವರು ಸ್ಕ್ರಾಲ್‌ ಜಾಲತಾಣಕ್ಕೆ ಪ್ರತಿಕ್ರಿಯಿಸಿದ್ದಾರೆ.

“ಉತ್ತರ ಪ್ರದೇಶ ಗೀತಾಂಜಲಿಯವರ ಜನ್ಮಸ್ಥಳ. ಸರ್ಕಾರ, ಮುಖ್ಯಮಂತ್ರಿಯವರು ಗೀತಾಂಜಲಿಯವರನ್ನು ಸನ್ಮಾನಿಸಬೇಕಿತ್ತು. ಬದಲಿಗೆ ನಾವು ಈ ಕಾರ್ಯಕ್ರಮವನ್ನು ರದ್ದುಗೊಳಿಸಬೇಕಾಗಿದೆ. ಇದು ನಾಚಿಕೆಗೇಡಿನ ವಿಷಯ” ಎಂದು ವಿಷಾದಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪೆಂಗ್ವಿನ್ ಇಂಡಿಯಾ ಹಿಂದೆ ಸರಿದ ನಂತರ ಸೋನಿಯಾ ಗಾಂಧಿ ಅವರ ಆತ್ಮಚರಿತ್ರೆ ‘ಬಿಲಾಂಗಿಂಗ್’ ಅನ್ನು ಪ್ರಕಟಿಸಲಿರುವ ‘ಹಾರ್ಪರ್‌ಕಾಲಿನ್ಸ್’ 

ನವದೆಹಲಿ: ಕಾಂಗ್ರೆಸ್‌ನ ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರ ಬಹುನಿರೀಕ್ಷಿತ ಆತ್ಮಚರಿತ್ರೆ ‘ಬಿಲಾಂಗಿಂಗ್: ಎ ಜರ್ನಿ ಆಫ್ ಲವ್’ ಇದೀಗ ಭಾರತದಲ್ಲಿ ಹಾರ್ಪರ್‌ಕಾಲಿನ್ಸ್ ಇಂಡಿಯಾ ಮೂಲಕ ಪ್ರಕಟವಾಗಲಿದೆ. ಪೆಂಗ್ವಿನ್ ರ‍್ಯಾಂಡಮ್ ಹೌಸ್ ಇಂಡಿಯಾ...

ಜೈಲಿನಲ್ಲಿ ಕಂಬಿ ಎಣಿಸುತ್ತಿರುವ 25 ಕ್ರಿಮಿನಲ್‌ಗಳು, ದೆಹಲಿಯ ಜಂತರ್-ಮಂತರ್‌ಗೆ ಬರುಲು ಹೇಗೆ ಸಾಧ? ತನಿಖಾ ವರದಿಯಲ್ಲಿ ಬಯಲಾಯ್ತು ಪೊಲೀಸರ ಕುತಂತ್ರ

ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ವಿರೋಧಿ ಪ್ರತಿಭಟನೆ ವೇಳೆ ದೆಹಲಿ ಪೊಲೀಸರು ಬಳಸಿದ್ದ ‘ಅಟೋಮೇಟೆಡ್ ಫೇಶಿಯಲ್ ರೆಕಗ್ನಿಷನ್ ಸಿಸ್ಟಮ್’ (AFRS - ಮುಖಚರ್ಯೆ ಗುರುತಿಸುವ ತಂತ್ರಜ್ಞಾನ) ಗಂಭೀರ...

ಪಶ್ಚಿಮ ಬಂಗಾಳ: ವರ್ಷದಲ್ಲಿ 1,000 ಆರ್‌ಎಸ್‌ಎಸ್‌ ಶಾಲೆ: ಶಿಕ್ಷಣ ವ್ಯವಸ್ಥೆಯನ್ನೇ ‘ರಾಷ್ಟ್ರೀಯತಾವಾದಿ’ಗೊಳಿಸುವುದಾಗಿ ಘೋಷಿಸಿದ ಸುವೇಂದು ಅಧಿಕಾರಿ

ಕೋಲ್ಕತ್ತಾ: ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಶೈಕ್ಷಣಿಕ ವಿಭಾಗವಾಗಿರುವ ವಿದ್ಯಾ ಭಾರತಿಯ ಶಾಲೆಗಳ ಸಂಖ್ಯೆಯನ್ನು ಪಶ್ಚಿಮ ಬಂಗಾಳದಲ್ಲಿ ಭಾರಿ ಪ್ರಮಾಣದಲ್ಲಿ ಹೆಚ್ಚಿಸುವುದಾಗಿ ಮುಖ್ಯಮಂತ್ರಿ ಸುವೇಂದು ಅಧಿಕಾರಿ ಘೋಷಿಸಿದ್ದಾರೆ. ರಾಜ್ಯದ ಪ್ರತಿಯೊಂದು ಜಿಲ್ಲೆ, ಪುರಸಭೆ...

SIR ನ್ಯಾಯಸಮ್ಮತವಾಗಿಲ್ಲ ಮಾಜಿ ಚುನಾವಣಾ ಆಯುಕ್ತ ಅಶೋಕ್ ಲಾವಾಸ ಆತಂಕ

ಭಾರತೀಯ ಚುನಾವಣಾ ಆಯೋಗವು (ಇಸಿಐ) ದೇಶಾದ್ಯಂತ ಕೈಗೊಂಡಿರುವ ಮತದಾರರ ಪಟ್ಟಿಯ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯು ಶಾಸನಾತ್ಮಕವಾಗಿ ಕಾನೂನುಬದ್ಧವಾಗಿದ್ದರೂ, ನೈತಿಕವಾಗಿ ನ್ಯಾಯಸಮ್ಮತವಾಗಿಲ್ಲ ಎಂದು ಮಾಜಿ ಚುನಾವಣಾ ಆಯುಕ್ತ ಅಶೋಕ್ ಲಾವಾಸ ತೀವ್ರ...

ಜಂತರ್ ಮಂತರ್ ಹಲ್ಲೆ: ‘ತಲೆಬುರುಡೆ ಒಡೆದೆ, ಜೈಲಿಗೆ ಹೋಗಲಿಲ್ಲ; ಕಪಿಲ್ ಮಿಶ್ರಾ ನನ್ನ ಅಣ್ಣ’: ಬಿಜೆಪಿ ಬೆಂಬಲದ ಬಗ್ಗೆ ದಾಳಿ ಆರೋಪಿ ಬಹಿರಂಗ ಹೇಳಿಕೆ

ನವದೆಹಲಿ: ದೆಹಲಿಯ ಜಂತರ್ ಮಂತರ್‌ನಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆಯ ವೇಳೆ ಪ್ರತಿಭಟನಾಕಾರಿಯ ತಂದೆಯ ಮೇಲೆ ನಡೆದ ಹಲ್ಲೆ ಪ್ರಕರಣ ಇದೀಗ ರಾಜಕೀಯ ವಿವಾದದ ಕೇಂದ್ರವಾಗಿದೆ. ಪ್ರಕರಣದ ಆರೋಪಿಯಾಗಿರುವ ಸ್ವತಃ ಬಲಪಂಥೀಯ ಹಾಗೂ ಹಿಂದೂತ್ವ ಕಾರ್ಯಕರ್ತ...

ದೆಹಲಿ: ‘ಖಾನ್’ ಎಂಬ ಹೆಸರಿನ ಕಾರಣಕ್ಕೆ ಪತ್ರಕರ್ತೆಯರ ಮೇಲೆ ಹಲ್ಲೆ ಆರೋಪ, FIR ದಾಖಲಿಸುವಂತೆ ಸಾಕೇತ್ ಠಾಣೆಯಲ್ಲಿ ಧರಣಿ

ದೆಹಲಿಯ ಸಾಕೇತ್ ಮ್ಯಾಕ್ಸ್ ಆಸ್ಪತ್ರೆಯ ಹೊಸ ವಿಭಾಗದ ಉದ್ಘಾಟನಾ ಕಾರ್ಯಕ್ರಮದ ವರದಿಗೆ ತೆರಳಿದ್ದ '4PM ನ್ಯೂಸ್ ನೆಟ್‌ವರ್ಕ್'ನ ಮುಸ್ಲಿಂ ಮಹಿಳಾ ಪತ್ರಕರ್ತೆಯರಾದ ಶಾಹೀನ್ ಖಾನ್ ಮತ್ತು ನಫೀಸಾ ಖಾನ್ ಅವರ ಮೇಲೆ ದಿಲ್ಲಿ...

ಮುಖ್ಯಮಂತ್ರಿಗಳನ್ನು ಪ್ರಶ್ನಿಸಿದ್ದಕ್ಕೆ ದೆಹಲಿ ಪೊಲೀಸರಿಂದ ಬಂಧನ-ಹಲ್ಲೆ: ಇಬ್ಬರು ಪತ್ರಕರ್ತೆಯರ ಆರೋಪ

ಸುದ್ದಿ ಮಾಡುತ್ತಿದ್ದಾಗ ದಕ್ಷಿಣ ದೆಹಲಿಯಲ್ಲಿ ದೆಹಲಿ ಪೊಲೀಸ್ ಸಿಬ್ಬಂದಿ ತಮ್ಮನ್ನು ವಶಕ್ಕೆ ಪಡೆದು ಥಳಿಸಿದ್ದಾರೆ ಎಂದು ಇಬ್ಬರು ಮುಸ್ಲಿಂ ಸ್ವತಂತ್ರ ಮಹಿಳಾ ಪತ್ರಕರ್ತೆಯರು ಆರೋಪಿಸಿದ್ದಾರೆ. '4 ಪಿಎಮ್ ನ್ಯೂಸ್ ನೆಟ್‌ವರ್ಕ್' (4 PM News...

ತ್ರಿಪುರಾ: ‘ದನ ಕಳ್ಳ’ ಎಂದು, ಖರೀದಿಸಿದ ದನಗಳೊಂದಿಗೆ ಹಿಂತಿರುಗುತ್ತಿದ್ದ ಮುಸ್ಲಿಂ ವ್ಯಾಪಾರಿ ಮೇಲೆ ಗುಂಪು ಹಲ್ಲೆ: 46 ವರ್ಷದ ಜಲೀಲುರ್ ರೆಹಮಾನ್ ಸಾವು

ಅಗರ್ತಲಾ: ಖರೀದಿಸಿದ ಎರಡು ದನಗಳನ್ನು ತೆಗೆದುಕೊಂಡು ಹೋಗುತ್ತಿದ್ದ ಮುಸ್ಲಿಂ ದನ ವ್ಯಾಪಾರಿಯೊಬ್ಬರನ್ನು ‘ದನ ಕಳ್ಳ’ ಎಂದು ಆರೋಪಿಸಿ ಗುಂಪೊಂದು ಥಳಿಸಿದ ಪರಿಣಾಮ ಅವರು ಮೃತಪಟ್ಟಿರುವ ಘಟನೆ ತ್ರಿಪುರಾದ ಕಲ್ಯಾಣಪುರ ಪೊಲೀಸ್ ಠಾಣೆ ವ್ಯಾಪ್ತಿಯ...

ಪ್ರಶ್ನಿಸುವವರನ್ನು ‘ದಿಮಾಗಿ ನಕ್ಸಲ್’ ಎಂದು ಕರೆಯುವುದು ಸೂಕ್ಷ್ಮತೆಯಿಲ್ಲದ ನಡವಳಿಕೆ: ಗೀತಾಂಜಲಿ ಅಂಗಮೋ

ಪ್ರಶ್ನೆ ಕೇಳುವ ವ್ಯಕ್ತಿಯನ್ನು ‘ದಿಮಾಗಿ ನಕ್ಸಲ್’ (ಬುದ್ಧಿಜೀವಿ ನಕ್ಸಲರು) ಎಂದು ಕರೆಯುವುದು ಅತ್ಯಂತ ಸೂಕ್ಷ್ಮತೆಯಿಲ್ಲದ ರೀತಿಯಾಗಿದೆ ಎಂದು ಪ್ರಸಿದ್ಧ ಹವಾಮಾನ ಕಾರ್ಯಕರ್ತ ಮತ್ತು ಶಿಕ್ಷಣ ತಜ್ಞ ಸೋನಂ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ...

ಬಸವರಾಜ ಕನ್ನಾಳೆ ಸಿಂಡಿಕೇಟ್ ಸದಸ್ಯತ್ವ ರದ್ದಾಗುತ್ತಾ? ರಾಜಭವನದ ಮೌನಕ್ಕೆ ಮೂಡಿದ ಅನುಮಾನ

ತುಮಕೂರು ವಿಶ್ವವಿದ್ಯಾಲಯದ ರಾಜ್ಯಪಾಲರ ನಾಮನಿರ್ದೇಶಿತ ಸಿಂಡಿಕೇಟ್ ಸದಸ್ಯ ಬಸವರಾಜ ಕನ್ನಾಳೆ ಬಂಧನದ ಬೆನ್ನಲ್ಲೇ, ತನಿಖಾ ಸಂಸ್ಥೆಗಳು ತಮ್ಮ ಕಾರ್ಯಾಚರಣೆಯನ್ನು ತೀವ್ರಗೊಳಿಸಿವೆ. ಪ್ರಕರಣಕ್ಕೆ ಸಂಬಂಧಿಸಿದಂತೆ ತುಮಕೂರು ವಿವಿಯ ಪ್ರಭಾರ ಕುಲಪತಿ ಪ್ರೊ. ನಾಗಭೂಷಣ ಅವರಿಂದ...