Homeಮುಖಪುಟಬೂಕರ್ ಪ್ರಶಸ್ತಿ ಪಡೆದ ಕಾದಂಬರಿ ವಿರುದ್ಧ ದೂರು; ಆಗ್ರಾದಲ್ಲಿ ಲೇಖಕಿಗೆ ಏರ್ಪಡಿಸಿದ್ದ ಸನ್ಮಾನ ಕಾರ್ಯಕ್ರಮ ರದ್ದು!

ಬೂಕರ್ ಪ್ರಶಸ್ತಿ ಪಡೆದ ಕಾದಂಬರಿ ವಿರುದ್ಧ ದೂರು; ಆಗ್ರಾದಲ್ಲಿ ಲೇಖಕಿಗೆ ಏರ್ಪಡಿಸಿದ್ದ ಸನ್ಮಾನ ಕಾರ್ಯಕ್ರಮ ರದ್ದು!

- Advertisement -
- Advertisement -

ಅಂತಾರಾಷ್ಟ್ರೀಯ ಬೂಕರ್ ಪ್ರಶಸ್ತಿ ವಿಜೇತೆ ಗೀತಾಂಜಲಿ ಶ್ರೀ ಅವರನ್ನು ಗೌರವಿಸಲು ಆಗ್ರಾದಲ್ಲಿ ಶನಿವಾರ ನಡೆಯಬೇಕಿದ್ದ ಕಾರ್ಯಕ್ರಮವನ್ನು ಅವರ ಬಹುಮಾನ ವಿಜೇತ ಕಾದಂಬರಿ ‘ರೆತ್‌ ಸಮಾಧಿ’ ವಿರುದ್ಧ ದೂರು ದಾಖಲಿಸಿದ ಕಾರಣ ರದ್ದುಗೊಳಿಸಲಾಗಿದೆ ಎಂದು ಸಂಘಟಕರು ತಿಳಿಸಿರುವುದಾಗಿ ‘ಸ್ಕ್ರಾಲ್‌.ಇನ್‌’ ವರದಿ ಮಾಡಿದೆ.

ಉತ್ತರ ಪ್ರದೇಶದ ಹತ್ರಾಸ್ ನಿವಾಸಿ ಸಂದೀಪ್ ಕುಮಾರ್ ಪಾಠಕ್ ಎಂಬವರು ನಗರದಲ್ಲಿ ದೂರು ದಾಖಲಿಸಿದ್ದು, ಪುಸ್ತಕದಲ್ಲಿ ಹಿಂದೂ ದೇವತೆಗಳಾದ ಶಿವ ಮತ್ತು ಪಾರ್ವತಿಯ ಬಗ್ಗೆ ಆಕ್ಷೇಪಾರ್ಹ ಅಭಿಪ್ರಾಯಗಳಿವೆ ಎಂದು ಆರೋಪಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಈ ಕುರಿತು ಎಫ್‌ಐಆರ್‌ ದಾಖಲಾಗಬೇಕು ಎಂದು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮತ್ತು ರಾಜ್ಯ ಪೊಲೀಸ್ ಮುಖ್ಯಸ್ಥರನ್ನು ಅವರು ಟ್ವೀಟ್‌ ಮೂಲಕ ಒತ್ತಾಯಿಸಿರುವುದಾಗಿ ಕಾರ್ಯಕ್ರಮ ಸಂಘಟಕರು ಶನಿವಾರ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಎಫ್‌ಐಆರ್ ದಾಖಲಿಸುವ ಬಗ್ಗೆ ನಿರ್ಧರಿಸುವ ಮೊದಲು ಪುಸ್ತಕವನ್ನು ಓದುತ್ತೇವೆ ಎಂದು ಪೊಲೀಸರು ಪ್ರತಿಕ್ರಿಯೆ ನೀಡಿದ್ದಾರೆ.

ವಿಷಯ ಬೆಳಕಿಗೆ ಬರುತ್ತಿದ್ದಂತೆ ಪ್ರತಿಕ್ರಿಯೆ ನೀಡಿರುವ ಗೀತಾಂಜಲಿ ಶ್ರೀ, “ನನಗೆ ನೋವಾಗಿದ್ದು, ಸದ್ಯಕ್ಕೆ ಯಾವುದೇ ಸಾರ್ವಜನಿಕ ಕಾರ್ಯಕ್ರಮಗಳಿಗೆ ಹಾಜರಾಗಲು ಇಚ್ಛಿಸುವುದಿಲ್ಲ” ಎಂದು ಸಂಘಟಕರಿಗೆ ತಿಳಿಸಿದ್ದಾರೆ.

ಹತ್ರಾಸ್‌ನಲ್ಲಿ ದಾಖಲಾಗಿರುವ ದೂರಿನ ಕುರಿತು ಸ್ಥಳೀಯ ಮಾಧ್ಯಮಗಳು ಬುಧವಾರ ವರದಿ ಮಾಡಿದ ನಂತರ, ದೆಹಲಿಯ ಜವಾಹರಲಾಲ್ ನೆಹರೂ ವಿಶ್ವವಿದ್ಯಾಲಯದಲ್ಲಿ ನಡೆದ ಸನ್ಮಾನ ಕಾರ್ಯಕ್ರಮಕ್ಕೆ ಕೆಲವು ಸಮಾಜ ವಿರೋಧಿಗಳು ಅಡ್ಡಿಪಡಿಸಲು ಪ್ರಯತ್ನಿಸಿರುವುದಾಗಿ ಅವರು ಮಾಹಿತಿ ನೀಡಿದ್ದಾರೆ.

“ನನ್ನ ಕಾದಂಬರಿಯನ್ನು ಬಲವಂತವಾಗಿ ರಾಜಕೀಯ ವಿವಾದಕ್ಕೆ ಎಳೆಯಲಾಗುತ್ತಿದೆ. ಕಾದಂಬರಿಯಲ್ಲಿ ಮಾಡಲಾದ ಉಲ್ಲೇಖಗಳು ಭಾರತೀಯ ಪುರಾಣಗಳ ಅವಿಭಾಜ್ಯ ಅಂಗವಾಗಿವೆ. ಈ ವಿವರಣೆಗಳ ಬಗ್ಗೆ ಆಕ್ಷೇಪವಿರುವವರು ಹಿಂದೂ ಪುರಾಣ ಗ್ರಂಥಗಳನ್ನು ನ್ಯಾಯಾಲಯದಲ್ಲಿ ಪ್ರಶ್ನಿಸಬೇಕು” ಎಂದು ಗೀತಾಂಜಲಿ ಪ್ರತಿಕ್ರಿಯೆ ನೀಡಿದ್ದಾರೆ.

ಗೀತಾಂಜಲಿಯವರ ‘ರೆತ್‌ ಸಮಾಧಿ’ ಕೃತಿಯನ್ನು ಡೈಸಿ ರಾಕ್‌ವೆಲ್ ಅವರು ‘ಟಾಂಬ್ ಆಫ್ ಸ್ಯಾಂಡ್’ ಎಂದು ಇಂಗ್ಲಿಷ್‌ಗೆ ಅನುವಾದಿಸಿದ್ದಾರೆ. ಇದು ಮೇ ತಿಂಗಳಲ್ಲಿ ಅಂತಾರಾಷ್ಟ್ರೀಯ ಬೂಕರ್ ಪ್ರಶಸ್ತಿ 2022 ಅನ್ನು ಗೆದ್ದಿದೆ. ಅನುವಾದಗೊಂಡು ಬೂಕರ್‌ ಪ್ರಶಸ್ತಿಯನ್ನು ಗೆದ್ದ ಮೊದಲ ಹಿಂದಿ ಕಾದಂಬರಿ, ಭಾರತ ಮತ್ತು ದಕ್ಷಿಣ ಏಷ್ಯಾದಿಂದ ಆಯ್ಕೆಯಾದ ಮೊದಲ ಕಾದಂಬರಿ ಎಂಬ ಹೆಗ್ಗಳಿಕೆಗೂ ಈ ಕೃತಿ ಪಾತ್ರವಾಗಿದೆ.

ಸಾಂಸ್ಕೃತಿಕ ಸಂಸ್ಥೆಗಳಾದ ರಂಗಲೀಲಾ ಮತ್ತು ಆಗ್ರಾ ಥಿಯೇಟರ್ ಕ್ಲಬ್ ಅಭಿನಂದನಾ ಕಾರ್ಯಕ್ರಮವನ್ನು ಆಯೋಜಿಸಿದ್ದವು. ಆಗ್ರಾದ ಕ್ಲಾರ್ಕ್ಸ್ ಶಿರಾಜ್ ಹೋಟೆಲ್‌ನಲ್ಲಿ ಶನಿವಾರ ಸಂಜೆ ಕಾರ್ಯಕ್ರಮ ನಡೆಯಬೇಕಿತ್ತು.

ಇದನ್ನೂ ಓದಿರಿ: ಡಬ್‌‌ ಸಿನಿಮಾ ‘ಡೊಳ್ಳು’ ಸಿಂಕ್‌ಸೌಂಡ್‌ ವಿಭಾಗದಲ್ಲಿ ಆಯ್ಕೆ: ‘ರಾಷ್ಟ್ರಪ್ರಶಸ್ತಿ ಲಾಬಿ’ ರಾಜಕಾರಣದ ಕಥೆ ಇದು!

ಬಹುದೊಡ್ಡ ಗೌರವಕ್ಕೆ ಪಾತ್ರರಾಗಿರುವ ಗೀತಾಂಜಲಿಯವರನ್ನು ಉತ್ತರಪ್ರದೇಶದ ಮುಖ್ಯಮಂತ್ರಿ ಆದಿತ್ಯನಾಥ್ ಅವರು ಆದರ್ಶಯುತವಾಗಿ ಗೌರವಿಸಬೇಕಿತ್ತು ಎಂದು ರಂಗಲೀಲಾ ವಕ್ತಾರ ರಾಮಭಾರತ್ ಉಪಾಧ್ಯಾಯ ಅವರು ಸ್ಕ್ರಾಲ್‌ ಜಾಲತಾಣಕ್ಕೆ ಪ್ರತಿಕ್ರಿಯಿಸಿದ್ದಾರೆ.

“ಉತ್ತರ ಪ್ರದೇಶ ಗೀತಾಂಜಲಿಯವರ ಜನ್ಮಸ್ಥಳ. ಸರ್ಕಾರ, ಮುಖ್ಯಮಂತ್ರಿಯವರು ಗೀತಾಂಜಲಿಯವರನ್ನು ಸನ್ಮಾನಿಸಬೇಕಿತ್ತು. ಬದಲಿಗೆ ನಾವು ಈ ಕಾರ್ಯಕ್ರಮವನ್ನು ರದ್ದುಗೊಳಿಸಬೇಕಾಗಿದೆ. ಇದು ನಾಚಿಕೆಗೇಡಿನ ವಿಷಯ” ಎಂದು ವಿಷಾದಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಹೊತ್ತಿ ಉರಿಯುತ್ತಿರುವ ಮಣಿಪುರ’: ಶತಮಾನದ ಬೆಂಕಿಗೆ ತುಪ್ಪ ಸುರಿದ ಬಿಜೆಪಿಯ ಕೋಮುರಾಜಕಾರಣ

ಭಾರತದ ಈಶಾನ್ಯ ರಾಜ್ಯ ಮಣಿಪುರ ಅಕ್ಷರಶಃ ಹೊತ್ತಿ ಉರಿಯುತ್ತಿದೆ. ಶತಮಾನಗಳಿಂದ ಹೊಗೆಯಾಡುತ್ತಿದ್ದ ಹಗೆತನಕ್ಕೆ ಕೋಮುರಾಜಕಾರಣದ ಬಣ್ಣ ಬಳಿದ ಬಿಜೆಪಿ ಮತ್ತು ಕೇಂದ್ರ ಸರ್ಕಾರ ಮಣಿಪುರದ ಜನರತ್ತ ತಿರುಗಿಯೂ ನೋಡುತ್ತಿಲ್ಲ. 2023ರಲ್ಲಿ ಭುಗಿಲೆದ್ದ ಉದ್ವಿಗ್ನತೆ...

ಮಧ್ಯಪ್ರದೇಶ| ದಲಿತ ದಂಪತಿಗೆ ಹನುಮಾನ್ ದೇಗುಲ ಪ್ರವೇಶ ನಿರಾಕರಣೆ; ಸಾಮಾಜಿಕ ಬಹಿಷ್ಕಾರ

ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯ ಹನುಮಾನ್ ದೇವಸ್ಥಾನಕ್ಕೆ ನವವಿವಾಹಿತ ದಲಿತ ದಂಪತಿಗೆ ಪ್ರವೇಶ ನಿರಾಕರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಇದು ಗ್ರಾಮದಲ್ಲಿ ಉದ್ವಿಗ್ನತೆಯನ್ನು ಉಂಟುಮಾಡಿದೆ. ಈ ಘಟನೆಯು ಜಾತಿ ಆಧಾರಿತ ತಾರತಮ್ಯದ ಕುರಿತು ಕಳವಳ...

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...