Homeಕರ್ನಾಟಕಸಿಎಂ ಪುತ್ರ ವಿಜಯೇಂದ್ರ ವಿರುದ್ಧ ದೂರು; ತನಿಖೆಗೆ ಆಗ್ರಹಿಸಿ ರಾಜ್ಯಪಾಲರಿಗೆ ಪತ್ರ!

ಸಿಎಂ ಪುತ್ರ ವಿಜಯೇಂದ್ರ ವಿರುದ್ಧ ದೂರು; ತನಿಖೆಗೆ ಆಗ್ರಹಿಸಿ ರಾಜ್ಯಪಾಲರಿಗೆ ಪತ್ರ!

ರಾಜ್ಯ ಸರ್ಕಾರದ ಪ್ರತೀ ಇಲಾಖೆಗಳಲ್ಲೂ ವಿಜಯೇಂದ್ರ ಮಧ್ಯಪ್ರವೇಶಿಸಿ ಹಸ್ತಕ್ಷೇಪ ಮಾಡುತ್ತಿದ್ದಾರೆ. ಇವರು ಏನನ್ನು ಬಯಸುತ್ತಾರೋ ಅದೇ ರೀತಿ ಆಡಳಿತ ನಡೆಯುತ್ತಿದ್ದು, ವಿಜಯೇಂದ್ರ ಅಕ್ಷರಶಹ 'ಪರ್ಯಾಯ ಮುಖ್ಯಮಂತ್ರಿ'ಯಂತೆ ವರ್ತಿಸುತ್ತಿದ್ದಾರೆ

- Advertisement -
- Advertisement -

ರಾಜ್ಯದ ಆಡಳಿತದಲ್ಲಿ ಹಸ್ತಕ್ಷೇಪ ಮಾಡುತ್ತಿದ್ದಾರೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪನವರ ಮಗ ವಿಜಯೇಂದ್ರ ವಿರುದ್ಧ ‘ಜನ ಸಾಮಾನ್ಯರ ಪಕ್ಷ’ವು ರಾಜ್ಯಪಾಲರಿಗೆ ದೂರು ಸಲ್ಲಿಸಿದ್ದು, ವಿಜಯೇಂದ್ರ ಅಸಾಂವಿಧಾನಿಕವಾಗಿ ರಾಜ್ಯ ಸರ್ಕಾರದ ಮೇಲೆ ಹಿಡಿತ ಸಾಧಿಸುತ್ತಿದ್ದಾರೆ ಎಂದು ಆರೋಪಿಸಲಾಗಿದೆ.

ಈ ಕುರಿತು ತನಿಖೆ ನಡೆಸುವಂತೆ ಒತ್ತಾಯಿಸಿ ಪಕ್ಷದ ಮುಖಂಡರಾದ ಯಲ್ಲಪ್ಪ ಹೆಗಡೆ ರಾಜ್ಯಪಾಲರಾದ ವಾಜುಭಾಯ್ ವಾಲಾ ಅವರಿಗೆ ಪತ್ರ ಬರೆದಿದ್ದಾರೆ.

ಇದನ್ನೂ ಓದಿ: ಸಿಎಂ ಮಗ ವಿಜಯೇಂದ್ರ ಮೇಲೆ FIR ದಾಖಲಿಸದ ಇನ್ಸ್‌ಪೆಕ್ಟರ್ ವಿರುದ್ದ ನ್ಯಾಯಾಲಯದಲ್ಲಿ ದೂರು

ಇದನ್ನೂ ಓದಿ: ವಿಜಯೇಂದ್ರರ ವಿರುದ್ಧದ ತನಿಖೆಗೆ ಪೊಲೀಸರ ನಕಾರ: ಕೋರ್ಟ್‌ ಮೆಟ್ಟಿಲೇರಲಿರುವ ಜಸಂಪ!

ಈ ಪತ್ರದಲ್ಲಿ, “ಪ್ರಸ್ತುತ ದಿನಗಳಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಸೇರಿದಂತೆ ಅವರ ಸಚಿವ ಸಂಪುಟವು ರಾಜ್ಯದ ಆಡಳಿತ ಮತ್ತು ನಿರ್ಧಾರಕ್ಕೆ ಸಂಬಂಧಿಸಿದ ವಿಷಯಗಳಲ್ಲಿ ಅಧಿಕಾರ ಕಳೆದುಕೊಂಡಿದೆ. ರಾಜ್ಯ ಸರ್ಕಾರದ ಪ್ರತೀ ಇಲಾಖೆಗಳಲ್ಲೂ ವಿಜಯೇಂದ್ರ ಮಧ್ಯಪ್ರವೇಶಿಸಿ ಹಸ್ತಕ್ಷೇಪ ಮಾಡುತ್ತಿದ್ದಾರೆ. ಇವರು ಏನನ್ನು ಬಯಸುತ್ತಾರೋ ಅದೇ ರೀತಿ ಆಡಳಿತ ನಡೆಯುತ್ತಿದ್ದು, ಇವರು ಅಕ್ಷರಶಹ ‘ಪರ್ಯಾಯ ಮುಖ್ಯಮಂತ್ರಿ’ಯಂತೆ ವರ್ತಿಸುತ್ತಿದ್ದಾರೆ” ಎಂದು ರಾಜ್ಯಪಾಲರಿಗೆ ಬರೆದ ಪತ್ರದಲ್ಲಿ ಆರೋಪಿಸಲಾಗಿದೆ.

“ಶಿರಾ ಉಪ ಚುನಾವಣೆ ಸಂದರ್ಭದಲ್ಲಿ ವಿಜಯೇಂದ್ರ ನೀಡಿದ್ದ ಭರವಸೆಯಂತೆ ‘ಕಾಡುಗೊಲ್ಲ ಅಭಿವೃದ್ಧಿ ನಿಗಮ’ ಸ್ಥಾಪಿಸಲಾಗಿದೆ. ಈಗ ಮರಾಠರ ಅಭಿವೃದ್ಧಿ ಪ್ರಾಧಿಕಾರ ಮತ್ತು ವೀರಶೈವ–ಲಿಂಗಾಯತ ಅಭಿವೃದ್ಧಿ ನಿಗಮಗಳ ಸ್ಥಾಪನೆಯ ನಿರ್ಧಾರವೂ ಬಿ.ವೈ.ವಿಜಯೇಂದ್ರ ಅವರ ಕನಸಿನ ಯೋಜನೆಯಾಗಿದೆ. ಇದು ಅವರು ರಾಜ್ಯ ಸರ್ಕಾರದಲ್ಲಿ ಹಸ್ತಕ್ಷೇಪ ಮಾಡುತ್ತಿರುವುದಕ್ಕೆ ಪ್ರಮುಖ ಸಾಕ್ಷಿಗಳು” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಸುಲಿಗೆ, ವಸೂಲಿ ದಂಧೆ ಆರೋಪ: ಯಡಿಯೂರಪ್ಪ ಪುತ್ರ ಬಿ.ವೈ ವಿಜಯೇಂದ್ರ ವಿರುದ್ಧ ಕ್ರಿಮಿನಲ್ ದೂರು!

ಇದನ್ನೂ ಓದಿ: ಉಪಚುನಾವಣೆ: ಗಾಳಿ ಬೀಸಿದತ್ತ ಹೋದ ಅಲೆಯಷ್ಟೇ ಅಲ್ಲ, ಆಡಳಿತದ ವಿರುದ್ಧದ ಭಾವನೆ ಘನೀಭವಿಸಿಲ್ಲ

“ಯಡಿಯೂರಪ್ಪ ಸಂಪುಟದ ಸಚಿವರೆಲ್ಲರೂ ಬಿ.ವೈ.ವಿಜಯೇಂದ್ರ ಅವರ ಭಯದಲ್ಲಿ ಕೆಲಸ ಮಾಡುತ್ತಿದ್ದಾರೆ. ಹಾಗಾಗಿ ತಕ್ಷಣವೇ ಯಡಿಯೂರಪ್ಪ ಅವರಿಂದ ರಾಜೀನಾಮೆ ಪಡೆಯಬೇಕು. ಸಂವಿಧಾನಕ್ಕೆ ವಿರುದ್ಧವಾಗಿ ವಿಜಯೇಂದ್ರ ಆಡಳಿತದಲ್ಲಿ ಹಸ್ತಕ್ಷೇಪ ನಡೆಸಿರುವ ಕುರಿತು ಉನ್ನತಮಟ್ಟದ ತನಿಖೆಗೆ ಆದೇಶಿಸಬೇಕು” ಎಂದು ಒತ್ತಾಯಿಸಿದ್ದಾರೆ.

ಈ ದೂರಿನ ಪ್ರತಿಗಳನ್ನು ರಾಷ್ಟ್ರಪತಿ ರಾಮನಾಥ್‌ ಕೋವಿಂದ್‌, ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರಿಗೂ ಕಳುಹಿಸಲಾಗಿದೆ.


ಇದನ್ನೂ ಓದಿ: ಸಿದ್ದರಾಮಯ್ಯ-ಡಿಕೆಶಿ ಜಗಳ ಶೀಘ್ರವೇ ಬೀದಿಗೆ – ಬಿಜೆಪಿ ರಾಜ್ಯಾಧ್ಯಕ್ಷ ಕಟೀಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...

ಮಹಿಳಾ ಮೀಸಲು ಮಸೂದೆ 2023ರಲ್ಲೇ ಗೆದ್ದಿದೆ, ಈಗ ಸೋತಿರುವುದು ಮೋದಿ ಸರ್ಕಾರ

ಮೋದಿ ಸರ್ಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದೆ ಎಂಬುವುದು ದೇಶದಲ್ಲಿ ಪ್ರಸ್ತುತ ದೊಡ್ಡ ಚರ್ಚೆಯ ವಿಷಯವಾಗಿದೆ. ಕಾಂಗ್ರೆಸ್‌ ನೇತೃತ್ವದಲ್ಲಿ ವಿಪಕ್ಷಗಳು ಮಸೂದೆಯನ್ನು ಸೋಲಿಸುವ ಮೂಲಕ ದೇಶದ ಮಹಿಳೆಯರ ಸಬಲೀಕರಣಕ್ಕೆ...

ಕ್ಯಾಂಪಸ್ ಜಾತಿ ತಾರತಮ್ಯ ವಿರುದ್ಧದ ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ರಾಜ್ಯ ಸಚಿವ ಸಂಪುಟ ಗುರುವಾರ (ಏ.16) ರಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ'ಗೆ ಅನುಮೋದನೆ ನೀಡಿತು. ಜೊತೆಗೆ, ಪ್ರಮುಖ ಮೂಲಸೌಕರ್ಯ ಮತ್ತು...