Homeಕರ್ನಾಟಕಸಿಎಂ ಮಗ ವಿಜಯೇಂದ್ರ ಮೇಲೆ FIR ದಾಖಲಿಸದ ‌‌DCP ವಿರುದ್ದ ದೂರು ದಾಖಲು!

ಸಿಎಂ ಮಗ ವಿಜಯೇಂದ್ರ ಮೇಲೆ FIR ದಾಖಲಿಸದ ‌‌DCP ವಿರುದ್ದ ದೂರು ದಾಖಲು!

ದೂರು ದಾಖಲಾಗಿ 120 ಗ೦ಟೆಗಳಾದರೂ FIR‌ ದಾಖಲಾಗದೆ ಇರುವುದಕ್ಕೆ, ದೂರುದಾರ ಜನಾಧಿಕಾರ ಸ೦ಘರ್ಷ ಪರಿಷತ್‌ ಐಪಿಸಿ ಕಲ೦ 217 ರ ಪ್ರಕಾರ ಠಾಣೆಯ ಇನ್ಸ್‌ಪೆಕ್ಟರ್‌ ಕೃಷ್ಣಮೂರ್ತಿ ಹಾಗೂ ಎಂ. ಎನ್. ಅನುಚೇತ್ ವಿರುದ್ಧವೇ ದೂರು ದಾಖಲಿಸಿದೆ.

- Advertisement -
- Advertisement -

ಮುಖ್ಯಮಂತ್ರಿ ಯಡಿಯೂರಪ್ಪರ ಮಗ ಬಿ.ವೈ ವಿಜಯೇಂದ್ರ ಮತ್ತು ಮೊಮ್ಮಗ ಶಶಿಧರ ಮರಡಿಯವರ ವಿರುದ್ಧ ಸುಲಿಗೆ ಮತ್ತು ವಸೂಲಿ ದಂಧೆ ನಡೆಸಿದ್ದಾರೆ ಎಂದು ಆರೋಪಿಸಿ ದಾಖಲಿಸಲಾಗಿದ್ದ ದೂರನ್ನಾಧರಿಸಿ FIR ದಾಖಲಿಸದ ಬೆಂಗಳೂರಿನ ಶೇಷಾದ್ರಿಪುರಂ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್‌ ಕೃಷ್ಣಮೂರ್ತಿ ಮತ್ತು ಕೇಂದ್ರ ವಿಭಾಗದ DCP ಎಂ. ಎನ್. ಅನುಚೇತ್ ವಿರುದ್ದ ದೂರು ದಾಖಲಾಗಿದೆ.

ಮುಖ್ಯಮಂತ್ರಿ ಕುಟುಂಬದ ಸದಸ್ಯರು ಸುಲಿಗೆ ಮತ್ತು ವಸೂಲಿ ದಂಧೆ ಮಾಡಿದ್ದಾರೆ ಎಂದು ಜನಾಧಿಕಾರ ಸ೦ಘರ್ಷ ಪರಿಷತ್‌ನ ಆದರ್ಶ್ ಆರ್ ಅಯ್ಯರ್, ಪ್ರಕಾಶ್ ಬಾಬು ಬಿ.ಕೆ, ವಿಶ್ವನಾಥ್‌ ಬಿ.ವಿಯವರು ಸೆಪ್ಟಂಬರ್ 25ರಂದು ದೂರು ದಾಖಲಿಸಿದ್ದರು. ಆದರೆ ದೂರು ದಾಖಲಾಗಿ 120 ಗ೦ಟೆಗಳಾದರೂ FIR‌ ದಾಖಲಾಗಿಲ್ಲ. ಹೀಗಾಗಿ ದೂರುದಾರರು‌ ಐಪಿಸಿ ಕಲ೦ 217 ರ ಪ್ರಕಾರ ಠಾಣೆಯ ಇನ್ಸ್‌ಪೆಕ್ಟರ್‌ ಕೃಷ್ಣಮೂರ್ತಿ ಹಾಗೂ ಡಿಸಿಪಿ ಎಂ. ಎನ್. ಅನುಚೇತ್ ವಿರುದ್ಧವೇ ದೂರು ದಾಖಲಿಸಿದ್ದಾರೆ.

ಇದನ್ನೂ ಓದಿ: ಸುಲಿಗೆ, ವಸೂಲಿ ದಂಧೆ ಆರೋಪ: ಯಡಿಯೂರಪ್ಪ ಪುತ್ರ ಬಿ.ವೈ ವಿಜಯೇಂದ್ರ ವಿರುದ್ಧ ಕ್ರಿಮಿನಲ್ ದೂರು!

ಐಪಿಸಿ ಕಲ೦ 217 ರ ಪ್ರಕಾರ, ಯಾವುದೇ ಸರ್ಕಾರಿ ನೌಕರರು ಕಾನೂನಿನ ನಿರ್ದೇಶನ ಉಲ್ಲಂಘಿಸಿ ಯಾರನ್ನಾದರೂ ಶಿಕ್ಷೆಯಿಂದ ರಕ್ಷಿಸಲು ತಡೆದರೆ ಸ೦ಜ್ಞೆಯ ಅಪರಾಧ (Cognizable Offence) ಆಗಿದೆ.

ಸಂಜ್ಞೆಯ ಅಪರಾಧದಲ್ಲಿ ಪೊಲೀಸ್ ಅಧಿಕಾರಿಯು ನ್ಯಾಯಾಲಯದ ಅನುಮತಿಯಿಲ್ಲದೆ FIR ದಾಖಲಿಸಬಹುದಾಗಿದೆ. ಕೊಲೆ, ಕಳ್ಳತನ, ದರೋಡೆ, ಸುಲಿಗೆ ಹಾಗೂ ಅತ್ಯಾಚಾರದಂತ ಅಪರಾಧಗಳು ಸಂಜ್ಞೆಯ ಅಪರಾಧದ ಅಡಿಯಲ್ಲಿ ಬರುತ್ತದೆ.

ಅಷ್ಟೇ ಅಲ್ಲದೆ ದೂರಿನಲ್ಲಿರುವ ಮಾಹಿತಿಯು ಸ೦ಜ್ಞೆಯ ಅಪರಾಧವಾಗಿದೆ ಎಂದು ತಿಳಿದು ಬಂದರೆ ಸಿಆರ್‌ಪಿಸಿ ಸೆಕ್ಷನ್‌ 154 ರಡಿಯಲ್ಲಿ ಠಾಣಾಧಿಕಾರಿಗಳು ಕಡ್ಡಾಯವಾಗಿ FIR‌ ದಾಖಲಿಸಬೇಕಾಗುತ್ತದೆ. ಇ೦ತಹ ಸ೦ದರ್ಭದಲ್ಲಿ ಪೂರ್ವ ವಿಚಾರಣೆಯನ್ನು ಮಾಡಲು ಪೊಲೀಸರಿಗೆ ಅವಕಾಶವಿಲ್ಲ. ಹಾಗಾಗಿ ಪ್ರಸ್ತುತ ಪ್ರಕರಣದಲ್ಲಿ ಪೊಲೀಸರು ಸಿಆರ್‌ಪಿಸಿ ಸೆಕ್ಷನ್‌‌ 154 ಅನ್ನು ಉಲ್ಲಂಘಿಸಿದ್ದಾರೆ ಎಂಬ ಆರೋಪಗಳಿವೆ.

ಇದನ್ನೂ ಓದಿ: ಸಿಎಂ ಪುತ್ರನ ಭ್ರಷ್ಟಾಚಾರದ ಬಗ್ಗೆ ನಿರಂತರ ವರದಿ ಮಾಡಿದ ಪವರ್‌ ಟಿವಿ MD ಮನೆ ಮೇಲೆ ಪೊಲೀಸರ ದಾಳಿ!

ಜನಾಧಿಕಾರ ಸಂಘರ್ಷ ಪರಿಷತ್ ಸೆಪ್ಟಂಬರ್ 25ರಂದು, ಬಿ.ವೈ ವಿಜಯೇಂದ್ರ ಮತ್ತು ಶಶಿಧರ ಮರಡಿಯವರು ರಾಮಲಿಂಗಂ ಕನ್ಸ್‌ಸ್ಟ್ರಕ್ಸನ್‌ನ ಚಂದ್ರಕಾಂತ್‌ ಎಂಬುವವರಿಂದ ಹಣ ನೀಡದಿದ್ದರೆ ನಿಮ್ಮ ಬಿಡಿಎ ಪ್ರಾಜೆಕ್ಟ್ ರದ್ದುಗೊಳಿಸುವುದಾಗಿ ಬೆದರಿಕೆ ಹಾಕಿ ಆರ್‌ಟಿಜಿಎಸ್ ಮೂಲಕ ಅಪಾರ ಪ್ರಮಾಣದ (7 ಕೋಟಿ ರೂಗಳು) ಹಣವನ್ನು ಸುಲಿಗೆ ಮಾಡಿದ್ದಾರೆ ಎಂದು ಹಲವಾರು ಸಾಕ್ಷಿಗಳ ಸಮೇತ ಬೆಂಗಳೂರಿನ ಶೇಷಾದ್ರಿಪುರಂ ಪೊಲೀಸ್ ಠಾಣೆಯಲ್ಲಿ ಕ್ರಿಮಿನಲ್ ದೂರು ದಾಖಲಿಸಿತ್ತು.

ವಿಡಿಯೋ ನೋಡಿ: ಸಿಎಂ ಮಗನ ಭ್ರಷ್ಟಾಚಾರ ಬಯಲಿಗೆಳೆದಿದ್ದಕ್ಕೆ ಪವರ್‌ ಟಿವಿಯ ಪ್ರಸಾರ ತಡೆ: ಪವರ್‌ ಟಿವಿ ಇದಕ್ಕೆ ಬಗ್ಗುವುದಿಲ್ಲ. ನಾವು ಕಾನೂನಾತ್ಮವಾಗಿ ಹೋರಾಡುತ್ತೇವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...