Homeಮುಖಪುಟಹೆಡ್ ಬುಷ್ ಚಿತ್ರತಂಡದ ವಿರುದ್ಧ ದೂರು: ಡಾಲಿ ಧನಂಜಯ್ ಪರ ನಿಂತ ಸಿನಿಮಾ ಪ್ರೇಮಿಗಳು

ಹೆಡ್ ಬುಷ್ ಚಿತ್ರತಂಡದ ವಿರುದ್ಧ ದೂರು: ಡಾಲಿ ಧನಂಜಯ್ ಪರ ನಿಂತ ಸಿನಿಮಾ ಪ್ರೇಮಿಗಳು

- Advertisement -
- Advertisement -

ಉದಯೋನ್ಮುಖ ನಟ ಡಾಲಿ ಧನಂಜಯ್ ನಿರ್ಮಿಸಿ ಅಭಿನಯಿಸಿರುವ ಹೆಡ್ ಬುಷ್ ಚಿತ್ರದ ಕುರಿತು ಮೆಚ್ಚುಗೆಯ ಮಾತುಗಳು ಕೇಳಿಬರುತ್ತಿವೆ. ಬಾಕ್ಸ್ ಆಫೀಸ್‌ನಲ್ಲಿಯೂ ಕೂಡ ಚಿತ್ರ ಒಳ್ಳೆಯ ಕಲೆಕ್ಷನ್ ಮಾಡುತ್ತಿದೆ ಎಂಬ ವರದಿಗಳಿವೆ. ಈ ಬೆನ್ನಲ್ಲೆ ಚಿತ್ರದಲ್ಲಿ ವೀರಗಾಸೆ ಕಲಾವಿದರ ಕಲಾವಿದರ ಮೇಲೆ ಹಲ್ಲೆ ನಡೆಸುವುದನ್ನು ತೋರಿಸಲಾಗಿದೆ ಮತ್ತು ಐತಿಹಾಸಿಕ ಕರಗಕ್ಕೆ ಅಪಮಾನ ಮಾಡಲಾಗಿದೆ ಎಂದು ವಿಶ್ವ ಹಿಂದೂ ಪರಿಷತ್ ಮತ್ತು ಬಜರಂಗದಳ ಕಾರ್ಯಕರ್ತರು ದೂರು ನೀಡಿದ್ದಾರೆ.

ಚಿತ್ರದುರ್ಗದ ಹಿರಿಯೂರು ನಗರ ಪೊಲೀಸ್ ಠಾಣೆಯಲ್ಲಿ ವೀರಭದ್ರಸ್ವಾಮಿಗೆ ಅಪಮಾನ ಮಾಡಲಾಗಿದೆ ಎಂದು ಹೆಡ್ ಬುಷ್ ಚಿತ್ರ ತಂಡದ ವಿರುದ್ಧ ದೂರು ಸಲ್ಲಿಸಲಾಗಿದೆ.

ಈ ಕುರಿತು ಪ್ರತಿಕ್ರಿಯಿಸಿರುವ ಡಾಲಿ ಧನಂಜಯ್, ಕರಗ ಮತ್ತು ವೀರಗಾಸೆ ಎರಡಕ್ಕೂ ಚಿತ್ರದಲ್ಲಿ ಅಪಮಾನ ಮಾಡಲಾಗಿದೆ ಎಂಬ ಆರೋಪವನ್ನು ತಳ್ಳಿಹಾಕಿದ್ದಾರೆ. “ನಾನು ಸ್ವತಃ ವೀರಭದ್ರಸ್ವಾಮಿಯ ಭಕ್ತನಾಗಿದ್ದೇನೆ. ನಮ್ಮ ಚಿತ್ರದಲ್ಲಿ ವೀರಗಾಸೆಗೆ ಎಲ್ಲಿಯೂ ಅವಮಾನ ಮಾಡಿಲ್ಲ. ಅಸಲಿ ವೀರಗಾಸೆ ಕಲಾವಿದರಿಗೂ, ಕಲಾವಿದರ ವೇಷ ತೊಟ್ಟು ಜಯರಾಜ್ ಮೇಲೆ ದಾಳಿ ಮಾಡುವ ದುಷ್ಕರ್ಮಿಗಳಿಗೂ ಸ್ಪಷ್ಟ ವ್ಯತ್ಯಾಸಗಳನ್ನು ಚಿತ್ರದಲ್ಲಿ ತೋರಿಸಿದ್ದೇವೆ. ಕರಗವನ್ನು ಕೂಡ ತುಂಬಾ ಭಕ್ತಿಯಿಂದ ಚಿತ್ರಿಸುವ ಪ್ರಯತ್ನ ಮಾಡಿದ್ದೇವೆ. ನಮ್ಮ ಬೆಂಗಳೂರು ಕರಗವನ್ನು ವಿಜೃಂಭಣೆಯಿಂದ ತೋರಿಸುವ ಸಲುವಾಗಿ ಸಾಕಷ್ಟು ಶ್ರಮ ವಹಿಸಿದ್ದೇವೆ. ಬೇಕಂತಲೇ ನನ್ನನ್ನು ಗುರಿಯಾಗಿಸಿ ಈ ದಾಳಿಗಳು ನಡೆಯುತ್ತಿವೆ” ಎಂದು ಹೇಳಿದ್ದಾರೆ.

ಚಿತ್ರದ ವಿರುದ್ಧ ಅಪಸ್ವರ ಕೇಳಿಬಂದ ಕೂಡಲೇ ಹಲವಾರು ಸಿನಿಮಾ ನಿರ್ದೇಶಕರು, ತಂತ್ರಜ್ಞರು ಚಿತ್ರತಂಡದ ಪರ ನಿಂತಿದ್ದಾರೆ. IStanWithDhananjay ಹ್ಯಾಷ್‌ಟ್ಯಾಗ್ ಬಳಸಿ ಧನಂಜಯ್‌ರವರಿಗೆ ಬೆಂಬಲ ಘೋಷಿಸಿದ್ದಾರೆ.

ಯಶ್ , ರಿಷಭ್ ಶೆಟ್ಟಿ ಅವರಂತೆ ಡಾಲಿ ಧನಂಜಯ್ ಕೂಡಾ ಇಡೀ ಸಿನಿಮಾ ಉದ್ಯಮಕ್ಕೆ ತಿರುವು ಕೊಡಬಲ್ಲ ತುಡಿತ ಮತ್ತು ಸಾಮರ್ಥ್ಯವಿರುವ ಕ್ರಿಯಾಶೀಲ, ಸೃಜನಶೀಲ ಯುವ ನಟ. ಈಗಾಗಲೇ ಉದ್ಯಮಕ್ಕೆ ಕಾಲಿಡುವ ಹೊಸ ಪ್ರತಿಭೆಗಳಿಗೆ ತಮ್ಮ ಬ್ಯಾನರ್ ಅಡಿಯಲ್ಲಿ ಸಿನಿಮಾ ನಿರ್ಮಾಣಕ್ಕೆ ಅವಕಾಶ ನೀಡುವ ಹೆಜ್ಜೆಯಿಟ್ಟಿದ್ದಾರೆ. ಇದೀಗ ಪ್ರದರ್ಶನ ಗೊಳ್ಳುತ್ತಿರುವ ಅವರ ಹೆಡ್ ಬುಷ್ ಚಿತ್ರವು ಉತ್ತಮವಾಗಿದ್ದು ಯಶಸ್ವಿ ಪ್ರದರ್ಶನ ಕಾಣುತ್ತಿದೆ. ಸಿನಿಮಾ ಒಂದು ಕಲೆ. ನಿರ್ದೇಶಕನ ಸೃಜನಶೀಲ ಅಭಿವ್ಯಕ್ತಿಯ ಮಾಧ್ಯಮ‌. ಬಣ, ಪಂಥಗಳ ಆಧಾರದ ದ್ವೇಷದಲ್ಲಿ ಭಾವನೆಗೆ ಧಕ್ಕೆ ಎಂಬ ಹುಸಿ ಆರೋಪದಡಿ ಸಿನಿಮಾವನ್ನು ವಿರೋಧಿಸುವುದು ತಪ್ಪು. ಜನರಲ್ ಆಗಿ‌, ಗೈಡ್ ಲೈನ್ಸ್ ಅನುಸಾರ ಅಸಮ್ಮತ ವಿಚಾರಗಳನ್ನು ಸಿನಿಮಾದಲ್ಲಿ ಸೇರಿಸದಂತೆ ತಡೆಯಲು ಸರ್ಕಾರವೇ ನೇಮಿಸಿರುವ ಸೆನ್ಸಾರ್ ಮಂಡಳಿ ಇದೆ” ಎಂದು ಗೀತರಚನೆಕಾರ ಕವಿರಾಜ್ ಅಭಿಪ್ರಾಯಪಟ್ಟಿದ್ದಾರೆ.

ವೀರಗಾಸೆ ಕುಣಿತದವರ ಮಾರುವೇಷದಲ್ಲಿ ಬಂದವರನ್ನು ಥಳಿಸುವ ದೃಶ್ಯಗಳ ಕುರಿತು ಧನಂಜಯ್ ಅವರ ವಿವರಣೆಯು ಸಮಂಜಸವಾಗಿದೆ. ಧನಂಜಯ್ ಕನ್ನಡ ಚಿತ್ರರಂಗದ ಆಸ್ತಿ. ಧನಂಜಯ್ ಸೂಕ್ಷ್ಮ ಸಂವೇದನೆಯುಳ್ಳ ವಿಚಾರಶೀಲ, ಕಲಾ ಪ್ರೇಮಿ. ಅವರಿಂದ ಯಾವ ಕಲೆಗೂ ಅಪಚಾರ ಆಗಿಲ್ಲ ,ಆಗುವುದಿಲ್ಲ ಎಂಬ ನಂಬಿಕೆ ನಮಗಿದೆ. ಅವರ ಸೃಜನಶೀಲ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ನಾನು ಸದಾ ಬೆಂಬಲಿಸುತ್ತೇನೆ ಎಂದು ಅವು ಫೇಸ್‌ಬುಕ್‌ನಲ್ಲಿ ಬರೆದುಕೊಂಡಿದ್ದಾರೆ.

ನೆಲದ ಬಗ್ಗೆ ಅಪಾರವಾದ ಕಾಳಜಿ, ಮನುಷ್ಯತ್ವ, ಮಾನವೀಯ ಕಾಳಜಿ ಇರುವ ಧನಂಜಯ್‌ ರವರಂತಹ ನಟರು ಕನ್ನಡ ಚಿತ್ರರಂಗಕ್ಕೆ ಹೆಚ್ಚೇ ಅವಶ್ಯಕವಾಗಿದ್ದಾರೆ. ಅವರೊಂದಿಗೆ ಕನ್ನಡ ಚಿತ್ರರಂಗ ನಿಲ್ಲಬೇಕು.
#Amwithdhananjay ಎಂದು ಖ್ಯಾತ ನಿರ್ದೇಶಕ ಮಂಸೋರೆ ಅಭಿಪ್ರಾಯಪಟ್ಟಿದ್ದಾರೆ.

ಇದನ್ನೂ ಓದಿ: ‘ಹೆಡ್‌ ಬುಷ್‌’: ಜಯರಾಜ್‌ ದಾದಾಗಿರಿಯ ದಿನಗಳ ದರ್ಶನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....