Homeಮುಖಪುಟಹೆಡ್ ಬುಷ್ ಚಿತ್ರತಂಡದ ವಿರುದ್ಧ ದೂರು: ಡಾಲಿ ಧನಂಜಯ್ ಪರ ನಿಂತ ಸಿನಿಮಾ ಪ್ರೇಮಿಗಳು

ಹೆಡ್ ಬುಷ್ ಚಿತ್ರತಂಡದ ವಿರುದ್ಧ ದೂರು: ಡಾಲಿ ಧನಂಜಯ್ ಪರ ನಿಂತ ಸಿನಿಮಾ ಪ್ರೇಮಿಗಳು

- Advertisement -
- Advertisement -

ಉದಯೋನ್ಮುಖ ನಟ ಡಾಲಿ ಧನಂಜಯ್ ನಿರ್ಮಿಸಿ ಅಭಿನಯಿಸಿರುವ ಹೆಡ್ ಬುಷ್ ಚಿತ್ರದ ಕುರಿತು ಮೆಚ್ಚುಗೆಯ ಮಾತುಗಳು ಕೇಳಿಬರುತ್ತಿವೆ. ಬಾಕ್ಸ್ ಆಫೀಸ್‌ನಲ್ಲಿಯೂ ಕೂಡ ಚಿತ್ರ ಒಳ್ಳೆಯ ಕಲೆಕ್ಷನ್ ಮಾಡುತ್ತಿದೆ ಎಂಬ ವರದಿಗಳಿವೆ. ಈ ಬೆನ್ನಲ್ಲೆ ಚಿತ್ರದಲ್ಲಿ ವೀರಗಾಸೆ ಕಲಾವಿದರ ಕಲಾವಿದರ ಮೇಲೆ ಹಲ್ಲೆ ನಡೆಸುವುದನ್ನು ತೋರಿಸಲಾಗಿದೆ ಮತ್ತು ಐತಿಹಾಸಿಕ ಕರಗಕ್ಕೆ ಅಪಮಾನ ಮಾಡಲಾಗಿದೆ ಎಂದು ವಿಶ್ವ ಹಿಂದೂ ಪರಿಷತ್ ಮತ್ತು ಬಜರಂಗದಳ ಕಾರ್ಯಕರ್ತರು ದೂರು ನೀಡಿದ್ದಾರೆ.

ಚಿತ್ರದುರ್ಗದ ಹಿರಿಯೂರು ನಗರ ಪೊಲೀಸ್ ಠಾಣೆಯಲ್ಲಿ ವೀರಭದ್ರಸ್ವಾಮಿಗೆ ಅಪಮಾನ ಮಾಡಲಾಗಿದೆ ಎಂದು ಹೆಡ್ ಬುಷ್ ಚಿತ್ರ ತಂಡದ ವಿರುದ್ಧ ದೂರು ಸಲ್ಲಿಸಲಾಗಿದೆ.

ಈ ಕುರಿತು ಪ್ರತಿಕ್ರಿಯಿಸಿರುವ ಡಾಲಿ ಧನಂಜಯ್, ಕರಗ ಮತ್ತು ವೀರಗಾಸೆ ಎರಡಕ್ಕೂ ಚಿತ್ರದಲ್ಲಿ ಅಪಮಾನ ಮಾಡಲಾಗಿದೆ ಎಂಬ ಆರೋಪವನ್ನು ತಳ್ಳಿಹಾಕಿದ್ದಾರೆ. “ನಾನು ಸ್ವತಃ ವೀರಭದ್ರಸ್ವಾಮಿಯ ಭಕ್ತನಾಗಿದ್ದೇನೆ. ನಮ್ಮ ಚಿತ್ರದಲ್ಲಿ ವೀರಗಾಸೆಗೆ ಎಲ್ಲಿಯೂ ಅವಮಾನ ಮಾಡಿಲ್ಲ. ಅಸಲಿ ವೀರಗಾಸೆ ಕಲಾವಿದರಿಗೂ, ಕಲಾವಿದರ ವೇಷ ತೊಟ್ಟು ಜಯರಾಜ್ ಮೇಲೆ ದಾಳಿ ಮಾಡುವ ದುಷ್ಕರ್ಮಿಗಳಿಗೂ ಸ್ಪಷ್ಟ ವ್ಯತ್ಯಾಸಗಳನ್ನು ಚಿತ್ರದಲ್ಲಿ ತೋರಿಸಿದ್ದೇವೆ. ಕರಗವನ್ನು ಕೂಡ ತುಂಬಾ ಭಕ್ತಿಯಿಂದ ಚಿತ್ರಿಸುವ ಪ್ರಯತ್ನ ಮಾಡಿದ್ದೇವೆ. ನಮ್ಮ ಬೆಂಗಳೂರು ಕರಗವನ್ನು ವಿಜೃಂಭಣೆಯಿಂದ ತೋರಿಸುವ ಸಲುವಾಗಿ ಸಾಕಷ್ಟು ಶ್ರಮ ವಹಿಸಿದ್ದೇವೆ. ಬೇಕಂತಲೇ ನನ್ನನ್ನು ಗುರಿಯಾಗಿಸಿ ಈ ದಾಳಿಗಳು ನಡೆಯುತ್ತಿವೆ” ಎಂದು ಹೇಳಿದ್ದಾರೆ.

ಚಿತ್ರದ ವಿರುದ್ಧ ಅಪಸ್ವರ ಕೇಳಿಬಂದ ಕೂಡಲೇ ಹಲವಾರು ಸಿನಿಮಾ ನಿರ್ದೇಶಕರು, ತಂತ್ರಜ್ಞರು ಚಿತ್ರತಂಡದ ಪರ ನಿಂತಿದ್ದಾರೆ. IStanWithDhananjay ಹ್ಯಾಷ್‌ಟ್ಯಾಗ್ ಬಳಸಿ ಧನಂಜಯ್‌ರವರಿಗೆ ಬೆಂಬಲ ಘೋಷಿಸಿದ್ದಾರೆ.

ಯಶ್ , ರಿಷಭ್ ಶೆಟ್ಟಿ ಅವರಂತೆ ಡಾಲಿ ಧನಂಜಯ್ ಕೂಡಾ ಇಡೀ ಸಿನಿಮಾ ಉದ್ಯಮಕ್ಕೆ ತಿರುವು ಕೊಡಬಲ್ಲ ತುಡಿತ ಮತ್ತು ಸಾಮರ್ಥ್ಯವಿರುವ ಕ್ರಿಯಾಶೀಲ, ಸೃಜನಶೀಲ ಯುವ ನಟ. ಈಗಾಗಲೇ ಉದ್ಯಮಕ್ಕೆ ಕಾಲಿಡುವ ಹೊಸ ಪ್ರತಿಭೆಗಳಿಗೆ ತಮ್ಮ ಬ್ಯಾನರ್ ಅಡಿಯಲ್ಲಿ ಸಿನಿಮಾ ನಿರ್ಮಾಣಕ್ಕೆ ಅವಕಾಶ ನೀಡುವ ಹೆಜ್ಜೆಯಿಟ್ಟಿದ್ದಾರೆ. ಇದೀಗ ಪ್ರದರ್ಶನ ಗೊಳ್ಳುತ್ತಿರುವ ಅವರ ಹೆಡ್ ಬುಷ್ ಚಿತ್ರವು ಉತ್ತಮವಾಗಿದ್ದು ಯಶಸ್ವಿ ಪ್ರದರ್ಶನ ಕಾಣುತ್ತಿದೆ. ಸಿನಿಮಾ ಒಂದು ಕಲೆ. ನಿರ್ದೇಶಕನ ಸೃಜನಶೀಲ ಅಭಿವ್ಯಕ್ತಿಯ ಮಾಧ್ಯಮ‌. ಬಣ, ಪಂಥಗಳ ಆಧಾರದ ದ್ವೇಷದಲ್ಲಿ ಭಾವನೆಗೆ ಧಕ್ಕೆ ಎಂಬ ಹುಸಿ ಆರೋಪದಡಿ ಸಿನಿಮಾವನ್ನು ವಿರೋಧಿಸುವುದು ತಪ್ಪು. ಜನರಲ್ ಆಗಿ‌, ಗೈಡ್ ಲೈನ್ಸ್ ಅನುಸಾರ ಅಸಮ್ಮತ ವಿಚಾರಗಳನ್ನು ಸಿನಿಮಾದಲ್ಲಿ ಸೇರಿಸದಂತೆ ತಡೆಯಲು ಸರ್ಕಾರವೇ ನೇಮಿಸಿರುವ ಸೆನ್ಸಾರ್ ಮಂಡಳಿ ಇದೆ” ಎಂದು ಗೀತರಚನೆಕಾರ ಕವಿರಾಜ್ ಅಭಿಪ್ರಾಯಪಟ್ಟಿದ್ದಾರೆ.

ವೀರಗಾಸೆ ಕುಣಿತದವರ ಮಾರುವೇಷದಲ್ಲಿ ಬಂದವರನ್ನು ಥಳಿಸುವ ದೃಶ್ಯಗಳ ಕುರಿತು ಧನಂಜಯ್ ಅವರ ವಿವರಣೆಯು ಸಮಂಜಸವಾಗಿದೆ. ಧನಂಜಯ್ ಕನ್ನಡ ಚಿತ್ರರಂಗದ ಆಸ್ತಿ. ಧನಂಜಯ್ ಸೂಕ್ಷ್ಮ ಸಂವೇದನೆಯುಳ್ಳ ವಿಚಾರಶೀಲ, ಕಲಾ ಪ್ರೇಮಿ. ಅವರಿಂದ ಯಾವ ಕಲೆಗೂ ಅಪಚಾರ ಆಗಿಲ್ಲ ,ಆಗುವುದಿಲ್ಲ ಎಂಬ ನಂಬಿಕೆ ನಮಗಿದೆ. ಅವರ ಸೃಜನಶೀಲ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ನಾನು ಸದಾ ಬೆಂಬಲಿಸುತ್ತೇನೆ ಎಂದು ಅವು ಫೇಸ್‌ಬುಕ್‌ನಲ್ಲಿ ಬರೆದುಕೊಂಡಿದ್ದಾರೆ.

ನೆಲದ ಬಗ್ಗೆ ಅಪಾರವಾದ ಕಾಳಜಿ, ಮನುಷ್ಯತ್ವ, ಮಾನವೀಯ ಕಾಳಜಿ ಇರುವ ಧನಂಜಯ್‌ ರವರಂತಹ ನಟರು ಕನ್ನಡ ಚಿತ್ರರಂಗಕ್ಕೆ ಹೆಚ್ಚೇ ಅವಶ್ಯಕವಾಗಿದ್ದಾರೆ. ಅವರೊಂದಿಗೆ ಕನ್ನಡ ಚಿತ್ರರಂಗ ನಿಲ್ಲಬೇಕು.
#Amwithdhananjay ಎಂದು ಖ್ಯಾತ ನಿರ್ದೇಶಕ ಮಂಸೋರೆ ಅಭಿಪ್ರಾಯಪಟ್ಟಿದ್ದಾರೆ.

ಇದನ್ನೂ ಓದಿ: ‘ಹೆಡ್‌ ಬುಷ್‌’: ಜಯರಾಜ್‌ ದಾದಾಗಿರಿಯ ದಿನಗಳ ದರ್ಶನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...