Homeಮುಖಪುಟಹೆಡ್ ಬುಷ್ ಚಿತ್ರತಂಡದ ವಿರುದ್ಧ ದೂರು: ಡಾಲಿ ಧನಂಜಯ್ ಪರ ನಿಂತ ಸಿನಿಮಾ ಪ್ರೇಮಿಗಳು

ಹೆಡ್ ಬುಷ್ ಚಿತ್ರತಂಡದ ವಿರುದ್ಧ ದೂರು: ಡಾಲಿ ಧನಂಜಯ್ ಪರ ನಿಂತ ಸಿನಿಮಾ ಪ್ರೇಮಿಗಳು

- Advertisement -
- Advertisement -

ಉದಯೋನ್ಮುಖ ನಟ ಡಾಲಿ ಧನಂಜಯ್ ನಿರ್ಮಿಸಿ ಅಭಿನಯಿಸಿರುವ ಹೆಡ್ ಬುಷ್ ಚಿತ್ರದ ಕುರಿತು ಮೆಚ್ಚುಗೆಯ ಮಾತುಗಳು ಕೇಳಿಬರುತ್ತಿವೆ. ಬಾಕ್ಸ್ ಆಫೀಸ್‌ನಲ್ಲಿಯೂ ಕೂಡ ಚಿತ್ರ ಒಳ್ಳೆಯ ಕಲೆಕ್ಷನ್ ಮಾಡುತ್ತಿದೆ ಎಂಬ ವರದಿಗಳಿವೆ. ಈ ಬೆನ್ನಲ್ಲೆ ಚಿತ್ರದಲ್ಲಿ ವೀರಗಾಸೆ ಕಲಾವಿದರ ಕಲಾವಿದರ ಮೇಲೆ ಹಲ್ಲೆ ನಡೆಸುವುದನ್ನು ತೋರಿಸಲಾಗಿದೆ ಮತ್ತು ಐತಿಹಾಸಿಕ ಕರಗಕ್ಕೆ ಅಪಮಾನ ಮಾಡಲಾಗಿದೆ ಎಂದು ವಿಶ್ವ ಹಿಂದೂ ಪರಿಷತ್ ಮತ್ತು ಬಜರಂಗದಳ ಕಾರ್ಯಕರ್ತರು ದೂರು ನೀಡಿದ್ದಾರೆ.

ಚಿತ್ರದುರ್ಗದ ಹಿರಿಯೂರು ನಗರ ಪೊಲೀಸ್ ಠಾಣೆಯಲ್ಲಿ ವೀರಭದ್ರಸ್ವಾಮಿಗೆ ಅಪಮಾನ ಮಾಡಲಾಗಿದೆ ಎಂದು ಹೆಡ್ ಬುಷ್ ಚಿತ್ರ ತಂಡದ ವಿರುದ್ಧ ದೂರು ಸಲ್ಲಿಸಲಾಗಿದೆ.

ಈ ಕುರಿತು ಪ್ರತಿಕ್ರಿಯಿಸಿರುವ ಡಾಲಿ ಧನಂಜಯ್, ಕರಗ ಮತ್ತು ವೀರಗಾಸೆ ಎರಡಕ್ಕೂ ಚಿತ್ರದಲ್ಲಿ ಅಪಮಾನ ಮಾಡಲಾಗಿದೆ ಎಂಬ ಆರೋಪವನ್ನು ತಳ್ಳಿಹಾಕಿದ್ದಾರೆ. “ನಾನು ಸ್ವತಃ ವೀರಭದ್ರಸ್ವಾಮಿಯ ಭಕ್ತನಾಗಿದ್ದೇನೆ. ನಮ್ಮ ಚಿತ್ರದಲ್ಲಿ ವೀರಗಾಸೆಗೆ ಎಲ್ಲಿಯೂ ಅವಮಾನ ಮಾಡಿಲ್ಲ. ಅಸಲಿ ವೀರಗಾಸೆ ಕಲಾವಿದರಿಗೂ, ಕಲಾವಿದರ ವೇಷ ತೊಟ್ಟು ಜಯರಾಜ್ ಮೇಲೆ ದಾಳಿ ಮಾಡುವ ದುಷ್ಕರ್ಮಿಗಳಿಗೂ ಸ್ಪಷ್ಟ ವ್ಯತ್ಯಾಸಗಳನ್ನು ಚಿತ್ರದಲ್ಲಿ ತೋರಿಸಿದ್ದೇವೆ. ಕರಗವನ್ನು ಕೂಡ ತುಂಬಾ ಭಕ್ತಿಯಿಂದ ಚಿತ್ರಿಸುವ ಪ್ರಯತ್ನ ಮಾಡಿದ್ದೇವೆ. ನಮ್ಮ ಬೆಂಗಳೂರು ಕರಗವನ್ನು ವಿಜೃಂಭಣೆಯಿಂದ ತೋರಿಸುವ ಸಲುವಾಗಿ ಸಾಕಷ್ಟು ಶ್ರಮ ವಹಿಸಿದ್ದೇವೆ. ಬೇಕಂತಲೇ ನನ್ನನ್ನು ಗುರಿಯಾಗಿಸಿ ಈ ದಾಳಿಗಳು ನಡೆಯುತ್ತಿವೆ” ಎಂದು ಹೇಳಿದ್ದಾರೆ.

ಚಿತ್ರದ ವಿರುದ್ಧ ಅಪಸ್ವರ ಕೇಳಿಬಂದ ಕೂಡಲೇ ಹಲವಾರು ಸಿನಿಮಾ ನಿರ್ದೇಶಕರು, ತಂತ್ರಜ್ಞರು ಚಿತ್ರತಂಡದ ಪರ ನಿಂತಿದ್ದಾರೆ. IStanWithDhananjay ಹ್ಯಾಷ್‌ಟ್ಯಾಗ್ ಬಳಸಿ ಧನಂಜಯ್‌ರವರಿಗೆ ಬೆಂಬಲ ಘೋಷಿಸಿದ್ದಾರೆ.

ಯಶ್ , ರಿಷಭ್ ಶೆಟ್ಟಿ ಅವರಂತೆ ಡಾಲಿ ಧನಂಜಯ್ ಕೂಡಾ ಇಡೀ ಸಿನಿಮಾ ಉದ್ಯಮಕ್ಕೆ ತಿರುವು ಕೊಡಬಲ್ಲ ತುಡಿತ ಮತ್ತು ಸಾಮರ್ಥ್ಯವಿರುವ ಕ್ರಿಯಾಶೀಲ, ಸೃಜನಶೀಲ ಯುವ ನಟ. ಈಗಾಗಲೇ ಉದ್ಯಮಕ್ಕೆ ಕಾಲಿಡುವ ಹೊಸ ಪ್ರತಿಭೆಗಳಿಗೆ ತಮ್ಮ ಬ್ಯಾನರ್ ಅಡಿಯಲ್ಲಿ ಸಿನಿಮಾ ನಿರ್ಮಾಣಕ್ಕೆ ಅವಕಾಶ ನೀಡುವ ಹೆಜ್ಜೆಯಿಟ್ಟಿದ್ದಾರೆ. ಇದೀಗ ಪ್ರದರ್ಶನ ಗೊಳ್ಳುತ್ತಿರುವ ಅವರ ಹೆಡ್ ಬುಷ್ ಚಿತ್ರವು ಉತ್ತಮವಾಗಿದ್ದು ಯಶಸ್ವಿ ಪ್ರದರ್ಶನ ಕಾಣುತ್ತಿದೆ. ಸಿನಿಮಾ ಒಂದು ಕಲೆ. ನಿರ್ದೇಶಕನ ಸೃಜನಶೀಲ ಅಭಿವ್ಯಕ್ತಿಯ ಮಾಧ್ಯಮ‌. ಬಣ, ಪಂಥಗಳ ಆಧಾರದ ದ್ವೇಷದಲ್ಲಿ ಭಾವನೆಗೆ ಧಕ್ಕೆ ಎಂಬ ಹುಸಿ ಆರೋಪದಡಿ ಸಿನಿಮಾವನ್ನು ವಿರೋಧಿಸುವುದು ತಪ್ಪು. ಜನರಲ್ ಆಗಿ‌, ಗೈಡ್ ಲೈನ್ಸ್ ಅನುಸಾರ ಅಸಮ್ಮತ ವಿಚಾರಗಳನ್ನು ಸಿನಿಮಾದಲ್ಲಿ ಸೇರಿಸದಂತೆ ತಡೆಯಲು ಸರ್ಕಾರವೇ ನೇಮಿಸಿರುವ ಸೆನ್ಸಾರ್ ಮಂಡಳಿ ಇದೆ” ಎಂದು ಗೀತರಚನೆಕಾರ ಕವಿರಾಜ್ ಅಭಿಪ್ರಾಯಪಟ್ಟಿದ್ದಾರೆ.

ವೀರಗಾಸೆ ಕುಣಿತದವರ ಮಾರುವೇಷದಲ್ಲಿ ಬಂದವರನ್ನು ಥಳಿಸುವ ದೃಶ್ಯಗಳ ಕುರಿತು ಧನಂಜಯ್ ಅವರ ವಿವರಣೆಯು ಸಮಂಜಸವಾಗಿದೆ. ಧನಂಜಯ್ ಕನ್ನಡ ಚಿತ್ರರಂಗದ ಆಸ್ತಿ. ಧನಂಜಯ್ ಸೂಕ್ಷ್ಮ ಸಂವೇದನೆಯುಳ್ಳ ವಿಚಾರಶೀಲ, ಕಲಾ ಪ್ರೇಮಿ. ಅವರಿಂದ ಯಾವ ಕಲೆಗೂ ಅಪಚಾರ ಆಗಿಲ್ಲ ,ಆಗುವುದಿಲ್ಲ ಎಂಬ ನಂಬಿಕೆ ನಮಗಿದೆ. ಅವರ ಸೃಜನಶೀಲ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ನಾನು ಸದಾ ಬೆಂಬಲಿಸುತ್ತೇನೆ ಎಂದು ಅವು ಫೇಸ್‌ಬುಕ್‌ನಲ್ಲಿ ಬರೆದುಕೊಂಡಿದ್ದಾರೆ.

ನೆಲದ ಬಗ್ಗೆ ಅಪಾರವಾದ ಕಾಳಜಿ, ಮನುಷ್ಯತ್ವ, ಮಾನವೀಯ ಕಾಳಜಿ ಇರುವ ಧನಂಜಯ್‌ ರವರಂತಹ ನಟರು ಕನ್ನಡ ಚಿತ್ರರಂಗಕ್ಕೆ ಹೆಚ್ಚೇ ಅವಶ್ಯಕವಾಗಿದ್ದಾರೆ. ಅವರೊಂದಿಗೆ ಕನ್ನಡ ಚಿತ್ರರಂಗ ನಿಲ್ಲಬೇಕು.
#Amwithdhananjay ಎಂದು ಖ್ಯಾತ ನಿರ್ದೇಶಕ ಮಂಸೋರೆ ಅಭಿಪ್ರಾಯಪಟ್ಟಿದ್ದಾರೆ.

ಇದನ್ನೂ ಓದಿ: ‘ಹೆಡ್‌ ಬುಷ್‌’: ಜಯರಾಜ್‌ ದಾದಾಗಿರಿಯ ದಿನಗಳ ದರ್ಶನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...